Homeಕರ್ನಾಟಕಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಮಾತನಾಡಲಾಗಿದೆ.

- Advertisement -
- Advertisement -

ತಮ್ಮ ಸರಳ ನಡೆ ನುಡಿಗಳ ಮೂಲಕ ಕರ್ನಾಟಕದ ಮನೆಮಾತಾಗಿದ್ದ ಪ್ರತಿಭಾನ್ವಿತ ನಟ ಪುನೀತ್‌ ರಾಜ್‌ಕುಮಾರ್‌ರವರು ನಮ್ಮನ್ನಗಲಿ ಒಂದು ವರ್ಷವಾಗಿದೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸೂಚಿಸಲಾಗಿದೆ. ಅಪ್ಪು ತಮ್ಮ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ. ಈ ಹೊತ್ತಿನಲ್ಲಿ ಜ್ಯೋತಿ ಸುಪರ್ಣ ಚಿಂಚೋಳಿ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತೆಯೊಬ್ಬರು ಟ್ವಿಟರ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ರವರಿಗೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವುದರ ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ.

ಜ್ಯೋತಿ ಸುಪರ್ಣ ಚಿಂಚೋಳಿ

“ಕರ್ನಾಟಕದಲ್ಲಿ ರಾಜ್‌ಕುಮಾರ್‌ ವಂಶದ ಕುಡಿಗಳು ದೇವರುಗಳಾಗಿದ್ದಾರೆ. ಬಾಲಿವುಡ್‌ನಲ್ಲಿ ಕರಣ್ ಜೋಹರ್ ಇದ್ದಂತೆ. ಸ್ಯಾಂಡಲ್‌ವುಡ್‌ನಲ್ಲಿ ಯಾರಾದರೂ ಉಳಿದುಕೊಳ್ಳಬೇಕಿದ್ದರೆ ಅವರಿಗೆ ಸಲಾಂ ಹೊಡೆಯಲೇಬೇಕಿದೆ. ರಿಷಬ್ ಶೆಟ್ಟಿ ಕೂಡ ಕಾಂತಾರ ಚಿತ್ರದಲ್ಲಿ ನಟಿಸುವಂತೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ರವರಿಗೆ ಆಹ್ವಾನ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಿ ಪುನೀತ್ ರಾಜ್‌ಕುಮಾರ್ ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೆ? ರಿಷಬ್‌ ಶೆಟ್ಟಿಯವರಿಗೆ ಭೂತ ಮತ್ತು ದೈವ ಆರಾಧನೆಯ ಸಂಸ್ಕೃತಿಯಲ್ಲಿ ಆಳವಾದ ಬೇರುಗಳಿದ್ದ ಕಾರಣದಿಂದಲೇ ಅವರು ಕಾಂತಾರ ಚಿತ್ರದಲ್ಲಿ ಪರಿಣಾಮಕಾರಿಯಾಗಿ ದೈವಿಕ ಪ್ರದರ್ಶನ ನೀಡಲು ಸಾಧ್ಯವಾಯಿತು” ಎಂದು ಜ್ಯೋತಿ ಸುಪರ್ಣ ಟ್ವೀಟ್ ಮಾಡಿದ್ದಾರೆ.

ಮುಂದುವರಿದು “ಪುನೀತ್ ರಾಜ್‌ ಕುಮಾರ್‌ ಮರಣ ಹೊಂದಿದುರ ಬಗ್ಗೆ ನನಗೂ ಬೇಸರವಿದೆ. ಆದರೆ ವಾಸ್ತವದಲ್ಲಿ ರಿಷಬ್ ಶೆಟ್ಟಿಯಂತಹ ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ಸ್ಯಾಂಡಲ್‌ವುಡ್‌ನಲ್ಲಿ ದಶಕಗಳ ಕಾಲ ಹೋರಾಡಬೇಕಿದೆ. ಅವರು ಒಂದು ದಶಕದ ಹಿಂದೆಯೇ ಸ್ಯಾಂಡಲ್‌ವುಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ನಾವು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಬಹುದಿತ್ತು” ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿಯನ್ನು ಹೊಗಳುತ್ತಲೇ ಅವರು ಇಷ್ಟು ದಿನ ಬೆಳಯದಿರಲು ರಾಜ್ ಕುಟುಂಬವೇ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಉತ್ತಮವಾಗಿ ಅಭಿನಯಿಸಲು ಸಾಧ್ಯವಾಗುತ್ತಿಲಿಲ್ಲ. ಕನ್ನಡ ಚಿತ್ರರಂಗ ರಾಜ್ ಕುಟುಂಬದ ಕೈಯಲ್ಲಿದ್ದು ಎಲ್ಲರು ಅವರ ಅಣತಿಯಂತೆಯೇ ನಡೆದುಕೊಳ್ಳಬೇಕು. ಅದರಿಂದಾಗಿ ಕನ್ನಡ ಚಿತ್ರರಂಗ ಹಿಂದುಳಿದಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿರುವುದು ಕನ್ನಡಿಗರನ್ನು ಕೆರಳಿಸಿದೆ.

ಕರಣ್ ಜೋಹರ್ ಅವರನ್ನು ಡಾ.ರಾಜ್‌ಕುಮಾರ್‌ಗೆ ಹೋಲಿಸಬೇಡಿ. ಮತ್ತು ಪುನೀತ್ ರಾಜ್‌ಕುಮಾರ್ ವಂಶವಾಹಿನಿ ನಟರಲ್ಲ. ಅವರು 10 ವರ್ಷದವರಾಗಿದ್ದಾಗಲೆ ನಟನೆಗಾಗಿ ಅಭಿಮಾನಿಗಳನ್ನು ಹೊಂದಿದ್ದರು. ರಾಜ್ ಕುಟುಂಬವು ಯಾರ ವಿರುದ್ಧವೂ ಎಂದೂ ದ್ವೇಷದ ಮಾತುಗಳನ್ನಾಡಿಲ್ಲ. ಆದರೆ ನೀವು ಅವರನ್ನು ತುಂಬಾ ದ್ವೇಷಿಸುತ್ತಿದ್ದೀರಿ ಎಂದು ಕನ್ನಡಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಅರ್ಥಹೀನವಾಗಿ ಮಾತನಾಡಬೇಡಿ. ಡಾ.ರಾಜ್‌ಕುಮಾರ್ ಅವರ ಕುಟುಂಬದ ಮೇಲಿನ ಅಭಿಮಾನವು ಗೌರವದಿಂದ ಬಂದಿದೆಯೇ ಹೊರತು ಬಲವಂತದಿಂದಲ್ಲ. ಪುನೀತ್ ಅವರು ಬಹಳ ಒಳ್ಳೆಯ ಮನುಷ್ಯರಾಗಿದ್ದರು ಮತ್ತು ಅದ್ಭತ ಪ್ರತಿಭೆ ಅವರಲ್ಲಿತ್ತು. ಈ ರೀತಿಯ ಪ್ರತಿಭೆ ಇದ್ದರೆ ಪ್ರತಿ ನಟನ ಮಕ್ಕಳು ಯಶಸ್ವಿಯಾಗುತ್ತಾರೆ. ನಿಮ್ಮ RSS ಕನ್ನಡ ವಿರೋಧಿ ನಿಲುವು ಈ ಟ್ವೀಟ್‌ನಲ್ಲಿದೆ ಎಂದು ನೀಹ ಎಂಬುವವರು ಕಿಡಿಕಾರಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು 8 ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ, ದಯವಿಟ್ಟು ಅವರು ಹಾಡಿದ ಹಾಡುಗಳನ್ನು ಕೇಳಿ, ನಮ್ಮ ಎಷ್ಟು ನಟರು ಹಾಡುವಲ್ಲಿ ಮತ್ತು ಅತ್ಯುತ್ತಮ ನಟನೆ ಮಾಡುವಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ? ಪುನೀತ್ ಅವರು ಪ್ರತಿಭೆಯ ಕಣಜ ಮತ್ತು ಆಂಕರ್ ಕೂಡ ಆಗಿದ್ದರು ಎಂದು ಅಪ್ಪು ಸಾಗರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಾಡು ಹೇಳಿ ಬಂದ ಹಣದಿಂದ ಸಾಮಾಜಿಕ ಕಾರ್ಯ ಮಾಡಿದ್ದಾರೆ. ನಾವು ಕನ್ನಡಿಗರು, ಎಲ್ಲರನ್ನೂ ಗೌರವಿಸುತ್ತೇವೆ. ರಿಷಬ್ ಶೆಟ್ಟಿ ಅವರ ಮೇಲೂ ನಮಗೆ ತುಂಬ ಗೌರವ ಇದೆ. ಅವರು ಅಪ್ಪು ಅವರ ಮೇಲಿನ ಗೌರವದಿಂದ ಹೇಳಿದ್ದಾರೆ ಅಷ್ಟೆ. ಗೌರವವನ್ನ ಹೆದರಿಸಿ ಅಥವಾ ಹಣದಿಂದ ಪಡೆಯೋಕೆ ಆಗಲ್ಲ. ಸಾಧನೆ ನೋಡಿ ಗೌರವ ಕೊಡುತ್ತಾರೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರನ್ನೋ ಮೆಚ್ಚಿಸುವ ಸಲುವಾಗಿ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ಬೇರೆಯವರ ಗಮನವನ್ನು ಸೆಳೆಯಲಿಕ್ಕೆ ಹಾಗೂ ತಮ್ಮ ಹೆಸರು ಚಾಲ್ತಿಯಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ cheap gimmick ಅಷ್ಟೇ. ರಾಜಕುಮಾರ್, ಏನು, ಅವರ ಹಾಗೂ ಅವರ ಕುಟುಂಬದ ಕಾಣಿಕೆ ಕನ್ನಡ ಚಿತ್ರರಂಗವನ್ನು ಕಟ್ಟಲು ಎಷ್ಟು ಎಂಬುದು ಎಲ್ಲರಿಗೂ ಗೊತ್ತಿದೆ. ರಿಷಬ್ ಶೆಟ್ಟಿ ಒಬ್ಬ ಪ್ರತಿಭಾವಂತ ನಟ ನಿರ್ದೇಶಕರು, ಅವರಿಂದ ಇನ್ನೂ ಒಳ್ಳೆಯ ಚಿತ್ರಗಳು ಬರಬೇಕಿದೆ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಸಂಘ ಪರಿವಾರಿಗಳು ನಿಲ್ಲಿಸಬೇಕು. ಪುನೀತ್ ಮಾಡಿರುವ ಸಾಮಾಜಿಕ ಕೆಲಸದಲ್ಲಿ ಅರ್ಧದಷ್ಟು ಸಂಘ ಪರಿವಾರದವರು ಮಾಡಿದ್ದರೆ ಹೇಳಲಿ.

  2. ಮತ್ತೆ ಸಂಘ ಪರಿವಾರದ ಬಗ್ಗೆ ಅಂದುಕೊಂಡಿದ್ದೀರಾ ಅವರ ಗುಲಾಮಗಿರಿ ಚಾಕರಿ ಮಾಡದಿದ್ದರೆ ಬರೀ ಮುಸಲ್ಮಾನರಿಗೆ ಮಾತ್ರ ಅಲ್ಲ ಯಾರಿಗೂ ಜಾಗ ಇಲ್ಲ, ಈಗ ನೋಡಿ ಡಾಕ್ಟರ್ ರಾಜಕುಮಾರ್ ಕುಟುಂಬದವರು ಸಂಘ ಪರಿವಾರಕ್ಕೆ ಅಷ್ಟೊಂದು ಹೊಂದಿಕೊಂಡು ಹೋಗದ ಕಾರಣ ಹೊಟ್ಟೆಯ ಅಗ್ನಿ ಸಲ್ಪ ಸಲ್ಲನೆ ಹೊರ ಬರುತ್ತಿದೆ

  3. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದೇ ಬೊಗಳುವವರು ಬೊಗಳುತ್ತನೆ ಇರಲಿ ಉರಿದುಕೊಳ್ಳುವವರು ಉರ್ಕಂತನೇ ಇರಲಿ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...