Homeಕರ್ನಾಟಕಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ನಾಯಕಿ ಶಕುಂತಲಾ ಬಂಧನ

- Advertisement -
- Advertisement -

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ತುಮಕೂರಿನ ಬಿಜೆಪಿ ನಾಯಕಿ ಶಕುಂತಲಾ ಅವರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಉಡುಪಿಯ ಕಾಲೇಜೊಂದರ ಟಾಯ್ಲೆಟ್​ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್​ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮಾತನಾಡಿ ಜೈಲು ಪಾಲಾಗಿದ್ದಾರೆ.

ಬಿಜೆಪಿ ನಾಯಕಿ ಶಕುಂತಲಾ ಅವರು ಪ್ರಧಾನಿ ಮೋದಿ ಅವರೊಂದಿಗಿನ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾಕಾರ್ಯದರ್ಶಿ ಸಿಟಿ ರವಿ ಅವರು ಟ್ವಿಟರ್ ನಲ್ಲಿ ಫಾಲೋ ಮಾಡುತ್ತಾರೆ. ಆದರೆ ಶಕುಂತಲಾ ಇದೇ ಮೊದಲ ಬಾರಿಗೆ ಇಂತಹ ಪೋಸ್ಟಗಳನ್ನು ಹಂಚಿಕೊಂಡವಳಲ್ಲ, ಇದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕವಾಗಿ ಪೋಸ್ಟ್ ಮಾಡುವ ಮೂಲಕ ಕುಖ್ಯಾತಿ ಗಳಿಸಿದ್ದಾರೆ.

ಉಡುಪಿ ಕಾಲೇಜಿನ ಶೌಚಗೃಹದಲ್ಲಿ ವಿಡಿಯೋ ಮಾಡಿದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಬಿಜೆಪಿ ನಾಯಕಿ ಶಕುಂತಲಾ ಎನ್ನುವವರು ಅವಹೇಳನ ಟ್ವೀಟ್ ಮಾಡಿದ್ದರು. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು, ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿತ್ತು.

ಈ ಹಿಂದೆ ಕಾಂಗ್ರೆಸ್ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಪೋಸ್ಟ್ ”ಉಡುಪಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ABVP ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ?” ಎಂದು ಪ್ರಶ್ನೆ ಮಾಡಿತ್ತು.

”ವಿದ್ಯಾರ್ಥಿನಿಯರ ಮಕ,ಳಾಟವನ್ನು ರಾಜಕೀಯದ ಕಳ್ಳಾಟಕ್ಕೆ, ಬಳಸಿಕೊಳ್ಳಲು ಉಪ್ಪು ಖಾರ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿಗೆ ನಮ್ಮ ದಕ್ಷಪೊಲೀಸರು ತಡಮಾಡದೆ ತನಿಖೆ ಮಾಡಿ ಸತ್ಯಾಂಶ ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಲಾಗಿತ್ತು.

ಇದರಬೆನ್ನಲ್ಲೇ ಬಿಜೆಪಿ ನಾಯಕಿ ಶಕುಂತಲಾ ಅವರು ಸಿಎಂ ಸೊಸೆ, ಹೆಂಡ್ತಿ ವೀಡಿಯೋ ಮಾಡಿದ್ರೆ ಹೀಗೆ ಹೇಳ್ತಿದ್ರಾ? ಎಂದು ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಶಕುಂತಲಾ ಅವರು, ”ಮುಸ್ಲಿಂ ಯುವತಿಯರು ಹಿಂದೂ ಹುಡುಗಿಯರ ನಗ್ನ ಚಿತ್ರ ವೀಡಿಯೋ ಮಾಡಿದ್ದು ತಮಾಷೆ,ಮಕ್ಕಳಾಟ ಎನ್ನುತ್ತಿರುವ ಕಾಂಗ್ರೆಸ್ ಮತ್ತದರ ಅನುಯಾಯಿಗಳು, ಅನ್ಯಾಯವಾದ ಹೆಣ್ಣುಮಕ್ಕಳು ಬರೆದಿರುವ ದೂರು ಕೂಡ ನಕಲಿ ಎಂದು ಹೇಳುತ್ತಾರೆಯೇ?” ಎಂದು ಪ್ರಶ್ನೆ ಮಾಡಿದ್ದರು.

ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿದ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ನಾಯಕಿ ಶಕುಂತಲಾಳನ್ನ ಬಂಧಿಸಿದ್ದಾರೆ.

ಉಡುಪಿಯ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಮತ್ತು ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ತುಮಕೂರು ಬಿಜೆಪಿ ಜಿಲ್ಲಾ ಮಹಿಳಾಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪ್ರತಿಭಟನೆಯಲ್ಲಿ ಶಕುಂತಲಾ ಭಾಗಿಯಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...