Homeಕರ್ನಾಟಕನನ್ನ ವಿರುದ್ದ ಆರೋಪ ಮಾಡಿದರೂ ಯತ್ನಾಳ್ ನಿಜವಾದ ಗುರಿ ಮೋದಿ: ಸಿಎಂ ಸಿದ್ದರಾಮಯ್ಯ

ನನ್ನ ವಿರುದ್ದ ಆರೋಪ ಮಾಡಿದರೂ ಯತ್ನಾಳ್ ನಿಜವಾದ ಗುರಿ ಮೋದಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೌಲ್ವಿ ತನ್ವೀರ್ ಹಾಶ್ಮಿ ಅವರ ಜತೆಗಿನ ಫೋಟೋ ವಿಚಾರವಾಗಿ ನನ್ನ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಮೌಲ್ವಿ ತನ್ವೀರ್ ಹಾಶ್ಮಿ ಜತೆಗಿನ ಫೋಟೋ ಮುಂದಿಟ್ಟುಕೊಂಡು ಯತ್ನಾಳ್ ಮಾಡುತ್ತಿರುವ ಆರೋಪಗಳ ಕುರಿತು ಇಂದು ಮತ್ತೆ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ’ ಎಂದಿದ್ದಾರೆ.

‘ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ’ ಎಂದು ಪ್ರಶ್ನಿಸಿದ್ದಾರೆ.

‘ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಫೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು. ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು’ ಎಂದು ಸಿಎಂ ಒತ್ತಾಯಿಸಿದ್ದಾರೆ.

‘ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು? ಬಿಜೆಪಿಯಲ್ಲಿರುವ ಯಾವ ‘ಜೀ’ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ’ ಎಂದಿದ್ದಾರೆ.

‘ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ; ತನ್ವೀರ್ ಹಾಶ್ಮಿ ಕುಟುಂಬದ ಜೊತೆ ಉದ್ಯಮ ಪಾಲುದಾರಿಕೆ ಆರೋಪ: ಮಾನನಷ್ಟ ಮೊಕದ್ದಮೆ ಹೂಡುವೆ ಎಂದ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...