Homeಮುಖಪುಟಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

ಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

- Advertisement -
- Advertisement -

ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಅವರ ತೇಜೋವದೆಗೆ ಯತ್ನಿಸಿದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.

ಟ್ವಿಟ್ಟರ್ ಹಾಗೂ ಫೇಸ್‌ಬುಕ್​ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷರಾದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಹಿನ್ನಲೆಯಲ್ಲಿ ದೇವೇಗೌಡರನ್ನು ಎಳೆದು ತಂದು ಅಪಮಾನ ಮಾಡಲಾಗಿತ್ತು. “ಈ ಕೇಸ್ ಬಗ್ಗೆ ಸಿಂಪಲ್ ಆಗಿ ಹೇಳಬೇಕು ಎಂದರೆ, ದೇವೇಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೇ ಯಾಕಿರುತ್ತಾರೆ ಅನ್ನೋದಕ್ಕೂ ವ್ಯತ್ಯಾಸ ಇದೆ. ಮೊದಲನೆಯದ್ದಕ್ಕೆ ದೇವೇಗೌಡರು ಕೇಸ್ ಹಾಕಬೇಕು, ಎರಡನೆಯದ್ದಕ್ಕೆ ಅವನ ಮಗನೋ ಮೊಮ್ಮಗನೋ ಅಥವಾ ಯಾರಾದರೂ ಗೌಡ ಕೇಸ್ ಹಾಕಬಹುದು” ಎಂದು ಬರೆದು “ಸುಮ್ಮನೆ ಒಂದು ಉದಾಹರಣೆ ಕೊಟ್ಟೆ ಅಷ್ಟೆ, ಸೀರಿಯಸ್ ಆಗಿ ತಗೊಳಬೇಡಿ” ಎಂದು ಪ್ರಶಾಂತ್ ಸಂಬರ್ಗಿ ಪೋಸ್ಟ್ ಮಾಡಿದ್ದರು.

ಅವಹೇಳನಕಾರಿ ಬರೆದು ತೆಜೋವಧೆ ಮಾಡಿದ ಸಂಬರ್ಗಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಮಾರ್ಚ್ 15ರಂದು ಹೆಚ್ ಡಿ ದೇವೇಗೌಡ ಅವರ ವಿರುದ್ಧ Elephant whisperers ಪೋಸ್ಟ್​ ಮೇಲೆ ‘ಎಲ್ಲೇ ಕೂಸು ಹುಟ್ಟಲಿ ನಾನೇ ಅಪ್ಪ’ ಎಂದು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಮಾರ್ಚ್ 11ರಂದು ದೇವೇಗೌಡ ಅವರ ವಿರುದ್ಧ ‘ಇವರು ಹೊಟ್ಟೆಗೆ ಅನ್ನ ತಿಂತಾರ ಇಲ್ಲ ಏನು ತಿಂತಾರೆ?’ ಎಂದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಮಾರ್ಚ್ 13ರಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿದ ಸಾರ್ವಜನಿಕ ಭಾಷಣದ ಕ್ಲಿಪ್ ಬಳಿಸಿಕೊಂಡು ಪ್ರಶಾಂತ್ ಸಂಬರಗಿ ‘ಚೀ ಕಳ್ಳ ಕುಮಾರ್ ಸಾಬ್ ಖಾನ್’ ಎಂದು ಹೇಳಿ ಅವಮಾನಿಸಿದ್ದಾನೆ. ಈ ಎಲ್ಲ ಪೋಸ್ಟ್​ಗಳನ್ನು ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ದೂರಿನಲ್ಲಿ ಉಲ್ಲೆಖಿಸಿದೆ.

ಅತ್ತ ದೂರು ದಾಖಲಾಗುತ್ತಲೇ ಬೆದರಿದ ಪ್ರಶಾಂತ್ ಸಂಬರ್ಗಿ ದೇವೇಗೌಡರ ಬಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ತಂದೆ ಸಮಾನರಾದ Shri ದೇವೆಗೌಡ್ರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಾನು ಒಂದು ಉದಾರಣೆಯಾಗಿ ದೇವೆ ಗೌಡ ಎಂದು ಹೆಸರನ್ನು ಬಳಸಿದೆ ಹೊರತು ಯಾವುದೇ ದುರುದ್ವೇಷ ವಿರಲಿಲ್ಲ. ಇದು ಯಾವುದೇ ರೀತಿಯಲ್ಲೂ ಅವರ ಗೌರವಕ್ಕೆ ಚುತ್ತಿ ತರಲು ಬಳಸಲಿಲ್ಲ. ಇದರಿಂದ ಯಾರಿಗಾದರೂ ಅಸಮಾಧಾನವಾಗಿದ್ದರೆ ನನ್ನ ಕಳ ಕಳಿಯ ಕ್ಷಮೆ ವಿರಲಿ #sorry” ಎಂದು ಬರೆದಿದ್ದಾರೆ.

ದೇವೇಗೌಡರ ಬಗ್ಗೆ ತಾನು ಮಾಡಿದ್ದ ಅವಹೇಳನಕಾರಿ ಟ್ವೀಟ್ ಅನ್ನು ಡಿಲೀಟ್ ಮಾಡಿರುವ ಪ್ರಶಾಂತ್ ಸಂಬರ್ಗಿ, ಮತ್ತೊಂದು ಟ್ವೀಟ್‌ನಲ್ಲಿ ದೇವೇಗೌಡರ ಹೆಸರು ತೆಗೆದು ಶಾರೂಕ್ ಖಾನ್ ಹೆಸರು ಹಾಕಿ ಅದೇ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...