Homeಮುಖಪುಟರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪದ ಬಳಕೆ: ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ‘ಟೈಮ್ಸ್‌ ನೌ’...

ರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪದ ಬಳಕೆ: ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ‘ಟೈಮ್ಸ್‌ ನೌ’ ಪತ್ರಕರ್ತೆ

- Advertisement -
- Advertisement -

‘ಟೈಮ್ಸ್‌ ನೌ’ ಸುದ್ದಿ ವಾಹಿನಿ ಪತ್ರಕರ್ತೆ ನವಿಕಾ ಕುಮಾರ್ ಅವರು, ಮಂಗಳವಾರದಂದು ತಮ್ಮ ಚಾನೆಲ್‌ನಲ್ಲಿ ಪ್ಯಾನಲ್ ಡಿಬೇಟ್ ನಡೆಸುತ್ತಿದ್ದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ದ ಅವಹೇಳಕಾರಿ ಪದಬಳಸಿದ್ದರು. ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೇಳಿದ್ದಾರೆ.

ಪತ್ರಕರ್ತೆಯ ಭಾಷಾ ಬಳಕೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ವಿಡಿಯೊ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನವಿಕಾ ಅವರು ತಮ್ಮ ಭಾಷಾ ಬಳಕೆಯ ಬಗ್ಗೆ ಕ್ಷಮೆ ಕೇಳಬೇಕು ಮತ್ತು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಬೇಕು ಎಂದು ಆಕ್ರೋಶ ವ್ಯಕ್ತವಾಗಿದ್ದು, #KachraNavika ಹ್ಯಾಶ್ ಟ್ಯಾಗ್ ಟ್ರೆಂಡಿಗ್ ಆಗಿತ್ತು. ಜೊತೆಗೆ, ಟೈಮ್ಸ್‌ ನೌ ವಾಹಿನಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ವಾಹಿನಿಯ ಕಚೇರಿಯ ಹೊರಗೆ ಪ್ರತಿಭಟನೆ ಕೂಡಾ ನಡೆಸಿದ್ದಾರೆ.

ಇದನ್ನೂ ಓದಿ: ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ, ನವಿಕಾ ಕುಮಾರ್ ಅವರು ಸೆಪ್ಟೆಂಬರ್ 28 ರ ರಾತ್ರಿ ಪ್ಯಾನಲ್ ಡಿಬೇಟ್‌ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಅದರಲ್ಲಿಅವರು ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾ “ಬ್ಲಡಿ …” ಎಂಬ ಪದವನ್ನು ಬಳಸಿದ್ದರು.

ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೊಶ ವ್ಯಕ್ತವಾಗಿತ್ತು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ #KachraNavika ಮತ್ತು #TimesNowApologiseNow ಎಂಬ ಹ್ಯಾಶ್‌ಟ್ಯಾಗ್‌ನಲ್ಲಿ ಪ್ರತಿಭಟನೆ ಕೂಡಾ ದಾಖಲಾಗಿತ್ತು. ಇದು ಟ್ರೆಂಡ್ ಆಗುತ್ತಿದ್ದಂತೆ ನವಿಕಾ ಕುಮಾರ್‌ ಟೈಮ್ಸ್‌ ನೌ ಅಧೀಕೃತ ಟ್ವಿಟರ್‌ ಖಾತೆಯಿಂದ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

“ನಿನ್ನೆಯ ನನ್ನ ಕಾರ್ಯಕ್ರಮದಲ್ಲಿ ನಾನೊಂದು ತಪ್ಪು ಮಾಡಿದ್ದು, ಅಸಂವಿಧಾನಿಕ ಪದವನ್ನು ಬಳಸಿದ್ದೇನೆ. ಅದಕ್ಕಾಗಿ ನಾನು ಕಾರ್ಯಕ್ರಮದ ಸಮಯದಲ್ಲೆ ಕ್ಷಮೆಯಾಚಿಸಿದ್ದೇನೆ ಮತ್ತು ಅದನ್ನು ನಾನು ಬಳಸಬಾರದಿತ್ತು. ನಾನು ಸಾವಿರಾರು ಆಂಕರಿಂಗ್ ಮಾಡಿದ್ದೇನೆ, ಆದರೆ ಈ ಹಿಂದೆ ಇಂತಹ ತಪ್ಪು ಮಾಡಿಲ್ಲ. ಆದರೆ ನಿನ್ನೆ ತಪ್ಪು ಆಗಿದೆ. ತಪ್ಪು ನಡೆದಿದೆ, ಆದರೆ ಅದು ಉದ್ದೇಶಪೂರ್ವಕವಲ್ಲ. ನಾನು ಬಳಸಿದ ಪದವು ರಾಜಕೀಯ ಸ್ಥಿತಿಯ ಬಗ್ಗೆ ಹೊರತು ಮತ್ತು ಯಾವುದೇ ನಿರ್ದಿಷ್ಟ ವ್ಯಕ್ತಿಗೆ ಅಲ್ಲ. ನಡೆದಿರುವ ತಪ್ಪಿಗಾಗಿ ಕ್ಷಮೆ ಕೇಳುವುದು ಕೆಟ್ಟ ವಿಷಯವೇನಲ್ಲ, ಹಾಗಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ. ನನ್ನ ಉದ್ದೇಶ ಯಾವುದೇ ವ್ಯಕ್ತಿಯ ಭಾವನೆಗಳನ್ನು ನೋಯಿಸುವುದಲ್ಲ. ಹಾಗಾಗಿ ನಾನು ಕ್ಷಮೆ ಯಾಚನೆ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ನಿನ್ನೆ ರಾತ್ರಿ ಕೂಡ ನವಿಕಾ ಕುಮಾರ್ ಟ್ವಿಟ್ಟರ್‌ನಲ್ಲಿ ತಮ್ಮ ಭಾಷೆಗಳಿಗೆ ಕ್ಷಮೆ ಕೋರಿದ್ದರು.

ಇದನ್ನೂ ಓದಿ: ಸರ್ಕಾರದ ಮುಂದಿನ ಗುರಿ ಮಾಧ್ಯಮಗಳು, ನೀವು ಉಳಿಯಬೇಕಿದ್ದರೇ ನಮ್ಮ ಜೊತೆಯಾಗಿ: ರಾಕೇಶ್ ಟಿಕಾಯತ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...