Homeಮುಖಪುಟಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

ಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

- Advertisement -
- Advertisement -

ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಅವರ ತೇಜೋವದೆಗೆ ಯತ್ನಿಸಿದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.

ಟ್ವಿಟ್ಟರ್ ಹಾಗೂ ಫೇಸ್‌ಬುಕ್​ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷರಾದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಹಿನ್ನಲೆಯಲ್ಲಿ ದೇವೇಗೌಡರನ್ನು ಎಳೆದು ತಂದು ಅಪಮಾನ ಮಾಡಲಾಗಿತ್ತು. “ಈ ಕೇಸ್ ಬಗ್ಗೆ ಸಿಂಪಲ್ ಆಗಿ ಹೇಳಬೇಕು ಎಂದರೆ, ದೇವೇಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೇ ಯಾಕಿರುತ್ತಾರೆ ಅನ್ನೋದಕ್ಕೂ ವ್ಯತ್ಯಾಸ ಇದೆ. ಮೊದಲನೆಯದ್ದಕ್ಕೆ ದೇವೇಗೌಡರು ಕೇಸ್ ಹಾಕಬೇಕು, ಎರಡನೆಯದ್ದಕ್ಕೆ ಅವನ ಮಗನೋ ಮೊಮ್ಮಗನೋ ಅಥವಾ ಯಾರಾದರೂ ಗೌಡ ಕೇಸ್ ಹಾಕಬಹುದು” ಎಂದು ಬರೆದು “ಸುಮ್ಮನೆ ಒಂದು ಉದಾಹರಣೆ ಕೊಟ್ಟೆ ಅಷ್ಟೆ, ಸೀರಿಯಸ್ ಆಗಿ ತಗೊಳಬೇಡಿ” ಎಂದು ಪ್ರಶಾಂತ್ ಸಂಬರ್ಗಿ ಪೋಸ್ಟ್ ಮಾಡಿದ್ದರು.

ಅವಹೇಳನಕಾರಿ ಬರೆದು ತೆಜೋವಧೆ ಮಾಡಿದ ಸಂಬರ್ಗಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಮಾರ್ಚ್ 15ರಂದು ಹೆಚ್ ಡಿ ದೇವೇಗೌಡ ಅವರ ವಿರುದ್ಧ Elephant whisperers ಪೋಸ್ಟ್​ ಮೇಲೆ ‘ಎಲ್ಲೇ ಕೂಸು ಹುಟ್ಟಲಿ ನಾನೇ ಅಪ್ಪ’ ಎಂದು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಮಾರ್ಚ್ 11ರಂದು ದೇವೇಗೌಡ ಅವರ ವಿರುದ್ಧ ‘ಇವರು ಹೊಟ್ಟೆಗೆ ಅನ್ನ ತಿಂತಾರ ಇಲ್ಲ ಏನು ತಿಂತಾರೆ?’ ಎಂದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಮಾರ್ಚ್ 13ರಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿದ ಸಾರ್ವಜನಿಕ ಭಾಷಣದ ಕ್ಲಿಪ್ ಬಳಿಸಿಕೊಂಡು ಪ್ರಶಾಂತ್ ಸಂಬರಗಿ ‘ಚೀ ಕಳ್ಳ ಕುಮಾರ್ ಸಾಬ್ ಖಾನ್’ ಎಂದು ಹೇಳಿ ಅವಮಾನಿಸಿದ್ದಾನೆ. ಈ ಎಲ್ಲ ಪೋಸ್ಟ್​ಗಳನ್ನು ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ದೂರಿನಲ್ಲಿ ಉಲ್ಲೆಖಿಸಿದೆ.

ಅತ್ತ ದೂರು ದಾಖಲಾಗುತ್ತಲೇ ಬೆದರಿದ ಪ್ರಶಾಂತ್ ಸಂಬರ್ಗಿ ದೇವೇಗೌಡರ ಬಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ತಂದೆ ಸಮಾನರಾದ Shri ದೇವೆಗೌಡ್ರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಾನು ಒಂದು ಉದಾರಣೆಯಾಗಿ ದೇವೆ ಗೌಡ ಎಂದು ಹೆಸರನ್ನು ಬಳಸಿದೆ ಹೊರತು ಯಾವುದೇ ದುರುದ್ವೇಷ ವಿರಲಿಲ್ಲ. ಇದು ಯಾವುದೇ ರೀತಿಯಲ್ಲೂ ಅವರ ಗೌರವಕ್ಕೆ ಚುತ್ತಿ ತರಲು ಬಳಸಲಿಲ್ಲ. ಇದರಿಂದ ಯಾರಿಗಾದರೂ ಅಸಮಾಧಾನವಾಗಿದ್ದರೆ ನನ್ನ ಕಳ ಕಳಿಯ ಕ್ಷಮೆ ವಿರಲಿ #sorry” ಎಂದು ಬರೆದಿದ್ದಾರೆ.

ದೇವೇಗೌಡರ ಬಗ್ಗೆ ತಾನು ಮಾಡಿದ್ದ ಅವಹೇಳನಕಾರಿ ಟ್ವೀಟ್ ಅನ್ನು ಡಿಲೀಟ್ ಮಾಡಿರುವ ಪ್ರಶಾಂತ್ ಸಂಬರ್ಗಿ, ಮತ್ತೊಂದು ಟ್ವೀಟ್‌ನಲ್ಲಿ ದೇವೇಗೌಡರ ಹೆಸರು ತೆಗೆದು ಶಾರೂಕ್ ಖಾನ್ ಹೆಸರು ಹಾಕಿ ಅದೇ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...