Homeಮುಖಪುಟರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

ರೈತ ಮಹಿಳೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್‌ಗೆ ಜಾಮೀನು

- Advertisement -
- Advertisement -

2021 ರ ಮಾನನಷ್ಟ ಪ್ರಕರಣದಲ್ಲಿ ನಟಿ, ಲೋಕಸಭೆ ಸದಸ್ಯೆ ಕಂಗನಾ ರಣಾವತ್‌ಗೆ ಪಂಜಾಬ್‌ನ ಭಟಿಂಡಾ ನಗರದ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

81 ವರ್ಷದ ಮಹಿಳೆ ಮಹಿಂದರ್ ಕೌರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಂಗನಾ ರನೌತ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಿಂದ ಪರಿಹಾರ ಪಡೆಯಲು ವಿಫಲರಾಗಿದ್ದರು.

ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ 81 ವರ್ಷದ ರೈತ ಮಹಿಳೆ ಮಹಿಂದರ್ ಕೌರ್  2021 ರಲ್ಲಿ ಕಂಗನಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರನೌತ್ ವರದಿಗಾರರಿಗೆ ತಪ್ಪು ತಿಳುವಳಿಕೆ ಉಂಟಾಗಿದೆ ಎಂದು ಹೇಳಿದರು, ಏನು ಚಿತ್ರಿಸಲಾಗಿದೆ ಎಂದು ನನಗೆ ಊಹಿಸಲೂ ಸಾಧ್ಯವಿಲ್ಲ ಎಂದರು. 

ಲೋಕಸಭೆಯಲ್ಲಿ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರವನ್ನು ಪ್ರತಿನಿಧಿಸುವ ರನೌತ್, ನ್ಯಾಯಾಲಯದಲ್ಲಿ ವೃದ್ಧ ರೈತ ಮಹಿಳೆಯ ಪತಿ ಲಾಭ್ ಸಿಂಗ್ ಅವರ ಬಳಿ ಕ್ಷಮೆಯಾಚಿಸಿದ್ದಾರೆ. 

“ತಾಯಿ ಹಿಮಾಚಲ ಪ್ರದೇಶದವರಾಗಿರಲಿ ಅಥವಾ ಪಂಜಾಬ್‌ನವರಾಗಿರಲಿ, ಅವರು ನನಗೆ ಗೌರವಾನ್ವಿತರು. ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ” ಎಂದು ಅವರು ಹೇಳಿದರು. “ಇದು ಮರುಟ್ವೀಟ್ ಮಾಡಲಾದ ಮೀಮ್ ಆಗಿತ್ತು. ನಾನು ತಾಯಿ ಮಹಿಂದರ್ ಜಿ ಅವರ ಪತಿಯೊಂದಿಗೆ ಈ ಬಗ್ಗೆ ಮಾತನಾಡಿದ್ದೆ. ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ದೇಶದಲ್ಲಿ ಅನೇಕ ಚಳುವಳಿಗಳು ನಡೆಯುತ್ತಿದ್ದವು. ನಾನು ಅದರ ಬಗ್ಗೆ ಸಾಮಾನ್ಯ ಟ್ವೀಟ್ ಮಾಡಿದ್ದೆ. ಸಂಭವಿಸಿದ ತಪ್ಪು ತಿಳುವಳಿಕೆಗೆ ನಾನು ವಿಷಾದಿಸುತ್ತೇನೆ” ಎಂದು ಅವರು ಹೇಳಿದರು. ಈ ಪ್ರಕರಣದ ಮುಂದಿನ ವಿಚಾರಣೆ ನವೆಂಬರ್ 24 ರಂದು ನಡೆಯಲಿದೆ. 

ಮಹಿಂದರ್ ಕೌರ್ ಬದಲಿಗೆ ಅವರ ಪತಿ ನ್ಯಾಯಾಲಯಕ್ಕೆ ಹಾಜರಾಗಿದ್ದರು

ಸೋಮವಾರ ಬೆಳಗ್ಗೆ, ಪೊಲೀಸ್ ಅಧಿಕಾರಿಗಳ ಬೆಂಗಾವಲಿನೊಂದಿಗೆ ರಣಾವತ್ ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಭಟಿಂಡಾ ನಗರದ ಪೊಲೀಸ್ ವರಿಷ್ಠಾಧಿಕಾರಿ ನರಿಂದರ್ ಸಿಂಗ್ ಮಾತನಾಡಿ, ನ್ಯಾಯಾಲಯದ ಸಂಕೀರ್ಣದ ಸುತ್ತಲೂ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಭದ್ರತೆಯನ್ನು ಬಲಪಡಿಸಲಾಗಿದೆ. 

“ಯಾವುದೇ ಕಿಡಿಗೇಡಿತನವು ಯಾವುದೇ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಭದ್ರವಾಗಿಡುವುದು ನಮ್ಮ ಮುಖ್ಯ ಗುರಿಯಾಗಿದೆ” ಎಂದು ಅವರು ಹೇಳಿದರು.

2020-21ರ ರೈತರ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಘಟನೆಯಾಗಿದ್ದು, ಭಟಿಂಡಾದ ಬಹದ್ದೂರ್‌ಗಢ್ ಜಾಂಡಿಯನ್ ಗ್ರಾಮದ ಮಹಿಂದರ್ ಕೌರ್ ಅವರನ್ನು ಉಲ್ಲೇಖಿಸಿ ರನೌತ್ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಅನ್ನು ಹಂಚಿಕೊಂಡಿದ್ದರು. 

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೃದ್ಧ ಮಹಿಳೆಯೊಬ್ಬರ ಛಾಯಾಚಿತ್ರವನ್ನು ಒಳಗೊಂಡ ಪೋಸ್ಟ್‌ಗೆ ರನೌತ್ ಕಾಮೆಂಟ್ ಮಾಡಿದ್ದು, ಕೆಲವು ಭಾಗವಹಿಸುವವರಿಗೆ ಹಣ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಆ ಮಹಿಳೆಯನ್ನು “ಭಾರತದ ಶಕ್ತಿಶಾಲಿ ಮಹಿಳೆಯರಲ್ಲಿ ಟೈಮ್ ನಿಯತಕಾಲಿಕೆಯಲ್ಲಿ ಕಾಣಿಸಿಕೊಂಡ ಅದೇ ದಾದಿ” ಎಂದು ಅವರು ಉಲ್ಲೇಖಿಸಿದ್ದರು. “ಅವರು 100 ರೂ.ಗೆ ಲಭ್ಯವಿದ್ದಾರೆ” ಎಂದು ಟ್ವಿಟ್ ಮಾಡಿದ್ದರು. ಈ ಪೋಸ್ಟ್ ರೈತ ಸಂಘದ ಮುಖಂಡರು ಸೇರಿದಂತೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಆಕ್ರೋಶ ಮತ್ತು ಪ್ರಕರಣದ ದಾಖಲಾದ ನಂತರ ಅದನ್ನು ನಂತರ ಅಳಿಸಲಾಗಿತ್ತು. 

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜನವರಿ 4, 2021 ರಂದು ಕಂಗನಾ ರನೌತ್ ವಿರುದ್ಧ ರೈತ ಮಹಿಳೆ ಮಹಿಂದರ್ ಕೌರ್  ಮಾನನಷ್ಟ ಮೊಕದ್ದಮೆ ಹೂಡಿದ್ದರು, ನಟಿಯ ಹೇಳಿಕೆಗಳು ತಮ್ಮನ್ನು ಅವಮಾನಿಸಿವೆ ಮತ್ತು ರೈತ ಚಳವಳಿಯಲ್ಲಿ ನನ್ನ ಪಾತ್ರವನ್ನು ತಪ್ಪಾಗಿ ನಿರೂಪಿಸಿದೆ ಎಂದು ಆರೋಪಿಸಿದರು. 

ಸುಮಾರು 13 ತಿಂಗಳ ವಿಚಾರಣೆಯ ನಂತರ, ಭಟಿಂಡಾ ನ್ಯಾಯಾಲಯವು ರನೌತ್ ಅವರಿಗೆ ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತು. ತರುವಾಯ, ಪ್ರಕರಣದಲ್ಲಿ ಪರಿಹಾರ ಕೋರಿ ರನೌತ್ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಮೊರೆ ಹೋದರು, ಆದರೆ ನ್ಯಾಯಾಲಯವು ಅದನ್ನು ಸ್ವೀಕರಿಸಲಿಲ್ಲ. ನಂತರ ಅವರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು ಆದರೆ ಅಲ್ಲಿಯೂ ಯಾವುದೇ ಪರಿಹಾರ ಸಿಗಲಿಲ್ಲ. ನ್ಯಾಯಾಲಯದ ನಿರ್ದೇಶನಗಳನ್ನು ಅನುಸರಿಸಿ, ಬಿಜೆಪಿ ಸಂಸದರು ಸೋಮವಾರ ಭಟಿಂಡಾ ನ್ಯಾಯಾಲಯದ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.

ಪಕ್ಷ ವಿರೋಧಿ ಚಟುವಟಿಕೆ : ಇಬ್ಬರು ಹಾಲಿ ಶಾಸಕರು ಸೇರಿ 27 ಮಂದಿಯನ್ನು ಉಚ್ಚಾಟಿಸಿದ ಆರ್‌ಜೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...