Homeಕರ್ನಾಟಕಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

- Advertisement -
- Advertisement -

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಉಡುಪಿಯ ಕಾಲೇಜೊಂದರ ಟಾಯ್ಲೆಟ್​ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್​ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮಾತನಾಡಿ ಜೈಲು ಪಾಲಾಗಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಅವರು ಪ್ರಧಾನಿ ಮೋದಿ ಅವರೊಂದಿಗಿನ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾಕಾರ್ಯದರ್ಶಿ ಸಿಟಿ ರವಿ ಅವರು ಟ್ವಿಟರ್ ನಲ್ಲಿ ಫಾಲೋ ಮಾಡುತ್ತಾರೆ. ಆದರೆ ಶಕುಂತಲಾ ಇದೇ ಮೊದಲ ಬಾರಿಗೆ ಇಂತಹ ಪೋಸ್ಟಗಳನ್ನು ಹಂಚಿಕೊಂಡವಳಲ್ಲ, ಇದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕವಾಗಿ ಪೋಸ್ಟ್ ಮಾಡುವ ಮೂಲಕ ಕುಖ್ಯಾತಿ ಗಳಿಸಿದ್ದಾರೆ.

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿಜೆಪಿ ನಾಯಕಿ ಶಕುಂತಲಾ ಎನ್ನುವವರು ಅವಹೇಳನ ಟ್ವೀಟ್ ಮಾಡಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿತ್ತು.

ಈ ಹಿಂದೆ ಕಾಂಗ್ರೆಸ್ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ”ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ABVP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ?” ಎಂದು ಪ್ರಶ್ನೆ ಮಾಡಿತ್ತು.

”ವಿದ್ಯಾರ್ಥಿನಿಯರ ಮಕ,ಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಲಾಗಿತ್ತು.

ಇದರಬೆನ್ನಲ್ಲೇ ಬಿಜೆಪಿ ನಾಯಕಿ ಶಕುಂತಲಾ ಅವರು ಸಿಎಂ ಸೊಸೆ, ಹೆಂಡ್ತಿ ವೀಡಿಯೋ ಮಾಡಿದ್ರೆ ಹೀಗೆ ಹೇಳ್ತಿದ್ರಾ? ಎಂದು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಶಕುಂತಲಾ ಅವರು, ”ಮುಸ್ಲಿಂ ಯುವತಿಯರು ಹಿಂದೂ ಹುಡುಗಿಯರ ನಗ್ನ ಚಿತ್ರ ವೀಡಿಯೋ ಮಾಡಿದ್ದು ತಮಾಷೆ,ಮಕ್ಕಳಾಟ ಎನ್ನುತ್ತಿರುವ ಕಾಂಗ್ರೆಸ್ ಮತ್ತದರ ಅನುಯಾಯಿಗಳು, ಅನ್ಯಾಯವಾದ ಹೆಣ್ಣುಮಕ್ಕಳು ಬರೆದಿರುವ ದೂರು ಕೂಡ ನಕಲಿ ಎಂದು ಹೇಳುತ್ತಾರೆಯೇ?” ಎಂದು ಪ್ರಶ್ನೆ ಮಾಡಿದ್ದರು.

ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿದ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ನಾಯಕಿ ಶಕುಂತಲಾಳನ್ನ ಬಂಧಿಸಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಮತ್ತು ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ತುಮಕೂರು ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆಯಲ್ಲಿ ಶಕುಂತಲಾ ಭಾಗಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...