Homeಮುಖಪುಟಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

ಜಯಲಲಿತಾರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಣ್ಣಾಮಲೈ ವಿರುದ್ಧ ನಿರ್ಣಯ ಮಂಡಿಸಿದ AIADMK

- Advertisement -
- Advertisement -

AIADMKಯ ಹಿರಿಯ ನಾಯಕಿಯಾಗಿದ್ದ ದಿವಂಗತ ಜೆ ಜಯಲಲಿತಾರವರ ಬಗ್ಗೆ ತಮಿಳುನಾಡಿನ ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಅಣ್ಣಾಮಲೈ ಅವಹೇಳನಕಾರಿಯಾಗಿ ಮಾತನಾಡಿರುವುದರ ವಿರುದ್ಧ AIADMK ಪಕ್ಷ ನಿರ್ಣಯ ಮಂಡಿಸಿದೆ.

ಅಣ್ಣಾಮಲೈ ಅವರು ಜಯಲಲಿತಾ ಅವರನ್ನು “ಉದ್ದೇಶಪೂರ್ವಕವಾಗಿ” ನಿಂದಿಸಿದ್ದಾರೆ. ಇದು ಎಐಎಡಿಎಂಕೆ ಕಾರ್ಯಕರ್ತರು ಮತ್ತು ಸಾರ್ವಜನಿಕರ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ನಿರ್ಣಯ ಮಂಡಿಸಿದ ನಂತರ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ತಿಳಿಸಿದ್ದಾರೆ.

ಅಮ್ಮ (ಜಯಲಲಿತಾ) 16 ವರ್ಷಗಳ ಕಾಲ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು ಮತ್ತು ಜನರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ತಂದರು. ಅವರು ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಇತರ ರಾಜ್ಯಗಳಿಗೆ ಸ್ಫೂರ್ತಿಯಾಗಿವೆ. ಆದರೆ ಯಾವುದೇ ರಾಜಕೀಯ ಅನುಭವ ಅಥವಾ ಪ್ರಬುದ್ಧತೆ ಇಲ್ಲದ ಬಿಜೆಪಿ ನಾಯಕ ಅಣ್ಣಾಮಲೈ ಅವರು ಉದ್ದೇಶಪೂರ್ವಕವಾಗಿ ಜಯಲಲಿತಾ ವಿರುದ್ಧ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ಎಲ್ ಕೆ ಅಡ್ವಾಣಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು “ಅಮ್ಮ” (ಜಯಲಲಿತಾ)ನ ಬಗ್ಗೆ ಅಪಾರ ಗೌರವ ಹೊಂದಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಸಹ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದರು. 1998 ರಲ್ಲಿ ಬಿಜೆಪಿಯು ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಎಐಎಡಿಎಂಕೆ ಪಕ್ಷದ ಬೆಂಬಲವೇ ಕಾರಣ. ಎಐಎಡಿಎಂಕೆ ಬೆಂಬಲದಿಂದಾಗಿ ಬಿಜೆಪಿ ಈಗ ರಾಜ್ಯ ವಿಧಾನಸಭೆಯಲ್ಲಿ ನಾಲ್ಕು ಶಾಸಕರನ್ನು ಹೊಂದಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಪ್ರಮುಖ ಇಂಗ್ಲಿಷ್ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ”ಸಾರ್ವಜನಿಕ ಖಜಾನೆಯನ್ನು ಲಪಟಾಯಿಸಿದ ಯಾವುದೇ ಸರ್ಕಾರವನ್ನು ಪ್ರಶ್ನಿಸುತ್ತೇವೆ. ತಮಿಳುನಾಡಿನ ಹಲವು ಸರ್ಕಾರಗಳ ಅವಧಿಯಲ್ಲಿ ಭ್ರಷ್ಟಚಾರ ನಡೆದಿವೆ. ಮಾಜಿ ಮುಖ್ಯಮಂತ್ರಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗಿದೆ. ಹಾಗಾಗಿಯೇ ತಮಿಳುನಾಡು ಅತ್ಯಂತ ಭ್ರಷ್ಟ ರಾಜ್ಯಗಳಲ್ಲೊಂದಾಗಿದೆ. 1991-96ರ ನಡುವಿನ ಅವಧಿಯು (ಜಯಲಲಿತಾ ಅವರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾಗ) ಭ್ರಷ್ಟಾಚಾರದಲ್ಲಿ ನಂಬರ್ ಒನ್ ಅವಧಿ ಎಂದು ಹೇಳುತ್ತೇನೆ” ಎಂದಿದ್ದರು.

ಇದನ್ನೂ ಓದಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...