Homeಮುಖಪುಟಬಿಎಸ್‌ವೈ ಪಾಲಿಗೆ ಮಗ್ಗುಲ ಮುಳ್ಳಾಗುತ್ತಿರುವರೇ ಡಾ. ಅಶ್ವತ್ಥ್ ನಾರಾಯಣ್?

ಬಿಎಸ್‌ವೈ ಪಾಲಿಗೆ ಮಗ್ಗುಲ ಮುಳ್ಳಾಗುತ್ತಿರುವರೇ ಡಾ. ಅಶ್ವತ್ಥ್ ನಾರಾಯಣ್?

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತವಾಗಿ ಊಟ ನೀಡುವ ನಿರ್ಧಾರವನ್ನು ಬಿಎಸ್‌ವೈ ಪ್ರಕಟಿಸಿದ ನಂತರ  ಕ್ಯಾಬಿನೆಟ್ ಚರ್ಚೆಯ ವೇಳೆ ಅಶ್ವತ್ಥ್‌ ನಾರಾಯಣ್ ತಗಾದೆ ಎತ್ತಿದ್ದರು.

- Advertisement -
- Advertisement -

ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಕೇಂದ್ರ ಸರ್ಕಾರ ಮಾರ್ಚ್ 25ರಿಂದ ಲಾಕ್ಡೌನ್ ಘೋಷಣೆ ಮಾಡಿತ್ತು. ಆದರೆ, ಇದಕ್ಕೂ ಮುಂಚೆಯೇ ರಾಜ್ಯದ 9 ಜಿಲ್ಲೆಗಳನ್ನು ಸೀಲ್ಡೌನ್ ಮಾಡಲಾಗಿತ್ತು. ಈ ವೇಳೆ ನಿಜಕ್ಕೂ ಬಿ.ಎಸ್.ಯಡಿಯೂರಪ್ಪ ಬಡ ಜನರ ಪರವಾದ ಕೆಲವು ಘೋಷಣೆಗಳ ಮುನ್ಸೂಚನೆ ಕೊಟ್ಟಿದ್ದರು. ಮಾರ್ಚ್ 23ರಂದೇ ಪತ್ರಿಕಾಗೋಷ್ಠಿ ನಡೆಸಿದ್ದ ಬಿಎಸ್‌ವೈ “ಲಾಕ್‌ಡೌನ್‌ನಿಂದಾಗಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಊಟಕ್ಕೆ ತೊಂದರೆಯಾಗದಂತೆ ಇಂದಿರಾ ಕ್ಯಾಂಟೀನ್‌ಲ್ಲಿ ಉಚಿತ ಊಟ ನೀಡುವ” ನಿರ್ಧಾರವನ್ನು ಘೋಷಿಸಿದ್ದರು.

ಇಂದಿರಾ ಕ್ಯಾಂಟೀನ್‌ ಅನ್ನು ಪ್ರತಿನಿತ್ಯ 1.7 ಲಕ್ಷ ಜನ ಬಡವರು ಊಟಕ್ಕೆಂದು ಆಶ್ರಯಿಸಿದ್ದಾರೆ. ಆದರೆ, ಈ ಘೋಷಣೆಯಾದ ಮರುದಿನವೇ ಅಂದರೆ ಮಾರ್ಚ್ 24ರಂದೇ ಇಂದಿರಾ ಕ್ಯಾಂಟೀನ್‌ನಲ್ಲಿ ನೂಕುನುಗ್ಗಲು ಉಂಟಾಗುತ್ತದೆ ಎಂಬ ಕಾರಣ ನೀಡಿ ನಿಲ್ಲಿಸಿದ್ದರಾದರೂ, ದೇಶವ್ಯಾಪಿ ಲಾಕ್‌ಡೌನ್‌ನ ಪರಿಣಾಮಗಳು ಗೊತ್ತಾಗುತ್ತಿದ್ದಂತೆ ಉಚಿತ ಊಟವನ್ನು ಮುಂದುವರೆಸಿದ್ದರು.

ವಲಸೆ ಕಾರ್ಮಿಕರನ್ನು ರೈಲಿನ ಮೂಲಕ ಅವರ ತವರು ಜಿಲ್ಲೆಗಳಿಗೆ ಕಳುಹಿಸುವಂತೆ ಕೇಂದ್ರ ಸೂಚನೆ ನೀಡಿದ ಬೆನ್ನಿಗೆ ಬಿ.ಎಸ್.ಯಡಿಯೂರಪ್ಪ ವಿಶೇಷ ಶ್ರಮಿಕ್ ರೈಲುಗಳನ್ನು ಸಿದ್ದಪಡಿಸುವಂತೆ ಅಧಿಕಾರಗಳಿಗೆ ಸೂಚನೆ ನೀಡಿದ್ದರು. ಆದರೆ, ಹೀಗೊಂದು ಸೂಚನೆ ಬಂದ ಕೆಲವೇ ಗಂಟೆಗಳಲ್ಲಿ ರೈಲು ಸಂಚಾರಕ್ಕೆ ತಡೆ ಒಡ್ಡಲಾಗಿತ್ತು.

ಉತ್ತರ ಕರ್ನಾಟಕದ ವಲಸೆ ಕಾರ್ಮಿಕರನ್ನು ಬಸ್ಸಿನ ಮೂಲಕ ಮನೆಗೆ ಕಳುಹಿಸಲಾಗಿತ್ತು. ಆದರೆ, ಈ ಕಾರ್ಮಿಕರ ಬಳಿ ಹಣ ವಸೂಲಿ ಮಾಡುವುದು ಬಿಎಸ್‌ವೈ ಅವರಿಗೆ ಸುತಾರಾಂ ಇಷ್ಟವಿರಲಿಲ್ಲವೆನ್ನಲಾಗಿದೆ. ಆದರೆ, ಈ ಎಲ್ಲಾ ಕಾರ್ಮಿಕರಿಂದ ಮೊದಲ ಎರಡು ದಿನ ಎರಡು-ಮೂರು ಪಟ್ಟು ಹಣ ವಸೂಲಿ ಮಾಡಲಾಗಿತ್ತು. ಅದಕ್ಕೆ ವಿರೋಧ ಬಂದ ನಂತರ ಮೊದಲಿಗೆ 3 ದಿನ, ನಂತರ ಇನ್ನೆರಡು ದಿನಗಳು ಉಚಿತ ಪ್ರಯಾಣವೆಂದು ಘೋಷಿಸಿದ್ದರು.

ಸಿಎಂ ಬಿಎಸ್‌ವೈ ಅವರಿಗೆ ಲಾಕ್ಡೌನ್ ಸಂದರ್ಭದಲ್ಲಿ ನಿಜಕ್ಕೂ ಬಡವರಿಗೆ ಸಹಕಾರಿಯಾಗುವ ಇರಾದೆ ಇದ್ದಂತೆ ಕಂಡರೂ ‘ಕಾಣದ ಕೈಗಳ ಒತ್ತಡ’ದ ಕಾರಣದಿಂದ ಅವರು ಘೋಷಿಸುವ ಯಾವ ಯೋಜನೆಗಳೂ ಜಾರಿಯಾಗುತ್ತಿಲ್ಲ ಅಥವಾ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಹಿಂಪಡೆಯಲಾಗುತ್ತಿದೆ.

ಆಡಳಿತ ಯಂತ್ರ ಹೀಗೆ ಗೊಂದಲಮಯವಾಗಲು ಕಾರಣ ಏನಿರಬಹುದು? ಎಂಬ ಒಂದು ಎಳೆಯನ್ನು ಹಿಡಿದು ಮೂಲವನ್ನು ಕೆದಕುತ್ತಾ ಹೊರಟರೆ ಬಿಎಸ್‌ವೈ ಅವರು ಜನಪ್ರಿಯರಾಗದಂತೆ, ಬೇರೊಂದು ನೀತಿಯನ್ನು ಪಕ್ಷದ ಒಳಗೇ ಯಾರೋ ಪುಷ್ ಮಾಡುತ್ತಿದ್ದಾರೆ ಎಂಬ ಅಂಶಗಳು ಬಿಜೆಪಿ ಮೂಲದಿಂದ ಗೊತ್ತಾಗುತ್ತಿವೆ.

ಬಿಎಸ್‌ವೈಗೆ ಮೂಗುದಾರ ಹಾಕುತ್ತಿರುವ ಆ ನಾಯಕ ಯಾರು? ಬಿಜೆಪಿ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಅಸಲಿಗೆ ನಡೆಯುತ್ತಿರುವ ಚರ್ಚೆಯಾದರೂ ಏನು? ಅಸಲಿಗೆ ಬಿಎಸ್‌ವೈ ಆಡಳಿತಕ್ಕೆ ಕೆಟ್ಟ ಹೆಸರು ತರಲು ಪಕ್ಷದ ಒಳಗೆ ಶ್ರಮಿಸುತ್ತಿರುವ ಆ ಗುಂಪಿನ ಹಿನ್ನೆಲೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಬೇಡದ ಕೂಸು ಮತ್ತು ಬಣ ರಾಜಕೀಯ

ಅಸಲಿಗೆ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಪಾಲಿಗೆ ಬೇಡದ ಕೂಸು ಮತ್ತು ಹೈಕಮಾಂಡ್‌ಗೆ ಇಷ್ಟ ಇಲ್ಲದಿದ್ದರೂ ಬೇರೆ ಆಯ್ಕೆ ಇಲ್ಲದ ಕಾರಣಕ್ಕೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿತ್ತು. ಅಲ್ಲದೆ, ಅವರಿಗೆ ಕಡಿವಾಣ ಹಾಕಬೇಕು ಎಂದೇ ಮೂರು ಜನ ಡಿಸಿಎಂ ಆಯ್ಕೆ ಮಾಡಿದ್ದರು ಎಂಬ ವಿಚಾರ ಇಂದು ಗುಟ್ಟಾಗೇನು ಉಳಿದಿಲ್ಲ.

ಗೋವಿಂದ ಕಾರಜೋಳ ಹಿರಿಯ ರಾಜಕಾರಣಿ ಮತ್ತು ಅನುಭವಿ. ಹೀಗಾಗಿ ಅವರಿಗೆ ಡಿಸಿಎಂ ಹುದ್ದೆ ನೀಡಿದ್ದರಲ್ಲಿ ಯಾವುದೇ ಅಚ್ಚರಿ ಇರಲಿಲ್ಲ. ಇನ್ನು ಬಿಎಸ್‌ವೈಗೆ ಪರ್ಯಾಯವಾಗಿ ಓರ್ವ ಲಿಂಗಾಯತ ನಾಯಕನನ್ನು ಬೆಳೆಸಬೇಕು ಎಂಬ ಉದ್ದೇಶದಿಂದಲೇ ಲಕ್ಷ್ಮಣ ಸವದಿಯನ್ನು ಡಿಸಿಎಂ ಹುದ್ದೆಗೆ ಆಯ್ಕೆ ಮಾಡಲಾಗಿತ್ತು. ಇದೂ ಸಹ ಅಚ್ಚರಿಯ ಆಯ್ಕೆಯಾಗಿದ್ದರೂ, ಏನೋ ಒಂದು ಲಾಜಿಕ್ ಇದೆ ಎನಿಸಬಹುದಾಗಿತ್ತು. ಆದರೆ, ಅಚ್ಚರಿ ಎನಿಸಿದ್ದು ಡಾ.ಅಶ್ವತ್ಥ್ ನಾರಾಯಣ್ ಆಯ್ಕೆ.

 

ಏಕೆಂದರೆ ಬೆಂಗಳೂರಿನ ಶಾಸಕರಿಗೆ ಆದ್ಯತೆ ನೀಡಬೇಕು ಅಥವಾ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕಬೇಕು ಎಂದರೆ ಬಿಜೆಪಿ ಎದುರಿದ್ದ ಏಕೈಕ ಆಯ್ಕೆ ಆರ್.ಅಶೋಕ್. ಆದರೆ, ಆರ್.ಅಶೋಕ್ ಅವರನ್ನೇ ಬದಿಗೊತ್ತಿ ಈ ಹಿಂದೆ ಸಚಿವರಾಗಿಯೂ ಅನುಭವ ಇಲ್ಲದ ಚಿಕ್ಕ ವಯಸ್ಸಿನ ಅಶ್ವತ್ಥ್ ನಾರಾಯಣ್ ಅವರನ್ನು ನೇರವಾಗಿ ಡಿಸಿಎಂ ಹುದ್ದೆಗೆ ಆಯ್ಕೆ ಮಾಡಲಾಗಿತ್ತು. ಮತ್ತು ಈ ಆಯ್ಕೆ ಇಡೀ ರಾಜ್ಯ ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾದದ್ದು ಸುಳ್ಳಲ್ಲ.

ಹೀಗೆ ಅಚ್ಚರಿಯ ಬೆಳವಣಿಗೆಯಲ್ಲಿ ಡಿಸಿಎಂ ಹುದ್ದೆಗೆ ಆಯ್ಕೆಯಾದ ಅಶ್ವತ್ಥ್ ನಾರಾಯಣ್ ಸುಮ್ಮನೆ ಕೂರುವ ವ್ಯಕ್ತಿಯಲ್ಲ. ಡಿಸಿಎಂಗಳ ಪೈಕಿ ಹೆಚ್ಚು ಸದ್ದು ಮಾಡುತ್ತಿರುವವರೇ ಅಶ್ವತ್ಥ್ ನಾರಾಯಣ್. ಡಾ| ಅಶ್ವತ್ಥ್ ಬಿಎಸ್‌ವೈಗೆ ಪರ್ಯಾಯವಾಗಿ ಬಿಜೆಪಿಯಲ್ಲಿ ಮತ್ತೊಂದು ಬಣವನ್ನು ಪ್ರತಿನಿಧಿಸುತ್ತಿದ್ದಾರೆ. ಆ ಮೂಲಕ ಸರ್ಕಾರವನ್ನು ಹೆಜ್ಜೆ ಹೆಜ್ಜೆಗೂ ನಿಯಂತ್ರಿಸುತ್ತಿದ್ದಾರೆ ಎನ್ನುತ್ತಿದೆ ಸ್ವತಃ ಬಿಜೆಪಿ ಮೂಲಗಳು.

ಕ್ಯಾಬಿನೆಟ್ ಚರ್ಚೆಯಲ್ಲೂ ಅಲ್ಟಿಮೇಟ್ ಆದ ಅಶ್ವತ್ಥ್

ಸರ್ಕಾರ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಆ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಸುವುದು ಸಾಮಾನ್ಯ. ಈ ವೇಳೆ ಸರ್ಕಾರದ ಎಲ್ಲಾ ಮಹತ್ವದ ನಿರ್ಧಾರಕ್ಕೂ ಕೊಕ್ಕೆ ಹಾಕುತ್ತಿರುವುದೇ ಅಶ್ವತ್ಥ್‌ ನಾರಾಯಣ್ ಎನ್ನಲಾಗುತ್ತಿದೆ.

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತವಾಗಿ ಊಟ ನೀಡುವ ನಿರ್ಧಾರವನ್ನು ಬಿಎಸ್‌ವೈ ಪ್ರಕಟಿಸಿದ ನಂತರ  ಕ್ಯಾಬಿನೆಟ್ ಚರ್ಚೆಯ ವೇಳೆ ಅಶ್ವತ್ಥ್‌ ನಾರಾಯಣ್ ತಗಾದೆ ಎತ್ತಿದ್ದರು. “ಜನ ಊಟಕ್ಕೆ ಗುಂಪಾಗಿ ನಿಂತು ನೂಕುನುಗ್ಗಲು ಹೆಚ್ಚಾದರೆ ಕೊರೋನಾ ಸಂಖ್ಯೆಯೂ ಹೆಚ್ಚಾಗುತ್ತದೆ. ಆಗ ನೀವೆ ಉತ್ತರ ನೀಡಬೇಕಾಗುತ್ತದೆ” ಎಂದು ಪ್ರಶ್ನೆ ಎತ್ತುವ ಮೂಲಕ ಬಡ ಜನರ ಹಸಿವು ನೀಗಿಸಬೇಕಾದ ಇಂದಿರಾ ಕ್ಯಾಂಟೀನ್ ಬಾಗಿಲು ಎಳೆಸಿದ್ದು ಇದೇ ಅಶ್ವತ್ಥ್ ನಾರಾಯಣ್.

ಉತ್ತರ ಭಾರತದ ಕಾರ್ಮಿಕರು ಗುಂಪು ಗುಂಪಾಗಿ ತಮ್ಮ ರಾಜ್ಯಗಳಿಗೆ ಹಿಂದಿರುಗಲು ಮುಂದಾದಾಗ ವಿಶೇಷ ಶ್ರಮಿಕ್ ರೈಲನ್ನು ರದ್ದುಗೊಳಿಸಿದ್ದು; ಕಾರ್ಮಿಕರು ಇಲ್ಲೇ ಇರುವಂತೆ ನೋಡಿಕೊಳ್ಳಲು ಕೈಗಾರಿಕೋದ್ಯಮಿಗಳ ಪರ ಲಾಬಿ ನಡೆಸಿದ್ದು; ಸುಮಾರು 3 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಮಾದಾವರದ ಬೆಂಗಳೂರು ಪ್ರದರ್ಶನ ಕೇಂದ್ರದಲ್ಲಿ ಕೂಡಿ ಹಾಕಲು ಮುಂದಾದ್ದು ಸೇರಿದಂತೆ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾರಣವಾದ ಅನೇಕ ನಿರ್ಧಾರಕ್ಕೆ ಇದೇ ಅಶ್ವತ್ಥ್‌ ನಾರಾಯಣ್ ಕಾರಣ ಎಂಬುದು ಕ್ಯಾಬಿನೆಟ್ ಸಭೆಯೊಳಗಿಂದ ಹೊರಬಿದ್ದಿರುವ ಸುದ್ದಿಯಾಗಿದೆ.

ಅಶ್ವತ್ಥ್‌ ನಾರಾಯಣ್ ಹಿಂದಿನ ಕಾಣದ ಕೈ ಯಾವುದು ಗೊತ್ತಾ?

ಬಿ.ಎಸ್.ಯಡಿಯೂರಪ್ಪ ಮತ್ತು ಆರೆಸ್ಸೆಸ್ ನಡುವಿನ ನಂಟು ಹಳಸಿ ತುಂಬಾ ದಿನವಾಗಿದೆ. ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಮತ್ತು ಬಿಎಸ್‌ವೈ ನಡುವಿನ ಸಂಬಂಧದ ಸಮಸ್ಯೆ ಜಗಜ್ಜಾಹೀರು.. ಇದೇ ಕಾರಣಕ್ಕೆ ಬಿಎಸ್‌ವೈ ವಿರುದ್ಧ ಪಕ್ಷದಲ್ಲಿ ಮತ್ತೊಂದು ಬಣ ನಿರ್ಮಿಸಿ ಆ ಮೂಲಕ ಸರ್ಕಾರದ-ಆಡಳಿತದ ಮೇಲೆ ಹಿಡಿತ ಸಾಧಿಸಬೇಕು, ಬಿಎಸ್‌ವೈ ಅನ್ನು ಹದ್ದುಬಸ್ತಿನಲ್ಲಿ ಇಡಬೇಕು ಎಂದು ಹವಣಿಸುತ್ತಿದ್ದ ಬಿ.ಎಲ್.ಸಂತೋಷ್ ಕೈಗೆ ಸಿಕ್ಕ ಪ್ರಮುಖ ಆಯುಧವೇ ಡಾ. ಅಶ್ವತ್ಥ್ ನಾರಾಯಣ್.

ಇತ್ತೀಚೆಗಿನ ದಿನಗಳಲ್ಲಿ ಗೋವಿಂದ ಕಾರಜೋಳ ಅಥವಾ ಲಕ್ಷ್ಮಣ ಸವದಿ ಕುರಿತ ಸುದ್ದಿಗಳೇ ಇಲ್ಲದಂತಾಗಿದೆ. ಆದರೆ ಡಾ. ಅಶ್ವತ್ಥ್ ನಾರಾಯಣ್ ಮಾತ್ರ ದಿನನಿತ್ಯ ಸುದ್ದಿಯಾಗುತ್ತಿದ್ದಾರೆ, ಸಿಎಂ ರೇಂಜಿಗೆ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದ್ದಾರೆ ಎಂದರೆ ಬಿಜೆಪಿ ಪಕ್ಷದ ಒಳಗೆ ಆಂತರಿಕವಾಗಿ ಅಶ್ವತ್ಥ್ ನಾರಾಯಣ್ ಅಂಡ್ ಟೀಮ್ ಹೇಗೆ ಕೆಲಸ ಮಾಡುತ್ತಿದೆ ಎಂದು ಊಹಿಸಬಹುದು.

ಶ್ರೀಮಂತರ ಪರ ಲಾಬಿ ಮಾಡುತ್ತಿದ್ದಾರಾ ಅಶ್ವತ್ಥ್?

ಈ ನಡುವೆ ಡಿಸಿಎಂ ಅಶ್ವತ್ಥ್ ನಾರಾಯಣ್ ಉಳ್ಳವರು, ಶ್ರೀಮಂತರು ಮತ್ತು ಕೈಗಾರಿಕೋದ್ಯಮಿಗಳ ಪರ ಲಾಬಿ ಮಾಡುತ್ತಿದ್ದಾರ? ಎಂಬ ಸಂಶಯವೂ ಮೂಡುತ್ತಿದೆ.

ರಾಜ್ಯದ ಆರ್ಥಿಕತೆಗೆ ತನ್ನದೇಯಾದ ಇತಿಹಾಸ ಇದೆ. ಜನಸಾಮಾನ್ಯರ ಪರ ಉದಾರವಾದಿ ಧೋರಣೆ ಎಂಬುದು ರಾಜ್ಯದ 7 ದಶಕದ ಆರ್ಥಿಕತೆಯ ಹಾದಿ. ಆದರೆ, ಇತ್ತೀಚೆಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಕಾನೂನುಗಳು ಮತ್ತು ಕಾಯ್ದೆಗಳನ್ನು ಉಳ್ಳವರ ಮತ್ತು ಶ್ರೀಮಂತರ ಪರ ತಿದ್ದುಪಡಿ ಮಾಡಲಾಗುತ್ತಿದೆ.

ಕಾರ್ಮಿಕ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಇದು ಸಾಧ್ಯವಾದರೆ, ರೈತರು ಮತ್ತು ಕಾರ್ಮಿಕರ ಹೆಣದ ಮೇಲೆ ಬಹುತೇಕ ಸಮಾಧಿ ಮಾಡಿದಂತೆಯೇ ಸರಿ. ಆದರೆ, ತೆರೆಯ ಮರೆಯಲ್ಲಿ ಸಿರಿವಂತರ ಪರ ನಿಂತು ಈ ಕಾಯ್ದೆಗಳ ತಿದ್ದುಪಡಿಗಾಗಿ ಲಾಬಿ ಮಾಡುತ್ತಿರುವುದು ಅಶ್ವತ್ಥ್ನಾರಾಯಣ್ ಅವರೇ ಎಂಬ ಗಂಭೀರ ಆರೋಪಗಳೂ ಈ ನಡುವೆ ಕೇಳಿ ಬರುತ್ತಿದೆ. ಈ ಮೂಲಕ ರಾಜ್ಯದ ಆರ್ಥಿಕತೆಯನ್ನೇ ಉಳ್ಳವರ ಪರವಾದ ಆರ್ಥಿಕತೆಯನ್ನಾಗಿ ಬದಲಿಸುವ ಹುನ್ನಾರ ನಡೆಯುತ್ತಿದೆ. ಹಿರಿಯ ಐಎಎಸ್ ಅಧಿಕಾರಿ ಮಣಿವಣ್ಣನ್ ಅವರನ್ನು ಕಾರ್ಮಿಕ ಇಲಾಖೆಯಿಂದ ಎತ್ತಂಗಡಿ ಮಾಡಿದ ವಿಚಾರದಲ್ಲೂ ಡಿಸಿಎಂ ಅಶ್ವತ್ಥ್ ಪಾತ್ರ ಇದೆ ಎನ್ನಲಾಗುತ್ತಿದೆ.

ಕೊರೋನಾದಂತಹ ಸಂಕಷ್ಟದ ಕಾಲದಲ್ಲಿ ಜನಪರ ನಿಲ್ಲಬೇಕಾದ ಪ್ರತಿನಿಧಿಗಳು ಉದ್ಯಮಿಗಳ ಪರ ಲಾಬಿ ನಡೆಸುತ್ತಾ, ಲಾಕ್ಡೌನ್‌ನಿಂದಾಗಿ ಈಗಾಗಲೇ ಹಣ್ಣುಗಾಯಿ ನೀರುಗಾಯಿ ಆಗಿರುವ ಬಡವರನ್ನು ರಾಜಕೀಯದ ಹೆಸರಲ್ಲಿ ಮತ್ತೂ ಹಣಿಯುತ್ತಿರುವುದು. ತಮ್ಮದೇ ಸರ್ಕಾರಕ್ಕೆ ಮಗ್ಗುಲ ಮುಳ್ಳಾಗಿರುವುದು ವಿಪರ್ಯಾಸವೇ ಸರಿ.


ಇದನ್ನೂ ಓದಿ: ಮೊದಲ ಬಾರಿಗೆ ರಾಜಧರ್ಮ ಪಾಲಿಸಿದ ಯಡಿಯೂರಪ್ಪ, ಸ್ವಪಕ್ಷೀಯರಿಂದಲೇ ಮುಖೇಡಿ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...