Homeಕರ್ನಾಟಕದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕಾರ್ಮಿಕರಿಗೆ ಇರುವಂತೆಯೇ ನಮಗೂ ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನೇಕಾರರ ಒತ್ತಾಯ.

- Advertisement -
- Advertisement -

ರಾಜ್ಯದ ಬೆಳಗಾವಿ, ಹಾವೇರಿ, ಚಿತ್ರದುರ್ಗ ಸೇರಿದಂತೆ ಎಂಟು-ಹತ್ತು ಜಿಲ್ಲೆಗಳಲ್ಲಿ ಜವಳಿ ಉದ್ದಿಮೆಯು ಅತ್ಯಾಧುನಿಕಗೊಂಡು ಬೃಹದಾಕಾರವಾಗಿ ಬೆಳೆದು ನಿಂತಿದೆ. ಆದರೆ ಮಗ್ಗಗಳಲ್ಲಿ ದುಡಿಯುವ ಕೂಲಿ ನೇಕಾರ ಕಾರ್ಮಿಕರ ಪರಿಸ್ಥಿತಿ ಮಾತ್ರ ಶೋಚನೀಯವಾಗಿದೆ. ದಶಕಗಳಿಂದ ದುಡಿದರೂ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಈ ಜನರಿಗಾಗಿ ಕೂಲಿ ನೇಕಾರ ಕಾರ್ಮಿಕರ ಬಳಗ ಸತತ ದನಿಯೆತ್ತುತ್ತಲೇ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಮಾಹಿತಿ ಪ್ರಕಾರ ಒಂದು ಲಕ್ಷದ ಐವತ್ತು ಸಾವಿರ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ. ಅಂದರೆ ಎರಡೂವರೆ ಲಕ್ಷ ಕೂಲಿ ನೇಕಾರ ಕಾರ್ಮಿಕಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಲ್ಲಿಯವರೆಗೂ ಒಂದು ಕಲ್ಯಾಣ ಮಂಡಳಿ ಇಲ್ಲ. ಸರ್ಕಾರ ಯಾವುದೇ ಕಾರ್ಮಿಕ ಯೋಜನೆಗಳು ಇವರಿಗೆ ತಲುಪುತ್ತಿಲ್ಲ. ಏಕೆಂದರೆ ಇವರನ್ನು ಕಾರ್ಮಿಕರು ಎಂದು ಪರಿಗಣಿಸಲು ಯಾವುದೇ ಆಧಾರವಿಲ್ಲ!

ಕೂಲಿ ನೇಕಾರ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು, ಕಲ್ಯಾಣ ಮಂಡಳಿ ಸ್ಥಾಪಿಸಲು ಒತ್ತಾಯ

ಕೂಲಿ ನೇಕಾರ ಕಾರ್ಮಿಕ ಎಂದು ಗುರುತಿಸಲು ಬೇಕಾದ ಒಂದು ಗುರುತಿನ ಚೀಟಿ ಕೂಡ ಈ ಇವರಿಗೆ ದೊರೆತಿಲ್ಲ. ಕೆಲಸ ನಿರ್ವಹಿಸುವ ಮಗ್ಗಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ತೋರಿಸಲು ಹಾಜರಿ ಪುಸ್ತಕ ಕೂಡ ಇಲ್ಲ. ಇನ್ನೂ ಸರ್ಕಾರದ ಪಿಎಫ್‌ ಯೋಜನೆ ಇವರಿಗೆ ಸಿಗುವುದು ಕನಸಿನ ಮಾತು. ಇಂತಹ ಸಂಕಷ್ಟದಲ್ಲಿ ರಾಜ್ಯದ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಕಾರ್ಮಿಕರು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ದುರಂತ.

ಲಾಕ್‌ಡೌನ್‌ ಸಮಯದಲ್ಲಿ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದನಿಯೆತ್ತಿದ್ದರು. “ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೆ ಹೊಣೆ. ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: 6 ಜನ ನೇಕಾರರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೆ ಹೊಣೆ: ಸಿದ್ದರಾಮಯ್ಯ

“ನಮ್ಮನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕೂಲಿ ಕಾರ್ಮಿಕರಿಗೆ ಇರುವಂತೆಯೇ ನಮಗೂ ಒಂದು ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನಮ್ಮ 6-7 ದಶಕಗಳ ಒತ್ತಾಯ ಎನ್ನುತ್ತಾರೆ ಕೂಲಿ ನೇಕಾರ ಕಾರ್ಮಿಕರ ಬಳಗ ಸಂಚಾಲಕ ರವಿ ಪಾಟೀಲ್.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ’ಮಗ್ಗ ಎಂದರೇ ಮಾಲಿಕ ಒಬ್ಬನೇ ಅಲ್ಲ. ಅಲ್ಲಿ ಕಾರ್ಮಿಕರು ಮುಖ್ಯವಾಗಿರುತ್ತಾರೆ. ಒಂದು ಸೀರೆ ತಯಾರಿಸಲು ಸುಮಾರು 10 ಮಂದಿ ಕಾರ್ಮಿಕರ ಶ್ರಮ ಇರುತ್ತದೆ. ಸೀರೆಗಳ ವಿನ್ಯಾಸದ ಆಧಾರದ ಮೇಲೆ ಕೂಲಿ ನೀಡಲಾಗುತ್ತದೆ. ಆದರೆ ನೀಡುವ ಕೂಲಿ ಮಾತ್ರ ಯಾವುದಕ್ಕೂ ಸಾಲದು. ಕಾರ್ಮಿಕರ ಕಲ್ಯಾಣಕ್ಕೆ ಇರುವ ಸರ್ಕಾರಿ ಯೋಜನೆಗಳಾದರೂ ನಮಗೆ ಸಿಗಲಿ ಎನ್ನುವುದಕ್ಕಾಗಿ ನಮ್ಮ ಪ್ರತಿಭಟನೆ’ ಎನ್ನುತ್ತಾರೆ.

’ಈ ನೇಕಾರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಕಾನೂನು ಬದ್ಧ ಕಾರ್ಮಿಕ  ಹಕ್ಕುಗಳು ಸಿಗಬೇಕೆಂದು, 5-6 ದಶಕಗಳಿಂದ ರಾಜ್ಯದ ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಪರ ವ್ಯಕ್ತಿಗಳು, ಕೂಲಿ ನೇಕಾರ ಕಾರ್ಮಿಕರ ಬಳಗ ಒಳಗೊಂಡಂತೆ ಹಲವು ಸಂಘಟನೆಗಳು ಇಂದಿನವರೆಗೂ ಹೋರಾಡುತ್ತಿವೆ’ ಎಂದರು.

’ನೇಕಾರ ಸಮ್ಮಾನ್ ಯೋಜನೆಯನ್ನು ವಿದ್ಯುತ್ ಚಾಲಿತ ಮಗ್ಗಗಳಲ್ಲೂ ಕೆಲಸ ಮಾಡುವ ಕಾರ್ಮಿಕರಿಗೆ ವಿಸ್ತರಿಸಬೇಕು. ತಿಂಗಳಿಗೆ 5,000 ರೂಪಾಯಿ ನೀಡುವ ಈ ಯೋಜನೆಯನ್ನು ಇವರಿಗೂ ವಿಸ್ತರಿಸಬೇಕು. ಲಾಕ್‌ಡೌನ್ ವೇಳೆ 2,000 ರೂಪಾಯಿ ನೀಡಲಾಯಿತು. ಆದರೆ ಎಷ್ಟೋ ಕಾರ್ಮಿಕರಿಗೆ ಅದು ಸಿಗಲಿಲ್ಲ. ಕಾರ್ಮಿಕರ ಹೆಸರಿನಲ್ಲಿ ಮಾಲೀಕರು ಅದನ್ನು ಪಡೆದುಕೊಂಡರು. ಏಕೆಂದರೆ ನಾನು ಕೂಲಿ ನೇಕಾರ ಕಾರ್ಮಿಕ ಎಂದು ಹೇಳಲು ಕಾರ್ಮಿಕರ ಬಳಿ ಗುರುತಿನ ಚೀಟಿ ಕೂಡ ಇಲ್ಲ’ ಎಂದು ರವಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ನೇಕಾರರು ಎಂದರೆ ಎರಡು ವರ್ಗಳಿವೆ. ಒಂದು ಮಾಲೀಕ ವರ್ಗ ಮತ್ತೊಂದು ಕಾರ್ಮಿಕ ವರ್ಗ. ಆದರೆ ಸರ್ಕಾರ ನೀಡುವ ಯೋಜನೆಗಳ ಪಾಲು ಹೋಗುತ್ತಿರುವುದು ಮಾಲೀಕ ವರ್ಗಕ್ಕೆ. ಸಾಲ ಮನ್ನಾ, ಸಬ್ಸಿಡಿ, ಯಂತ್ರಗಳ ಖರೀದಿಗೆ ಧನಸಹಾಯ ಎಲ್ಲವೂ ಮಾಲೀಕರ ಪರವಾಗಿವೆ. ಕಾರ್ಮಿಕ ವರ್ಗ ಎಂಬ ಒಂದು ವರ್ಗವಿದೆ. ಅವರಿಗೂ ಸರ್ಕಾರಿ ಸೌಲಭ್ಯಗಳು ಬೇಕು ಎಂದು ತಿಳಿಸುವ ಪ್ರಯತ್ನ ನಾವು ಮಾಡುತ್ತಿದ್ದೆವೆ ಎಂದು ಹೇಳುತ್ತಾರೆ ರವಿ ಪಾಟೀಲ್.

’ಕಾರ್ಮಿಕರಿಗೆ ದಿನೇ ದಿನೇ ಕೂಲಿ ಹೆಚ್ಚು ಮಾಡುವ ಬದಲು ಕಡಿಮೆ ಮಾಡುತ್ತಿದ್ದಾರೆ. ಉದ್ಯಮ ಚೆನ್ನಾಗಿ ನಡೆಯುತ್ತಿದ್ದರೂ, ಸೀರೆ ವ್ಯಾಪಾರವಾಗುತ್ತಿಲ್ಲ ಎಂದು ನೆಪ ಹೇಳುತ್ತಾ ಕೂಲಿ ಕಡಿಮೆ ನೀಡುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮತ್ತ ತಿರುಗಿ ನೋಡುತ್ತಿಲ್ಲ, ನಾವು ಹೇಗೆ ಬದುಕಬೇಕು? ಎಂಬುದು ಕಾರ್ಮಿಕರ ಅಳಲು.

ಕೂಲಿ ನೇಕಾರರ ಕಾರ್ಮಿಕ ಬಳಗದ ಬೇಡಿಕೆಗಳ ಮನವಿ ಪತ್ರ ಇಲ್ಲಿದೆ.

’ಈ ಬೇಡಿಕೆಗಳ ಮೇಲೆ ಪ್ರತಿಭಟನೆ ಮಾಡಿ, ಸದನದಲ್ಲಿ ಈ ಬಗ್ಗೆ ಮಾತನಾಡಲು ಮನವಿ ಪತ್ರಗಳನ್ನು ಜಿಲ್ಲಾಡಳಿತ, ಜವಳಿ ಸಚಿವರು, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಎಲ್ಲರಿಗೂ ಮನವಿ ಕೊಟ್ಟಿದ್ದೇವು. ಬೆಳಗಾವಿ ದಕ್ಷಿಣದ ಶಾಸಕ ಅಭಯ ಪಾಟೀಲರು ಮಾತ್ರ ಮಾತನಾಡಿದರು. ಆದರೂ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ’ ಎನ್ನುತ್ತಾರೆ ರವಿ ಪಾಟೀಲ್.

ದಶಕಗಳಿಂದ ದುಡಿಯುತ್ತಾ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಿ, ಕಷ್ಟದಲ್ಲಿರುವ ನೇಕಾರರ ಕಲ್ಯಾಣಕ್ಕಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಮಾನವೀಯತೆ ಮೆರೆಯಬೇಕಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...