Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

- Advertisement -
- Advertisement -

ಅಮೆರಿಕದಲ್ಲಿ ಕಳೆದ ಮೇನಲ್ಲಿ ಆಫ್ರಿಕನ್-ಅಮೆರಿಕನ್ ವ್ಯಕ್ತಿ ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದೆ. ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತು.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಆರೋಪಿ ಡೆರೆಕ್ ಚೌವಿನ್‌ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆಗೆ ಮಂಡಿಯನ್ನುಟ್ಟು ಹತ್ಯೆ ಮಾಡಿದ್ದನು. ಘಟನೆ ನಡೆಯುತ್ತಿದ್ದಾಗ ಜಾರ್ಜ್ ಫ್ಲಾಯ್ಡ್‌ ನನಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ ಎಂದು ಮನವಿ ಮಾಡಿದ್ದರು. ಘಟನಾ ಸ್ಥಳದಲ್ಲಿ ಇದ್ದ ಸಾರ್ವಜನಿಕರು ಕೂಡಾ ಈ ಬಗ್ಗೆ ಅವರಿಗೆ ಹೇಳಿದ್ದರು. ಆದರೆ ಪೊಲೀಸ್ ಅಧಿಕಾರಿಯೂ ಇದನ್ನು ಗಣನೆಗೆ ತೆಗೆದುಕೊಂಡಿರಲಿಲ್ಲ.

“ಇದು ಜಾರ್ಜ್ ಫ್ಲಾಯ್ಡ್ ವಿಚಾರಣೆಯಲ್ಲ. ಇದು ಡೆರೆಕ್ ಚೌವಿನ್ ಅವರ ವಿಚಾರಣೆಯಾಗಿದೆ. ನಾವು ಅದರ ಬಗ್ಗೆ ಮಾತನಾಡುವಾಗಲೆಲ್ಲಾ ಅದನ್ನು ಉಲ್ಲೇಖಿಸಬೇಕು ಮತ್ತು ಮಾತನಾಡಬೇಕು” ಎಂದು ಅಟಾರ್ನಿ ಜಸ್ಟಿನ್ ಮಿಲ್ಲರ್ ಹೇಳಿದ್ದಾರೆ.

“ಇಂದು ಮಹತ್ವದ ವಿಚಾರಣೆ ಪ್ರಾರಂಭವಾಗುತ್ತಿದೆ. ಎಲ್ಲರಿಗೂ ಸಮಾನತೆ ಮತ್ತು ನ್ಯಾಯಕ್ಕಾಗಿ ಅಮೆರಿಕ ಎಷ್ಟು ದೂರ ಬಂದಿದೆ ಎಂಬುದರ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಲಿದೆ” ಎಂದು ನಾಗರಿಕ ಹಕ್ಕುಗಳ ವಕೀಲ ಬೆನ್ ಕ್ರಂಪ್ ಸೋಮವಾರ ನ್ಯಾಯಾಲಯದ ಹೊರಗೆ ಹೇಳಿದ್ದಾರೆ.

ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

“ಈ ಕೊಲೆ ಪ್ರಕರಣವು ವಾದಿಸಲು ಅಷ್ಟೇನೂ ಕಠಿಣವಲ್ಲ, ಜಾರ್ಜ್ ಫ್ಲಾಯ್ಡ್ ಅವರ ಚಿತ್ರಹಿಂಸೆ ವೀಡಿಯೊವನ್ನು ನೋಡಿದರೆ ಸಾಕು” ಎಂದು ಬೆನ್ ಕ್ರಂಪ್ ಹೇಳಿದ್ದಾರೆ.

ಮೇ 25, 2020 ರಂದು ಈ ಅಮಾನವೀಯ ನಡೆದಿದ್ದು, ಘಟನೆಯ ನಂತರ ಆರೋಪಿಯನ್ನು ಪೊಲೀಸ್ ಇಲಾಖೆಯಿಂದ ವಜಾ ಮಾಡಿತ್ತು. ಘಟನೆಯ ವೀಡಿಯೋ ವೈರಲ್ ಆಗಿದ್ದು ವಿಶ್ವದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿ ‘ಬ್ಲಾಕ್‌ ಲೈವ್ಸ್ ಮ್ಯಾಟರ್‌’ ಚಳವಳಿ ಪ್ರಾರಂಭವಾಗಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....