Homeಮುಖಪುಟಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ 1000 ಕೋಟಿ ರೂ. ಬೇನಾಮಿ ಆರೋಪ ತೆರವು!

ಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ 1000 ಕೋಟಿ ರೂ. ಬೇನಾಮಿ ಆರೋಪ ತೆರವು!

- Advertisement -
- Advertisement -

ಬಿಜೆಪಿ ಮೈತ್ರಿ ಪಕ್ಷವಾದ ಎನ್‌ಸಿಪಿಯ ನಾಯಕ ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ, ಬೇನಾಮಿ ಆಸ್ತಿ ವಹಿವಾಟು ತಡೆ ಮೇಲ್ಮನವಿ ನ್ಯಾಯಮಂಡಳಿಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧದ ಬೇನಾಮಿ ಆಸ್ತಿ ಮಾಲೀಕತ್ವದ ಆರೋಪವನ್ನು ಶುಕ್ರವಾರ ವಜಾಗೊಳಿಸಿದೆ ಎಂದು ವರದಿಯಾಗಿದೆ. ಉಪ ಮುಖ್ಯಮಂತ್ರಿಯಾದ

ನ್ಯಾಯಾಲಯದ ತೀರ್ಪಿನ ನಂತರ, ಆದಾಯ ತೆರಿಗೆ ಇಲಾಖೆಯು 2021 ರ ಬೇನಾಮಿ ವಹಿವಾಟು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಜಿತ್ ಕುಮಾರ್ ಅವರಿಗೆ ಬಿಡುಗಡೆ ಮಾಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇತ್ತೀಚೆಗೆ ಚುನಾಯಿತರಾದ ಮಹಾಯುತಿ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಇದು ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಕಷ್ಟು ಪುರಾವೆಗಳ ಆಧಾರದ ಮೇಲೆ ಅಜಿತ್ ಪವಾರ್ ಮತ್ತು ಅವರ ಕುಟುಂಬಕ್ಕೆ ಬೇನಾಮಿ ಮಾಲೀಕತ್ವದ ಅಡಿಯಲ್ಲಿ ಆಸ್ತಿಗಳನ್ನು ಲಿಂಕ್ ಮಾಡಿದ 2021 ರ ಪ್ರಕರಣವನ್ನು ನ್ಯಾಯಮಂಡಳಿ ವಜಾಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಉಪ ಮುಖ್ಯಮಂತ್ರಿಯಾದ

ಆದಾಯ ತೆರಿಗೆ ಇಲಾಖೆಯು ಅಕ್ಟೋಬರ್ 7, 2021 ರಂದು ಅಜಿತ್ ಕುಮಾರ್ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಸತಾರಾದಲ್ಲಿನ ಸಕ್ಕರೆ ಕಾರ್ಖಾನೆ, ದೆಹಲಿಯ ಫ್ಲಾಟ್, ಗೋವಾದ ರೆಸಾರ್ಟ್ ಮತ್ತು ಮಹಾರಾಷ್ಟ್ರದಾದ್ಯಂತ ಹಲವಾರು ಭೂಮಿ ಸೇರಿದಂತೆ ಹಲವು ಆಸ್ತಿಗಳು ಸೇರಿತ್ತು.

ಆದಾಯ ಇಲಾಖೆ ದಾಳಿ ನಡೆಯುವ ವೇಳೆ, ಅಜಿತ್ ಪವಾರ್ ಅವರು ಅವಿಭಜಿತ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು. ಈ ವೇಳೆ ಜೂನ್ 2022ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು. ಈ ವೇಳೆ ಅಜಿತ್ ಪವಾರ್ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಪತನದ ನಂತರ ಅವರು ಪಕ್ಷವನ್ನು ಒಡೆದು ಜುಲೈ 2023 ರಿಂದ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮುಂದುವರೆದಿದ್ದರು. ಈ ಸರ್ಕಾರಕ್ಕೆ ಬಿಜೆಪಿ ಕೂಡಾ ಸೇರಿದ್ದು, ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿದ್ದರು.

ಶುಕ್ರವಾರ ನ್ಯಾಯಪೀಠವು ಬೇನಾಮಿ ವ್ಯವಹಾರದ ಪ್ರತಿಪಾದನೆಯನ್ನು ತಿರಸ್ಕರಿಸಿ, ಆರೋಪಗಳಿಗೆ ಸಾಕಷ್ಟು ಪುರಾವೆಗಳ ಕೊರತೆಯಿದೆ ಎಂದು ಹೇಳಿದೆ. “ಅಜಿತ್ ಪವಾರ್, [ಪತ್ನಿ] ಸುನೇತ್ರಾ ಪವಾರ್ ಮತ್ತು [ಮಗ] ಪಾರ್ಥ್ ಪವಾರ್ ಬೇನಾಮಿ ಆಸ್ತಿಗಳನ್ನು ಸಂಗ್ರಹಿಸಲು ಹಣವನ್ನು ವರ್ಗಾಯಿಸಿಲ್ಲ” ಎಂದು ನ್ಯಾಯಪೀಠ ತೀರ್ಪು ನೀಡಿದೆ. ಎಲ್ಲಾ ಆಸ್ತಿ ವಹಿವಾಟುಗಳನ್ನು ಕಾನೂನುಬದ್ಧವಾಗಿ ನಡೆಸಲಾಗಿದೆ ಮತ್ತು ದಾಖಲೆಗಳಲ್ಲಿ ಯಾವುದೇ ಅಕ್ರಮಗಳಿಲ್ಲ ಎಂದು ಅಜಿತ್ ಪವಾರ್ ಅವರ ಕಾನೂನು ಸಲಹೆಗಾರರು ವಾದಿಸಿದ್ದರು.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...