Homeಮುಖಪುಟಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

ಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

- Advertisement -
- Advertisement -

ಮಣಿಪುರ ಹಿಂಸಾಚಾರ ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಕುರಿತು ಯೂಟ್ಯೂಬ್ ಸಂದರ್ಶನವೊಂದರಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ಬರಹಗಾರ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪೆರಂಬಲೂರು ಜಿಲ್ಲೆಯ ವಕೀಲ ಕವಿಯರಸು ಅವರು ನೀಡಿದ ದೂರಿನ ಮೇರೆಗೆ ಶೇಷಾದ್ರಿ ಅವರನ್ನು ಬಂಧಿಸಲಾಗಿದೆ. ನ್ಯಾಯಾಂಗದ ಬಗ್ಗೆ ಶೇಷಾದ್ರಿ ಅವರ ದೃಷ್ಟಿಕೋನದಿಂದ ವಿಚಲಿತನಾಗಿದ್ದೇನೆ ಎಂದು ಅವರುಆರೋಪಿಸಿದ್ದಾರೆ.

ಐಪಿಸಿ ಸೆಕ್ಷನ್ 153, 153 ಎ ಮತ್ತು 505 (1) (B) ಅಡಿಯಲ್ಲಿ ಶೇಷಾದ್ರಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಸಂದರ್ಶನದಲ್ಲಿ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚಿಸುವಾಗ, ಮೇ 4 ರಂದು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಕುಕಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಖಂಡಿಸಿರುವುದನ್ನು ಶೇಷಾದ್ರಿ ಅವರು ಟೀಕಿಸಿದ್ದರು.

”ನಿಮಗೆ (ಕೇಂದ್ರ ಸರ್ಕಾರಕ್ಕೆ) ಏನನ್ನೂ ಮಾಡುವುದು ಸಾಧ್ಯವಿಲ್ಲ ಎಂದಾದರೆ, ನಾವು (ನ್ಯಾಯಾಲಯ) ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಹಾಗಾದರೆ ಚಂದ್ರಚೂಡ್ ಅವರ ಕೈಗೆ ಗನ್ ನೀಡಿ, ಅಲ್ಲಿಗೆ ಕಳುಹಿಸಿ. ಅವರು ಅಲ್ಲಿ ಶಾಂತಿ ಮರುಸ್ಥಾಪನೆ ಮಾಡುತ್ತಾರೆಯೇ ಎಂದು ನೋಡೋಣ” ಎಂಬುದಾಗಿ ಬದ್ರಿ ಶೇಷಾದ್ರಿ ಹೇಳಿದ್ದರು.

”ಅದು ಬೆಟ್ಟಗುಡ್ಡದ ಮತ್ತು ಸಂಕೀರ್ಣ ಪ್ರದೇಶವಾಗಿದೆ. ಅಲ್ಲಿ ಕೊಲೆಗಳು ಸಾಮಾನ್ಯವಾಗಿ ನಡೆಯುತ್ತವೆ. ಅಲ್ಲಿ ಹಿಂಸಾಚಾರಗಳು ನಡೆಯದಂತೆ ತಡೆಯುವುದು ನಮಗೆ ಸಾಧ್ಯವಿಲ್ಲ” ಎಂದು ತಿಳಿಸಿದ್ದರು.

ಈ ಸಂದರ್ಶನದ ವಿಚಾರವಾಗಿ ವಕೀಲ ಕವಿಯರಸು ಎಂಬುವವರು ಶೇಷಾದ್ರಿ ವಿರುದ್ಧ ದೂರು ಸಲ್ಲಿಸಿದ್ದರು. ಜುಲೈ 22ರಂದು ವೀಕ್ಷಿಸಿದ ಯೂಟ್ಯೂಬ್ ಸಂದರ್ಶನದ ತುಣುಕಿನಲ್ಲಿ, ಲೇಖಕ ಶೇಷಾದ್ರಿ ಅವರು ಸುಪ್ರೀಂಕೋರ್ಟ್ ಮತ್ತು ಸಿಜೆಐ ಡಿವೈ ಚಂದ್ರಚೂಡ್ ಅವರನ್ನು ಟೀಕಿಸಿದ್ದಾರೆ. ಇದರಿಂದ ತೀವ್ರ ಆಘಾತವಾಗಿದೆ ಎಂದು ವಕೀಲ ಆರೋಪಿಸಿದ್ದಾರೆ.

ಮೈತೇಯಿ ಸಮುದಾಯಕ್ಕೆ ಬುಡಕಟ್ಟು ಸಮುದಾಯದ ಮಾನ್ಯತೆ ನೀಡುವ ಮಣಿಪುರ ಹೈಕೋರ್ಟ್ ನಿರ್ಧಾರದ ಕಾರಣದಿಂದಲೇ ಮಣಿಪುರ ಹಿಂಸಾಚಾರದ ಸಮಸ್ಯೆ ಶುರುವಾಗಿತ್ತು ಎಂದು ಶೇಷಾದ್ರಿ ಹೇಳಿದ್ದರು. ”ಶೇಷಾದ್ರಿ ಅವರು ಸಿಜೆಐ ಸ್ಥಾನವನ್ನು ಕೀಳಾಗಿಸಲು ಪ್ರಯತ್ನಿಸುತ್ತಿದ್ದರು. ಈ ದೇಶದ ಸುಪ್ರೀಂಕೋರ್ಟ್ ಮತ್ತು ನ್ಯಾಯಾಂಗ ವ್ಯವಸ್ಥೆಯ ಗೌರವವನ್ನೂ ಅವರು ಕಡೆಗಣಿಸಿದ್ದಾರೆ” ಎಂದು ಕವಿಯರಸು ದೂರಿನಲ್ಲಿ ಹೇಳಿದ್ದಾರೆ.

ಬದ್ರಿ ಅವರು ನ್ಯೂ ಹಾರಿಜಾನ್ ಮೀಡಿಯಾ ಪ್ರೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಕ್ರಿಕ್ ಇನ್‌ಫೋದ ಸಹ ಸಂಸ್ಥಾಪಕರಾಗಿದ್ದು, ಸ್ವರಾಜ್ಯ ನಿಯತಕಾಲಿಕೆಯಲ್ಲಿ ಲೇಖನಗಳನ್ನು ಬರೆಯುತ್ತಾರೆ.

ಶೇಷಾದ್ರಿ ಅವರ ಬಂಧನವನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಖಂಡಿಸಿದ್ದಾರೆ. ಡಿಎಂಕೆ ಸರ್ಕಾರವು ಬಂಧನಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅವರು ಟೀಕಿಸಿದ್ದಾರೆ.

”ಖ್ಯಾತ ಪ್ರಕಾಶಕ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು ಶುಕ್ರವಾರ ಮುಂಜಾನೆ ತಮಿಳುನಾಡು ಪೊಲೀಸರು ಬಂಧಿಸಿರುವುದನ್ನು ತಮಿಳುನಾಡು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಈ ಭ್ರಷ್ಟ ಡಿಎಂಕೆ ಸರ್ಕಾರವು, ಸಾಮಾನ್ಯ ಜನರ ಅಭಿಪ್ರಾಯಗಳನ್ನು ಈಡೇರಿಸುವ ಸಾಮರ್ಥ್ಯ ಇಲ್ಲದ ಕಾರಣ ಬಂಧನಗಳ ಮೇಲೆ ಮಾತ್ರವೇ ಅವಲಂಬಿತವಾಗಿದೆ. ಭ್ರಷ್ಟ ಡಿಎಂಕೆ ಸರ್ಕಾರದ ಪ್ರತೀಕಾರದ ಕ್ರಮಗಳನ್ನು ಹೇರುವುದು ಮಾತ್ರವೇ ತಮಿಳುನಾಡು ಪೊಲೀಸರ ಕೆಲಸವೇ?” ಎಂದು ಅಣ್ಣಾಮಲೈ ಅವರು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು INDIAದ ನಿಯೋಗ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...