Homeಕರ್ನಾಟಕಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಮಾತನಾಡಲಾಗಿದೆ.

- Advertisement -
- Advertisement -

ತಮ್ಮ ಸರಳ ನಡೆ ನುಡಿಗಳ ಮೂಲಕ ಕರ್ನಾಟಕದ ಮನೆಮಾತಾಗಿದ್ದ ಪ್ರತಿಭಾನ್ವಿತ ನಟ ಪುನೀತ್‌ ರಾಜ್‌ಕುಮಾರ್‌ರವರು ನಮ್ಮನ್ನಗಲಿ ಒಂದು ವರ್ಷವಾಗಿದೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸೂಚಿಸಲಾಗಿದೆ. ಅಪ್ಪು ತಮ್ಮ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ. ಈ ಹೊತ್ತಿನಲ್ಲಿ ಜ್ಯೋತಿ ಸುಪರ್ಣ ಚಿಂಚೋಳಿ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತೆಯೊಬ್ಬರು ಟ್ವಿಟರ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ರವರಿಗೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವುದರ ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ.

ಜ್ಯೋತಿ ಸುಪರ್ಣ ಚಿಂಚೋಳಿ

“ಕರ್ನಾಟಕದಲ್ಲಿ ರಾಜ್‌ಕುಮಾರ್‌ ವಂಶದ ಕುಡಿಗಳು ದೇವರುಗಳಾಗಿದ್ದಾರೆ. ಬಾಲಿವುಡ್‌ನಲ್ಲಿ ಕರಣ್ ಜೋಹರ್ ಇದ್ದಂತೆ. ಸ್ಯಾಂಡಲ್‌ವುಡ್‌ನಲ್ಲಿ ಯಾರಾದರೂ ಉಳಿದುಕೊಳ್ಳಬೇಕಿದ್ದರೆ ಅವರಿಗೆ ಸಲಾಂ ಹೊಡೆಯಲೇಬೇಕಿದೆ. ರಿಷಬ್ ಶೆಟ್ಟಿ ಕೂಡ ಕಾಂತಾರ ಚಿತ್ರದಲ್ಲಿ ನಟಿಸುವಂತೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ರವರಿಗೆ ಆಹ್ವಾನ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಿ ಪುನೀತ್ ರಾಜ್‌ಕುಮಾರ್ ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೆ? ರಿಷಬ್‌ ಶೆಟ್ಟಿಯವರಿಗೆ ಭೂತ ಮತ್ತು ದೈವ ಆರಾಧನೆಯ ಸಂಸ್ಕೃತಿಯಲ್ಲಿ ಆಳವಾದ ಬೇರುಗಳಿದ್ದ ಕಾರಣದಿಂದಲೇ ಅವರು ಕಾಂತಾರ ಚಿತ್ರದಲ್ಲಿ ಪರಿಣಾಮಕಾರಿಯಾಗಿ ದೈವಿಕ ಪ್ರದರ್ಶನ ನೀಡಲು ಸಾಧ್ಯವಾಯಿತು” ಎಂದು ಜ್ಯೋತಿ ಸುಪರ್ಣ ಟ್ವೀಟ್ ಮಾಡಿದ್ದಾರೆ.

ಮುಂದುವರಿದು “ಪುನೀತ್ ರಾಜ್‌ ಕುಮಾರ್‌ ಮರಣ ಹೊಂದಿದುರ ಬಗ್ಗೆ ನನಗೂ ಬೇಸರವಿದೆ. ಆದರೆ ವಾಸ್ತವದಲ್ಲಿ ರಿಷಬ್ ಶೆಟ್ಟಿಯಂತಹ ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ಸ್ಯಾಂಡಲ್‌ವುಡ್‌ನಲ್ಲಿ ದಶಕಗಳ ಕಾಲ ಹೋರಾಡಬೇಕಿದೆ. ಅವರು ಒಂದು ದಶಕದ ಹಿಂದೆಯೇ ಸ್ಯಾಂಡಲ್‌ವುಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ನಾವು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಬಹುದಿತ್ತು” ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿಯನ್ನು ಹೊಗಳುತ್ತಲೇ ಅವರು ಇಷ್ಟು ದಿನ ಬೆಳಯದಿರಲು ರಾಜ್ ಕುಟುಂಬವೇ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಉತ್ತಮವಾಗಿ ಅಭಿನಯಿಸಲು ಸಾಧ್ಯವಾಗುತ್ತಿಲಿಲ್ಲ. ಕನ್ನಡ ಚಿತ್ರರಂಗ ರಾಜ್ ಕುಟುಂಬದ ಕೈಯಲ್ಲಿದ್ದು ಎಲ್ಲರು ಅವರ ಅಣತಿಯಂತೆಯೇ ನಡೆದುಕೊಳ್ಳಬೇಕು. ಅದರಿಂದಾಗಿ ಕನ್ನಡ ಚಿತ್ರರಂಗ ಹಿಂದುಳಿದಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿರುವುದು ಕನ್ನಡಿಗರನ್ನು ಕೆರಳಿಸಿದೆ.

ಕರಣ್ ಜೋಹರ್ ಅವರನ್ನು ಡಾ.ರಾಜ್‌ಕುಮಾರ್‌ಗೆ ಹೋಲಿಸಬೇಡಿ. ಮತ್ತು ಪುನೀತ್ ರಾಜ್‌ಕುಮಾರ್ ವಂಶವಾಹಿನಿ ನಟರಲ್ಲ. ಅವರು 10 ವರ್ಷದವರಾಗಿದ್ದಾಗಲೆ ನಟನೆಗಾಗಿ ಅಭಿಮಾನಿಗಳನ್ನು ಹೊಂದಿದ್ದರು. ರಾಜ್ ಕುಟುಂಬವು ಯಾರ ವಿರುದ್ಧವೂ ಎಂದೂ ದ್ವೇಷದ ಮಾತುಗಳನ್ನಾಡಿಲ್ಲ. ಆದರೆ ನೀವು ಅವರನ್ನು ತುಂಬಾ ದ್ವೇಷಿಸುತ್ತಿದ್ದೀರಿ ಎಂದು ಕನ್ನಡಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಅರ್ಥಹೀನವಾಗಿ ಮಾತನಾಡಬೇಡಿ. ಡಾ.ರಾಜ್‌ಕುಮಾರ್ ಅವರ ಕುಟುಂಬದ ಮೇಲಿನ ಅಭಿಮಾನವು ಗೌರವದಿಂದ ಬಂದಿದೆಯೇ ಹೊರತು ಬಲವಂತದಿಂದಲ್ಲ. ಪುನೀತ್ ಅವರು ಬಹಳ ಒಳ್ಳೆಯ ಮನುಷ್ಯರಾಗಿದ್ದರು ಮತ್ತು ಅದ್ಭತ ಪ್ರತಿಭೆ ಅವರಲ್ಲಿತ್ತು. ಈ ರೀತಿಯ ಪ್ರತಿಭೆ ಇದ್ದರೆ ಪ್ರತಿ ನಟನ ಮಕ್ಕಳು ಯಶಸ್ವಿಯಾಗುತ್ತಾರೆ. ನಿಮ್ಮ RSS ಕನ್ನಡ ವಿರೋಧಿ ನಿಲುವು ಈ ಟ್ವೀಟ್‌ನಲ್ಲಿದೆ ಎಂದು ನೀಹ ಎಂಬುವವರು ಕಿಡಿಕಾರಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು 8 ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ, ದಯವಿಟ್ಟು ಅವರು ಹಾಡಿದ ಹಾಡುಗಳನ್ನು ಕೇಳಿ, ನಮ್ಮ ಎಷ್ಟು ನಟರು ಹಾಡುವಲ್ಲಿ ಮತ್ತು ಅತ್ಯುತ್ತಮ ನಟನೆ ಮಾಡುವಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ? ಪುನೀತ್ ಅವರು ಪ್ರತಿಭೆಯ ಕಣಜ ಮತ್ತು ಆಂಕರ್ ಕೂಡ ಆಗಿದ್ದರು ಎಂದು ಅಪ್ಪು ಸಾಗರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಾಡು ಹೇಳಿ ಬಂದ ಹಣದಿಂದ ಸಾಮಾಜಿಕ ಕಾರ್ಯ ಮಾಡಿದ್ದಾರೆ. ನಾವು ಕನ್ನಡಿಗರು, ಎಲ್ಲರನ್ನೂ ಗೌರವಿಸುತ್ತೇವೆ. ರಿಷಬ್ ಶೆಟ್ಟಿ ಅವರ ಮೇಲೂ ನಮಗೆ ತುಂಬ ಗೌರವ ಇದೆ. ಅವರು ಅಪ್ಪು ಅವರ ಮೇಲಿನ ಗೌರವದಿಂದ ಹೇಳಿದ್ದಾರೆ ಅಷ್ಟೆ. ಗೌರವವನ್ನ ಹೆದರಿಸಿ ಅಥವಾ ಹಣದಿಂದ ಪಡೆಯೋಕೆ ಆಗಲ್ಲ. ಸಾಧನೆ ನೋಡಿ ಗೌರವ ಕೊಡುತ್ತಾರೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರನ್ನೋ ಮೆಚ್ಚಿಸುವ ಸಲುವಾಗಿ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ಬೇರೆಯವರ ಗಮನವನ್ನು ಸೆಳೆಯಲಿಕ್ಕೆ ಹಾಗೂ ತಮ್ಮ ಹೆಸರು ಚಾಲ್ತಿಯಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ cheap gimmick ಅಷ್ಟೇ. ರಾಜಕುಮಾರ್, ಏನು, ಅವರ ಹಾಗೂ ಅವರ ಕುಟುಂಬದ ಕಾಣಿಕೆ ಕನ್ನಡ ಚಿತ್ರರಂಗವನ್ನು ಕಟ್ಟಲು ಎಷ್ಟು ಎಂಬುದು ಎಲ್ಲರಿಗೂ ಗೊತ್ತಿದೆ. ರಿಷಬ್ ಶೆಟ್ಟಿ ಒಬ್ಬ ಪ್ರತಿಭಾವಂತ ನಟ ನಿರ್ದೇಶಕರು, ಅವರಿಂದ ಇನ್ನೂ ಒಳ್ಳೆಯ ಚಿತ್ರಗಳು ಬರಬೇಕಿದೆ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಸಂಘ ಪರಿವಾರಿಗಳು ನಿಲ್ಲಿಸಬೇಕು. ಪುನೀತ್ ಮಾಡಿರುವ ಸಾಮಾಜಿಕ ಕೆಲಸದಲ್ಲಿ ಅರ್ಧದಷ್ಟು ಸಂಘ ಪರಿವಾರದವರು ಮಾಡಿದ್ದರೆ ಹೇಳಲಿ.

  2. ಮತ್ತೆ ಸಂಘ ಪರಿವಾರದ ಬಗ್ಗೆ ಅಂದುಕೊಂಡಿದ್ದೀರಾ ಅವರ ಗುಲಾಮಗಿರಿ ಚಾಕರಿ ಮಾಡದಿದ್ದರೆ ಬರೀ ಮುಸಲ್ಮಾನರಿಗೆ ಮಾತ್ರ ಅಲ್ಲ ಯಾರಿಗೂ ಜಾಗ ಇಲ್ಲ, ಈಗ ನೋಡಿ ಡಾಕ್ಟರ್ ರಾಜಕುಮಾರ್ ಕುಟುಂಬದವರು ಸಂಘ ಪರಿವಾರಕ್ಕೆ ಅಷ್ಟೊಂದು ಹೊಂದಿಕೊಂಡು ಹೋಗದ ಕಾರಣ ಹೊಟ್ಟೆಯ ಅಗ್ನಿ ಸಲ್ಪ ಸಲ್ಲನೆ ಹೊರ ಬರುತ್ತಿದೆ

  3. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದೇ ಬೊಗಳುವವರು ಬೊಗಳುತ್ತನೆ ಇರಲಿ ಉರಿದುಕೊಳ್ಳುವವರು ಉರ್ಕಂತನೇ ಇರಲಿ.

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...