Homeಮುಖಪುಟಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

- Advertisement -
- Advertisement -

ಭಾರತೀಯ ಸಾಮಾಜಿಕ ಜಾಲತಾಣವೆಂದೂ ‘ರಾಷ್ಟ್ರೀಯವಾದಿ ಟ್ವಿಟರ್’ ಎಂದೇ ಬ್ರಾಂಡ್ ಆಗಿರುವ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದೆ. ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ.

“ಇದು ಎಲ್ಲರನ್ನೂ ಒಳಗೊಳ್ಳುವ ವೇದಿಕೆ. ಆ ನಿಟ್ಟಿನಲ್ಲಿ ಸಂಸ್ಥೆಯನ್ನು ಕಟ್ಟಲು ಮುಂದಾಗಿದ್ದೇವೆ” ಎಂದು ಕೂ ಸಂಸ್ಥೆಯ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಹೇಳಿರುವುದಾಗಿ ಇತ್ತೀಚೆಗೆ ಫೈನಾನ್ಷಿಯಲ್ ಟೈಮ್ಸ್‌ ವರದಿ ಮಾಡಿದೆ. ಕೂನಲ್ಲಿನ ಕಮ್ಯುನಿಟಿ ತಂಡಗಳು ಎಲ್ಲಾ ರಾಜಕೀಯ ವರ್ಗವನ್ನು ವಿಸ್ತರಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ವರದಿ ಬೆಳಕು ಚೆಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋದರು.

ಮಿಚಿಗನ್ ವಿಶ್ವವಿದ್ಯಾನಿಲಯದ ಶಿಕ್ಷಣ ತಜ್ಞರು ಇದನ್ನು “ರಾಷ್ಟ್ರೀಯವಾದಿ ಟ್ವಿಟರ್ ರೂಪಿಸುವ  ಪ್ರಯತ್ನ” ಎಂದು ಕರೆದಿದ್ದರು. “ಟ್ವಿಟ್ಟರ್‌ನಿಂದ ದೊಡ್ಡ ಮಟ್ಟದ ಭಾರತೀಯ ವಲಸೆ ಇಲ್ಲವಾಗಿದ್ದರೆ ನಮ್ಮಲ್ಲಿ ಹೆಚ್ಚಿನವರು ಕೂ ಬಗ್ಗೆ ಕೇಳುತ್ತಲೇ ಇರಲಿಲ್ಲ” ಎಂದು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ನಡೆಸುತ್ತಿರುವ ಸೆಂಟರ್ ಫಾರ್ ಸೆಕ್ಯುರಿಟಿ, ಸ್ಟ್ರಾಟಜಿ ಮತ್ತು ಟೆಕ್ನಾಲಜಿಯ ಉಪ ನಿರ್ದೇಶಕಿ ತ್ರಿಶಾ ರೇ ಹೇಳಿದ್ದರು.

“ಭಾರತದ ಸೆನ್ಸಾರ್‌ಶಿಪ್ ಕಾನೂನುಗಳನ್ನು ಅಧಿಕಾರದಲ್ಲಿರುವ ಪಕ್ಷಗಳು ದುರುಪಯೋಗಪಡಿಸಿಕೊಳ್ಳುತ್ತಿವೆ” ಮತ್ತು ಪ್ರತಿಸ್ಪರ್ಧಿ ಅಮೆರಿಕನ್ ಟೆಕ್ ದೈತ್ಯರು ದಿಕ್ಸೂಚಿ ಹಾಕಲು ಹೆಣಗಾಡುತ್ತಿದ್ದಾರೆ ಎಂಬ ಟೀಕೆಗಳ ನಡುವೆ “ಜನರು ಈ ನೆಲದ ಕಾನೂನಿಗೆ ಬದ್ಧವಾಗಿ ತಮಗೆ ಬೇಕಾದುದನ್ನು ಇಲ್ಲಿ ಪೋಸ್ಟ್ ಮಾಡಬಹುದು” ಎಂದು ಕೂ ಸಂಸ್ಥೆಯ ರಾಧಾಕೃಷ್ಣ ಹೇಳಿದ್ದಾರೆ.

ಸಾರ್ವಜನಿಕ ನಡವಳಿಕೆಯನ್ನು ನಿಯಂತ್ರಿಸುವ ಅಘೋಷಿತ ನಿಯಮಗಳನ್ನು ಆನ್‌ಲೈನ್‌ನಲ್ಲಿ ಅಭ್ಯಾಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯವಾದಿ ಟ್ಯಾಗ್‌ನಿಂದ ಹೊರಗಿದ್ದು ಎಲ್ಲರನ್ನೂ ಆಕರ್ಷಿಸುವ ಮಾತುಗಳನ್ನು ಅವರು ಆಡುತ್ತಿರುವುದನ್ನು ಫೈನಾನ್ಷಿಯಲ್ ಟೈಮ್ಸ್‌ ವರದಿ ಬಿಚ್ಚಿಟ್ಟಿದೆ.

ಇದನ್ನೂ ಓದಿರಿ: ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

“ಅವರು ಕೂ ಎಂದರು, ಇವರು ಟೂ ಎಂದರು” ಎಂಬ ಶೀರ್ಷಿಕೆಯಲ್ಲಿ ಫೈನಾನ್ಷಿಯಲ್ ಟೈಮ್ಸ್‌ನ ವರದಿಯನ್ನು ಹಂಚಿಕೊಂಡಿರುವ ಕನ್ನಡದ ಚಿಂತಕ ರಾಜಾರಾಮ್‌ ತಲ್ಲೂರು ಅವರು, “ಒಂದೂವರೆ ವರ್ಷದ ಹಿಂದೆ ನಟಿ ಕಂಗನಾ ರಾಣಾವತ್ ಅವರ ಟ್ವಿಟ್ಟರ್ ಖಾತೆ ಅಮಾನತಾದ ಬೆನ್ನಿಗೇ ಅವರ ಬೆಂಬಲಿಗರು, ಅವರ ಯೋಚನೆಗಳ ಬೆಂಬಲಿಗರೆಲ್ಲ ನಮಗೆ ವಿದೇಶೀ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂಗಳೇ ಬೇಡ ‘ದೇಸೀ ಟ್ವಿಟ್ಟರ್’ ನಾವೇ ಹುಟ್ಟಿಸಿ, ಬೆಳೆಸಿಕೊಳ್ತೇವೆ ಎಂದು ದೇಶಭಕ್ತಿ ಮೆರೆದದ್ದು ನೆನಪಿದೆಯೇ? ಈಗ ಈ ಶೋಕಿ ಭಕ್ತಗಢಣದ ಹಿಂದೆ ಹೋಗಿ, ವ್ಯಾವಹಾರಿಕವಾಗಿ ಸೊರಗಿಹೋಗಿರುವ ಕೂ ಸಂಸ್ಥೆ, ಈಗ ತಮ್ಮ “ನ್ಯಾಷನಲಿಸ್ಟ್ ಟ್ವಿಟ್ಟರ್” ಹಣೆಪಟ್ಟಿ ಕಳಚಿಕೊಳ್ಳಲು ಮುಂದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎರಡು ರೂಪಾಯಿಯ ಚೀಪ್ ವಿಷ ಕಾರುವ ಜನ ಅತ್ತ ಸಾಯಲೂ ಬಿಡದೇ ಇತ್ತ ಬದುಕಲೂ ಬಿಡದೇ ಇರುವುದು ಅರ್ಥ ಆಗಿರುವ ಹಿನ್ನೆಲೆಯಲ್ಲಿ, ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಹುಡುಕಿಕೊಳ್ಳಲು ಕಾನೂನು ಬದ್ಧವಾಗಿರುವ ಮತ್ತು ಎಲ್ಲರನ್ನು ಒಳಗೊಳ್ಳುವ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂ ಆಗಿ ತಮ್ಮನ್ನು ಮರುಸ್ಥಾಪಿಸಿಕೊಳ್ಳಲು ಕೂ ಮುಂದಾಗಿದೆ. ಇಂತಹ ಬ್ರ್ಯಾಂಡಿನ ಲಾಭದ ರಾಜಕೀಯದ ಹಿಂದೆ ಹೋದರೆ ಕಡೆಗೆ ಇದೇ ಗತಿ. “ಹೊಳೆ ದಾಟಿದ ಮೇಲೆ….” ಎಂಬ ಗಾದೆ ಅವರಿಗೆ ಬೇಗ ಅರ್ಥವಾಗಿದೆ. ಉಳಿದವರಿಗೂ, ಹಾಗೆ ಅರ್ಥವಾದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ. ವಿಷ, ದ್ವೇಷ ಮತ್ತು ಅಸಹನೆಗಳ ಬುತ್ತಿ ಶಾಶ್ವತ ಅಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...