Homeಕರ್ನಾಟಕದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕಾರ್ಮಿಕರಿಗೆ ಇರುವಂತೆಯೇ ನಮಗೂ ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನೇಕಾರರ ಒತ್ತಾಯ.

- Advertisement -
- Advertisement -

ರಾಜ್ಯದ ಬೆಳಗಾವಿ, ಹಾವೇರಿ, ಚಿತ್ರದುರ್ಗ ಸೇರಿದಂತೆ ಎಂಟು-ಹತ್ತು ಜಿಲ್ಲೆಗಳಲ್ಲಿ ಜವಳಿ ಉದ್ದಿಮೆಯು ಅತ್ಯಾಧುನಿಕಗೊಂಡು ಬೃಹದಾಕಾರವಾಗಿ ಬೆಳೆದು ನಿಂತಿದೆ. ಆದರೆ ಮಗ್ಗಗಳಲ್ಲಿ ದುಡಿಯುವ ಕೂಲಿ ನೇಕಾರ ಕಾರ್ಮಿಕರ ಪರಿಸ್ಥಿತಿ ಮಾತ್ರ ಶೋಚನೀಯವಾಗಿದೆ. ದಶಕಗಳಿಂದ ದುಡಿದರೂ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಈ ಜನರಿಗಾಗಿ ಕೂಲಿ ನೇಕಾರ ಕಾರ್ಮಿಕರ ಬಳಗ ಸತತ ದನಿಯೆತ್ತುತ್ತಲೇ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಮಾಹಿತಿ ಪ್ರಕಾರ ಒಂದು ಲಕ್ಷದ ಐವತ್ತು ಸಾವಿರ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ. ಅಂದರೆ ಎರಡೂವರೆ ಲಕ್ಷ ಕೂಲಿ ನೇಕಾರ ಕಾರ್ಮಿಕಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಲ್ಲಿಯವರೆಗೂ ಒಂದು ಕಲ್ಯಾಣ ಮಂಡಳಿ ಇಲ್ಲ. ಸರ್ಕಾರ ಯಾವುದೇ ಕಾರ್ಮಿಕ ಯೋಜನೆಗಳು ಇವರಿಗೆ ತಲುಪುತ್ತಿಲ್ಲ. ಏಕೆಂದರೆ ಇವರನ್ನು ಕಾರ್ಮಿಕರು ಎಂದು ಪರಿಗಣಿಸಲು ಯಾವುದೇ ಆಧಾರವಿಲ್ಲ!

ಕೂಲಿ ನೇಕಾರ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು, ಕಲ್ಯಾಣ ಮಂಡಳಿ ಸ್ಥಾಪಿಸಲು ಒತ್ತಾಯ

ಕೂಲಿ ನೇಕಾರ ಕಾರ್ಮಿಕ ಎಂದು ಗುರುತಿಸಲು ಬೇಕಾದ ಒಂದು ಗುರುತಿನ ಚೀಟಿ ಕೂಡ ಈ ಇವರಿಗೆ ದೊರೆತಿಲ್ಲ. ಕೆಲಸ ನಿರ್ವಹಿಸುವ ಮಗ್ಗಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ತೋರಿಸಲು ಹಾಜರಿ ಪುಸ್ತಕ ಕೂಡ ಇಲ್ಲ. ಇನ್ನೂ ಸರ್ಕಾರದ ಪಿಎಫ್‌ ಯೋಜನೆ ಇವರಿಗೆ ಸಿಗುವುದು ಕನಸಿನ ಮಾತು. ಇಂತಹ ಸಂಕಷ್ಟದಲ್ಲಿ ರಾಜ್ಯದ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಕಾರ್ಮಿಕರು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ದುರಂತ.

ಲಾಕ್‌ಡೌನ್‌ ಸಮಯದಲ್ಲಿ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದನಿಯೆತ್ತಿದ್ದರು. “ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೆ ಹೊಣೆ. ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: 6 ಜನ ನೇಕಾರರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೆ ಹೊಣೆ: ಸಿದ್ದರಾಮಯ್ಯ

“ನಮ್ಮನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕೂಲಿ ಕಾರ್ಮಿಕರಿಗೆ ಇರುವಂತೆಯೇ ನಮಗೂ ಒಂದು ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನಮ್ಮ 6-7 ದಶಕಗಳ ಒತ್ತಾಯ ಎನ್ನುತ್ತಾರೆ ಕೂಲಿ ನೇಕಾರ ಕಾರ್ಮಿಕರ ಬಳಗ ಸಂಚಾಲಕ ರವಿ ಪಾಟೀಲ್.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ’ಮಗ್ಗ ಎಂದರೇ ಮಾಲಿಕ ಒಬ್ಬನೇ ಅಲ್ಲ. ಅಲ್ಲಿ ಕಾರ್ಮಿಕರು ಮುಖ್ಯವಾಗಿರುತ್ತಾರೆ. ಒಂದು ಸೀರೆ ತಯಾರಿಸಲು ಸುಮಾರು 10 ಮಂದಿ ಕಾರ್ಮಿಕರ ಶ್ರಮ ಇರುತ್ತದೆ. ಸೀರೆಗಳ ವಿನ್ಯಾಸದ ಆಧಾರದ ಮೇಲೆ ಕೂಲಿ ನೀಡಲಾಗುತ್ತದೆ. ಆದರೆ ನೀಡುವ ಕೂಲಿ ಮಾತ್ರ ಯಾವುದಕ್ಕೂ ಸಾಲದು. ಕಾರ್ಮಿಕರ ಕಲ್ಯಾಣಕ್ಕೆ ಇರುವ ಸರ್ಕಾರಿ ಯೋಜನೆಗಳಾದರೂ ನಮಗೆ ಸಿಗಲಿ ಎನ್ನುವುದಕ್ಕಾಗಿ ನಮ್ಮ ಪ್ರತಿಭಟನೆ’ ಎನ್ನುತ್ತಾರೆ.

’ಈ ನೇಕಾರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಕಾನೂನು ಬದ್ಧ ಕಾರ್ಮಿಕ  ಹಕ್ಕುಗಳು ಸಿಗಬೇಕೆಂದು, 5-6 ದಶಕಗಳಿಂದ ರಾಜ್ಯದ ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಪರ ವ್ಯಕ್ತಿಗಳು, ಕೂಲಿ ನೇಕಾರ ಕಾರ್ಮಿಕರ ಬಳಗ ಒಳಗೊಂಡಂತೆ ಹಲವು ಸಂಘಟನೆಗಳು ಇಂದಿನವರೆಗೂ ಹೋರಾಡುತ್ತಿವೆ’ ಎಂದರು.

’ನೇಕಾರ ಸಮ್ಮಾನ್ ಯೋಜನೆಯನ್ನು ವಿದ್ಯುತ್ ಚಾಲಿತ ಮಗ್ಗಗಳಲ್ಲೂ ಕೆಲಸ ಮಾಡುವ ಕಾರ್ಮಿಕರಿಗೆ ವಿಸ್ತರಿಸಬೇಕು. ತಿಂಗಳಿಗೆ 5,000 ರೂಪಾಯಿ ನೀಡುವ ಈ ಯೋಜನೆಯನ್ನು ಇವರಿಗೂ ವಿಸ್ತರಿಸಬೇಕು. ಲಾಕ್‌ಡೌನ್ ವೇಳೆ 2,000 ರೂಪಾಯಿ ನೀಡಲಾಯಿತು. ಆದರೆ ಎಷ್ಟೋ ಕಾರ್ಮಿಕರಿಗೆ ಅದು ಸಿಗಲಿಲ್ಲ. ಕಾರ್ಮಿಕರ ಹೆಸರಿನಲ್ಲಿ ಮಾಲೀಕರು ಅದನ್ನು ಪಡೆದುಕೊಂಡರು. ಏಕೆಂದರೆ ನಾನು ಕೂಲಿ ನೇಕಾರ ಕಾರ್ಮಿಕ ಎಂದು ಹೇಳಲು ಕಾರ್ಮಿಕರ ಬಳಿ ಗುರುತಿನ ಚೀಟಿ ಕೂಡ ಇಲ್ಲ’ ಎಂದು ರವಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ನೇಕಾರರು ಎಂದರೆ ಎರಡು ವರ್ಗಳಿವೆ. ಒಂದು ಮಾಲೀಕ ವರ್ಗ ಮತ್ತೊಂದು ಕಾರ್ಮಿಕ ವರ್ಗ. ಆದರೆ ಸರ್ಕಾರ ನೀಡುವ ಯೋಜನೆಗಳ ಪಾಲು ಹೋಗುತ್ತಿರುವುದು ಮಾಲೀಕ ವರ್ಗಕ್ಕೆ. ಸಾಲ ಮನ್ನಾ, ಸಬ್ಸಿಡಿ, ಯಂತ್ರಗಳ ಖರೀದಿಗೆ ಧನಸಹಾಯ ಎಲ್ಲವೂ ಮಾಲೀಕರ ಪರವಾಗಿವೆ. ಕಾರ್ಮಿಕ ವರ್ಗ ಎಂಬ ಒಂದು ವರ್ಗವಿದೆ. ಅವರಿಗೂ ಸರ್ಕಾರಿ ಸೌಲಭ್ಯಗಳು ಬೇಕು ಎಂದು ತಿಳಿಸುವ ಪ್ರಯತ್ನ ನಾವು ಮಾಡುತ್ತಿದ್ದೆವೆ ಎಂದು ಹೇಳುತ್ತಾರೆ ರವಿ ಪಾಟೀಲ್.

’ಕಾರ್ಮಿಕರಿಗೆ ದಿನೇ ದಿನೇ ಕೂಲಿ ಹೆಚ್ಚು ಮಾಡುವ ಬದಲು ಕಡಿಮೆ ಮಾಡುತ್ತಿದ್ದಾರೆ. ಉದ್ಯಮ ಚೆನ್ನಾಗಿ ನಡೆಯುತ್ತಿದ್ದರೂ, ಸೀರೆ ವ್ಯಾಪಾರವಾಗುತ್ತಿಲ್ಲ ಎಂದು ನೆಪ ಹೇಳುತ್ತಾ ಕೂಲಿ ಕಡಿಮೆ ನೀಡುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮತ್ತ ತಿರುಗಿ ನೋಡುತ್ತಿಲ್ಲ, ನಾವು ಹೇಗೆ ಬದುಕಬೇಕು? ಎಂಬುದು ಕಾರ್ಮಿಕರ ಅಳಲು.

ಕೂಲಿ ನೇಕಾರರ ಕಾರ್ಮಿಕ ಬಳಗದ ಬೇಡಿಕೆಗಳ ಮನವಿ ಪತ್ರ ಇಲ್ಲಿದೆ.

’ಈ ಬೇಡಿಕೆಗಳ ಮೇಲೆ ಪ್ರತಿಭಟನೆ ಮಾಡಿ, ಸದನದಲ್ಲಿ ಈ ಬಗ್ಗೆ ಮಾತನಾಡಲು ಮನವಿ ಪತ್ರಗಳನ್ನು ಜಿಲ್ಲಾಡಳಿತ, ಜವಳಿ ಸಚಿವರು, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಎಲ್ಲರಿಗೂ ಮನವಿ ಕೊಟ್ಟಿದ್ದೇವು. ಬೆಳಗಾವಿ ದಕ್ಷಿಣದ ಶಾಸಕ ಅಭಯ ಪಾಟೀಲರು ಮಾತ್ರ ಮಾತನಾಡಿದರು. ಆದರೂ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ’ ಎನ್ನುತ್ತಾರೆ ರವಿ ಪಾಟೀಲ್.

ದಶಕಗಳಿಂದ ದುಡಿಯುತ್ತಾ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಿ, ಕಷ್ಟದಲ್ಲಿರುವ ನೇಕಾರರ ಕಲ್ಯಾಣಕ್ಕಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಮಾನವೀಯತೆ ಮೆರೆಯಬೇಕಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...