Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

- Advertisement -
- Advertisement -

ಅಮೆರಿಕದಲ್ಲಿ ಕಳೆದ ಮೇನಲ್ಲಿ ಆಫ್ರಿಕನ್-ಅಮೆರಿಕನ್ ವ್ಯಕ್ತಿ ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದೆ. ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತು.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಆರೋಪಿ ಡೆರೆಕ್ ಚೌವಿನ್‌ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆಗೆ ಮಂಡಿಯನ್ನುಟ್ಟು ಹತ್ಯೆ ಮಾಡಿದ್ದನು. ಘಟನೆ ನಡೆಯುತ್ತಿದ್ದಾಗ ಜಾರ್ಜ್ ಫ್ಲಾಯ್ಡ್‌ ನನಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ ಎಂದು ಮನವಿ ಮಾಡಿದ್ದರು. ಘಟನಾ ಸ್ಥಳದಲ್ಲಿ ಇದ್ದ ಸಾರ್ವಜನಿಕರು ಕೂಡಾ ಈ ಬಗ್ಗೆ ಅವರಿಗೆ ಹೇಳಿದ್ದರು. ಆದರೆ ಪೊಲೀಸ್ ಅಧಿಕಾರಿಯೂ ಇದನ್ನು ಗಣನೆಗೆ ತೆಗೆದುಕೊಂಡಿರಲಿಲ್ಲ.

“ಇದು ಜಾರ್ಜ್ ಫ್ಲಾಯ್ಡ್ ವಿಚಾರಣೆಯಲ್ಲ. ಇದು ಡೆರೆಕ್ ಚೌವಿನ್ ಅವರ ವಿಚಾರಣೆಯಾಗಿದೆ. ನಾವು ಅದರ ಬಗ್ಗೆ ಮಾತನಾಡುವಾಗಲೆಲ್ಲಾ ಅದನ್ನು ಉಲ್ಲೇಖಿಸಬೇಕು ಮತ್ತು ಮಾತನಾಡಬೇಕು” ಎಂದು ಅಟಾರ್ನಿ ಜಸ್ಟಿನ್ ಮಿಲ್ಲರ್ ಹೇಳಿದ್ದಾರೆ.

“ಇಂದು ಮಹತ್ವದ ವಿಚಾರಣೆ ಪ್ರಾರಂಭವಾಗುತ್ತಿದೆ. ಎಲ್ಲರಿಗೂ ಸಮಾನತೆ ಮತ್ತು ನ್ಯಾಯಕ್ಕಾಗಿ ಅಮೆರಿಕ ಎಷ್ಟು ದೂರ ಬಂದಿದೆ ಎಂಬುದರ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಲಿದೆ” ಎಂದು ನಾಗರಿಕ ಹಕ್ಕುಗಳ ವಕೀಲ ಬೆನ್ ಕ್ರಂಪ್ ಸೋಮವಾರ ನ್ಯಾಯಾಲಯದ ಹೊರಗೆ ಹೇಳಿದ್ದಾರೆ.

ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

“ಈ ಕೊಲೆ ಪ್ರಕರಣವು ವಾದಿಸಲು ಅಷ್ಟೇನೂ ಕಠಿಣವಲ್ಲ, ಜಾರ್ಜ್ ಫ್ಲಾಯ್ಡ್ ಅವರ ಚಿತ್ರಹಿಂಸೆ ವೀಡಿಯೊವನ್ನು ನೋಡಿದರೆ ಸಾಕು” ಎಂದು ಬೆನ್ ಕ್ರಂಪ್ ಹೇಳಿದ್ದಾರೆ.

ಮೇ 25, 2020 ರಂದು ಈ ಅಮಾನವೀಯ ನಡೆದಿದ್ದು, ಘಟನೆಯ ನಂತರ ಆರೋಪಿಯನ್ನು ಪೊಲೀಸ್ ಇಲಾಖೆಯಿಂದ ವಜಾ ಮಾಡಿತ್ತು. ಘಟನೆಯ ವೀಡಿಯೋ ವೈರಲ್ ಆಗಿದ್ದು ವಿಶ್ವದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿ ‘ಬ್ಲಾಕ್‌ ಲೈವ್ಸ್ ಮ್ಯಾಟರ್‌’ ಚಳವಳಿ ಪ್ರಾರಂಭವಾಗಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...