Homeಮುಖಪುಟಗಾಂಧೀಜಿಗೆ ಅವಹೇಳನ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಾಳಿಚರಣ್‌

ಗಾಂಧೀಜಿಗೆ ಅವಹೇಳನ ಪ್ರಕರಣ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಾಳಿಚರಣ್‌

- Advertisement -
- Advertisement -

ಥಾಣೆ: ಮಹಾತ್ಮಾ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ಆರೋಪದ ಮೇಲೆ ಬಂಧಿತರಾಗಿರುವ ಹಿಂದುತ್ವದ ಮುಖಂಡ ಕಾಳಿಚರಣ್ ಮಹಾರಾಜ್‌ಗೆ ಮಹಾರಾಷ್ಟ್ರದ ಥಾಣೆಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಥಾಣೆ ನಗರದ ನೌಪದ ಪೊಲೀಸ್ ಠಾಣೆಯ ಪೊಲೀಸರು ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಕಾಳಿಚರಣ್‌ರನ್ನು ಬುಧವಾರ ಬಂಧಿಸಿದ್ದರು. ಶುಕ್ರವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಥಾಣೆಯ ಜೆಎಂಎಫ್‌ಸಿ ಎಸ್.ವಿ.ಮೆಟಿಲ್ ಪಾಟೀಲ್ ಅವರು ವಿವಾದಿತ ವ್ಯಕ್ತಿ ಕಾಳಿಚರಣ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಕಾಳಿಚರಣ್‌‌ ಹೇಳಿಕೆಗಳಿಗೆ ಸಂಬಂಧಿಸಿದಂತೆ ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹಾದ್ ಅವರು ನೀಡಿದ ದೂರಿನ ಆಧಾರದ ಮೇಲೆ ಕಾಳಿಚರಣ್ ಮಹಾರಾಜ್ ವಿರುದ್ಧ ಪ್ರಕರಣ ದಾಖಲಿಸಿದ ನಂತರ ನೌಪಾದ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ಕಳೆದ ಡಿಸೆಂಬರ್ 26 ರಂದು ಛತ್ತೀಸ್‌ಗಢದ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿಯಾಗಿ ಕಾಳಿಚರಣ್ ಮಾತನಾಡಿದ್ದರು. ಕಾಳಿಚರಣ್‌ ವಿರುದ್ಧ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಪ್ರಕರಣ ದಾಖಲಾಗಿವೆ.

ರಾಷ್ಟ್ರಪಿತ ಗಾಂಧೀಜಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಾಯ್‌ಪುರ ಪೊಲೀಸರು ಅವರನ್ನು ಬಂಧಿಸಿದ್ದರು. ಜನವರಿ 12ರಂದು ಮಹಾರಾಷ್ಟ್ರದ ವಾರ್ಧಾ ಪೊಲೀಸರು ಕಾಳಿ ಚರಣ್‌‌ ಅವರನ್ನು ಬಂಧಿಸಿದ್ದರು. ರಾಜ್ಯದ ಅಕೋಲಾ ಜಿಲ್ಲೆಯಲ್ಲಿಯೂ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ದ್ವೇಷ ಭಾಷಣ ಪ್ರಕರಣ: ಆರೋಪಿ ಯತಿ ನರಸಿಂಗಾನಂದ ಜಾಮೀನು ಅರ್ಜಿ ವಜಾ

ನರಸಿಂಗಾನಂದ ವಿರುದ್ಧ ವಿಚಾರಣೆಗೆ ಸಮ್ಮತಿ

ಹರಿದ್ವಾರದಲ್ಲಿ ದ್ವೇಷ ಭಾಷಣದ ‘ಧರ್ಮ ಸಂಸದ್’ ಆಯೋಜಿಸಿದ್ದ ನರಸಿಂಗಾನಂದ ಅವರು ಸುಪ್ರೀಂಕೋರ್ಟ್ ಮತ್ತು ಸಂವಿಧಾನದ ವಿರುದ್ದ ಇತ್ತೀಚೆಗೆ ನೀಡಿದ್ದ ಅವಹೇಳನಕಾರಿ ಹೇಳಿಕೆಗಳ ವಿರುದ್ದ ನಿಂದನೆ  ಪ್ರಕರಣ ಪ್ರಕ್ರಿಯೆ ಆರಂಭಿಸಲು ಭಾರತದ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಶುಕ್ರವಾರ ಸಮ್ಮತಿ ನೀಡಿದ್ದಾರೆ.

ಜನವರಿ 14ರಂದು ಟ್ವಿಟ್ಟರ್‌ನಲ್ಲಿ ವೈರಲ್ ಆಗಿದ್ದ ಸಂದರ್ಶನದಲ್ಲಿ ನೀಡಿದ್ದ ಅವಹೇಳನಕಾರಿ ಹೇಳಿಕೆಗಳಿಗಾಗಿ ನರಸಿಂಗಾನಂದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಶಚಿ ನೆಲ್ಲಿ ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಅಟಾರ್ನಿ ಜನರಲ್‌ ಒಪ್ಪಿಗೆ ನೀಡಿದ್ದಾರೆ.

“ನರಸಿಂಗಾನಂದ ನೀಡಿದ್ದ ಹೇಳಿಕೆಗಳು ಖಂಡಿತವಾಗಿಯೂ ಭಾರತದ ಸರ್ವೋಚ್ಚ ನ್ಯಾಯಾಲಯದ ಅವಹೇಳನಕ್ಕೆ ಸಮಾನವಾಗಿರುತ್ತದೆ” ಎಂದು ಅಟಾರ್ನಿ ಜನರಲ್‌ ಹೇಳಿದ್ದಾರೆ.

“ಈ ವ್ಯವಸ್ಥೆಯನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ನರಸಿಂಗಾನಂದ ಹೇಳಿದ್ದರು. ಈ ಮಾತನ್ನು ಉಲ್ಲೇಖಿಸಿರುವ ಅಟಾರ್ನಿ ಜನರಲ್‌, “ಇದು ಸಾಮಾನ್ಯ ಜನರ ಮನಸ್ಸಿನಲ್ಲಿ ಸುಪ್ರೀಂ ಕೋರ್ಟ್‌ನ ಅಧಿಕಾರವನ್ನು ತುಚ್ಛವಾಗಿ ಕಾಣುವಂತೆ ಮಾಡುವ ನೇರ ಪ್ರಯತ್ನ” ಎಂದು ಭಾರತದ ಸರ್ವೋಚ್ಚ ನ್ಯಾಯಾಲಯದ ಕ್ರಿಮಿನಲ್ ನಿಂದನೆಯ ವಿಚಾರಣೆಯನ್ನು ಪ್ರಾರಂಭಿಸಲು ಸಮ್ಮತಿಯನ್ನು ನೀಡಿದ್ದಾರೆ.

 

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿ ದ್ವೇಷದ ಭಾಷಣ ಮಾಡಿದ್ದಕ್ಕಾಗಿ ಉತ್ತರಾಖಂಡ್ ಪೊಲೀಸರು ಅವರನ್ನು ಬಂಧಿಸಿದ್ದು, ಪ್ರಸ್ತುತ ಬಂಧನದಲ್ಲಿದ್ದಾರೆ.

ಹರಿದ್ವಾರ ದ್ವೇಷದ ಭಾಷಣದ ಪ್ರಕರಣದಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಬಗ್ಗೆ ಮಾತನಾಡಿದ್ದ ನರಸಿಂಗಾನಂದ, “ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನಂಬಿಕೆ ಇಲ್ಲ. ಸಂವಿಧಾನ ಈ ದೇಶದ 100 ಕೋಟಿ ಹಿಂದೂಗಳನ್ನು ಕಬಳಿಸುತ್ತದೆ. ಈ ಸಂವಿಧಾನವನ್ನು ನಂಬುವವರು, ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದ ಎಲ್ಲರೂ ನಾಯಿ ಸತ್ತಂತೆ ಸಾಯುತ್ತಾರೆ” ಎಂದು ಹೇಳಿದ್ದರು. ಇದನ್ನು ಅಟಾರ್ನಿ ಜನರಲ್‌ಗೆ ಬರೆದಿದ್ದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಸ್ಲಿಮರ ಹತ್ಯೆಗೆ ಕರೆ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...