Homeಕರ್ನಾಟಕಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಮಾತನಾಡಲಾಗಿದೆ.

- Advertisement -
- Advertisement -

ತಮ್ಮ ಸರಳ ನಡೆ ನುಡಿಗಳ ಮೂಲಕ ಕರ್ನಾಟಕದ ಮನೆಮಾತಾಗಿದ್ದ ಪ್ರತಿಭಾನ್ವಿತ ನಟ ಪುನೀತ್‌ ರಾಜ್‌ಕುಮಾರ್‌ರವರು ನಮ್ಮನ್ನಗಲಿ ಒಂದು ವರ್ಷವಾಗಿದೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸೂಚಿಸಲಾಗಿದೆ. ಅಪ್ಪು ತಮ್ಮ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ. ಈ ಹೊತ್ತಿನಲ್ಲಿ ಜ್ಯೋತಿ ಸುಪರ್ಣ ಚಿಂಚೋಳಿ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತೆಯೊಬ್ಬರು ಟ್ವಿಟರ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ರವರಿಗೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವುದರ ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ.

ಜ್ಯೋತಿ ಸುಪರ್ಣ ಚಿಂಚೋಳಿ

“ಕರ್ನಾಟಕದಲ್ಲಿ ರಾಜ್‌ಕುಮಾರ್‌ ವಂಶದ ಕುಡಿಗಳು ದೇವರುಗಳಾಗಿದ್ದಾರೆ. ಬಾಲಿವುಡ್‌ನಲ್ಲಿ ಕರಣ್ ಜೋಹರ್ ಇದ್ದಂತೆ. ಸ್ಯಾಂಡಲ್‌ವುಡ್‌ನಲ್ಲಿ ಯಾರಾದರೂ ಉಳಿದುಕೊಳ್ಳಬೇಕಿದ್ದರೆ ಅವರಿಗೆ ಸಲಾಂ ಹೊಡೆಯಲೇಬೇಕಿದೆ. ರಿಷಬ್ ಶೆಟ್ಟಿ ಕೂಡ ಕಾಂತಾರ ಚಿತ್ರದಲ್ಲಿ ನಟಿಸುವಂತೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ರವರಿಗೆ ಆಹ್ವಾನ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಿ ಪುನೀತ್ ರಾಜ್‌ಕುಮಾರ್ ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೆ? ರಿಷಬ್‌ ಶೆಟ್ಟಿಯವರಿಗೆ ಭೂತ ಮತ್ತು ದೈವ ಆರಾಧನೆಯ ಸಂಸ್ಕೃತಿಯಲ್ಲಿ ಆಳವಾದ ಬೇರುಗಳಿದ್ದ ಕಾರಣದಿಂದಲೇ ಅವರು ಕಾಂತಾರ ಚಿತ್ರದಲ್ಲಿ ಪರಿಣಾಮಕಾರಿಯಾಗಿ ದೈವಿಕ ಪ್ರದರ್ಶನ ನೀಡಲು ಸಾಧ್ಯವಾಯಿತು” ಎಂದು ಜ್ಯೋತಿ ಸುಪರ್ಣ ಟ್ವೀಟ್ ಮಾಡಿದ್ದಾರೆ.

ಮುಂದುವರಿದು “ಪುನೀತ್ ರಾಜ್‌ ಕುಮಾರ್‌ ಮರಣ ಹೊಂದಿದುರ ಬಗ್ಗೆ ನನಗೂ ಬೇಸರವಿದೆ. ಆದರೆ ವಾಸ್ತವದಲ್ಲಿ ರಿಷಬ್ ಶೆಟ್ಟಿಯಂತಹ ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ಸ್ಯಾಂಡಲ್‌ವುಡ್‌ನಲ್ಲಿ ದಶಕಗಳ ಕಾಲ ಹೋರಾಡಬೇಕಿದೆ. ಅವರು ಒಂದು ದಶಕದ ಹಿಂದೆಯೇ ಸ್ಯಾಂಡಲ್‌ವುಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ನಾವು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಬಹುದಿತ್ತು” ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿಯನ್ನು ಹೊಗಳುತ್ತಲೇ ಅವರು ಇಷ್ಟು ದಿನ ಬೆಳಯದಿರಲು ರಾಜ್ ಕುಟುಂಬವೇ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಉತ್ತಮವಾಗಿ ಅಭಿನಯಿಸಲು ಸಾಧ್ಯವಾಗುತ್ತಿಲಿಲ್ಲ. ಕನ್ನಡ ಚಿತ್ರರಂಗ ರಾಜ್ ಕುಟುಂಬದ ಕೈಯಲ್ಲಿದ್ದು ಎಲ್ಲರು ಅವರ ಅಣತಿಯಂತೆಯೇ ನಡೆದುಕೊಳ್ಳಬೇಕು. ಅದರಿಂದಾಗಿ ಕನ್ನಡ ಚಿತ್ರರಂಗ ಹಿಂದುಳಿದಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿರುವುದು ಕನ್ನಡಿಗರನ್ನು ಕೆರಳಿಸಿದೆ.

ಕರಣ್ ಜೋಹರ್ ಅವರನ್ನು ಡಾ.ರಾಜ್‌ಕುಮಾರ್‌ಗೆ ಹೋಲಿಸಬೇಡಿ. ಮತ್ತು ಪುನೀತ್ ರಾಜ್‌ಕುಮಾರ್ ವಂಶವಾಹಿನಿ ನಟರಲ್ಲ. ಅವರು 10 ವರ್ಷದವರಾಗಿದ್ದಾಗಲೆ ನಟನೆಗಾಗಿ ಅಭಿಮಾನಿಗಳನ್ನು ಹೊಂದಿದ್ದರು. ರಾಜ್ ಕುಟುಂಬವು ಯಾರ ವಿರುದ್ಧವೂ ಎಂದೂ ದ್ವೇಷದ ಮಾತುಗಳನ್ನಾಡಿಲ್ಲ. ಆದರೆ ನೀವು ಅವರನ್ನು ತುಂಬಾ ದ್ವೇಷಿಸುತ್ತಿದ್ದೀರಿ ಎಂದು ಕನ್ನಡಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಅರ್ಥಹೀನವಾಗಿ ಮಾತನಾಡಬೇಡಿ. ಡಾ.ರಾಜ್‌ಕುಮಾರ್ ಅವರ ಕುಟುಂಬದ ಮೇಲಿನ ಅಭಿಮಾನವು ಗೌರವದಿಂದ ಬಂದಿದೆಯೇ ಹೊರತು ಬಲವಂತದಿಂದಲ್ಲ. ಪುನೀತ್ ಅವರು ಬಹಳ ಒಳ್ಳೆಯ ಮನುಷ್ಯರಾಗಿದ್ದರು ಮತ್ತು ಅದ್ಭತ ಪ್ರತಿಭೆ ಅವರಲ್ಲಿತ್ತು. ಈ ರೀತಿಯ ಪ್ರತಿಭೆ ಇದ್ದರೆ ಪ್ರತಿ ನಟನ ಮಕ್ಕಳು ಯಶಸ್ವಿಯಾಗುತ್ತಾರೆ. ನಿಮ್ಮ RSS ಕನ್ನಡ ವಿರೋಧಿ ನಿಲುವು ಈ ಟ್ವೀಟ್‌ನಲ್ಲಿದೆ ಎಂದು ನೀಹ ಎಂಬುವವರು ಕಿಡಿಕಾರಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು 8 ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ, ದಯವಿಟ್ಟು ಅವರು ಹಾಡಿದ ಹಾಡುಗಳನ್ನು ಕೇಳಿ, ನಮ್ಮ ಎಷ್ಟು ನಟರು ಹಾಡುವಲ್ಲಿ ಮತ್ತು ಅತ್ಯುತ್ತಮ ನಟನೆ ಮಾಡುವಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ? ಪುನೀತ್ ಅವರು ಪ್ರತಿಭೆಯ ಕಣಜ ಮತ್ತು ಆಂಕರ್ ಕೂಡ ಆಗಿದ್ದರು ಎಂದು ಅಪ್ಪು ಸಾಗರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಾಡು ಹೇಳಿ ಬಂದ ಹಣದಿಂದ ಸಾಮಾಜಿಕ ಕಾರ್ಯ ಮಾಡಿದ್ದಾರೆ. ನಾವು ಕನ್ನಡಿಗರು, ಎಲ್ಲರನ್ನೂ ಗೌರವಿಸುತ್ತೇವೆ. ರಿಷಬ್ ಶೆಟ್ಟಿ ಅವರ ಮೇಲೂ ನಮಗೆ ತುಂಬ ಗೌರವ ಇದೆ. ಅವರು ಅಪ್ಪು ಅವರ ಮೇಲಿನ ಗೌರವದಿಂದ ಹೇಳಿದ್ದಾರೆ ಅಷ್ಟೆ. ಗೌರವವನ್ನ ಹೆದರಿಸಿ ಅಥವಾ ಹಣದಿಂದ ಪಡೆಯೋಕೆ ಆಗಲ್ಲ. ಸಾಧನೆ ನೋಡಿ ಗೌರವ ಕೊಡುತ್ತಾರೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರನ್ನೋ ಮೆಚ್ಚಿಸುವ ಸಲುವಾಗಿ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ಬೇರೆಯವರ ಗಮನವನ್ನು ಸೆಳೆಯಲಿಕ್ಕೆ ಹಾಗೂ ತಮ್ಮ ಹೆಸರು ಚಾಲ್ತಿಯಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ cheap gimmick ಅಷ್ಟೇ. ರಾಜಕುಮಾರ್, ಏನು, ಅವರ ಹಾಗೂ ಅವರ ಕುಟುಂಬದ ಕಾಣಿಕೆ ಕನ್ನಡ ಚಿತ್ರರಂಗವನ್ನು ಕಟ್ಟಲು ಎಷ್ಟು ಎಂಬುದು ಎಲ್ಲರಿಗೂ ಗೊತ್ತಿದೆ. ರಿಷಬ್ ಶೆಟ್ಟಿ ಒಬ್ಬ ಪ್ರತಿಭಾವಂತ ನಟ ನಿರ್ದೇಶಕರು, ಅವರಿಂದ ಇನ್ನೂ ಒಳ್ಳೆಯ ಚಿತ್ರಗಳು ಬರಬೇಕಿದೆ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಸಂಘ ಪರಿವಾರಿಗಳು ನಿಲ್ಲಿಸಬೇಕು. ಪುನೀತ್ ಮಾಡಿರುವ ಸಾಮಾಜಿಕ ಕೆಲಸದಲ್ಲಿ ಅರ್ಧದಷ್ಟು ಸಂಘ ಪರಿವಾರದವರು ಮಾಡಿದ್ದರೆ ಹೇಳಲಿ.

  2. ಮತ್ತೆ ಸಂಘ ಪರಿವಾರದ ಬಗ್ಗೆ ಅಂದುಕೊಂಡಿದ್ದೀರಾ ಅವರ ಗುಲಾಮಗಿರಿ ಚಾಕರಿ ಮಾಡದಿದ್ದರೆ ಬರೀ ಮುಸಲ್ಮಾನರಿಗೆ ಮಾತ್ರ ಅಲ್ಲ ಯಾರಿಗೂ ಜಾಗ ಇಲ್ಲ, ಈಗ ನೋಡಿ ಡಾಕ್ಟರ್ ರಾಜಕುಮಾರ್ ಕುಟುಂಬದವರು ಸಂಘ ಪರಿವಾರಕ್ಕೆ ಅಷ್ಟೊಂದು ಹೊಂದಿಕೊಂಡು ಹೋಗದ ಕಾರಣ ಹೊಟ್ಟೆಯ ಅಗ್ನಿ ಸಲ್ಪ ಸಲ್ಲನೆ ಹೊರ ಬರುತ್ತಿದೆ

  3. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದೇ ಬೊಗಳುವವರು ಬೊಗಳುತ್ತನೆ ಇರಲಿ ಉರಿದುಕೊಳ್ಳುವವರು ಉರ್ಕಂತನೇ ಇರಲಿ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....