Homeಮುಖಪುಟಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

ಹೆಚ್ ಡಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲು

- Advertisement -
- Advertisement -

ಮಾಜಿ ಪ್ರಧಾನಮಂತ್ರಿಗಳು ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಅವರ ತೇಜೋವದೆಗೆ ಯತ್ನಿಸಿದ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.

ಟ್ವಿಟ್ಟರ್ ಹಾಗೂ ಫೇಸ್‌ಬುಕ್​ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷರಾದ ಎ.ಪಿ.ರಂಗನಾಥ್, ವಕ್ತಾರ ಗಂಗಾಧರ್ ಮೂರ್ತಿ ಸೇರಿ ಹಲವರು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹಗೊಂಡ ಹಿನ್ನಲೆಯಲ್ಲಿ ದೇವೇಗೌಡರನ್ನು ಎಳೆದು ತಂದು ಅಪಮಾನ ಮಾಡಲಾಗಿತ್ತು. “ಈ ಕೇಸ್ ಬಗ್ಗೆ ಸಿಂಪಲ್ ಆಗಿ ಹೇಳಬೇಕು ಎಂದರೆ, ದೇವೇಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೇ ಯಾಕಿರುತ್ತಾರೆ ಅನ್ನೋದಕ್ಕೂ ವ್ಯತ್ಯಾಸ ಇದೆ. ಮೊದಲನೆಯದ್ದಕ್ಕೆ ದೇವೇಗೌಡರು ಕೇಸ್ ಹಾಕಬೇಕು, ಎರಡನೆಯದ್ದಕ್ಕೆ ಅವನ ಮಗನೋ ಮೊಮ್ಮಗನೋ ಅಥವಾ ಯಾರಾದರೂ ಗೌಡ ಕೇಸ್ ಹಾಕಬಹುದು” ಎಂದು ಬರೆದು “ಸುಮ್ಮನೆ ಒಂದು ಉದಾಹರಣೆ ಕೊಟ್ಟೆ ಅಷ್ಟೆ, ಸೀರಿಯಸ್ ಆಗಿ ತಗೊಳಬೇಡಿ” ಎಂದು ಪ್ರಶಾಂತ್ ಸಂಬರ್ಗಿ ಪೋಸ್ಟ್ ಮಾಡಿದ್ದರು.

ಅವಹೇಳನಕಾರಿ ಬರೆದು ತೆಜೋವಧೆ ಮಾಡಿದ ಸಂಬರ್ಗಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಮಾರ್ಚ್ 15ರಂದು ಹೆಚ್ ಡಿ ದೇವೇಗೌಡ ಅವರ ವಿರುದ್ಧ Elephant whisperers ಪೋಸ್ಟ್​ ಮೇಲೆ ‘ಎಲ್ಲೇ ಕೂಸು ಹುಟ್ಟಲಿ ನಾನೇ ಅಪ್ಪ’ ಎಂದು ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಮಾರ್ಚ್ 11ರಂದು ದೇವೇಗೌಡ ಅವರ ವಿರುದ್ಧ ‘ಇವರು ಹೊಟ್ಟೆಗೆ ಅನ್ನ ತಿಂತಾರ ಇಲ್ಲ ಏನು ತಿಂತಾರೆ?’ ಎಂದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ. ಮಾರ್ಚ್ 13ರಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಮಾಡಿದ ಸಾರ್ವಜನಿಕ ಭಾಷಣದ ಕ್ಲಿಪ್ ಬಳಿಸಿಕೊಂಡು ಪ್ರಶಾಂತ್ ಸಂಬರಗಿ ‘ಚೀ ಕಳ್ಳ ಕುಮಾರ್ ಸಾಬ್ ಖಾನ್’ ಎಂದು ಹೇಳಿ ಅವಮಾನಿಸಿದ್ದಾನೆ. ಈ ಎಲ್ಲ ಪೋಸ್ಟ್​ಗಳನ್ನು ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ದೂರಿನಲ್ಲಿ ಉಲ್ಲೆಖಿಸಿದೆ.

ಅತ್ತ ದೂರು ದಾಖಲಾಗುತ್ತಲೇ ಬೆದರಿದ ಪ್ರಶಾಂತ್ ಸಂಬರ್ಗಿ ದೇವೇಗೌಡರ ಬಳಿ ಕ್ಷಮೆ ಕೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, “ನನ್ನ ತಂದೆ ಸಮಾನರಾದ Shri ದೇವೆಗೌಡ್ರ ಬಗ್ಗೆ ನನಗೆ ಅಪಾರವಾದ ಗೌರವ ಇದೆ. ನಾನು ಒಂದು ಉದಾರಣೆಯಾಗಿ ದೇವೆ ಗೌಡ ಎಂದು ಹೆಸರನ್ನು ಬಳಸಿದೆ ಹೊರತು ಯಾವುದೇ ದುರುದ್ವೇಷ ವಿರಲಿಲ್ಲ. ಇದು ಯಾವುದೇ ರೀತಿಯಲ್ಲೂ ಅವರ ಗೌರವಕ್ಕೆ ಚುತ್ತಿ ತರಲು ಬಳಸಲಿಲ್ಲ. ಇದರಿಂದ ಯಾರಿಗಾದರೂ ಅಸಮಾಧಾನವಾಗಿದ್ದರೆ ನನ್ನ ಕಳ ಕಳಿಯ ಕ್ಷಮೆ ವಿರಲಿ #sorry” ಎಂದು ಬರೆದಿದ್ದಾರೆ.

ದೇವೇಗೌಡರ ಬಗ್ಗೆ ತಾನು ಮಾಡಿದ್ದ ಅವಹೇಳನಕಾರಿ ಟ್ವೀಟ್ ಅನ್ನು ಡಿಲೀಟ್ ಮಾಡಿರುವ ಪ್ರಶಾಂತ್ ಸಂಬರ್ಗಿ, ಮತ್ತೊಂದು ಟ್ವೀಟ್‌ನಲ್ಲಿ ದೇವೇಗೌಡರ ಹೆಸರು ತೆಗೆದು ಶಾರೂಕ್ ಖಾನ್ ಹೆಸರು ಹಾಕಿ ಅದೇ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಮೊದಲ ಪಟ್ಟಿ: ಮುಸ್ಲಿಂ ಸಮುದಾಯದ 8 ಮಂದಿಗೆ, 6 ಮಹಿಳೆಯರಿಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...