Homeಮುಖಪುಟಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

- Advertisement -
- Advertisement -

ಭಾರತೀಯ ಸಾಮಾಜಿಕ ಜಾಲತಾಣವೆಂದೂ ‘ರಾಷ್ಟ್ರೀಯವಾದಿ ಟ್ವಿಟರ್’ ಎಂದೇ ಬ್ರಾಂಡ್ ಆಗಿರುವ ‘ಕೂ’ ತನ್ನ ಬಲಪಂಥೀಯ ಮುಖವನ್ನು ಕಳಚಿಕೊಳ್ಳಲು ಯತ್ನಿಸುತ್ತಿದೆ. ತಾನು ಎಲ್ಲರ ವೇದಿಕೆ ಎಂದು ಅರ್ಥಮಾಡಿಸಲು ಸಂಸ್ಥೆಯು ಯತ್ನಿಸುತ್ತಿದೆ.

“ಇದು ಎಲ್ಲರನ್ನೂ ಒಳಗೊಳ್ಳುವ ವೇದಿಕೆ. ಆ ನಿಟ್ಟಿನಲ್ಲಿ ಸಂಸ್ಥೆಯನ್ನು ಕಟ್ಟಲು ಮುಂದಾಗಿದ್ದೇವೆ” ಎಂದು ಕೂ ಸಂಸ್ಥೆಯ ಸಹ-ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಹೇಳಿರುವುದಾಗಿ ಇತ್ತೀಚೆಗೆ ಫೈನಾನ್ಷಿಯಲ್ ಟೈಮ್ಸ್‌ ವರದಿ ಮಾಡಿದೆ. ಕೂನಲ್ಲಿನ ಕಮ್ಯುನಿಟಿ ತಂಡಗಳು ಎಲ್ಲಾ ರಾಜಕೀಯ ವರ್ಗವನ್ನು ವಿಸ್ತರಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ವರದಿ ಬೆಳಕು ಚೆಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್‌ ನಡುವಿನ ವಿವಾದ ಬಳಿಕ ದೇಸಿ ಟ್ವಿಟರ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿತು. ಫೆಬ್ರವರಿ 2021ರಲ್ಲಿ ಟ್ವಿಟರ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಿವಾದ ಉಂಟಾಯಿತು. ತಪ್ಪು ಮಾಹಿತಿಗಳಿಗೆ ಟ್ವಿಟ್ಟರ್ ಅನುಮತಿಸಿದೆ ಎಂದು ಆರೋಪಿಸಲಾಯಿತು. ನಂತರ ಕೂ ಬಲಪಂಥೀಯ ರಾಜಕಾರಣಿಗಳನ್ನು ದೊಡ್ಡಮಟ್ಟದಲ್ಲಿ ಆಕರ್ಷಿಸಿತು.  ಪ್ರತಿಭಟನಾ ನಿರತ ರೈತ ನಾಯಕರನ್ನು ನಿರ್ಬಂಧಿಸುವ ಬೇಡಿಕೆಯನ್ನು ಟ್ವಿಟರ್‌ ನಿರಾಕರಿಸಿತ್ತು.

ದ್ವೇಷ ಭಾಷಣ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಟಿ ಕಂಗನಾ ರನೌತ್ ಸೇರಿದಂತೆ ಹಲವಾರು ಪ್ರಮುಖ ಬಿಜೆಪಿ ಪರ ಖಾತೆಗಳನ್ನು ಟ್ವಿಟರ್ ನಿಷೇಧಿಸಿತು. ಟ್ವಿಟ್ಟರ್ ಬಲಪಂಥೀಯ ರಾಷ್ಟ್ರೀಯವಾದಿ ಧ್ವನಿಗಳನ್ನು ನಿಗ್ರಹಿಸುತ್ತಿದೆ ಎಂದು ಆರೋಪಿಸಿ, ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಕೂ ವೇದಿಕೆಗೆ ವಲಸೆ ಹೋದರು.

ಮಿಚಿಗನ್ ವಿಶ್ವವಿದ್ಯಾನಿಲಯದ ಶಿಕ್ಷಣ ತಜ್ಞರು ಇದನ್ನು “ರಾಷ್ಟ್ರೀಯವಾದಿ ಟ್ವಿಟರ್ ರೂಪಿಸುವ  ಪ್ರಯತ್ನ” ಎಂದು ಕರೆದಿದ್ದರು. “ಟ್ವಿಟ್ಟರ್‌ನಿಂದ ದೊಡ್ಡ ಮಟ್ಟದ ಭಾರತೀಯ ವಲಸೆ ಇಲ್ಲವಾಗಿದ್ದರೆ ನಮ್ಮಲ್ಲಿ ಹೆಚ್ಚಿನವರು ಕೂ ಬಗ್ಗೆ ಕೇಳುತ್ತಲೇ ಇರಲಿಲ್ಲ” ಎಂದು ಅಬ್ಸರ್ವರ್ ರಿಸರ್ಚ್ ಫೌಂಡೇಶನ್ ನಡೆಸುತ್ತಿರುವ ಸೆಂಟರ್ ಫಾರ್ ಸೆಕ್ಯುರಿಟಿ, ಸ್ಟ್ರಾಟಜಿ ಮತ್ತು ಟೆಕ್ನಾಲಜಿಯ ಉಪ ನಿರ್ದೇಶಕಿ ತ್ರಿಶಾ ರೇ ಹೇಳಿದ್ದರು.

“ಭಾರತದ ಸೆನ್ಸಾರ್‌ಶಿಪ್ ಕಾನೂನುಗಳನ್ನು ಅಧಿಕಾರದಲ್ಲಿರುವ ಪಕ್ಷಗಳು ದುರುಪಯೋಗಪಡಿಸಿಕೊಳ್ಳುತ್ತಿವೆ” ಮತ್ತು ಪ್ರತಿಸ್ಪರ್ಧಿ ಅಮೆರಿಕನ್ ಟೆಕ್ ದೈತ್ಯರು ದಿಕ್ಸೂಚಿ ಹಾಕಲು ಹೆಣಗಾಡುತ್ತಿದ್ದಾರೆ ಎಂಬ ಟೀಕೆಗಳ ನಡುವೆ “ಜನರು ಈ ನೆಲದ ಕಾನೂನಿಗೆ ಬದ್ಧವಾಗಿ ತಮಗೆ ಬೇಕಾದುದನ್ನು ಇಲ್ಲಿ ಪೋಸ್ಟ್ ಮಾಡಬಹುದು” ಎಂದು ಕೂ ಸಂಸ್ಥೆಯ ರಾಧಾಕೃಷ್ಣ ಹೇಳಿದ್ದಾರೆ.

ಸಾರ್ವಜನಿಕ ನಡವಳಿಕೆಯನ್ನು ನಿಯಂತ್ರಿಸುವ ಅಘೋಷಿತ ನಿಯಮಗಳನ್ನು ಆನ್‌ಲೈನ್‌ನಲ್ಲಿ ಅಭ್ಯಾಸ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯವಾದಿ ಟ್ಯಾಗ್‌ನಿಂದ ಹೊರಗಿದ್ದು ಎಲ್ಲರನ್ನೂ ಆಕರ್ಷಿಸುವ ಮಾತುಗಳನ್ನು ಅವರು ಆಡುತ್ತಿರುವುದನ್ನು ಫೈನಾನ್ಷಿಯಲ್ ಟೈಮ್ಸ್‌ ವರದಿ ಬಿಚ್ಚಿಟ್ಟಿದೆ.

ಇದನ್ನೂ ಓದಿರಿ: ಒಂದೇ ಖಾತೆಗೆ ಐದು ಪ್ರೊಫೈಲ್‌: ಫೇಸ್‌ಬುಕ್‌ನಿಂದ ಹೊಸ ಪ್ರಯೋಗ

“ಅವರು ಕೂ ಎಂದರು, ಇವರು ಟೂ ಎಂದರು” ಎಂಬ ಶೀರ್ಷಿಕೆಯಲ್ಲಿ ಫೈನಾನ್ಷಿಯಲ್ ಟೈಮ್ಸ್‌ನ ವರದಿಯನ್ನು ಹಂಚಿಕೊಂಡಿರುವ ಕನ್ನಡದ ಚಿಂತಕ ರಾಜಾರಾಮ್‌ ತಲ್ಲೂರು ಅವರು, “ಒಂದೂವರೆ ವರ್ಷದ ಹಿಂದೆ ನಟಿ ಕಂಗನಾ ರಾಣಾವತ್ ಅವರ ಟ್ವಿಟ್ಟರ್ ಖಾತೆ ಅಮಾನತಾದ ಬೆನ್ನಿಗೇ ಅವರ ಬೆಂಬಲಿಗರು, ಅವರ ಯೋಚನೆಗಳ ಬೆಂಬಲಿಗರೆಲ್ಲ ನಮಗೆ ವಿದೇಶೀ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂಗಳೇ ಬೇಡ ‘ದೇಸೀ ಟ್ವಿಟ್ಟರ್’ ನಾವೇ ಹುಟ್ಟಿಸಿ, ಬೆಳೆಸಿಕೊಳ್ತೇವೆ ಎಂದು ದೇಶಭಕ್ತಿ ಮೆರೆದದ್ದು ನೆನಪಿದೆಯೇ? ಈಗ ಈ ಶೋಕಿ ಭಕ್ತಗಢಣದ ಹಿಂದೆ ಹೋಗಿ, ವ್ಯಾವಹಾರಿಕವಾಗಿ ಸೊರಗಿಹೋಗಿರುವ ಕೂ ಸಂಸ್ಥೆ, ಈಗ ತಮ್ಮ “ನ್ಯಾಷನಲಿಸ್ಟ್ ಟ್ವಿಟ್ಟರ್” ಹಣೆಪಟ್ಟಿ ಕಳಚಿಕೊಳ್ಳಲು ಮುಂದಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಎರಡು ರೂಪಾಯಿಯ ಚೀಪ್ ವಿಷ ಕಾರುವ ಜನ ಅತ್ತ ಸಾಯಲೂ ಬಿಡದೇ ಇತ್ತ ಬದುಕಲೂ ಬಿಡದೇ ಇರುವುದು ಅರ್ಥ ಆಗಿರುವ ಹಿನ್ನೆಲೆಯಲ್ಲಿ, ಜಾಹೀರಾತು ಮತ್ತಿತರ ಆದಾಯ ಮೂಲಗಳನ್ನು ಹುಡುಕಿಕೊಳ್ಳಲು ಕಾನೂನು ಬದ್ಧವಾಗಿರುವ ಮತ್ತು ಎಲ್ಲರನ್ನು ಒಳಗೊಳ್ಳುವ ಸೋಷಿಯಲ್ ಮೀಡಿಯಾ ಫ್ಲಾಟ್‌ಫಾರಂ ಆಗಿ ತಮ್ಮನ್ನು ಮರುಸ್ಥಾಪಿಸಿಕೊಳ್ಳಲು ಕೂ ಮುಂದಾಗಿದೆ. ಇಂತಹ ಬ್ರ್ಯಾಂಡಿನ ಲಾಭದ ರಾಜಕೀಯದ ಹಿಂದೆ ಹೋದರೆ ಕಡೆಗೆ ಇದೇ ಗತಿ. “ಹೊಳೆ ದಾಟಿದ ಮೇಲೆ….” ಎಂಬ ಗಾದೆ ಅವರಿಗೆ ಬೇಗ ಅರ್ಥವಾಗಿದೆ. ಉಳಿದವರಿಗೂ, ಹಾಗೆ ಅರ್ಥವಾದರೆ ಮಾತ್ರ ಈ ದೇಶಕ್ಕೆ ಒಳಿತಾಗುತ್ತದೆ. ವಿಷ, ದ್ವೇಷ ಮತ್ತು ಅಸಹನೆಗಳ ಬುತ್ತಿ ಶಾಶ್ವತ ಅಲ್ಲ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...