Homeಮುಖಪುಟಕೂಡಲೇ ಕಾಶ್ಮೀರದಿಂದ ರೋಹಿಂಗ್ಯಾಗಳನ್ನು ಗಡಿಪಾರು ಮಾಡುತ್ತೇವೆ: ಕೇಂದ್ರ ಸಚಿವ

ಕೂಡಲೇ ಕಾಶ್ಮೀರದಿಂದ ರೋಹಿಂಗ್ಯಾಗಳನ್ನು ಗಡಿಪಾರು ಮಾಡುತ್ತೇವೆ: ಕೇಂದ್ರ ಸಚಿವ

- Advertisement -
- Advertisement -

ಸಂಸತ್ತು ಅಂಗೀಕರಿಸಿದ ದಿನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬಂದಿದೆ ಎಂದು ಪ್ರತಿಪಾದಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ರೋಹಿಂಗ್ಯಾ ನಿರಾಶ್ರಿತರನ್ನು ಗಡೀಪಾರು ಮಾಡುವ ಬಗ್ಗೆ ಸರ್ಕಾರದ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಲ್ಲದೇ ಬಂಗಾಳದಿಂದ ಹಲವಾರು ರಾಜ್ಯಗಳನ್ನು ಹಾದುಕೊಂಡು ರೋಹಿಂಗ್ಯಾಗಳು ಜಮ್ಮುವಿನ ಉತ್ತರದ ಪ್ರದೇಶಗಳಿಗೆ ಹೇಗೆ ತಲುಪಿದರು ಮತ್ತು ನೆಲೆಸಿದರು ಎಂಬ ಬಗ್ಗೆ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

“ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ದಿನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಅದು ಜಾರಿಗೆ ಬಂದಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಇಲ್ಲಿ ಯಾವುದೇ ಅಡೆತಡೆ ಇಲ್ಲ. ನಮ್ಮ ಮುಂದಿನ ಕ್ರಮವು ರೋಹಿಂಗ್ಯಾಗಳನ್ನು ಗಡೀಪಾರು ಮಾಡುವುದಾಗಿರುತ್ತದೆ ಎಂದು ಸಿಂಗ್ ಹೇಳಿದ್ದಾರೆ.

ಸಾಮಾನ್ಯ ನಿಧಿ ನಿಯಮಗಳ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಚಿವರು, ಜಮ್ಮುವಿನಲ್ಲಿ ರೋಹಿಂಗ್ಯಾಗಳ ಗಣನೀಯ ಜನಸಂಖ್ಯೆ ನೆಲಸಿದ್ದಾರೆ ಎಂದಿದ್ದಾರೆ. ಅವರನ್ನು ಗಡೀಪಾರು ಮಾಡುವ ಯೋಜನೆಯ ಬಗ್ಗೆ ಕೇಂದ್ರವು ಕೆಲಸ ಮಾಡಲಿದೆ. ಅವರ ಪಟ್ಟಿಗಳನ್ನು ಸಿದ್ಧಪಡಿಸಲಾಗುತ್ತದೆ. ಅಗತ್ಯವಿರುವ ಕಡೆಗಳಲ್ಲಿ ಬಯೋಮೆಟ್ರಿಕ್ ಗುರುತಿನ ಚೀಟಿಗಳನ್ನು ನೀಡಲಾಗುವುದು, ಏಕೆಂದರೆ ಪೌರತ್ವ ತಿದ್ದುಪಡಿ ಕಾಯ್ದೆಯು ರೋಹಿಂಗ್ಯಾಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

“ಹಿಂದೂ, ಬೌದ್ಧ, ಜೈನ, ಸಿಖ್, ಕ್ರೈಸ್ತ, ಪಾರ್ಸಿ ಈ ಧರ್ಮದವರಿಗೆ ಮಾತ್ರ ಅವಕಾಶವಿದ್ದು, ಅವರಿಗೆ ಹೊಸ ಕಾನೂನಿನಡಿಯಲ್ಲಿ ಪೌರತ್ವ ನೀಡಲಾಗುವುದು. ರೋಹಿಂಗ್ಯಾಗಳು ಆರು ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಲ್ಲ. ರೋಹಿಂಗ್ಯಾಗಳು ಮ್ಯಾನ್ಮಾರ್‌ನಿಂದ ದೇಶದಿಂದ ಬಂದಿದ್ದು ಅಲ್ಲಿಗೆ ಅವರು ಹಿಂತಿರುಗಬೇಕಾಗುತ್ತದೆ ಎಂದಿದ್ದಾರೆ.

ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶದ ಪ್ರಜೆಗಳು ಸೇರಿದಂತೆ 13,700 ಕ್ಕೂ ಹೆಚ್ಚು ವಿದೇಶಿಯರು ಜಮ್ಮು ಮತ್ತು ಸಾಂಬಾ ಜಿಲ್ಲೆಗಳಲ್ಲಿ ನೆಲೆಸಿದ್ದಾರೆ, ಅಲ್ಲಿ 2008 ಮತ್ತು 2016 ರ ನಡುವೆ ಅವರ ಜನಸಂಖ್ಯೆಯು 6,000 ಕ್ಕಿಂತ ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...