Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

- Advertisement -
- Advertisement -

ಅಮೆರಿಕದಲ್ಲಿ ಕಳೆದ ಮೇನಲ್ಲಿ ಆಫ್ರಿಕನ್-ಅಮೆರಿಕನ್ ವ್ಯಕ್ತಿ ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದೆ. ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತು.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಆರೋಪಿ ಡೆರೆಕ್ ಚೌವಿನ್‌ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆಗೆ ಮಂಡಿಯನ್ನುಟ್ಟು ಹತ್ಯೆ ಮಾಡಿದ್ದನು. ಘಟನೆ ನಡೆಯುತ್ತಿದ್ದಾಗ ಜಾರ್ಜ್ ಫ್ಲಾಯ್ಡ್‌ ನನಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ ಎಂದು ಮನವಿ ಮಾಡಿದ್ದರು. ಘಟನಾ ಸ್ಥಳದಲ್ಲಿ ಇದ್ದ ಸಾರ್ವಜನಿಕರು ಕೂಡಾ ಈ ಬಗ್ಗೆ ಅವರಿಗೆ ಹೇಳಿದ್ದರು. ಆದರೆ ಪೊಲೀಸ್ ಅಧಿಕಾರಿಯೂ ಇದನ್ನು ಗಣನೆಗೆ ತೆಗೆದುಕೊಂಡಿರಲಿಲ್ಲ.

“ಇದು ಜಾರ್ಜ್ ಫ್ಲಾಯ್ಡ್ ವಿಚಾರಣೆಯಲ್ಲ. ಇದು ಡೆರೆಕ್ ಚೌವಿನ್ ಅವರ ವಿಚಾರಣೆಯಾಗಿದೆ. ನಾವು ಅದರ ಬಗ್ಗೆ ಮಾತನಾಡುವಾಗಲೆಲ್ಲಾ ಅದನ್ನು ಉಲ್ಲೇಖಿಸಬೇಕು ಮತ್ತು ಮಾತನಾಡಬೇಕು” ಎಂದು ಅಟಾರ್ನಿ ಜಸ್ಟಿನ್ ಮಿಲ್ಲರ್ ಹೇಳಿದ್ದಾರೆ.

“ಇಂದು ಮಹತ್ವದ ವಿಚಾರಣೆ ಪ್ರಾರಂಭವಾಗುತ್ತಿದೆ. ಎಲ್ಲರಿಗೂ ಸಮಾನತೆ ಮತ್ತು ನ್ಯಾಯಕ್ಕಾಗಿ ಅಮೆರಿಕ ಎಷ್ಟು ದೂರ ಬಂದಿದೆ ಎಂಬುದರ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಲಿದೆ” ಎಂದು ನಾಗರಿಕ ಹಕ್ಕುಗಳ ವಕೀಲ ಬೆನ್ ಕ್ರಂಪ್ ಸೋಮವಾರ ನ್ಯಾಯಾಲಯದ ಹೊರಗೆ ಹೇಳಿದ್ದಾರೆ.

ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

“ಈ ಕೊಲೆ ಪ್ರಕರಣವು ವಾದಿಸಲು ಅಷ್ಟೇನೂ ಕಠಿಣವಲ್ಲ, ಜಾರ್ಜ್ ಫ್ಲಾಯ್ಡ್ ಅವರ ಚಿತ್ರಹಿಂಸೆ ವೀಡಿಯೊವನ್ನು ನೋಡಿದರೆ ಸಾಕು” ಎಂದು ಬೆನ್ ಕ್ರಂಪ್ ಹೇಳಿದ್ದಾರೆ.

ಮೇ 25, 2020 ರಂದು ಈ ಅಮಾನವೀಯ ನಡೆದಿದ್ದು, ಘಟನೆಯ ನಂತರ ಆರೋಪಿಯನ್ನು ಪೊಲೀಸ್ ಇಲಾಖೆಯಿಂದ ವಜಾ ಮಾಡಿತ್ತು. ಘಟನೆಯ ವೀಡಿಯೋ ವೈರಲ್ ಆಗಿದ್ದು ವಿಶ್ವದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿ ‘ಬ್ಲಾಕ್‌ ಲೈವ್ಸ್ ಮ್ಯಾಟರ್‌’ ಚಳವಳಿ ಪ್ರಾರಂಭವಾಗಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...