Homeಕರ್ನಾಟಕಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಅಪ್ಪು ಬಗ್ಗೆ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರ್‌ಎಸ್‌ಎಸ್ ಕಾರ್ಯಕರ್ತೆ: ಕಿಡಿಕಾರಿದ ಕನ್ನಡಿಗರು

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಮಾತನಾಡಲಾಗಿದೆ.

- Advertisement -
- Advertisement -

ತಮ್ಮ ಸರಳ ನಡೆ ನುಡಿಗಳ ಮೂಲಕ ಕರ್ನಾಟಕದ ಮನೆಮಾತಾಗಿದ್ದ ಪ್ರತಿಭಾನ್ವಿತ ನಟ ಪುನೀತ್‌ ರಾಜ್‌ಕುಮಾರ್‌ರವರು ನಮ್ಮನ್ನಗಲಿ ಒಂದು ವರ್ಷವಾಗಿದೆ. ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವ ಸೂಚಿಸಲಾಗಿದೆ. ಅಪ್ಪು ತಮ್ಮ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ. ಈ ಹೊತ್ತಿನಲ್ಲಿ ಜ್ಯೋತಿ ಸುಪರ್ಣ ಚಿಂಚೋಳಿ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತೆಯೊಬ್ಬರು ಟ್ವಿಟರ್‌ನಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ರವರಿಗೆ ಅಪಮಾನ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಟ್ವಿಟರ್‌ನಲ್ಲಿ ನರೇಂದ್ರ ಮೋದಿಯವರು ಫಾಲೋ ಮಾಡುವ ಜ್ಯೋತಿ ಸುಪರ್ಣ ಟ್ವಿಟರ್‌ ಖಾತೆಯಿಂದ ರಾಜ್‌ಕುಮಾರ್ ಕುಟುಂಬವನ್ನು ಗುರಿಯಾಗಿಸಿಕೊಂಡು ಹಗುರವಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವುದರ ವಿರುದ್ಧ ಕನ್ನಡಿಗರು ಕಿಡಿಕಾರಿದ್ದಾರೆ.

ಜ್ಯೋತಿ ಸುಪರ್ಣ ಚಿಂಚೋಳಿ

“ಕರ್ನಾಟಕದಲ್ಲಿ ರಾಜ್‌ಕುಮಾರ್‌ ವಂಶದ ಕುಡಿಗಳು ದೇವರುಗಳಾಗಿದ್ದಾರೆ. ಬಾಲಿವುಡ್‌ನಲ್ಲಿ ಕರಣ್ ಜೋಹರ್ ಇದ್ದಂತೆ. ಸ್ಯಾಂಡಲ್‌ವುಡ್‌ನಲ್ಲಿ ಯಾರಾದರೂ ಉಳಿದುಕೊಳ್ಳಬೇಕಿದ್ದರೆ ಅವರಿಗೆ ಸಲಾಂ ಹೊಡೆಯಲೇಬೇಕಿದೆ. ರಿಷಬ್ ಶೆಟ್ಟಿ ಕೂಡ ಕಾಂತಾರ ಚಿತ್ರದಲ್ಲಿ ನಟಿಸುವಂತೆ ದಿವಂಗತ ಪುನೀತ್‌ ರಾಜ್‌ ಕುಮಾರ್‌ರವರಿಗೆ ಆಹ್ವಾನ ನೀಡಿದ್ದೆ ಎಂದು ಹೇಳಿಕೊಂಡಿದ್ದಾರೆ. ಆದರೆ ಪ್ರಾಮಾಣಿಕವಾಗಿ ಹೇಳಿ ಪುನೀತ್ ರಾಜ್‌ಕುಮಾರ್ ಆ ಪಾತ್ರವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೆ? ರಿಷಬ್‌ ಶೆಟ್ಟಿಯವರಿಗೆ ಭೂತ ಮತ್ತು ದೈವ ಆರಾಧನೆಯ ಸಂಸ್ಕೃತಿಯಲ್ಲಿ ಆಳವಾದ ಬೇರುಗಳಿದ್ದ ಕಾರಣದಿಂದಲೇ ಅವರು ಕಾಂತಾರ ಚಿತ್ರದಲ್ಲಿ ಪರಿಣಾಮಕಾರಿಯಾಗಿ ದೈವಿಕ ಪ್ರದರ್ಶನ ನೀಡಲು ಸಾಧ್ಯವಾಯಿತು” ಎಂದು ಜ್ಯೋತಿ ಸುಪರ್ಣ ಟ್ವೀಟ್ ಮಾಡಿದ್ದಾರೆ.

ಮುಂದುವರಿದು “ಪುನೀತ್ ರಾಜ್‌ ಕುಮಾರ್‌ ಮರಣ ಹೊಂದಿದುರ ಬಗ್ಗೆ ನನಗೂ ಬೇಸರವಿದೆ. ಆದರೆ ವಾಸ್ತವದಲ್ಲಿ ರಿಷಬ್ ಶೆಟ್ಟಿಯಂತಹ ಪ್ರತಿಭಾವಂತ ನಟ/ನಿರ್ದೇಶಕ/ಬರಹಗಾರ ಸ್ಯಾಂಡಲ್‌ವುಡ್‌ನಲ್ಲಿ ದಶಕಗಳ ಕಾಲ ಹೋರಾಡಬೇಕಿದೆ. ಅವರು ಒಂದು ದಶಕದ ಹಿಂದೆಯೇ ಸ್ಯಾಂಡಲ್‌ವುಡ್ ಅನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮೂಲಕ ನಾವು ಕನ್ನಡಿಗರು ಹೆಮ್ಮೆ ಪಡುವಂತೆ ಮಾಡಬಹುದಿತ್ತು” ಎಂದು ಆರ್‌ಎಸ್‌ಎಸ್‌ ಕಾರ್ಯಕರ್ತೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಒಟ್ಟಾರೆಯಾಗಿ ಈ ಟ್ವೀಟ್‌ನಲ್ಲಿ ರಿಷಬ್ ಶೆಟ್ಟಿಯನ್ನು ಹೊಗಳುತ್ತಲೇ ಅವರು ಇಷ್ಟು ದಿನ ಬೆಳಯದಿರಲು ರಾಜ್ ಕುಟುಂಬವೇ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಉತ್ತಮವಾಗಿ ಅಭಿನಯಿಸಲು ಸಾಧ್ಯವಾಗುತ್ತಿಲಿಲ್ಲ. ಕನ್ನಡ ಚಿತ್ರರಂಗ ರಾಜ್ ಕುಟುಂಬದ ಕೈಯಲ್ಲಿದ್ದು ಎಲ್ಲರು ಅವರ ಅಣತಿಯಂತೆಯೇ ನಡೆದುಕೊಳ್ಳಬೇಕು. ಅದರಿಂದಾಗಿ ಕನ್ನಡ ಚಿತ್ರರಂಗ ಹಿಂದುಳಿದಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿರುವುದು ಕನ್ನಡಿಗರನ್ನು ಕೆರಳಿಸಿದೆ.

ಕರಣ್ ಜೋಹರ್ ಅವರನ್ನು ಡಾ.ರಾಜ್‌ಕುಮಾರ್‌ಗೆ ಹೋಲಿಸಬೇಡಿ. ಮತ್ತು ಪುನೀತ್ ರಾಜ್‌ಕುಮಾರ್ ವಂಶವಾಹಿನಿ ನಟರಲ್ಲ. ಅವರು 10 ವರ್ಷದವರಾಗಿದ್ದಾಗಲೆ ನಟನೆಗಾಗಿ ಅಭಿಮಾನಿಗಳನ್ನು ಹೊಂದಿದ್ದರು. ರಾಜ್ ಕುಟುಂಬವು ಯಾರ ವಿರುದ್ಧವೂ ಎಂದೂ ದ್ವೇಷದ ಮಾತುಗಳನ್ನಾಡಿಲ್ಲ. ಆದರೆ ನೀವು ಅವರನ್ನು ತುಂಬಾ ದ್ವೇಷಿಸುತ್ತಿದ್ದೀರಿ ಎಂದು ಕನ್ನಡಿಗರೊಬ್ಬರು ಟ್ವೀಟ್ ಮಾಡಿದ್ದಾರೆ.

ಅರ್ಥಹೀನವಾಗಿ ಮಾತನಾಡಬೇಡಿ. ಡಾ.ರಾಜ್‌ಕುಮಾರ್ ಅವರ ಕುಟುಂಬದ ಮೇಲಿನ ಅಭಿಮಾನವು ಗೌರವದಿಂದ ಬಂದಿದೆಯೇ ಹೊರತು ಬಲವಂತದಿಂದಲ್ಲ. ಪುನೀತ್ ಅವರು ಬಹಳ ಒಳ್ಳೆಯ ಮನುಷ್ಯರಾಗಿದ್ದರು ಮತ್ತು ಅದ್ಭತ ಪ್ರತಿಭೆ ಅವರಲ್ಲಿತ್ತು. ಈ ರೀತಿಯ ಪ್ರತಿಭೆ ಇದ್ದರೆ ಪ್ರತಿ ನಟನ ಮಕ್ಕಳು ಯಶಸ್ವಿಯಾಗುತ್ತಾರೆ. ನಿಮ್ಮ RSS ಕನ್ನಡ ವಿರೋಧಿ ನಿಲುವು ಈ ಟ್ವೀಟ್‌ನಲ್ಲಿದೆ ಎಂದು ನೀಹ ಎಂಬುವವರು ಕಿಡಿಕಾರಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು 8 ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದಿದ್ದಾರೆ, ದಯವಿಟ್ಟು ಅವರು ಹಾಡಿದ ಹಾಡುಗಳನ್ನು ಕೇಳಿ, ನಮ್ಮ ಎಷ್ಟು ನಟರು ಹಾಡುವಲ್ಲಿ ಮತ್ತು ಅತ್ಯುತ್ತಮ ನಟನೆ ಮಾಡುವಲ್ಲಿ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ? ಪುನೀತ್ ಅವರು ಪ್ರತಿಭೆಯ ಕಣಜ ಮತ್ತು ಆಂಕರ್ ಕೂಡ ಆಗಿದ್ದರು ಎಂದು ಅಪ್ಪು ಸಾಗರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಹಾಡು ಹೇಳಿ ಬಂದ ಹಣದಿಂದ ಸಾಮಾಜಿಕ ಕಾರ್ಯ ಮಾಡಿದ್ದಾರೆ. ನಾವು ಕನ್ನಡಿಗರು, ಎಲ್ಲರನ್ನೂ ಗೌರವಿಸುತ್ತೇವೆ. ರಿಷಬ್ ಶೆಟ್ಟಿ ಅವರ ಮೇಲೂ ನಮಗೆ ತುಂಬ ಗೌರವ ಇದೆ. ಅವರು ಅಪ್ಪು ಅವರ ಮೇಲಿನ ಗೌರವದಿಂದ ಹೇಳಿದ್ದಾರೆ ಅಷ್ಟೆ. ಗೌರವವನ್ನ ಹೆದರಿಸಿ ಅಥವಾ ಹಣದಿಂದ ಪಡೆಯೋಕೆ ಆಗಲ್ಲ. ಸಾಧನೆ ನೋಡಿ ಗೌರವ ಕೊಡುತ್ತಾರೆ ಎಂದು ಕನ್ನಡಿಗ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಯಾರನ್ನೋ ಮೆಚ್ಚಿಸುವ ಸಲುವಾಗಿ ಹೀಗೆ ಬಾಯಿಗೆ ಬಂದಂತೆ ಮಾತನಾಡುವುದು ಬೇರೆಯವರ ಗಮನವನ್ನು ಸೆಳೆಯಲಿಕ್ಕೆ ಹಾಗೂ ತಮ್ಮ ಹೆಸರು ಚಾಲ್ತಿಯಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ cheap gimmick ಅಷ್ಟೇ. ರಾಜಕುಮಾರ್, ಏನು, ಅವರ ಹಾಗೂ ಅವರ ಕುಟುಂಬದ ಕಾಣಿಕೆ ಕನ್ನಡ ಚಿತ್ರರಂಗವನ್ನು ಕಟ್ಟಲು ಎಷ್ಟು ಎಂಬುದು ಎಲ್ಲರಿಗೂ ಗೊತ್ತಿದೆ. ರಿಷಬ್ ಶೆಟ್ಟಿ ಒಬ್ಬ ಪ್ರತಿಭಾವಂತ ನಟ ನಿರ್ದೇಶಕರು, ಅವರಿಂದ ಇನ್ನೂ ಒಳ್ಳೆಯ ಚಿತ್ರಗಳು ಬರಬೇಕಿದೆ. ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡುವುದನ್ನು ಸಂಘ ಪರಿವಾರಿಗಳು ನಿಲ್ಲಿಸಬೇಕು. ಪುನೀತ್ ಮಾಡಿರುವ ಸಾಮಾಜಿಕ ಕೆಲಸದಲ್ಲಿ ಅರ್ಧದಷ್ಟು ಸಂಘ ಪರಿವಾರದವರು ಮಾಡಿದ್ದರೆ ಹೇಳಲಿ.

  2. ಮತ್ತೆ ಸಂಘ ಪರಿವಾರದ ಬಗ್ಗೆ ಅಂದುಕೊಂಡಿದ್ದೀರಾ ಅವರ ಗುಲಾಮಗಿರಿ ಚಾಕರಿ ಮಾಡದಿದ್ದರೆ ಬರೀ ಮುಸಲ್ಮಾನರಿಗೆ ಮಾತ್ರ ಅಲ್ಲ ಯಾರಿಗೂ ಜಾಗ ಇಲ್ಲ, ಈಗ ನೋಡಿ ಡಾಕ್ಟರ್ ರಾಜಕುಮಾರ್ ಕುಟುಂಬದವರು ಸಂಘ ಪರಿವಾರಕ್ಕೆ ಅಷ್ಟೊಂದು ಹೊಂದಿಕೊಂಡು ಹೋಗದ ಕಾರಣ ಹೊಟ್ಟೆಯ ಅಗ್ನಿ ಸಲ್ಪ ಸಲ್ಲನೆ ಹೊರ ಬರುತ್ತಿದೆ

  3. ನಾಯಿ ಬೊಗಳಿದರೆ ದೇವಲೋಕ ಹಾಳಾಗುವುದೇ ಬೊಗಳುವವರು ಬೊಗಳುತ್ತನೆ ಇರಲಿ ಉರಿದುಕೊಳ್ಳುವವರು ಉರ್ಕಂತನೇ ಇರಲಿ.

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...