Homeಕರೋನಾ ತಲ್ಲಣಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

ಉತ್ತರಖಂಡ: ಕೊರೊನಾ ನಡುವೆಯೂ ಹರಿದ್ವಾರದಲ್ಲಿ ಕುಂಬಮೇಳ ನಡೆಸಲು ಸರ್ಕಾರದ ಸಿದ್ದತೆ!

2021ರ ಜನವರಿಯ ಕುಂಭಮೇಳದಲ್ಲಿ ಪ್ರತಿದಿನ 35 ರಿಂದ 50 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್ ಹೇಳಿದ್ದಾರೆ.

- Advertisement -
- Advertisement -

ಗಣೇಶ ಚತುರ್ಥಿ, ದೀಪಾವಳಿ, ಛತ್ ಹಬ್ಬಗಳಲ್ಲಿ ಜನ ಸಂದಣಿ ಹೆಚ್ಚಾಗಿ ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಉಂಟಾಗಿರುವುದಾಗಿ ಹಲವು ರಾಜ್ಯಗಳು ಹೇಳಿಕೊಂಡಿವೆ. ನಿನ್ನೆ ಕೂಡ ಮಹಾರಾಷ್ಟ್ರ ಸರ್ಕಾರ ಈ ಬಗ್ಗೆ ತಿಳಿಸಿ ಲಾಕ್‌ಡೌನ್ ಹೇರುವ ಬಗ್ಗೆ ನಿರ್ಧರಿಸುವುದಾಗಿ ತಿಳಿದೆ. ಆದರೆ ಕೊರೊನಾ ಸಾಂಕ್ರಾಮಿಕದಿಂದ ಉಂಟಾಗುತ್ತಿರುವ ಸಮಸ್ಯೆಗಳ ನಡುವೆಯೂ 2021 ರಲ್ಲಿ ಹರಿದ್ವಾರದಲ್ಲಿ ಕುಂಭಮೇಳವನ್ನು ತನ್ನ “ದೈವಿಕ ರೂಪದಲ್ಲಿ” ನಡೆಸಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದಾರೆ.

2021 ರ ಜನವರಿ 14 ರಂದು ಪ್ರಾರಂಭವಾಗಲಿರುವ ಕುಂಭಮೇಳದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಭಾನುವಾರ ಅಖಿಲ್ ಭಾರತೀಯ ಅಖಾಡಾ ಪರಿಷತ್ (ABAP) ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇದನ್ನೂ ಓದಿ: ಕೊರೊನಾ ಉಲ್ಬಣ: ಮತ್ತೆ ಲಾಕ್‌ಡೌನ್ ಘೋಷಿಸುತ್ತಾ ಮಹಾರಾಷ್ಟ್ರ ಸರ್ಕಾರ?

“ಕುಂಭಮೇಳದ ವಿಸ್ತಾರವು ಆ ಸಮಯದ ಕೊರೊನಾ ಸ್ಥಿತಿಯನ್ನು ಅವಲಂಬಿಸಿರುತ್ತದೆ. ಎಬಿಎಪಿ ಹಾಗೂ ಧಾರ್ಮಿಕ ಸಂಘಟನೆಗಳ ಸಲಹೆಗಳನ್ನು ಪರಿಗಣಿಸಲಾಗುತ್ತದೆ. ಕೊರೊನಾ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು, ಭಕ್ತರಿಗೆ ಯಾವುದೇ ಅನಾನುಕೂಲತೆಯನ್ನು ಉಂಟಾಗದಂತೆ ನೋಡಿಕೊಳ್ಳುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ” ಎಂದು ಮುಖ್ಯಮಂತ್ರಿ ರಾವತ್ ತಿಳಿಸಿದ್ದಾರೆ.

’ಕುಂಭಮೇಳದ ಕಾಮಗಾರಿಗಳನ್ನು ಸತತವಾಗಿ ಮೇಲ್ವಿಚಾರಣೆ ಮಾಡಲು ಇಲಾಖೆಗಳ ಕಾರ್ಯದರ್ಶಿಗಳಿಗೆ ನಿರ್ದೇಶಿಸಲಾಗಿದೆ. 15 ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಿ ಸರ್ಕಾರಕೆಕ ತಿಳಿಸುವಂತೆ ಮುಖ್ಯ ಕಾರ್ಯದರ್ಶಿಗೆ ತಿಳಿಸಲಾಗಿದೆ” ಎಂದು ಹೇಳಿದ್ದಾರೆ.

ಕುಂಭಮೇಳದ ಅಧಿಕಾರಿ ದೀಪಕ್‌ ರಾವತ್‌, ’ಕುಂಭಮೇಳಕ್ಕಾಗಿ ನಿರ್ಮಿಸಲಾಗುತ್ತಿರುವ ಒಂಬತ್ತು ಹೊಸ ನದಿ ತೀರಗಳು, ಎಂಟು ಸೇತುವೆಗಳು ಹಾಗೂ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಸ್ವಚ್ಛತೆಯ ಬಗ್ಗೆ ವಿಶೇಷ ಗಮನ ಹರಿಸಲಾಗಿದೆ. ಬಹುತೇಕ ಕಾಮಗಾರಿಗಳು ಡಿಸೆಂಬರ್‌ 15ಕ್ಕೆ ಪೂರ್ಣಗೊಳ್ಳಲಿವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೊನಾ: ಎಂಜಿ ಮತ್ತು ಬ್ರಿಗೇಡ್ ರೋಡ್‌‌ನಲ್ಲಿ ಹೊಸ ವರ್ಷಾಚರಣೆಗೆ ನಿಷೇಧ!

ಮುಖ್ಯಮಂತ್ರಿಗಳ ಕಚೇರಿಯ ಪ್ರಕಟಣೆಯ ಪ್ರಕಾರ, ನಗರ ಅಭಿವೃದ್ಧಿ ಸಚಿವ ಮದನ್ ಕೌಶಿಕ್ ಅವರು ಕುಂಭಮೇಳದಲ್ಲಿ ಭಕ್ತರಿಗೆ ಯಾವುದೇ ತೊಂದರೆ ಎದುರಾಗದಂತೆ ನೋಡಿಕೊಳ್ಳಲು ಯೋಜಿತ ವ್ಯವಸ್ಥೆ ಮಾಡಲಾಗುವುದು. ಯಾವುದೇ ಆತಂಕದ ಸನ್ನಿವೇಶ ಸೃಷ್ಟಿಯಾಗುವುದಿಲ್ಲ ಎಂದು ಹೇಳಿದರು.

’ಕುಂಭಮೇಳದ ಯಶಸ್ವಿಗಾಗಿ ಅಖಿಲ್ ಭಾರತೀಯ ಅಖಾಡಾ ಪರಿಷತ್ ರಾಜ್ಯ ಸರ್ಕಾರದೊಂದಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಎಬಿಎಪಿ ಮುಖ್ಯಸ್ಥ ಮಹಂತ್ ನರೇಂದ್ರ ಗಿರಿ ಭರವಸೆ ನೀಡಿದ್ದಾರೆ’ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕುಂಭಮೇಳ 2021 ರ ಸಂದರ್ಭದಲ್ಲಿ ಪ್ರತಿದಿನ 35 ರಿಂದ 50 ಲಕ್ಷ ಜನರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ ಎಂದು ನಗರಾಭಿವೃದ್ಧಿ ಸಚಿವ ಮದನ್ ಕೌಶಿಕ್ ಹೇಳಿದ್ದಾರೆ.

ಹಬ್ಬಗಳಲ್ಲಿ ಹೆಚ್ಚು ಜನ ಸೇರುವುದರಿಂದ ಕೊರೊನಾ ಹೆಚ್ಚಾಗುವ ಆತಂಕದ ಹಿನ್ನೆಲೆ ದೆಹಲಿ ಸರ್ಕಾರ ಛತ್ ಪೂಜೆಯನ್ನು ಸಾರ್ವಜನಿಕ ಸ್ಥಳಗಳು, ನದಿ ತೀರಗಳು, ಕೊಳಗಳ ಬಳಿ ಆಚರಿಸುವುದನ್ನು ನಿರ್ಬಂಧಿಸಿದ್ದ ಆದೇಶವನ್ನು ಈ ಸಂದರ್ಭದಲ್ಲಿ ನಾವು ನೆನಪಿಸಿಕೊಳ್ಳಬಹುದು.


ಇದನ್ನೂ ಓದಿ: ಕೊರೊನಾ: 500 ರಿಂದ 2 ಸಾವಿರಕ್ಕೆ ಮಾಸ್ಕ್ ದಂಡ ಹೆಚ್ಚಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕುಂಬಮೇಳ ನಿಷೇಧ ಮಾಡಬೇಕು ಏಕೆಂದರೆ ಅಲ್ಲಿ ಗಾಂಜಾ ಮಾಧ್ಯ ಸೇವೆನೆ ಈ ಸಂದರ್ಭದಲ್ಲಿ ಜಾಸ್ಥಿಯಾಗುತ್ತದೆ ಸರ್ಕಾರ ಇದರ ಬಗ್ಗೆ ಗಮನ ಹರಿಸಬೇಕು .

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...