Homeಕರ್ನಾಟಕದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕಾರ್ಮಿಕರಿಗೆ ಇರುವಂತೆಯೇ ನಮಗೂ ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನೇಕಾರರ ಒತ್ತಾಯ.

- Advertisement -
- Advertisement -

ರಾಜ್ಯದ ಬೆಳಗಾವಿ, ಹಾವೇರಿ, ಚಿತ್ರದುರ್ಗ ಸೇರಿದಂತೆ ಎಂಟು-ಹತ್ತು ಜಿಲ್ಲೆಗಳಲ್ಲಿ ಜವಳಿ ಉದ್ದಿಮೆಯು ಅತ್ಯಾಧುನಿಕಗೊಂಡು ಬೃಹದಾಕಾರವಾಗಿ ಬೆಳೆದು ನಿಂತಿದೆ. ಆದರೆ ಮಗ್ಗಗಳಲ್ಲಿ ದುಡಿಯುವ ಕೂಲಿ ನೇಕಾರ ಕಾರ್ಮಿಕರ ಪರಿಸ್ಥಿತಿ ಮಾತ್ರ ಶೋಚನೀಯವಾಗಿದೆ. ದಶಕಗಳಿಂದ ದುಡಿದರೂ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಈ ಜನರಿಗಾಗಿ ಕೂಲಿ ನೇಕಾರ ಕಾರ್ಮಿಕರ ಬಳಗ ಸತತ ದನಿಯೆತ್ತುತ್ತಲೇ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಮಾಹಿತಿ ಪ್ರಕಾರ ಒಂದು ಲಕ್ಷದ ಐವತ್ತು ಸಾವಿರ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ. ಅಂದರೆ ಎರಡೂವರೆ ಲಕ್ಷ ಕೂಲಿ ನೇಕಾರ ಕಾರ್ಮಿಕಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಲ್ಲಿಯವರೆಗೂ ಒಂದು ಕಲ್ಯಾಣ ಮಂಡಳಿ ಇಲ್ಲ. ಸರ್ಕಾರ ಯಾವುದೇ ಕಾರ್ಮಿಕ ಯೋಜನೆಗಳು ಇವರಿಗೆ ತಲುಪುತ್ತಿಲ್ಲ. ಏಕೆಂದರೆ ಇವರನ್ನು ಕಾರ್ಮಿಕರು ಎಂದು ಪರಿಗಣಿಸಲು ಯಾವುದೇ ಆಧಾರವಿಲ್ಲ!

ಕೂಲಿ ನೇಕಾರ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು, ಕಲ್ಯಾಣ ಮಂಡಳಿ ಸ್ಥಾಪಿಸಲು ಒತ್ತಾಯ

ಕೂಲಿ ನೇಕಾರ ಕಾರ್ಮಿಕ ಎಂದು ಗುರುತಿಸಲು ಬೇಕಾದ ಒಂದು ಗುರುತಿನ ಚೀಟಿ ಕೂಡ ಈ ಇವರಿಗೆ ದೊರೆತಿಲ್ಲ. ಕೆಲಸ ನಿರ್ವಹಿಸುವ ಮಗ್ಗಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ತೋರಿಸಲು ಹಾಜರಿ ಪುಸ್ತಕ ಕೂಡ ಇಲ್ಲ. ಇನ್ನೂ ಸರ್ಕಾರದ ಪಿಎಫ್‌ ಯೋಜನೆ ಇವರಿಗೆ ಸಿಗುವುದು ಕನಸಿನ ಮಾತು. ಇಂತಹ ಸಂಕಷ್ಟದಲ್ಲಿ ರಾಜ್ಯದ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಕಾರ್ಮಿಕರು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ದುರಂತ.

ಲಾಕ್‌ಡೌನ್‌ ಸಮಯದಲ್ಲಿ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದನಿಯೆತ್ತಿದ್ದರು. “ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೆ ಹೊಣೆ. ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: 6 ಜನ ನೇಕಾರರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೆ ಹೊಣೆ: ಸಿದ್ದರಾಮಯ್ಯ

“ನಮ್ಮನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕೂಲಿ ಕಾರ್ಮಿಕರಿಗೆ ಇರುವಂತೆಯೇ ನಮಗೂ ಒಂದು ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನಮ್ಮ 6-7 ದಶಕಗಳ ಒತ್ತಾಯ ಎನ್ನುತ್ತಾರೆ ಕೂಲಿ ನೇಕಾರ ಕಾರ್ಮಿಕರ ಬಳಗ ಸಂಚಾಲಕ ರವಿ ಪಾಟೀಲ್.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ’ಮಗ್ಗ ಎಂದರೇ ಮಾಲಿಕ ಒಬ್ಬನೇ ಅಲ್ಲ. ಅಲ್ಲಿ ಕಾರ್ಮಿಕರು ಮುಖ್ಯವಾಗಿರುತ್ತಾರೆ. ಒಂದು ಸೀರೆ ತಯಾರಿಸಲು ಸುಮಾರು 10 ಮಂದಿ ಕಾರ್ಮಿಕರ ಶ್ರಮ ಇರುತ್ತದೆ. ಸೀರೆಗಳ ವಿನ್ಯಾಸದ ಆಧಾರದ ಮೇಲೆ ಕೂಲಿ ನೀಡಲಾಗುತ್ತದೆ. ಆದರೆ ನೀಡುವ ಕೂಲಿ ಮಾತ್ರ ಯಾವುದಕ್ಕೂ ಸಾಲದು. ಕಾರ್ಮಿಕರ ಕಲ್ಯಾಣಕ್ಕೆ ಇರುವ ಸರ್ಕಾರಿ ಯೋಜನೆಗಳಾದರೂ ನಮಗೆ ಸಿಗಲಿ ಎನ್ನುವುದಕ್ಕಾಗಿ ನಮ್ಮ ಪ್ರತಿಭಟನೆ’ ಎನ್ನುತ್ತಾರೆ.

’ಈ ನೇಕಾರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಕಾನೂನು ಬದ್ಧ ಕಾರ್ಮಿಕ  ಹಕ್ಕುಗಳು ಸಿಗಬೇಕೆಂದು, 5-6 ದಶಕಗಳಿಂದ ರಾಜ್ಯದ ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಪರ ವ್ಯಕ್ತಿಗಳು, ಕೂಲಿ ನೇಕಾರ ಕಾರ್ಮಿಕರ ಬಳಗ ಒಳಗೊಂಡಂತೆ ಹಲವು ಸಂಘಟನೆಗಳು ಇಂದಿನವರೆಗೂ ಹೋರಾಡುತ್ತಿವೆ’ ಎಂದರು.

’ನೇಕಾರ ಸಮ್ಮಾನ್ ಯೋಜನೆಯನ್ನು ವಿದ್ಯುತ್ ಚಾಲಿತ ಮಗ್ಗಗಳಲ್ಲೂ ಕೆಲಸ ಮಾಡುವ ಕಾರ್ಮಿಕರಿಗೆ ವಿಸ್ತರಿಸಬೇಕು. ತಿಂಗಳಿಗೆ 5,000 ರೂಪಾಯಿ ನೀಡುವ ಈ ಯೋಜನೆಯನ್ನು ಇವರಿಗೂ ವಿಸ್ತರಿಸಬೇಕು. ಲಾಕ್‌ಡೌನ್ ವೇಳೆ 2,000 ರೂಪಾಯಿ ನೀಡಲಾಯಿತು. ಆದರೆ ಎಷ್ಟೋ ಕಾರ್ಮಿಕರಿಗೆ ಅದು ಸಿಗಲಿಲ್ಲ. ಕಾರ್ಮಿಕರ ಹೆಸರಿನಲ್ಲಿ ಮಾಲೀಕರು ಅದನ್ನು ಪಡೆದುಕೊಂಡರು. ಏಕೆಂದರೆ ನಾನು ಕೂಲಿ ನೇಕಾರ ಕಾರ್ಮಿಕ ಎಂದು ಹೇಳಲು ಕಾರ್ಮಿಕರ ಬಳಿ ಗುರುತಿನ ಚೀಟಿ ಕೂಡ ಇಲ್ಲ’ ಎಂದು ರವಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ನೇಕಾರರು ಎಂದರೆ ಎರಡು ವರ್ಗಳಿವೆ. ಒಂದು ಮಾಲೀಕ ವರ್ಗ ಮತ್ತೊಂದು ಕಾರ್ಮಿಕ ವರ್ಗ. ಆದರೆ ಸರ್ಕಾರ ನೀಡುವ ಯೋಜನೆಗಳ ಪಾಲು ಹೋಗುತ್ತಿರುವುದು ಮಾಲೀಕ ವರ್ಗಕ್ಕೆ. ಸಾಲ ಮನ್ನಾ, ಸಬ್ಸಿಡಿ, ಯಂತ್ರಗಳ ಖರೀದಿಗೆ ಧನಸಹಾಯ ಎಲ್ಲವೂ ಮಾಲೀಕರ ಪರವಾಗಿವೆ. ಕಾರ್ಮಿಕ ವರ್ಗ ಎಂಬ ಒಂದು ವರ್ಗವಿದೆ. ಅವರಿಗೂ ಸರ್ಕಾರಿ ಸೌಲಭ್ಯಗಳು ಬೇಕು ಎಂದು ತಿಳಿಸುವ ಪ್ರಯತ್ನ ನಾವು ಮಾಡುತ್ತಿದ್ದೆವೆ ಎಂದು ಹೇಳುತ್ತಾರೆ ರವಿ ಪಾಟೀಲ್.

’ಕಾರ್ಮಿಕರಿಗೆ ದಿನೇ ದಿನೇ ಕೂಲಿ ಹೆಚ್ಚು ಮಾಡುವ ಬದಲು ಕಡಿಮೆ ಮಾಡುತ್ತಿದ್ದಾರೆ. ಉದ್ಯಮ ಚೆನ್ನಾಗಿ ನಡೆಯುತ್ತಿದ್ದರೂ, ಸೀರೆ ವ್ಯಾಪಾರವಾಗುತ್ತಿಲ್ಲ ಎಂದು ನೆಪ ಹೇಳುತ್ತಾ ಕೂಲಿ ಕಡಿಮೆ ನೀಡುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮತ್ತ ತಿರುಗಿ ನೋಡುತ್ತಿಲ್ಲ, ನಾವು ಹೇಗೆ ಬದುಕಬೇಕು? ಎಂಬುದು ಕಾರ್ಮಿಕರ ಅಳಲು.

ಕೂಲಿ ನೇಕಾರರ ಕಾರ್ಮಿಕ ಬಳಗದ ಬೇಡಿಕೆಗಳ ಮನವಿ ಪತ್ರ ಇಲ್ಲಿದೆ.

’ಈ ಬೇಡಿಕೆಗಳ ಮೇಲೆ ಪ್ರತಿಭಟನೆ ಮಾಡಿ, ಸದನದಲ್ಲಿ ಈ ಬಗ್ಗೆ ಮಾತನಾಡಲು ಮನವಿ ಪತ್ರಗಳನ್ನು ಜಿಲ್ಲಾಡಳಿತ, ಜವಳಿ ಸಚಿವರು, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಎಲ್ಲರಿಗೂ ಮನವಿ ಕೊಟ್ಟಿದ್ದೇವು. ಬೆಳಗಾವಿ ದಕ್ಷಿಣದ ಶಾಸಕ ಅಭಯ ಪಾಟೀಲರು ಮಾತ್ರ ಮಾತನಾಡಿದರು. ಆದರೂ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ’ ಎನ್ನುತ್ತಾರೆ ರವಿ ಪಾಟೀಲ್.

ದಶಕಗಳಿಂದ ದುಡಿಯುತ್ತಾ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಿ, ಕಷ್ಟದಲ್ಲಿರುವ ನೇಕಾರರ ಕಲ್ಯಾಣಕ್ಕಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಮಾನವೀಯತೆ ಮೆರೆಯಬೇಕಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...