Homeಮುಖಪುಟಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ 1000 ಕೋಟಿ ರೂ. ಬೇನಾಮಿ ಆರೋಪ ತೆರವು!

ಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ 1000 ಕೋಟಿ ರೂ. ಬೇನಾಮಿ ಆರೋಪ ತೆರವು!

- Advertisement -
- Advertisement -

ಬಿಜೆಪಿ ಮೈತ್ರಿ ಪಕ್ಷವಾದ ಎನ್‌ಸಿಪಿಯ ನಾಯಕ ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ, ಬೇನಾಮಿ ಆಸ್ತಿ ವಹಿವಾಟು ತಡೆ ಮೇಲ್ಮನವಿ ನ್ಯಾಯಮಂಡಳಿಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧದ ಬೇನಾಮಿ ಆಸ್ತಿ ಮಾಲೀಕತ್ವದ ಆರೋಪವನ್ನು ಶುಕ್ರವಾರ ವಜಾಗೊಳಿಸಿದೆ ಎಂದು ವರದಿಯಾಗಿದೆ. ಉಪ ಮುಖ್ಯಮಂತ್ರಿಯಾದ

ನ್ಯಾಯಾಲಯದ ತೀರ್ಪಿನ ನಂತರ, ಆದಾಯ ತೆರಿಗೆ ಇಲಾಖೆಯು 2021 ರ ಬೇನಾಮಿ ವಹಿವಾಟು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಜಿತ್ ಕುಮಾರ್ ಅವರಿಗೆ ಬಿಡುಗಡೆ ಮಾಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇತ್ತೀಚೆಗೆ ಚುನಾಯಿತರಾದ ಮಹಾಯುತಿ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಇದು ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಕಷ್ಟು ಪುರಾವೆಗಳ ಆಧಾರದ ಮೇಲೆ ಅಜಿತ್ ಪವಾರ್ ಮತ್ತು ಅವರ ಕುಟುಂಬಕ್ಕೆ ಬೇನಾಮಿ ಮಾಲೀಕತ್ವದ ಅಡಿಯಲ್ಲಿ ಆಸ್ತಿಗಳನ್ನು ಲಿಂಕ್ ಮಾಡಿದ 2021 ರ ಪ್ರಕರಣವನ್ನು ನ್ಯಾಯಮಂಡಳಿ ವಜಾಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಉಪ ಮುಖ್ಯಮಂತ್ರಿಯಾದ

ಆದಾಯ ತೆರಿಗೆ ಇಲಾಖೆಯು ಅಕ್ಟೋಬರ್ 7, 2021 ರಂದು ಅಜಿತ್ ಕುಮಾರ್ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಸತಾರಾದಲ್ಲಿನ ಸಕ್ಕರೆ ಕಾರ್ಖಾನೆ, ದೆಹಲಿಯ ಫ್ಲಾಟ್, ಗೋವಾದ ರೆಸಾರ್ಟ್ ಮತ್ತು ಮಹಾರಾಷ್ಟ್ರದಾದ್ಯಂತ ಹಲವಾರು ಭೂಮಿ ಸೇರಿದಂತೆ ಹಲವು ಆಸ್ತಿಗಳು ಸೇರಿತ್ತು.

ಆದಾಯ ಇಲಾಖೆ ದಾಳಿ ನಡೆಯುವ ವೇಳೆ, ಅಜಿತ್ ಪವಾರ್ ಅವರು ಅವಿಭಜಿತ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು. ಈ ವೇಳೆ ಜೂನ್ 2022ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು. ಈ ವೇಳೆ ಅಜಿತ್ ಪವಾರ್ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಪತನದ ನಂತರ ಅವರು ಪಕ್ಷವನ್ನು ಒಡೆದು ಜುಲೈ 2023 ರಿಂದ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮುಂದುವರೆದಿದ್ದರು. ಈ ಸರ್ಕಾರಕ್ಕೆ ಬಿಜೆಪಿ ಕೂಡಾ ಸೇರಿದ್ದು, ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿದ್ದರು.

ಶುಕ್ರವಾರ ನ್ಯಾಯಪೀಠವು ಬೇನಾಮಿ ವ್ಯವಹಾರದ ಪ್ರತಿಪಾದನೆಯನ್ನು ತಿರಸ್ಕರಿಸಿ, ಆರೋಪಗಳಿಗೆ ಸಾಕಷ್ಟು ಪುರಾವೆಗಳ ಕೊರತೆಯಿದೆ ಎಂದು ಹೇಳಿದೆ. “ಅಜಿತ್ ಪವಾರ್, [ಪತ್ನಿ] ಸುನೇತ್ರಾ ಪವಾರ್ ಮತ್ತು [ಮಗ] ಪಾರ್ಥ್ ಪವಾರ್ ಬೇನಾಮಿ ಆಸ್ತಿಗಳನ್ನು ಸಂಗ್ರಹಿಸಲು ಹಣವನ್ನು ವರ್ಗಾಯಿಸಿಲ್ಲ” ಎಂದು ನ್ಯಾಯಪೀಠ ತೀರ್ಪು ನೀಡಿದೆ. ಎಲ್ಲಾ ಆಸ್ತಿ ವಹಿವಾಟುಗಳನ್ನು ಕಾನೂನುಬದ್ಧವಾಗಿ ನಡೆಸಲಾಗಿದೆ ಮತ್ತು ದಾಖಲೆಗಳಲ್ಲಿ ಯಾವುದೇ ಅಕ್ರಮಗಳಿಲ್ಲ ಎಂದು ಅಜಿತ್ ಪವಾರ್ ಅವರ ಕಾನೂನು ಸಲಹೆಗಾರರು ವಾದಿಸಿದ್ದರು.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...