Homeಮುಖಪುಟಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

- Advertisement -
- Advertisement -

ಭಾರತೀಯ ಸಾಮಾಜಿಕ ಜಾಲತಾಣವೆಂದೂ ‘ರಾಷ್ಟ್ರೀಯವಾದಿ ಟ್ವಿಟರ್’ ಎಂದೇ ಬ್ರಾಂಡ್ ಆಗಿರುವ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದೆ. ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ.

“ಇದು ಎಲ್ಲರನ್ನೂ ಒಳಗೊಳ್ಳುವ ವೇದಿಕೆ. ಆ ನಿಟ್ಟಿನಲ್ಲಿ ಸಂಸ್ಥೆಯನ್ನು ಕಟ್ಟಲು ಮುಂದಾಗಿದ್ದೇವೆ” ಎಂದು ಕೂ ಸಂಸ್ಥೆಯ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಹೇಳಿರುವುದಾಗಿ ಇತ್ತೀಚೆಗೆ ಫೈನಾನ್ಷಿಯಲ್ ಟೈಮ್ಸ್‌ ವರದಿ ಮಾಡಿದೆ. ಕೂನಲ್ಲಿನ ಕಮ್ಯುನಿಟಿ ತಂಡಗಳು ಎಲ್ಲಾ ರಾಜಕೀಯ ವರ್ಗವನ್ನು ವಿಸ್ತರಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ವರದಿ ಬೆಳಕು ಚೆಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋದರು.

ಮಿಚಿಗನ್ ವಿಶ್ವವಿದ್ಯಾನಿಲಯದ ಶಿಕ್ಷಣ ತಜ್ಞರು ಇದನ್ನು “ರಾಷ್ಟ್ರೀಯವಾದಿ ಟ್ವಿಟರ್ ರೂಪಿಸುವ  ಪ್ರಯತ್ನ” ಎಂದು ಕರೆದಿದ್ದರು. “ಟ್ವಿಟ್ಟರ್‌ನಿಂದ ದೊಡ್ಡ ಮಟ್ಟದ ಭಾರತೀಯ ವಲಸೆ ಇಲ್ಲವಾಗಿದ್ದರೆ ನಮ್ಮಲ್ಲಿ ಹೆಚ್ಚಿನವರು ಕೂ ಬಗ್ಗೆ ಕೇಳುತ್ತಲೇ ಇರಲಿಲ್ಲ” ಎಂದು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ನಡೆಸುತ್ತಿರುವ ಸೆಂಟರ್ ಫಾರ್ ಸೆಕ್ಯುರಿಟಿ, ಸ್ಟ್ರಾಟಜಿ ಮತ್ತು ಟೆಕ್ನಾಲಜಿಯ ಉಪ ನಿರ್ದೇಶಕಿ ತ್ರಿಶಾ ರೇ ಹೇಳಿದ್ದರು.

“ಭಾರತದ ಸೆನ್ಸಾರ್‌ಶಿಪ್ ಕಾನೂನುಗಳನ್ನು ಅಧಿಕಾರದಲ್ಲಿರುವ ಪಕ್ಷಗಳು ದುರುಪಯೋಗಪಡಿಸಿಕೊಳ್ಳುತ್ತಿವೆ” ಮತ್ತು ಪ್ರತಿಸ್ಪರ್ಧಿ ಅಮೆರಿಕನ್ ಟೆಕ್ ದೈತ್ಯರು ದಿಕ್ಸೂಚಿ ಹಾಕಲು ಹೆಣಗಾಡುತ್ತಿದ್ದಾರೆ ಎಂಬ ಟೀಕೆಗಳ ನಡುವೆ “ಜನರು ಈ ನೆಲದ ಕಾನೂನಿಗೆ ಬದ್ಧವಾಗಿ ತಮಗೆ ಬೇಕಾದುದನ್ನು ಇಲ್ಲಿ ಪೋಸ್ಟ್ ಮಾಡಬಹುದು” ಎಂದು ಕೂ ಸಂಸ್ಥೆಯ ರಾಧಾಕೃಷ್ಣ ಹೇಳಿದ್ದಾರೆ.

ಸಾರ್ವಜನಿಕ ನಡವಳಿಕೆಯನ್ನು ನಿಯಂತ್ರಿಸುವ ಅಘೋಷಿತ ನಿಯಮಗಳನ್ನು ಆನ್‌ಲೈನ್‌ನಲ್ಲಿ ಅಭ್ಯಾಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯವಾದಿ ಟ್ಯಾಗ್‌ನಿಂದ ಹೊರಗಿದ್ದು ಎಲ್ಲರನ್ನೂ ಆಕರ್ಷಿಸುವ ಮಾತುಗಳನ್ನು ಅವರು ಆಡುತ್ತಿರುವುದನ್ನು ಫೈನಾನ್ಷಿಯಲ್ ಟೈಮ್ಸ್‌ ವರದಿ ಬಿಚ್ಚಿಟ್ಟಿದೆ.

ಇದನ್ನೂ ಓದಿರಿ: ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

“ಅವರು ಕೂ ಎಂದರು, ಇವರು ಟೂ ಎಂದರು” ಎಂಬ ಶೀರ್ಷಿಕೆಯಲ್ಲಿ ಫೈನಾನ್ಷಿಯಲ್ ಟೈಮ್ಸ್‌ನ ವರದಿಯನ್ನು ಹಂಚಿಕೊಂಡಿರುವ ಕನ್ನಡದ ಚಿಂತಕ ರಾಜಾರಾಮ್‌ ತಲ್ಲೂರು ಅವರು, “ಒಂದೂವರೆ ವರ್ಷದ ಹಿಂದೆ ನಟಿ ಕಂಗನಾ ರಾಣಾವತ್ ಅವರ ಟ್ವಿಟ್ಟರ್ ಖಾತೆ ಅಮಾನತಾದ ಬೆನ್ನಿಗೇ ಅವರ ಬೆಂಬಲಿಗರು, ಅವರ ಯೋಚನೆಗಳ ಬೆಂಬಲಿಗರೆಲ್ಲ ನಮಗೆ ವಿದೇಶೀ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂಗಳೇ ಬೇಡ ‘ದೇಸೀ ಟ್ವಿಟ್ಟರ್’ ನಾವೇ ಹುಟ್ಟಿಸಿ, ಬೆಳೆಸಿಕೊಳ್ತೇವೆ ಎಂದು ದೇಶಭಕ್ತಿ ಮೆರೆದದ್ದು ನೆನಪಿದೆಯೇ? ಈಗ ಈ ಶೋಕಿ ಭಕ್ತಗಢಣದ ಹಿಂದೆ ಹೋಗಿ, ವ್ಯಾವಹಾರಿಕವಾಗಿ ಸೊರಗಿಹೋಗಿರುವ ಕೂ ಸಂಸ್ಥೆ, ಈಗ ತಮ್ಮ “ನ್ಯಾಷನಲಿಸ್ಟ್ ಟ್ವಿಟ್ಟರ್” ಹಣೆಪಟ್ಟಿ ಕಳಚಿಕೊಳ್ಳಲು ಮುಂದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎರಡು ರೂಪಾಯಿಯ ಚೀಪ್ ವಿಷ ಕಾರುವ ಜನ ಅತ್ತ ಸಾಯಲೂ ಬಿಡದೇ ಇತ್ತ ಬದುಕಲೂ ಬಿಡದೇ ಇರುವುದು ಅರ್ಥ ಆಗಿರುವ ಹಿನ್ನೆಲೆಯಲ್ಲಿ, ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಹುಡುಕಿಕೊಳ್ಳಲು ಕಾನೂನು ಬದ್ಧವಾಗಿರುವ ಮತ್ತು ಎಲ್ಲರನ್ನು ಒಳಗೊಳ್ಳುವ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂ ಆಗಿ ತಮ್ಮನ್ನು ಮರುಸ್ಥಾಪಿಸಿಕೊಳ್ಳಲು ಕೂ ಮುಂದಾಗಿದೆ. ಇಂತಹ ಬ್ರ್ಯಾಂಡಿನ ಲಾಭದ ರಾಜಕೀಯದ ಹಿಂದೆ ಹೋದರೆ ಕಡೆಗೆ ಇದೇ ಗತಿ. “ಹೊಳೆ ದಾಟಿದ ಮೇಲೆ….” ಎಂಬ ಗಾದೆ ಅವರಿಗೆ ಬೇಗ ಅರ್ಥವಾಗಿದೆ. ಉಳಿದವರಿಗೂ, ಹಾಗೆ ಅರ್ಥವಾದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ. ವಿಷ, ದ್ವೇಷ ಮತ್ತು ಅಸಹನೆಗಳ ಬುತ್ತಿ ಶಾಶ್ವತ ಅಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...