Homeಮುಖಪುಟರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪದ ಬಳಕೆ: ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ‘ಟೈಮ್ಸ್‌ ನೌ’...

ರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪದ ಬಳಕೆ: ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ‘ಟೈಮ್ಸ್‌ ನೌ’ ಪತ್ರಕರ್ತೆ

- Advertisement -
- Advertisement -

‘ಟೈಮ್ಸ್‌ ನೌ’ ಸುದ್ದಿ ವಾಹಿನಿ ಪತ್ರಕರ್ತೆ ನವಿಕಾ ಕುಮಾರ್ ಅವರು, ಮಂಗಳವಾರದಂದು ತಮ್ಮ ಚಾನೆಲ್‌ನಲ್ಲಿ ಪ್ಯಾನಲ್ ಡಿಬೇಟ್ ನಡೆಸುತ್ತಿದ್ದ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ದ ಅವಹೇಳಕಾರಿ ಪದಬಳಸಿದ್ದರು. ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೇಳಿದ್ದಾರೆ.

ಪತ್ರಕರ್ತೆಯ ಭಾಷಾ ಬಳಕೆಯ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ವಿಡಿಯೊ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ನವಿಕಾ ಅವರು ತಮ್ಮ ಭಾಷಾ ಬಳಕೆಯ ಬಗ್ಗೆ ಕ್ಷಮೆ ಕೇಳಬೇಕು ಮತ್ತು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಬೇಕು ಎಂದು ಆಕ್ರೋಶ ವ್ಯಕ್ತವಾಗಿದ್ದು, #KachraNavika ಹ್ಯಾಶ್ ಟ್ಯಾಗ್ ಟ್ರೆಂಡಿಗ್ ಆಗಿತ್ತು. ಜೊತೆಗೆ, ಟೈಮ್ಸ್‌ ನೌ ವಾಹಿನಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ವಾಹಿನಿಯ ಕಚೇರಿಯ ಹೊರಗೆ ಪ್ರತಿಭಟನೆ ಕೂಡಾ ನಡೆಸಿದ್ದಾರೆ.

ಇದನ್ನೂ ಓದಿ: ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ, ನವಿಕಾ ಕುಮಾರ್ ಅವರು ಸೆಪ್ಟೆಂಬರ್ 28 ರ ರಾತ್ರಿ ಪ್ಯಾನಲ್ ಡಿಬೇಟ್‌ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ. ಅದರಲ್ಲಿಅವರು ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾ “ಬ್ಲಡಿ …” ಎಂಬ ಪದವನ್ನು ಬಳಸಿದ್ದರು.

ಇದನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೊಶ ವ್ಯಕ್ತವಾಗಿತ್ತು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ #KachraNavika ಮತ್ತು #TimesNowApologiseNow ಎಂಬ ಹ್ಯಾಶ್‌ಟ್ಯಾಗ್‌ನಲ್ಲಿ ಪ್ರತಿಭಟನೆ ಕೂಡಾ ದಾಖಲಾಗಿತ್ತು. ಇದು ಟ್ರೆಂಡ್ ಆಗುತ್ತಿದ್ದಂತೆ ನವಿಕಾ ಕುಮಾರ್‌ ಟೈಮ್ಸ್‌ ನೌ ಅಧೀಕೃತ ಟ್ವಿಟರ್‌ ಖಾತೆಯಿಂದ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

“ನಿನ್ನೆಯ ನನ್ನ ಕಾರ್ಯಕ್ರಮದಲ್ಲಿ ನಾನೊಂದು ತಪ್ಪು ಮಾಡಿದ್ದು, ಅಸಂವಿಧಾನಿಕ ಪದವನ್ನು ಬಳಸಿದ್ದೇನೆ. ಅದಕ್ಕಾಗಿ ನಾನು ಕಾರ್ಯಕ್ರಮದ ಸಮಯದಲ್ಲೆ ಕ್ಷಮೆಯಾಚಿಸಿದ್ದೇನೆ ಮತ್ತು ಅದನ್ನು ನಾನು ಬಳಸಬಾರದಿತ್ತು. ನಾನು ಸಾವಿರಾರು ಆಂಕರಿಂಗ್ ಮಾಡಿದ್ದೇನೆ, ಆದರೆ ಈ ಹಿಂದೆ ಇಂತಹ ತಪ್ಪು ಮಾಡಿಲ್ಲ. ಆದರೆ ನಿನ್ನೆ ತಪ್ಪು ಆಗಿದೆ. ತಪ್ಪು ನಡೆದಿದೆ, ಆದರೆ ಅದು ಉದ್ದೇಶಪೂರ್ವಕವಲ್ಲ. ನಾನು ಬಳಸಿದ ಪದವು ರಾಜಕೀಯ ಸ್ಥಿತಿಯ ಬಗ್ಗೆ ಹೊರತು ಮತ್ತು ಯಾವುದೇ ನಿರ್ದಿಷ್ಟ ವ್ಯಕ್ತಿಗೆ ಅಲ್ಲ. ನಡೆದಿರುವ ತಪ್ಪಿಗಾಗಿ ಕ್ಷಮೆ ಕೇಳುವುದು ಕೆಟ್ಟ ವಿಷಯವೇನಲ್ಲ, ಹಾಗಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ. ನನ್ನ ಉದ್ದೇಶ ಯಾವುದೇ ವ್ಯಕ್ತಿಯ ಭಾವನೆಗಳನ್ನು ನೋಯಿಸುವುದಲ್ಲ. ಹಾಗಾಗಿ ನಾನು ಕ್ಷಮೆ ಯಾಚನೆ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ನಿನ್ನೆ ರಾತ್ರಿ ಕೂಡ ನವಿಕಾ ಕುಮಾರ್ ಟ್ವಿಟ್ಟರ್‌ನಲ್ಲಿ ತಮ್ಮ ಭಾಷೆಗಳಿಗೆ ಕ್ಷಮೆ ಕೋರಿದ್ದರು.

ಇದನ್ನೂ ಓದಿ: ಸರ್ಕಾರದ ಮುಂದಿನ ಗುರಿ ಮಾಧ್ಯಮಗಳು, ನೀವು ಉಳಿಯಬೇಕಿದ್ದರೇ ನಮ್ಮ ಜೊತೆಯಾಗಿ: ರಾಕೇಶ್ ಟಿಕಾಯತ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...