Homeಮುಖಪುಟಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

- Advertisement -
- Advertisement -

ಭಾರತೀಯ ಸಾಮಾಜಿಕ ಜಾಲತಾಣವೆಂದೂ ‘ರಾಷ್ಟ್ರೀಯವಾದಿ ಟ್ವಿಟರ್’ ಎಂದೇ ಬ್ರಾಂಡ್ ಆಗಿರುವ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದೆ. ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ.

“ಇದು ಎಲ್ಲರನ್ನೂ ಒಳಗೊಳ್ಳುವ ವೇದಿಕೆ. ಆ ನಿಟ್ಟಿನಲ್ಲಿ ಸಂಸ್ಥೆಯನ್ನು ಕಟ್ಟಲು ಮುಂದಾಗಿದ್ದೇವೆ” ಎಂದು ಕೂ ಸಂಸ್ಥೆಯ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಹೇಳಿರುವುದಾಗಿ ಇತ್ತೀಚೆಗೆ ಫೈನಾನ್ಷಿಯಲ್ ಟೈಮ್ಸ್‌ ವರದಿ ಮಾಡಿದೆ. ಕೂನಲ್ಲಿನ ಕಮ್ಯುನಿಟಿ ತಂಡಗಳು ಎಲ್ಲಾ ರಾಜಕೀಯ ವರ್ಗವನ್ನು ವಿಸ್ತರಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ವರದಿ ಬೆಳಕು ಚೆಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋದರು.

ಮಿಚಿಗನ್ ವಿಶ್ವವಿದ್ಯಾನಿಲಯದ ಶಿಕ್ಷಣ ತಜ್ಞರು ಇದನ್ನು “ರಾಷ್ಟ್ರೀಯವಾದಿ ಟ್ವಿಟರ್ ರೂಪಿಸುವ  ಪ್ರಯತ್ನ” ಎಂದು ಕರೆದಿದ್ದರು. “ಟ್ವಿಟ್ಟರ್‌ನಿಂದ ದೊಡ್ಡ ಮಟ್ಟದ ಭಾರತೀಯ ವಲಸೆ ಇಲ್ಲವಾಗಿದ್ದರೆ ನಮ್ಮಲ್ಲಿ ಹೆಚ್ಚಿನವರು ಕೂ ಬಗ್ಗೆ ಕೇಳುತ್ತಲೇ ಇರಲಿಲ್ಲ” ಎಂದು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ನಡೆಸುತ್ತಿರುವ ಸೆಂಟರ್ ಫಾರ್ ಸೆಕ್ಯುರಿಟಿ, ಸ್ಟ್ರಾಟಜಿ ಮತ್ತು ಟೆಕ್ನಾಲಜಿಯ ಉಪ ನಿರ್ದೇಶಕಿ ತ್ರಿಶಾ ರೇ ಹೇಳಿದ್ದರು.

“ಭಾರತದ ಸೆನ್ಸಾರ್‌ಶಿಪ್ ಕಾನೂನುಗಳನ್ನು ಅಧಿಕಾರದಲ್ಲಿರುವ ಪಕ್ಷಗಳು ದುರುಪಯೋಗಪಡಿಸಿಕೊಳ್ಳುತ್ತಿವೆ” ಮತ್ತು ಪ್ರತಿಸ್ಪರ್ಧಿ ಅಮೆರಿಕನ್ ಟೆಕ್ ದೈತ್ಯರು ದಿಕ್ಸೂಚಿ ಹಾಕಲು ಹೆಣಗಾಡುತ್ತಿದ್ದಾರೆ ಎಂಬ ಟೀಕೆಗಳ ನಡುವೆ “ಜನರು ಈ ನೆಲದ ಕಾನೂನಿಗೆ ಬದ್ಧವಾಗಿ ತಮಗೆ ಬೇಕಾದುದನ್ನು ಇಲ್ಲಿ ಪೋಸ್ಟ್ ಮಾಡಬಹುದು” ಎಂದು ಕೂ ಸಂಸ್ಥೆಯ ರಾಧಾಕೃಷ್ಣ ಹೇಳಿದ್ದಾರೆ.

ಸಾರ್ವಜನಿಕ ನಡವಳಿಕೆಯನ್ನು ನಿಯಂತ್ರಿಸುವ ಅಘೋಷಿತ ನಿಯಮಗಳನ್ನು ಆನ್‌ಲೈನ್‌ನಲ್ಲಿ ಅಭ್ಯಾಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯವಾದಿ ಟ್ಯಾಗ್‌ನಿಂದ ಹೊರಗಿದ್ದು ಎಲ್ಲರನ್ನೂ ಆಕರ್ಷಿಸುವ ಮಾತುಗಳನ್ನು ಅವರು ಆಡುತ್ತಿರುವುದನ್ನು ಫೈನಾನ್ಷಿಯಲ್ ಟೈಮ್ಸ್‌ ವರದಿ ಬಿಚ್ಚಿಟ್ಟಿದೆ.

ಇದನ್ನೂ ಓದಿರಿ: ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

“ಅವರು ಕೂ ಎಂದರು, ಇವರು ಟೂ ಎಂದರು” ಎಂಬ ಶೀರ್ಷಿಕೆಯಲ್ಲಿ ಫೈನಾನ್ಷಿಯಲ್ ಟೈಮ್ಸ್‌ನ ವರದಿಯನ್ನು ಹಂಚಿಕೊಂಡಿರುವ ಕನ್ನಡದ ಚಿಂತಕ ರಾಜಾರಾಮ್‌ ತಲ್ಲೂರು ಅವರು, “ಒಂದೂವರೆ ವರ್ಷದ ಹಿಂದೆ ನಟಿ ಕಂಗನಾ ರಾಣಾವತ್ ಅವರ ಟ್ವಿಟ್ಟರ್ ಖಾತೆ ಅಮಾನತಾದ ಬೆನ್ನಿಗೇ ಅವರ ಬೆಂಬಲಿಗರು, ಅವರ ಯೋಚನೆಗಳ ಬೆಂಬಲಿಗರೆಲ್ಲ ನಮಗೆ ವಿದೇಶೀ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂಗಳೇ ಬೇಡ ‘ದೇಸೀ ಟ್ವಿಟ್ಟರ್’ ನಾವೇ ಹುಟ್ಟಿಸಿ, ಬೆಳೆಸಿಕೊಳ್ತೇವೆ ಎಂದು ದೇಶಭಕ್ತಿ ಮೆರೆದದ್ದು ನೆನಪಿದೆಯೇ? ಈಗ ಈ ಶೋಕಿ ಭಕ್ತಗಢಣದ ಹಿಂದೆ ಹೋಗಿ, ವ್ಯಾವಹಾರಿಕವಾಗಿ ಸೊರಗಿಹೋಗಿರುವ ಕೂ ಸಂಸ್ಥೆ, ಈಗ ತಮ್ಮ “ನ್ಯಾಷನಲಿಸ್ಟ್ ಟ್ವಿಟ್ಟರ್” ಹಣೆಪಟ್ಟಿ ಕಳಚಿಕೊಳ್ಳಲು ಮುಂದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎರಡು ರೂಪಾಯಿಯ ಚೀಪ್ ವಿಷ ಕಾರುವ ಜನ ಅತ್ತ ಸಾಯಲೂ ಬಿಡದೇ ಇತ್ತ ಬದುಕಲೂ ಬಿಡದೇ ಇರುವುದು ಅರ್ಥ ಆಗಿರುವ ಹಿನ್ನೆಲೆಯಲ್ಲಿ, ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಹುಡುಕಿಕೊಳ್ಳಲು ಕಾನೂನು ಬದ್ಧವಾಗಿರುವ ಮತ್ತು ಎಲ್ಲರನ್ನು ಒಳಗೊಳ್ಳುವ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂ ಆಗಿ ತಮ್ಮನ್ನು ಮರುಸ್ಥಾಪಿಸಿಕೊಳ್ಳಲು ಕೂ ಮುಂದಾಗಿದೆ. ಇಂತಹ ಬ್ರ್ಯಾಂಡಿನ ಲಾಭದ ರಾಜಕೀಯದ ಹಿಂದೆ ಹೋದರೆ ಕಡೆಗೆ ಇದೇ ಗತಿ. “ಹೊಳೆ ದಾಟಿದ ಮೇಲೆ….” ಎಂಬ ಗಾದೆ ಅವರಿಗೆ ಬೇಗ ಅರ್ಥವಾಗಿದೆ. ಉಳಿದವರಿಗೂ, ಹಾಗೆ ಅರ್ಥವಾದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ. ವಿಷ, ದ್ವೇಷ ಮತ್ತು ಅಸಹನೆಗಳ ಬುತ್ತಿ ಶಾಶ್ವತ ಅಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...