Homeಚಳವಳಿಬೌದ್ಧ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಚಿವ ಸುಧಾಕರ್ ವಿರುದ್ಧ ಭುಗಿಲೆದ್ದ ಆಕ್ರೋಶ

ಬೌದ್ಧ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ: ಸಚಿವ ಸುಧಾಕರ್ ವಿರುದ್ಧ ಭುಗಿಲೆದ್ದ ಆಕ್ರೋಶ

ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗೌರಿಬಿದನೂರು, ಗುಡಿಬಂಡೆ, ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ಪ್ರತಿಭಟನೆಗಳು ದಾಖಲಾಗಿವೆ.

- Advertisement -
- Advertisement -

“ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರ ಹೆಗ್ಗಳಿಕೆಯಾಗಿದೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಪ್ರತಿಭಟನೆಗಳು ಜರುಗಿವೆ. ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಗೌರಿಬಿದನೂರು, ಗುಡಿಬಂಡೆ, ಚಿಂತಾಮಣಿ, ಶಿಡ್ಲಘಟ್ಟ, ಬಾಗೇಪಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ಪ್ರತಿಭಟನೆಗಳು ದಾಖಲಾಗಿವೆ.

ಅಂಬೇಡ್ಕರ್ ಫೋಟೊ ಮತ್ತು ನೀಲಿ ಧ್ವಜಗಳನ್ನು ಹಿಡಿದು ಬೀದಿಗಿಳಿದ ಹೆಚ್ಚಿನ ಸಂಖ್ಯೆಯ ಯುವಕರು, ಜೈಭೀಮ್ ಘೋಷಣೆಗಳನ್ನು ಮೊಳಗಿಸಿದ್ದಲ್ಲದೆ, ಸಚಿವ ಸುಧಾಕರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಿಂತಾಮಣಿಯಲ್ಲಿ ನಡೆದ ಪ್ರತಿಭಟನೆ

“ಇಡೀ ದೇಶವೇ ಬೌದ್ಧಧರ್ಮವನ್ನು ಅಪ್ಪಿಕೊಳ್ಳುವ ಸಂದಿಗ್ಧ ಪರಿಸ್ಥಿತಿಯಲ್ಲಿ ನಮ್ಮ ಧರ್ಮ, ಸಂಸ್ಕೃತಿಗೆ ಎದುರಾಗಿದ್ದ ಅಪಾಯವನ್ನು ತಪ್ಪಿಸಿ ಭಾರತವನ್ನು ಭಾರತೀಯತೆಯನ್ನು ಉಳಿಸಿದ ಆದಿಶಂಕರಚಾರ್ಯರನ್ನು ನಾವು ಸ್ಮರಿಸಲೇಬೇಕು. ಈ ಸಾಲಿನಲ್ಲಿ ಮಧ್ವರು, ಶ್ರೀರಾಮಾನುಜಾಚಾರ್ಯರು ಸೇರಿದ್ದಾರೆ” ಎಂದು ಬ್ರಾಹ್ಮಣ ಸಂಘದ ಕಾರ್ಯಕ್ರಮದಲ್ಲಿ ಸುಧಾಕರ್ ಮಾತನಾಡಿದ್ದರು. ಇದಕ್ಕೆ ತೀವ್ರ ವಿರೋಧ ಸಹ ವ್ಯಕ್ತವಾಗಿತ್ತು. ಇದರ ವಿರುದ್ಧ ಜಿಲ್ಲೆಯ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಮಾರ್ಚ್ 10ರ ಗುರುವಾರ ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲು ತೀರ್ಮಾನಿಸಿವೆ.

ದೊಡ್ಡಬಳ್ಳಾಪುರದಲ್ಲಿ ಪ್ರಾಂತ ರೈತ ಸಂಘದ ಮುಖಂಡರಾದ ಚಂದ್ರತೇಜಸ್ವಿ ಮಾತನಾಡಿ, “ಸರ್ವ ಜನರು ಸಮಾನರು, ಎಂಬ ಸಮಾನತೆಯ ಆಧಾರದ ಮೇಲೆ ಪಂಚಶೀಲ ಮತ್ತು ಅಷ್ಮಾಂಗ ಮಾರ್ಗ ಭೋಧಿಸಿದ ಬುದ್ಧ ಧರ್ಮ ಸಕಲ ಜೀವಗಳಿಗೆ ಒಳಿತನ್ನು ಬಯಸುತ್ತದೆ. ಇಂದು ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವುದು ಮತ್ತು ಗೌರವಿಸುವುದು ಭಗವಾನ್ ಬುದ್ಧನ ನಾಡು ಎಂಬ ಕಾರಣಕ್ಕಾಗಿ. ಅಂತಹ ಧರ್ಮವನ್ನು ಅವಹೇಳನ ಮಾಡಿದವರು ಈ ಸರ್ಕಾರದಲ್ಲಿರಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮನುಷ್ಯರನ್ನು ಮನುಷ್ಯರನ್ನಾಗಿ ಕಾಣದ ಹಿಂದೂ ಧರ್ಮದ ಕಂದಚಾರವನ್ನು ಬಯಲುಗೊಳಿಸಿದ್ದು ಬುದ್ಧ ಧರ್ಮವಾಗಿದೆ. ಹಿಂದು ಧರ್ಮದ ಅಸಮಾನತೆಯಿಂದ ಬೇಸತ್ತು ಅಂಬೇಡ್ಕರ್ ಸಹ ಬೌದ್ಧ ಧರ್ಮ ಸ್ವೀಕರಿಸಿದರು. ಅಧಿಕಾರ ಮತ್ತು ಹಣಕ್ಕಾಗಿ ಅಪರೇಷನ್ ಕಮಲಕ್ಕೆ ತುತ್ತಾದ ಡಾ.ಕೆ.ಸುಧಾಕರ್ ಪುರೋಹಿತಶಾಯಿಗಳ ಪರವಾಗಿ ನಿಂತಿದ್ದಾರೆ. ಒಂದೆಡೆ ಬೌದ್ಧ ಧರ್ಮದ ಬಗ್ಗೆ ಒಳ್ಳೆಯ ಮಾತನಾಡುವ ಸಚಿವರು ಮತ್ತೊಂದೆಡೆ ಬೌದ್ಧ ಧರ್ಮದ ಬಗ್ಗೆ, ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದು ಅವರ ಬೌದ್ಧಿಕ ದಿವಾಳಿತನ ತೋರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರು: ಸಚಿವ ಸುಧಾಕರ್‌ ಹೇಳಿಕೆಗೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....