Homeಮುಖಪುಟಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

ಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

- Advertisement -
- Advertisement -

ಮಣಿಪುರ ಹಿಂಸಾಚಾರ ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಕುರಿತು ಯೂಟ್ಯೂಬ್ ಸಂದರ್ಶನವೊಂದರಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ರಾಜಕೀಯ ವಿಶ್ಲೇಷಕ ಹಾಗೂ ಬರಹಗಾರ ಬದ್ರಿ ಶೇಷಾದ್ರಿ ಅವರನ್ನು ತಮಿಳುನಾಡು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪೆರಂಬಲೂರು ಜಿಲ್ಲೆಯ ವಕೀಲ ಕವಿಯರಸು ಅವರು ನೀಡಿದ ದೂರಿನ ಮೇರೆಗೆ ಶೇಷಾದ್ರಿ ಅವರನ್ನು ಬಂಧಿಸಲಾಗಿದೆ. ನ್ಯಾಯಾಂಗದ ಬಗ್ಗೆ ಶೇಷಾದ್ರಿ ಅವರ ದೃಷ್ಟಿಕೋನದಿಂದ ವಿಚಲಿತನಾಗಿದ್ದೇನೆ ಎಂದು ಅವರುಆರೋಪಿಸಿದ್ದಾರೆ.

ಐಪಿಸಿ ಸೆಕ್ಷನ್ 153, 153 ಎ ಮತ್ತು 505 (1) (B) ಅಡಿಯಲ್ಲಿ ಶೇಷಾದ್ರಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಸಂದರ್ಶನದಲ್ಲಿ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ಕುರಿತು ಚರ್ಚಿಸುವಾಗ, ಮೇ 4 ರಂದು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಕುಕಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಖಂಡಿಸಿರುವುದನ್ನು ಶೇಷಾದ್ರಿ ಅವರು ಟೀಕಿಸಿದ್ದರು.

”ನಿಮಗೆ (ಕೇಂದ್ರ ಸರ್ಕಾರಕ್ಕೆ) ಏನನ್ನೂ ಮಾಡುವುದು ಸಾಧ್ಯವಿಲ್ಲ ಎಂದಾದರೆ, ನಾವು (ನ್ಯಾಯಾಲಯ) ಮಾಡುತ್ತೇವೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು. ಹಾಗಾದರೆ ಚಂದ್ರಚೂಡ್ ಅವರ ಕೈಗೆ ಗನ್ ನೀಡಿ, ಅಲ್ಲಿಗೆ ಕಳುಹಿಸಿ. ಅವರು ಅಲ್ಲಿ ಶಾಂತಿ ಮರುಸ್ಥಾಪನೆ ಮಾಡುತ್ತಾರೆಯೇ ಎಂದು ನೋಡೋಣ” ಎಂಬುದಾಗಿ ಬದ್ರಿ ಶೇಷಾದ್ರಿ ಹೇಳಿದ್ದರು.

”ಅದು ಬೆಟ್ಟಗುಡ್ಡದ ಮತ್ತು ಸಂಕೀರ್ಣ ಪ್ರದೇಶವಾಗಿದೆ. ಅಲ್ಲಿ ಕೊಲೆಗಳು ಸಾಮಾನ್ಯವಾಗಿ ನಡೆಯುತ್ತವೆ. ಅಲ್ಲಿ ಹಿಂಸಾಚಾರಗಳು ನಡೆಯದಂತೆ ತಡೆಯುವುದು ನಮಗೆ ಸಾಧ್ಯವಿಲ್ಲ” ಎಂದು ತಿಳಿಸಿದ್ದರು.

ಈ ಸಂದರ್ಶನದ ವಿಚಾರವಾಗಿ ವಕೀಲ ಕವಿಯರಸು ಎಂಬುವವರು ಶೇಷಾದ್ರಿ ವಿರುದ್ಧ ದೂರು ಸಲ್ಲಿಸಿದ್ದರು. ಜುಲೈ 22ರಂದು ವೀಕ್ಷಿಸಿದ ಯೂಟ್ಯೂಬ್ ಸಂದರ್ಶನದ ತುಣುಕಿನಲ್ಲಿ, ಲೇಖಕ ಶೇಷಾದ್ರಿ ಅವರು ಸುಪ್ರೀಂಕೋರ್ಟ್ ಮತ್ತು ಸಿಜೆಐ ಡಿವೈ ಚಂದ್ರಚೂಡ್ ಅವರನ್ನು ಟೀಕಿಸಿದ್ದಾರೆ. ಇದರಿಂದ ತೀವ್ರ ಆಘಾತವಾಗಿದೆ ಎಂದು ವಕೀಲ ಆರೋಪಿಸಿದ್ದಾರೆ.

ಮೈತೇಯಿ ಸಮುದಾಯಕ್ಕೆ ಬುಡಕಟ್ಟು ಸಮುದಾಯದ ಮಾನ್ಯತೆ ನೀಡುವ ಮಣಿಪುರ ಹೈಕೋರ್ಟ್ ನಿರ್ಧಾರದ ಕಾರಣದಿಂದಲೇ ಮಣಿಪುರ ಹಿಂಸಾಚಾರದ ಸಮಸ್ಯೆ ಶುರುವಾಗಿತ್ತು ಎಂದು ಶೇಷಾದ್ರಿ ಹೇಳಿದ್ದರು. ”ಶೇಷಾದ್ರಿ ಅವರು ಸಿಜೆಐ ಸ್ಥಾನವನ್ನು ಕೀಳಾಗಿಸಲು ಪ್ರಯತ್ನಿಸುತ್ತಿದ್ದರು. ಈ ದೇಶದ ಸುಪ್ರೀಂಕೋರ್ಟ್ ಮತ್ತು ನ್ಯಾಯಾಂಗ ವ್ಯವಸ್ಥೆಯ ಗೌರವವನ್ನೂ ಅವರು ಕಡೆಗಣಿಸಿದ್ದಾರೆ” ಎಂದು ಕವಿಯರಸು ದೂರಿನಲ್ಲಿ ಹೇಳಿದ್ದಾರೆ.

ಬದ್ರಿ ಅವರು ನ್ಯೂ ಹಾರಿಜಾನ್ ಮೀಡಿಯಾ ಪ್ರೈ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಕ್ರಿಕ್ ಇನ್‌ಫೋದ ಸಹ ಸಂಸ್ಥಾಪಕರಾಗಿದ್ದು, ಸ್ವರಾಜ್ಯ ನಿಯತಕಾಲಿಕೆಯಲ್ಲಿ ಲೇಖನಗಳನ್ನು ಬರೆಯುತ್ತಾರೆ.

ಶೇಷಾದ್ರಿ ಅವರ ಬಂಧನವನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಖಂಡಿಸಿದ್ದಾರೆ. ಡಿಎಂಕೆ ಸರ್ಕಾರವು ಬಂಧನಗಳ ಮೇಲೆಯೇ ಅವಲಂಬಿತವಾಗಿದೆ ಎಂದು ಅವರು ಟೀಕಿಸಿದ್ದಾರೆ.

”ಖ್ಯಾತ ಪ್ರಕಾಶಕ ಮತ್ತು ವಾಗ್ಮಿ ಬದ್ರಿ ಶೇಷಾದ್ರಿ ಅವರನ್ನು ಶುಕ್ರವಾರ ಮುಂಜಾನೆ ತಮಿಳುನಾಡು ಪೊಲೀಸರು ಬಂಧಿಸಿರುವುದನ್ನು ತಮಿಳುನಾಡು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಈ ಭ್ರಷ್ಟ ಡಿಎಂಕೆ ಸರ್ಕಾರವು, ಸಾಮಾನ್ಯ ಜನರ ಅಭಿಪ್ರಾಯಗಳನ್ನು ಈಡೇರಿಸುವ ಸಾಮರ್ಥ್ಯ ಇಲ್ಲದ ಕಾರಣ ಬಂಧನಗಳ ಮೇಲೆ ಮಾತ್ರವೇ ಅವಲಂಬಿತವಾಗಿದೆ. ಭ್ರಷ್ಟ ಡಿಎಂಕೆ ಸರ್ಕಾರದ ಪ್ರತೀಕಾರದ ಕ್ರಮಗಳನ್ನು ಹೇರುವುದು ಮಾತ್ರವೇ ತಮಿಳುನಾಡು ಪೊಲೀಸರ ಕೆಲಸವೇ?” ಎಂದು ಅಣ್ಣಾಮಲೈ ಅವರು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು INDIAದ ನಿಯೋಗ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...