Homeಕರೋನಾ ತಲ್ಲಣಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

ಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

2021ರ ಜನವರಿಯ ಕುಂಭಮೇಳದಲ್ಲಿ ಪ್ರತಿದಿನ 35 ರಿಂದ 50 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್ ಹೇಳಿದ್ದಾರೆ.

- Advertisement -
- Advertisement -

ಗಣೇಶ ಚತುರ್ಥಿ, ದೀಪಾವಳಿ, ಛತ್ ಹಬ್ಬಗಳಲ್ಲಿ ಜನ ಸಂದಣಿ ಹೆಚ್ಚಾಗಿ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಉಂಟಾಗಿರುವುದಾಗಿ ಹಲವು ರಾಜ್ಯಗಳು ಹೇಳಿಕೊಂಡಿವೆ. ನಿನ್ನೆ ಕೂಡ ಮಹಾರಾಷ್ಟ್ರ ಸರ್ಕಾರ ಈ ಬಗ್ಗೆ ತಿಳಿಸಿ ಲಾಕ್‌ಡೌನ್ ಹೇರುವ ಬಗ್ಗೆ ನಿರ್ಧರಿಸುವುದಾಗಿ ತಿಳಿದೆ. ಆದರೆ ಕೊರೊನಾ ಸಾಂಕ್ರಾಮಿಕದಿಂದ ಉಂಟಾಗುತ್ತಿರುವ ಸಮಸ್ಯೆಗಳ ನಡುವೆಯೂ 2021 ರಲ್ಲಿ ಹರಿದ್ವಾರದಲ್ಲಿ ಕುಂಭಮೇಳವನ್ನು ತನ್ನ “ದೈವಿಕ ರೂಪದಲ್ಲಿ” ನಡೆಸಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.

2021 ರ ಜನವರಿ 14 ರಂದು ಪ್ರಾರಂಭವಾಗಲಿರುವ ಕುಂಭಮೇಳದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಭಾನುವಾರ ಅಖಿಲ್ ಭಾರತೀಯ ಅಖಾಡಾ ಪರಿಷತ್ (ABAP) ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇದನ್ನೂ ಓದಿ: ಕೊರೊನಾ ಉಲ್ಬಣ: ಮತ್ತೆ ಲಾಕ್‌ಡೌನ್ ಘೋಷಿಸುತ್ತಾ ಮಹಾರಾಷ್ಟ್ರ ಸರ್ಕಾರ?

“ಕುಂಭಮೇಳದ ವಿಸ್ತಾರವು ಆ ಸಮಯದ ಕೊರೊನಾ ಸ್ಥಿತಿಯನ್ನು ಅವಲಂಬಿಸಿರುತ್ತದೆ. ಎಬಿಎಪಿ ಹಾಗೂ ಧಾರ್ಮಿಕ ಸಂಘಟನೆಗಳ ಸಲಹೆಗಳನ್ನು ಪರಿಗಣಿಸಲಾಗುತ್ತದೆ. ಕೊರೊನಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು, ಭಕ್ತರಿಗೆ ಯಾವುದೇ ಅನಾನುಕೂಲತೆಯನ್ನು ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ” ಎಂದು ಮುಖ್ಯಮಂತ್ರಿ ರಾವತ್ ತಿಳಿಸಿದ್ದಾರೆ.

’ಕುಂಭಮೇಳದ ಕಾಮಗಾರಿಗಳನ್ನು ಸತತವಾಗಿ ಮೇಲ್ವಿಚಾರಣೆ ಮಾಡಲು ಇಲಾಖೆಗಳ ಕಾರ್ಯದರ್ಶಿಗಳಿಗೆ ನಿರ್ದೇಶಿಸಲಾಗಿದೆ. 15 ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕೆಕ ತಿಳಿಸುವಂತೆ ಮುಖ್ಯ ಕಾರ್ಯದರ್ಶಿಗೆ ತಿಳಿಸಲಾಗಿದೆ” ಎಂದು ಹೇಳಿದ್ದಾರೆ.

ಕುಂಭಮೇಳದ ಅಧಿಕಾರಿ ದೀಪಕ್‌ ರಾವತ್‌, ’ಕುಂಭಮೇಳಕ್ಕಾಗಿ ನಿರ್ಮಿಸಲಾಗುತ್ತಿರುವ ಒಂಬತ್ತು ಹೊಸ ನದಿ ತೀರಗಳು, ಎಂಟು ಸೇತುವೆಗಳು ಹಾಗೂ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಸ್ವಚ್ಛತೆಯ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ಬಹುತೇಕ ಕಾಮಗಾರಿಗಳು ಡಿಸೆಂಬರ್‌ 15ಕ್ಕೆ ಪೂರ್ಣಗೊಳ್ಳಲಿವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ: ಎಂಜಿ ಮತ್ತು ಬ್ರಿಗೇಡ್ ರೋಡ್‌‌ನಲ್ಲಿ ಹೊಸ ವರ್ಷಾಚರಣೆಗೆ ನಿಷೇಧ!

ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆಯ ಪ್ರಕಾರ, ನಗರ ಅಭಿವೃದ್ಧಿ ಸಚಿವ ಮದನ್ ಕೌಶಿಕ್ ಅವರು ಕುಂಭಮೇಳದಲ್ಲಿ ಭಕ್ತರಿಗೆ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಲು ಯೋಜಿತ ವ್ಯವಸ್ಥೆ ಮಾಡಲಾಗುವುದು. ಯಾವುದೇ ಆತಂಕದ ಸನ್ನಿವೇಶ ಸೃಷ್ಟಿಯಾಗುವುದಿಲ್ಲ ಎಂದು ಹೇಳಿದರು.

’ಕುಂಭಮೇಳದ ಯಶಸ್ವಿಗಾಗಿ ಅಖಿಲ್ ಭಾರತೀಯ ಅಖಾಡಾ ಪರಿಷತ್ ರಾಜ್ಯ ಸರ್ಕಾರದೊಂದಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಎಬಿಎಪಿ ಮುಖ್ಯಸ್ಥ ಮಹಂತ್ ನರೇಂದ್ರ ಗಿರಿ ಭರವಸೆ ನೀಡಿದ್ದಾರೆ’ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕುಂಭಮೇಳ 2021 ರ ಸಂದರ್ಭದಲ್ಲಿ ಪ್ರತಿದಿನ 35 ರಿಂದ 50 ಲಕ್ಷ ಜನರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ ಎಂದು ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್ ಹೇಳಿದ್ದಾರೆ.

ಹಬ್ಬಗಳಲ್ಲಿ ಹೆಚ್ಚು ಜನ ಸೇರುವುದರಿಂದ ಕೊರೊನಾ ಹೆಚ್ಚಾಗುವ ಆತಂಕದ ಹಿನ್ನೆಲೆ ದೆಹಲಿ ಸರ್ಕಾರ ಛತ್ ಪೂಜೆಯನ್ನು ಸಾರ್ವಜನಿಕ ಸ್ಥಳಗಳು, ನದಿ ತೀರಗಳು, ಕೊಳಗಳ ಬಳಿ ಆಚರಿಸುವುದನ್ನು ನಿರ್ಬಂಧಿಸಿದ್ದ ಆದೇಶವನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬಹುದು.


ಇದನ್ನೂ ಓದಿ: ಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುಂಬಮೇಳ ನಿಷೇಧ ಮಾಡಬೇಕು ಏಕೆಂದರೆ ಅಲ್ಲಿ ಗಾಂಜಾ ಮಾಧ್ಯ ಸೇವೆನೆ ಈ ಸಂದರ್ಭದಲ್ಲಿ ಜಾಸ್ಥಿಯಾಗುತ್ತದೆ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು .

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...