HomeಮುಖಪುಟLGBTQIA+ ಸಮುದಾಯದ ಅವಹೇಳನಕಾರಿ ಚಿತ್ರಣ ಆರೋಪ : ಮಲಯಾಳಂ ಸಿನಿಮಾ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ

LGBTQIA+ ಸಮುದಾಯದ ಅವಹೇಳನಕಾರಿ ಚಿತ್ರಣ ಆರೋಪ : ಮಲಯಾಳಂ ಸಿನಿಮಾ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ

- Advertisement -
- Advertisement -

ಎಂ. ಮೋಹನನ್ ನಿರ್ದೇಶನದ, ವಿನೀತ್ ಶ್ರೀನಿವಾಸನ್ ಮತ್ತು ನಿಖಿಲಾ ವಿಮಲ್ ನಟಿಸಿರುವ ಮಲಯಾಳಂ ಚಲನಚಿತ್ರ ‘ಒರು ಜಾತಿ ಜಾತಕಂ’ನಲ್ಲಿ LGBTQIA+ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಯನ್ನು ಕೇರಳ ಹೈಕೋರ್ಟ್ ಸ್ವೀಕರಿಸಿದೆ.

LGBTQIA+ ಸಮುದಾಯದ ಪ್ರತಿನಿಧಿ ಮತ್ತು ಕೇರಳದ ಅಲಪ್ಪುಝ ನಿವಾಸಿ ಶಾಖಿಯಾ ಎಸ್ ಪ್ರಿಯಂವದ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ವರದಿಗಳ ಪ್ರಕಾರ, ನಿರ್ಮಾಪಕ ಸೇರಿದಂತೆ ಚಿತ್ರಕ್ಕೆ ಸಂಬಂಧಿಸಿದ ವ್ಯಕ್ತಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಲಿದೆ.

LGBTQIA+ ಸಮುದಾಯದವನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವ ಕೆಲವು ಕೆಲವು ಪದಗಳು ಮತ್ತು ಸಂಭಾಷಣೆಗಳು ಸಿನಿಮಾದಲ್ಲಿವೆ. ಈ ಪದಗಳು ತಾರತಮ್ಯವನ್ನು ಉತ್ತೇಜಿಸುತ್ತವೆ. ಮಾನವ ಘನತೆಯನ್ನು ಕುಗ್ಗಿಸುತ್ತದೆ. ಸಮುದಾಯದ ವಿರುದ್ದ ಹಾನಿಕಾರಕ ಸಂದೇಶವನ್ನು ಕಟ್ಟಿಕೊಡುತ್ತದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಭಾರತದ ಸಂವಿಧಾನದ ವಿಧಿ 14 (ಸಮಾನತೆಯ ಹಕ್ಕು), ವಿಧಿ 19 (ಸಮಂಜಸವಾದ ನಿರ್ಬಂಧಗಳೊಂದಿಗೆ ವಾಕ್ ಸ್ವಾತಂತ್ರ್ಯ) ಮತ್ತು ವಿಧಿ 21 (ಜೀವನ ಮತ್ತು ಘನತೆಯ ಹಕ್ಕು) ಅಡಿಯಲ್ಲಿ LGBTQ+ ವ್ಯಕ್ತಿಗಳು ಸೇರಿದಂತೆ ಪ್ರತಿಯೊಬ್ಬರೂ ಗೌರವ ಮತ್ತು ಘನತೆಯಿಂದ ಬದುಕುವ ಹಕ್ಕನ್ನು ಹೊಂದಿದ್ದಾರೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

‘ಒರು ಜಾತಿ ಜಾತಕಂ’ ಸಿನಿಮಾ ಜನವರಿ 31, 2025ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಕಥೆಯನ್ನು ರಾಕೇಶ್ ಮಂಟೋಡಿ ಬರೆದಿದ್ದಾರೆ ಮತ್ತು ಮಹಾ ಝುಬೈರ್ ಮತ್ತು ವರ್ಣಚಿತ್ರ ಬಿಗ್ ಸ್ಕ್ರೀನ್ ನಿರ್ಮಿಸಿದ್ದಾರೆ. ಬಾಬು ಆಂಟನಿ, ಇಶಾ ತಲ್ವಾರ್, ಪೂಜಾ ಮೋಹನರಾಜ್, ಸಯನೋರಾ ಫಿಲಿಪ್ ಮತ್ತು ಪಿಪಿ ಕುಂಞಿಕೃಷ್ಣನ್ ಅವರಂತಹ ಜನಪ್ರಿಯ ನಟರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಚಿತ್ರದ ಕಥೆಯು ಕೇರಳದ ಉತ್ತರ ಜಿಲ್ಲೆಯೊಂದರ 37 ವರ್ಷದ ಜಯೇಶ್ (ವಿನೀತ್) ಎಂಬಾತನ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಅರೇಂಜ್ ವಿವಾಹ ಆಗಲು ಬಯಸುವ ವ್ಯಕ್ತಿ ಮಹಿಳೆಯರ ಚರ್ಮದ ಬಣ್ಣ ಅಥವಾ ಮದುವೆಯ ನಂತರ ಕೆಲಸ ಮಾಡುವ ಆಯ್ಕೆಯ ಆಧಾರದ ಮೇಲೆ ಅವರನ್ನು ತಿರಸ್ಕರಿಸುವ ವಿಷಯವಿದೆ.  ಚಿತ್ರದ ಕುರಿತು ದಿ ನ್ಯೂಸ್ ಮಿನಿಟ್‌ನಲ್ಲಿ ಪ್ರಕಟಗೊಂಡಿರುವ ವಿಮರ್ಶೆಯಲ್ಲಿ, “ವಿಫಲ ಹಾಸ್ಯದಿಂದ ಹಿಡಿದು ಸಲಿಂಗಕಾಮಿ ಸಮುದಾಯದ ಸಂಪೂರ್ಣ ಅಸಹ್ಯಕರ ಚಿತ್ರಣದವರೆಗೆ ಹಲವು ವಿಭಿನ್ನ ರೀತಿಯ ತಪ್ಪುಗಳು ಚಿತ್ರದಲ್ಲಿವೆ ಎಂದು ವಿಮರ್ಶಕ ಕ್ರಿಸ್ ಬರೆದಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಚಿತ್ರಕ್ಕೆ ನಿರ್ಬಂಧ

LGBTQIA+ ಸಮುದಾಯದ ವಿಷಯವನ್ನು ಇಟ್ಟುಕೊಂಡು ಮಾಡಿರುವ ಹಿನ್ನೆಲೆ ‘ಒರು ಜಾತಿ ಜಾತಕಂ’ ಸಿನಿಮಾದ ಪ್ರದರ್ಶನಕ್ಕೆ ಅನೇಕ ಗಲ್ಫ್‌ ದೇಶದಲ್ಲಿ ನಿರ್ಬಂಧ ವಿಧಿಸಲಾಗಿದೆ ಎಂದು ವರದಿಯಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸೌದಿ ಅರೇಬಿಯಾ ಮತ್ತು ಕತಾರ್ ಸೇರಿದಂತೆ ಅನೇಕ ಗಲ್ಫ್ ರಾಷ್ಟ್ರಗಳಲ್ಲಿ ಸಿನಿಮಾಗೆ ನಿರ್ಬಂಧ ವಿಧಿಸಲಾಗಿದೆ. ಒಮಾನ್‌ನಲ್ಲಿ ಮಾತ್ರ ನಿರ್ಬಂಧಿಸಿಲ್ಲ ಎಂದು ವರದಿಗಳು ಹೇಳಿವೆ.

ಪೊಲೀಸ್ ಚಿತ್ರಹಿಂಸೆ ಆರೋಪಿಸಿ ಯುವಕ ಆತ್ಮಹತ್ಯೆ ಪ್ರಕರಣ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...