Homeಮುಖಪುಟಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

- Advertisement -
- Advertisement -

ಭಾರತೀಯ ಸಾಮಾಜಿಕ ಜಾಲತಾಣವೆಂದೂ ‘ರಾಷ್ಟ್ರೀಯವಾದಿ ಟ್ವಿಟರ್’ ಎಂದೇ ಬ್ರಾಂಡ್ ಆಗಿರುವ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದೆ. ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ.

“ಇದು ಎಲ್ಲರನ್ನೂ ಒಳಗೊಳ್ಳುವ ವೇದಿಕೆ. ಆ ನಿಟ್ಟಿನಲ್ಲಿ ಸಂಸ್ಥೆಯನ್ನು ಕಟ್ಟಲು ಮುಂದಾಗಿದ್ದೇವೆ” ಎಂದು ಕೂ ಸಂಸ್ಥೆಯ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಹೇಳಿರುವುದಾಗಿ ಇತ್ತೀಚೆಗೆ ಫೈನಾನ್ಷಿಯಲ್ ಟೈಮ್ಸ್‌ ವರದಿ ಮಾಡಿದೆ. ಕೂನಲ್ಲಿನ ಕಮ್ಯುನಿಟಿ ತಂಡಗಳು ಎಲ್ಲಾ ರಾಜಕೀಯ ವರ್ಗವನ್ನು ವಿಸ್ತರಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ವರದಿ ಬೆಳಕು ಚೆಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋದರು.

ಮಿಚಿಗನ್ ವಿಶ್ವವಿದ್ಯಾನಿಲಯದ ಶಿಕ್ಷಣ ತಜ್ಞರು ಇದನ್ನು “ರಾಷ್ಟ್ರೀಯವಾದಿ ಟ್ವಿಟರ್ ರೂಪಿಸುವ  ಪ್ರಯತ್ನ” ಎಂದು ಕರೆದಿದ್ದರು. “ಟ್ವಿಟ್ಟರ್‌ನಿಂದ ದೊಡ್ಡ ಮಟ್ಟದ ಭಾರತೀಯ ವಲಸೆ ಇಲ್ಲವಾಗಿದ್ದರೆ ನಮ್ಮಲ್ಲಿ ಹೆಚ್ಚಿನವರು ಕೂ ಬಗ್ಗೆ ಕೇಳುತ್ತಲೇ ಇರಲಿಲ್ಲ” ಎಂದು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ನಡೆಸುತ್ತಿರುವ ಸೆಂಟರ್ ಫಾರ್ ಸೆಕ್ಯುರಿಟಿ, ಸ್ಟ್ರಾಟಜಿ ಮತ್ತು ಟೆಕ್ನಾಲಜಿಯ ಉಪ ನಿರ್ದೇಶಕಿ ತ್ರಿಶಾ ರೇ ಹೇಳಿದ್ದರು.

“ಭಾರತದ ಸೆನ್ಸಾರ್‌ಶಿಪ್ ಕಾನೂನುಗಳನ್ನು ಅಧಿಕಾರದಲ್ಲಿರುವ ಪಕ್ಷಗಳು ದುರುಪಯೋಗಪಡಿಸಿಕೊಳ್ಳುತ್ತಿವೆ” ಮತ್ತು ಪ್ರತಿಸ್ಪರ್ಧಿ ಅಮೆರಿಕನ್ ಟೆಕ್ ದೈತ್ಯರು ದಿಕ್ಸೂಚಿ ಹಾಕಲು ಹೆಣಗಾಡುತ್ತಿದ್ದಾರೆ ಎಂಬ ಟೀಕೆಗಳ ನಡುವೆ “ಜನರು ಈ ನೆಲದ ಕಾನೂನಿಗೆ ಬದ್ಧವಾಗಿ ತಮಗೆ ಬೇಕಾದುದನ್ನು ಇಲ್ಲಿ ಪೋಸ್ಟ್ ಮಾಡಬಹುದು” ಎಂದು ಕೂ ಸಂಸ್ಥೆಯ ರಾಧಾಕೃಷ್ಣ ಹೇಳಿದ್ದಾರೆ.

ಸಾರ್ವಜನಿಕ ನಡವಳಿಕೆಯನ್ನು ನಿಯಂತ್ರಿಸುವ ಅಘೋಷಿತ ನಿಯಮಗಳನ್ನು ಆನ್‌ಲೈನ್‌ನಲ್ಲಿ ಅಭ್ಯಾಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯವಾದಿ ಟ್ಯಾಗ್‌ನಿಂದ ಹೊರಗಿದ್ದು ಎಲ್ಲರನ್ನೂ ಆಕರ್ಷಿಸುವ ಮಾತುಗಳನ್ನು ಅವರು ಆಡುತ್ತಿರುವುದನ್ನು ಫೈನಾನ್ಷಿಯಲ್ ಟೈಮ್ಸ್‌ ವರದಿ ಬಿಚ್ಚಿಟ್ಟಿದೆ.

ಇದನ್ನೂ ಓದಿರಿ: ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

“ಅವರು ಕೂ ಎಂದರು, ಇವರು ಟೂ ಎಂದರು” ಎಂಬ ಶೀರ್ಷಿಕೆಯಲ್ಲಿ ಫೈನಾನ್ಷಿಯಲ್ ಟೈಮ್ಸ್‌ನ ವರದಿಯನ್ನು ಹಂಚಿಕೊಂಡಿರುವ ಕನ್ನಡದ ಚಿಂತಕ ರಾಜಾರಾಮ್‌ ತಲ್ಲೂರು ಅವರು, “ಒಂದೂವರೆ ವರ್ಷದ ಹಿಂದೆ ನಟಿ ಕಂಗನಾ ರಾಣಾವತ್ ಅವರ ಟ್ವಿಟ್ಟರ್ ಖಾತೆ ಅಮಾನತಾದ ಬೆನ್ನಿಗೇ ಅವರ ಬೆಂಬಲಿಗರು, ಅವರ ಯೋಚನೆಗಳ ಬೆಂಬಲಿಗರೆಲ್ಲ ನಮಗೆ ವಿದೇಶೀ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂಗಳೇ ಬೇಡ ‘ದೇಸೀ ಟ್ವಿಟ್ಟರ್’ ನಾವೇ ಹುಟ್ಟಿಸಿ, ಬೆಳೆಸಿಕೊಳ್ತೇವೆ ಎಂದು ದೇಶಭಕ್ತಿ ಮೆರೆದದ್ದು ನೆನಪಿದೆಯೇ? ಈಗ ಈ ಶೋಕಿ ಭಕ್ತಗಢಣದ ಹಿಂದೆ ಹೋಗಿ, ವ್ಯಾವಹಾರಿಕವಾಗಿ ಸೊರಗಿಹೋಗಿರುವ ಕೂ ಸಂಸ್ಥೆ, ಈಗ ತಮ್ಮ “ನ್ಯಾಷನಲಿಸ್ಟ್ ಟ್ವಿಟ್ಟರ್” ಹಣೆಪಟ್ಟಿ ಕಳಚಿಕೊಳ್ಳಲು ಮುಂದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎರಡು ರೂಪಾಯಿಯ ಚೀಪ್ ವಿಷ ಕಾರುವ ಜನ ಅತ್ತ ಸಾಯಲೂ ಬಿಡದೇ ಇತ್ತ ಬದುಕಲೂ ಬಿಡದೇ ಇರುವುದು ಅರ್ಥ ಆಗಿರುವ ಹಿನ್ನೆಲೆಯಲ್ಲಿ, ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಹುಡುಕಿಕೊಳ್ಳಲು ಕಾನೂನು ಬದ್ಧವಾಗಿರುವ ಮತ್ತು ಎಲ್ಲರನ್ನು ಒಳಗೊಳ್ಳುವ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂ ಆಗಿ ತಮ್ಮನ್ನು ಮರುಸ್ಥಾಪಿಸಿಕೊಳ್ಳಲು ಕೂ ಮುಂದಾಗಿದೆ. ಇಂತಹ ಬ್ರ್ಯಾಂಡಿನ ಲಾಭದ ರಾಜಕೀಯದ ಹಿಂದೆ ಹೋದರೆ ಕಡೆಗೆ ಇದೇ ಗತಿ. “ಹೊಳೆ ದಾಟಿದ ಮೇಲೆ….” ಎಂಬ ಗಾದೆ ಅವರಿಗೆ ಬೇಗ ಅರ್ಥವಾಗಿದೆ. ಉಳಿದವರಿಗೂ, ಹಾಗೆ ಅರ್ಥವಾದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ. ವಿಷ, ದ್ವೇಷ ಮತ್ತು ಅಸಹನೆಗಳ ಬುತ್ತಿ ಶಾಶ್ವತ ಅಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...