Homeಮುಖಪುಟಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

ಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

- Advertisement -
- Advertisement -

ಮಣಿಪುರ ಹಿಂಸಾಚಾರ ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಕುರಿತು ಯೂಟ್ಯೂಬ್ ಸಂದರ್ಶನವೊಂದರಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ಬರಹಗಾರ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪೆರಂಬಲೂರು ಜಿಲ್ಲೆಯ ವಕೀಲ ಕವಿಯರಸು ಅವರು ನೀಡಿದ ದೂರಿನ ಮೇರೆಗೆ ಶೇಷಾದ್ರಿ ಅವರನ್ನು ಬಂಧಿಸಲಾಗಿದೆ. ನ್ಯಾಯಾಂಗದ ಬಗ್ಗೆ ಶೇಷಾದ್ರಿ ಅವರ ದೃಷ್ಟಿಕೋನದಿಂದ ವಿಚಲಿತನಾಗಿದ್ದೇನೆ ಎಂದು ಅವರುಆರೋಪಿಸಿದ್ದಾರೆ.

ಐಪಿಸಿ ಸೆಕ್ಷನ್ 153, 153 ಎ ಮತ್ತು 505 (1) (B) ಅಡಿಯಲ್ಲಿ ಶೇಷಾದ್ರಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಸಂದರ್ಶನದಲ್ಲಿ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚಿಸುವಾಗ, ಮೇ 4 ರಂದು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಕುಕಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಖಂಡಿಸಿರುವುದನ್ನು ಶೇಷಾದ್ರಿ ಅವರು ಟೀಕಿಸಿದ್ದರು.

”ನಿಮಗೆ (ಕೇಂದ್ರ ಸರ್ಕಾರಕ್ಕೆ) ಏನನ್ನೂ ಮಾಡುವುದು ಸಾಧ್ಯವಿಲ್ಲ ಎಂದಾದರೆ, ನಾವು (ನ್ಯಾಯಾಲಯ) ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಹಾಗಾದರೆ ಚಂದ್ರಚೂಡ್ ಅವರ ಕೈಗೆ ಗನ್ ನೀಡಿ, ಅಲ್ಲಿಗೆ ಕಳುಹಿಸಿ. ಅವರು ಅಲ್ಲಿ ಶಾಂತಿ ಮರುಸ್ಥಾಪನೆ ಮಾಡುತ್ತಾರೆಯೇ ಎಂದು ನೋಡೋಣ” ಎಂಬುದಾಗಿ ಬದ್ರಿ ಶೇಷಾದ್ರಿ ಹೇಳಿದ್ದರು.

”ಅದು ಬೆಟ್ಟಗುಡ್ಡದ ಮತ್ತು ಸಂಕೀರ್ಣ ಪ್ರದೇಶವಾಗಿದೆ. ಅಲ್ಲಿ ಕೊಲೆಗಳು ಸಾಮಾನ್ಯವಾಗಿ ನಡೆಯುತ್ತವೆ. ಅಲ್ಲಿ ಹಿಂಸಾಚಾರಗಳು ನಡೆಯದಂತೆ ತಡೆಯುವುದು ನಮಗೆ ಸಾಧ್ಯವಿಲ್ಲ” ಎಂದು ತಿಳಿಸಿದ್ದರು.

ಈ ಸಂದರ್ಶನದ ವಿಚಾರವಾಗಿ ವಕೀಲ ಕವಿಯರಸು ಎಂಬುವವರು ಶೇಷಾದ್ರಿ ವಿರುದ್ಧ ದೂರು ಸಲ್ಲಿಸಿದ್ದರು. ಜುಲೈ 22ರಂದು ವೀಕ್ಷಿಸಿದ ಯೂಟ್ಯೂಬ್ ಸಂದರ್ಶನದ ತುಣುಕಿನಲ್ಲಿ, ಲೇಖಕ ಶೇಷಾದ್ರಿ ಅವರು ಸುಪ್ರೀಂಕೋರ್ಟ್ ಮತ್ತು ಸಿಜೆಐ ಡಿವೈ ಚಂದ್ರಚೂಡ್ ಅವರನ್ನು ಟೀಕಿಸಿದ್ದಾರೆ. ಇದರಿಂದ ತೀವ್ರ ಆಘಾತವಾಗಿದೆ ಎಂದು ವಕೀಲ ಆರೋಪಿಸಿದ್ದಾರೆ.

ಮೈತೇಯಿ ಸಮುದಾಯಕ್ಕೆ ಬುಡಕಟ್ಟು ಸಮುದಾಯದ ಮಾನ್ಯತೆ ನೀಡುವ ಮಣಿಪುರ ಹೈಕೋರ್ಟ್ ನಿರ್ಧಾರದ ಕಾರಣದಿಂದಲೇ ಮಣಿಪುರ ಹಿಂಸಾಚಾರದ ಸಮಸ್ಯೆ ಶುರುವಾಗಿತ್ತು ಎಂದು ಶೇಷಾದ್ರಿ ಹೇಳಿದ್ದರು. ”ಶೇಷಾದ್ರಿ ಅವರು ಸಿಜೆಐ ಸ್ಥಾನವನ್ನು ಕೀಳಾಗಿಸಲು ಪ್ರಯತ್ನಿಸುತ್ತಿದ್ದರು. ಈ ದೇಶದ ಸುಪ್ರೀಂಕೋರ್ಟ್ ಮತ್ತು ನ್ಯಾಯಾಂಗ ವ್ಯವಸ್ಥೆಯ ಗೌರವವನ್ನೂ ಅವರು ಕಡೆಗಣಿಸಿದ್ದಾರೆ” ಎಂದು ಕವಿಯರಸು ದೂರಿನಲ್ಲಿ ಹೇಳಿದ್ದಾರೆ.

ಬದ್ರಿ ಅವರು ನ್ಯೂ ಹಾರಿಜಾನ್ ಮೀಡಿಯಾ ಪ್ರೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಕ್ರಿಕ್ ಇನ್‌ಫೋದ ಸಹ ಸಂಸ್ಥಾಪಕರಾಗಿದ್ದು, ಸ್ವರಾಜ್ಯ ನಿಯತಕಾಲಿಕೆಯಲ್ಲಿ ಲೇಖನಗಳನ್ನು ಬರೆಯುತ್ತಾರೆ.

ಶೇಷಾದ್ರಿ ಅವರ ಬಂಧನವನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಖಂಡಿಸಿದ್ದಾರೆ. ಡಿಎಂಕೆ ಸರ್ಕಾರವು ಬಂಧನಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅವರು ಟೀಕಿಸಿದ್ದಾರೆ.

”ಖ್ಯಾತ ಪ್ರಕಾಶಕ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು ಶುಕ್ರವಾರ ಮುಂಜಾನೆ ತಮಿಳುನಾಡು ಪೊಲೀಸರು ಬಂಧಿಸಿರುವುದನ್ನು ತಮಿಳುನಾಡು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಈ ಭ್ರಷ್ಟ ಡಿಎಂಕೆ ಸರ್ಕಾರವು, ಸಾಮಾನ್ಯ ಜನರ ಅಭಿಪ್ರಾಯಗಳನ್ನು ಈಡೇರಿಸುವ ಸಾಮರ್ಥ್ಯ ಇಲ್ಲದ ಕಾರಣ ಬಂಧನಗಳ ಮೇಲೆ ಮಾತ್ರವೇ ಅವಲಂಬಿತವಾಗಿದೆ. ಭ್ರಷ್ಟ ಡಿಎಂಕೆ ಸರ್ಕಾರದ ಪ್ರತೀಕಾರದ ಕ್ರಮಗಳನ್ನು ಹೇರುವುದು ಮಾತ್ರವೇ ತಮಿಳುನಾಡು ಪೊಲೀಸರ ಕೆಲಸವೇ?” ಎಂದು ಅಣ್ಣಾಮಲೈ ಅವರು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು INDIAದ ನಿಯೋಗ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....