Homeಮುಖಪುಟಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

- Advertisement -
- Advertisement -

ಭಾರತೀಯ ಸಾಮಾಜಿಕ ಜಾಲತಾಣವೆಂದೂ ‘ರಾಷ್ಟ್ರೀಯವಾದಿ ಟ್ವಿಟರ್’ ಎಂದೇ ಬ್ರಾಂಡ್ ಆಗಿರುವ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದೆ. ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ.

“ಇದು ಎಲ್ಲರನ್ನೂ ಒಳಗೊಳ್ಳುವ ವೇದಿಕೆ. ಆ ನಿಟ್ಟಿನಲ್ಲಿ ಸಂಸ್ಥೆಯನ್ನು ಕಟ್ಟಲು ಮುಂದಾಗಿದ್ದೇವೆ” ಎಂದು ಕೂ ಸಂಸ್ಥೆಯ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಹೇಳಿರುವುದಾಗಿ ಇತ್ತೀಚೆಗೆ ಫೈನಾನ್ಷಿಯಲ್ ಟೈಮ್ಸ್‌ ವರದಿ ಮಾಡಿದೆ. ಕೂನಲ್ಲಿನ ಕಮ್ಯುನಿಟಿ ತಂಡಗಳು ಎಲ್ಲಾ ರಾಜಕೀಯ ವರ್ಗವನ್ನು ವಿಸ್ತರಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ವರದಿ ಬೆಳಕು ಚೆಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋದರು.

ಮಿಚಿಗನ್ ವಿಶ್ವವಿದ್ಯಾನಿಲಯದ ಶಿಕ್ಷಣ ತಜ್ಞರು ಇದನ್ನು “ರಾಷ್ಟ್ರೀಯವಾದಿ ಟ್ವಿಟರ್ ರೂಪಿಸುವ  ಪ್ರಯತ್ನ” ಎಂದು ಕರೆದಿದ್ದರು. “ಟ್ವಿಟ್ಟರ್‌ನಿಂದ ದೊಡ್ಡ ಮಟ್ಟದ ಭಾರತೀಯ ವಲಸೆ ಇಲ್ಲವಾಗಿದ್ದರೆ ನಮ್ಮಲ್ಲಿ ಹೆಚ್ಚಿನವರು ಕೂ ಬಗ್ಗೆ ಕೇಳುತ್ತಲೇ ಇರಲಿಲ್ಲ” ಎಂದು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ನಡೆಸುತ್ತಿರುವ ಸೆಂಟರ್ ಫಾರ್ ಸೆಕ್ಯುರಿಟಿ, ಸ್ಟ್ರಾಟಜಿ ಮತ್ತು ಟೆಕ್ನಾಲಜಿಯ ಉಪ ನಿರ್ದೇಶಕಿ ತ್ರಿಶಾ ರೇ ಹೇಳಿದ್ದರು.

“ಭಾರತದ ಸೆನ್ಸಾರ್‌ಶಿಪ್ ಕಾನೂನುಗಳನ್ನು ಅಧಿಕಾರದಲ್ಲಿರುವ ಪಕ್ಷಗಳು ದುರುಪಯೋಗಪಡಿಸಿಕೊಳ್ಳುತ್ತಿವೆ” ಮತ್ತು ಪ್ರತಿಸ್ಪರ್ಧಿ ಅಮೆರಿಕನ್ ಟೆಕ್ ದೈತ್ಯರು ದಿಕ್ಸೂಚಿ ಹಾಕಲು ಹೆಣಗಾಡುತ್ತಿದ್ದಾರೆ ಎಂಬ ಟೀಕೆಗಳ ನಡುವೆ “ಜನರು ಈ ನೆಲದ ಕಾನೂನಿಗೆ ಬದ್ಧವಾಗಿ ತಮಗೆ ಬೇಕಾದುದನ್ನು ಇಲ್ಲಿ ಪೋಸ್ಟ್ ಮಾಡಬಹುದು” ಎಂದು ಕೂ ಸಂಸ್ಥೆಯ ರಾಧಾಕೃಷ್ಣ ಹೇಳಿದ್ದಾರೆ.

ಸಾರ್ವಜನಿಕ ನಡವಳಿಕೆಯನ್ನು ನಿಯಂತ್ರಿಸುವ ಅಘೋಷಿತ ನಿಯಮಗಳನ್ನು ಆನ್‌ಲೈನ್‌ನಲ್ಲಿ ಅಭ್ಯಾಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯವಾದಿ ಟ್ಯಾಗ್‌ನಿಂದ ಹೊರಗಿದ್ದು ಎಲ್ಲರನ್ನೂ ಆಕರ್ಷಿಸುವ ಮಾತುಗಳನ್ನು ಅವರು ಆಡುತ್ತಿರುವುದನ್ನು ಫೈನಾನ್ಷಿಯಲ್ ಟೈಮ್ಸ್‌ ವರದಿ ಬಿಚ್ಚಿಟ್ಟಿದೆ.

ಇದನ್ನೂ ಓದಿರಿ: ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

“ಅವರು ಕೂ ಎಂದರು, ಇವರು ಟೂ ಎಂದರು” ಎಂಬ ಶೀರ್ಷಿಕೆಯಲ್ಲಿ ಫೈನಾನ್ಷಿಯಲ್ ಟೈಮ್ಸ್‌ನ ವರದಿಯನ್ನು ಹಂಚಿಕೊಂಡಿರುವ ಕನ್ನಡದ ಚಿಂತಕ ರಾಜಾರಾಮ್‌ ತಲ್ಲೂರು ಅವರು, “ಒಂದೂವರೆ ವರ್ಷದ ಹಿಂದೆ ನಟಿ ಕಂಗನಾ ರಾಣಾವತ್ ಅವರ ಟ್ವಿಟ್ಟರ್ ಖಾತೆ ಅಮಾನತಾದ ಬೆನ್ನಿಗೇ ಅವರ ಬೆಂಬಲಿಗರು, ಅವರ ಯೋಚನೆಗಳ ಬೆಂಬಲಿಗರೆಲ್ಲ ನಮಗೆ ವಿದೇಶೀ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂಗಳೇ ಬೇಡ ‘ದೇಸೀ ಟ್ವಿಟ್ಟರ್’ ನಾವೇ ಹುಟ್ಟಿಸಿ, ಬೆಳೆಸಿಕೊಳ್ತೇವೆ ಎಂದು ದೇಶಭಕ್ತಿ ಮೆರೆದದ್ದು ನೆನಪಿದೆಯೇ? ಈಗ ಈ ಶೋಕಿ ಭಕ್ತಗಢಣದ ಹಿಂದೆ ಹೋಗಿ, ವ್ಯಾವಹಾರಿಕವಾಗಿ ಸೊರಗಿಹೋಗಿರುವ ಕೂ ಸಂಸ್ಥೆ, ಈಗ ತಮ್ಮ “ನ್ಯಾಷನಲಿಸ್ಟ್ ಟ್ವಿಟ್ಟರ್” ಹಣೆಪಟ್ಟಿ ಕಳಚಿಕೊಳ್ಳಲು ಮುಂದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎರಡು ರೂಪಾಯಿಯ ಚೀಪ್ ವಿಷ ಕಾರುವ ಜನ ಅತ್ತ ಸಾಯಲೂ ಬಿಡದೇ ಇತ್ತ ಬದುಕಲೂ ಬಿಡದೇ ಇರುವುದು ಅರ್ಥ ಆಗಿರುವ ಹಿನ್ನೆಲೆಯಲ್ಲಿ, ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಹುಡುಕಿಕೊಳ್ಳಲು ಕಾನೂನು ಬದ್ಧವಾಗಿರುವ ಮತ್ತು ಎಲ್ಲರನ್ನು ಒಳಗೊಳ್ಳುವ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂ ಆಗಿ ತಮ್ಮನ್ನು ಮರುಸ್ಥಾಪಿಸಿಕೊಳ್ಳಲು ಕೂ ಮುಂದಾಗಿದೆ. ಇಂತಹ ಬ್ರ್ಯಾಂಡಿನ ಲಾಭದ ರಾಜಕೀಯದ ಹಿಂದೆ ಹೋದರೆ ಕಡೆಗೆ ಇದೇ ಗತಿ. “ಹೊಳೆ ದಾಟಿದ ಮೇಲೆ….” ಎಂಬ ಗಾದೆ ಅವರಿಗೆ ಬೇಗ ಅರ್ಥವಾಗಿದೆ. ಉಳಿದವರಿಗೂ, ಹಾಗೆ ಅರ್ಥವಾದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ. ವಿಷ, ದ್ವೇಷ ಮತ್ತು ಅಸಹನೆಗಳ ಬುತ್ತಿ ಶಾಶ್ವತ ಅಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...