Homeಕರ್ನಾಟಕಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

- Advertisement -
- Advertisement -

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಉಡುಪಿಯ ಕಾಲೇಜೊಂದರ ಟಾಯ್ಲೆಟ್​ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್​ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮಾತನಾಡಿ ಜೈಲು ಪಾಲಾಗಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಅವರು ಪ್ರಧಾನಿ ಮೋದಿ ಅವರೊಂದಿಗಿನ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾಕಾರ್ಯದರ್ಶಿ ಸಿಟಿ ರವಿ ಅವರು ಟ್ವಿಟರ್ ನಲ್ಲಿ ಫಾಲೋ ಮಾಡುತ್ತಾರೆ. ಆದರೆ ಶಕುಂತಲಾ ಇದೇ ಮೊದಲ ಬಾರಿಗೆ ಇಂತಹ ಪೋಸ್ಟಗಳನ್ನು ಹಂಚಿಕೊಂಡವಳಲ್ಲ, ಇದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕವಾಗಿ ಪೋಸ್ಟ್ ಮಾಡುವ ಮೂಲಕ ಕುಖ್ಯಾತಿ ಗಳಿಸಿದ್ದಾರೆ.

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿಜೆಪಿ ನಾಯಕಿ ಶಕುಂತಲಾ ಎನ್ನುವವರು ಅವಹೇಳನ ಟ್ವೀಟ್ ಮಾಡಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿತ್ತು.

ಈ ಹಿಂದೆ ಕಾಂಗ್ರೆಸ್ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ”ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ABVP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ?” ಎಂದು ಪ್ರಶ್ನೆ ಮಾಡಿತ್ತು.

”ವಿದ್ಯಾರ್ಥಿನಿಯರ ಮಕ,ಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಲಾಗಿತ್ತು.

ಇದರಬೆನ್ನಲ್ಲೇ ಬಿಜೆಪಿ ನಾಯಕಿ ಶಕುಂತಲಾ ಅವರು ಸಿಎಂ ಸೊಸೆ, ಹೆಂಡ್ತಿ ವೀಡಿಯೋ ಮಾಡಿದ್ರೆ ಹೀಗೆ ಹೇಳ್ತಿದ್ರಾ? ಎಂದು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಶಕುಂತಲಾ ಅವರು, ”ಮುಸ್ಲಿಂ ಯುವತಿಯರು ಹಿಂದೂ ಹುಡುಗಿಯರ ನಗ್ನ ಚಿತ್ರ ವೀಡಿಯೋ ಮಾಡಿದ್ದು ತಮಾಷೆ,ಮಕ್ಕಳಾಟ ಎನ್ನುತ್ತಿರುವ ಕಾಂಗ್ರೆಸ್ ಮತ್ತದರ ಅನುಯಾಯಿಗಳು, ಅನ್ಯಾಯವಾದ ಹೆಣ್ಣುಮಕ್ಕಳು ಬರೆದಿರುವ ದೂರು ಕೂಡ ನಕಲಿ ಎಂದು ಹೇಳುತ್ತಾರೆಯೇ?” ಎಂದು ಪ್ರಶ್ನೆ ಮಾಡಿದ್ದರು.

ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿದ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ನಾಯಕಿ ಶಕುಂತಲಾಳನ್ನ ಬಂಧಿಸಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಮತ್ತು ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ತುಮಕೂರು ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆಯಲ್ಲಿ ಶಕುಂತಲಾ ಭಾಗಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...