Homeಕರ್ನಾಟಕದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕಾರ್ಮಿಕರಿಗೆ ಇರುವಂತೆಯೇ ನಮಗೂ ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನೇಕಾರರ ಒತ್ತಾಯ.

- Advertisement -
- Advertisement -

ರಾಜ್ಯದ ಬೆಳಗಾವಿ, ಹಾವೇರಿ, ಚಿತ್ರದುರ್ಗ ಸೇರಿದಂತೆ ಎಂಟು-ಹತ್ತು ಜಿಲ್ಲೆಗಳಲ್ಲಿ ಜವಳಿ ಉದ್ದಿಮೆಯು ಅತ್ಯಾಧುನಿಕಗೊಂಡು ಬೃಹದಾಕಾರವಾಗಿ ಬೆಳೆದು ನಿಂತಿದೆ. ಆದರೆ ಮಗ್ಗಗಳಲ್ಲಿ ದುಡಿಯುವ ಕೂಲಿ ನೇಕಾರ ಕಾರ್ಮಿಕರ ಪರಿಸ್ಥಿತಿ ಮಾತ್ರ ಶೋಚನೀಯವಾಗಿದೆ. ದಶಕಗಳಿಂದ ದುಡಿದರೂ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಈ ಜನರಿಗಾಗಿ ಕೂಲಿ ನೇಕಾರ ಕಾರ್ಮಿಕರ ಬಳಗ ಸತತ ದನಿಯೆತ್ತುತ್ತಲೇ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಮಾಹಿತಿ ಪ್ರಕಾರ ಒಂದು ಲಕ್ಷದ ಐವತ್ತು ಸಾವಿರ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ. ಅಂದರೆ ಎರಡೂವರೆ ಲಕ್ಷ ಕೂಲಿ ನೇಕಾರ ಕಾರ್ಮಿಕಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಲ್ಲಿಯವರೆಗೂ ಒಂದು ಕಲ್ಯಾಣ ಮಂಡಳಿ ಇಲ್ಲ. ಸರ್ಕಾರ ಯಾವುದೇ ಕಾರ್ಮಿಕ ಯೋಜನೆಗಳು ಇವರಿಗೆ ತಲುಪುತ್ತಿಲ್ಲ. ಏಕೆಂದರೆ ಇವರನ್ನು ಕಾರ್ಮಿಕರು ಎಂದು ಪರಿಗಣಿಸಲು ಯಾವುದೇ ಆಧಾರವಿಲ್ಲ!

ಕೂಲಿ ನೇಕಾರ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು, ಕಲ್ಯಾಣ ಮಂಡಳಿ ಸ್ಥಾಪಿಸಲು ಒತ್ತಾಯ

ಕೂಲಿ ನೇಕಾರ ಕಾರ್ಮಿಕ ಎಂದು ಗುರುತಿಸಲು ಬೇಕಾದ ಒಂದು ಗುರುತಿನ ಚೀಟಿ ಕೂಡ ಈ ಇವರಿಗೆ ದೊರೆತಿಲ್ಲ. ಕೆಲಸ ನಿರ್ವಹಿಸುವ ಮಗ್ಗಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ತೋರಿಸಲು ಹಾಜರಿ ಪುಸ್ತಕ ಕೂಡ ಇಲ್ಲ. ಇನ್ನೂ ಸರ್ಕಾರದ ಪಿಎಫ್‌ ಯೋಜನೆ ಇವರಿಗೆ ಸಿಗುವುದು ಕನಸಿನ ಮಾತು. ಇಂತಹ ಸಂಕಷ್ಟದಲ್ಲಿ ರಾಜ್ಯದ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಕಾರ್ಮಿಕರು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ದುರಂತ.

ಲಾಕ್‌ಡೌನ್‌ ಸಮಯದಲ್ಲಿ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದನಿಯೆತ್ತಿದ್ದರು. “ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೆ ಹೊಣೆ. ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: 6 ಜನ ನೇಕಾರರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೆ ಹೊಣೆ: ಸಿದ್ದರಾಮಯ್ಯ

“ನಮ್ಮನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕೂಲಿ ಕಾರ್ಮಿಕರಿಗೆ ಇರುವಂತೆಯೇ ನಮಗೂ ಒಂದು ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನಮ್ಮ 6-7 ದಶಕಗಳ ಒತ್ತಾಯ ಎನ್ನುತ್ತಾರೆ ಕೂಲಿ ನೇಕಾರ ಕಾರ್ಮಿಕರ ಬಳಗ ಸಂಚಾಲಕ ರವಿ ಪಾಟೀಲ್.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ’ಮಗ್ಗ ಎಂದರೇ ಮಾಲಿಕ ಒಬ್ಬನೇ ಅಲ್ಲ. ಅಲ್ಲಿ ಕಾರ್ಮಿಕರು ಮುಖ್ಯವಾಗಿರುತ್ತಾರೆ. ಒಂದು ಸೀರೆ ತಯಾರಿಸಲು ಸುಮಾರು 10 ಮಂದಿ ಕಾರ್ಮಿಕರ ಶ್ರಮ ಇರುತ್ತದೆ. ಸೀರೆಗಳ ವಿನ್ಯಾಸದ ಆಧಾರದ ಮೇಲೆ ಕೂಲಿ ನೀಡಲಾಗುತ್ತದೆ. ಆದರೆ ನೀಡುವ ಕೂಲಿ ಮಾತ್ರ ಯಾವುದಕ್ಕೂ ಸಾಲದು. ಕಾರ್ಮಿಕರ ಕಲ್ಯಾಣಕ್ಕೆ ಇರುವ ಸರ್ಕಾರಿ ಯೋಜನೆಗಳಾದರೂ ನಮಗೆ ಸಿಗಲಿ ಎನ್ನುವುದಕ್ಕಾಗಿ ನಮ್ಮ ಪ್ರತಿಭಟನೆ’ ಎನ್ನುತ್ತಾರೆ.

’ಈ ನೇಕಾರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಕಾನೂನು ಬದ್ಧ ಕಾರ್ಮಿಕ  ಹಕ್ಕುಗಳು ಸಿಗಬೇಕೆಂದು, 5-6 ದಶಕಗಳಿಂದ ರಾಜ್ಯದ ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಪರ ವ್ಯಕ್ತಿಗಳು, ಕೂಲಿ ನೇಕಾರ ಕಾರ್ಮಿಕರ ಬಳಗ ಒಳಗೊಂಡಂತೆ ಹಲವು ಸಂಘಟನೆಗಳು ಇಂದಿನವರೆಗೂ ಹೋರಾಡುತ್ತಿವೆ’ ಎಂದರು.

’ನೇಕಾರ ಸಮ್ಮಾನ್ ಯೋಜನೆಯನ್ನು ವಿದ್ಯುತ್ ಚಾಲಿತ ಮಗ್ಗಗಳಲ್ಲೂ ಕೆಲಸ ಮಾಡುವ ಕಾರ್ಮಿಕರಿಗೆ ವಿಸ್ತರಿಸಬೇಕು. ತಿಂಗಳಿಗೆ 5,000 ರೂಪಾಯಿ ನೀಡುವ ಈ ಯೋಜನೆಯನ್ನು ಇವರಿಗೂ ವಿಸ್ತರಿಸಬೇಕು. ಲಾಕ್‌ಡೌನ್ ವೇಳೆ 2,000 ರೂಪಾಯಿ ನೀಡಲಾಯಿತು. ಆದರೆ ಎಷ್ಟೋ ಕಾರ್ಮಿಕರಿಗೆ ಅದು ಸಿಗಲಿಲ್ಲ. ಕಾರ್ಮಿಕರ ಹೆಸರಿನಲ್ಲಿ ಮಾಲೀಕರು ಅದನ್ನು ಪಡೆದುಕೊಂಡರು. ಏಕೆಂದರೆ ನಾನು ಕೂಲಿ ನೇಕಾರ ಕಾರ್ಮಿಕ ಎಂದು ಹೇಳಲು ಕಾರ್ಮಿಕರ ಬಳಿ ಗುರುತಿನ ಚೀಟಿ ಕೂಡ ಇಲ್ಲ’ ಎಂದು ರವಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ನೇಕಾರರು ಎಂದರೆ ಎರಡು ವರ್ಗಳಿವೆ. ಒಂದು ಮಾಲೀಕ ವರ್ಗ ಮತ್ತೊಂದು ಕಾರ್ಮಿಕ ವರ್ಗ. ಆದರೆ ಸರ್ಕಾರ ನೀಡುವ ಯೋಜನೆಗಳ ಪಾಲು ಹೋಗುತ್ತಿರುವುದು ಮಾಲೀಕ ವರ್ಗಕ್ಕೆ. ಸಾಲ ಮನ್ನಾ, ಸಬ್ಸಿಡಿ, ಯಂತ್ರಗಳ ಖರೀದಿಗೆ ಧನಸಹಾಯ ಎಲ್ಲವೂ ಮಾಲೀಕರ ಪರವಾಗಿವೆ. ಕಾರ್ಮಿಕ ವರ್ಗ ಎಂಬ ಒಂದು ವರ್ಗವಿದೆ. ಅವರಿಗೂ ಸರ್ಕಾರಿ ಸೌಲಭ್ಯಗಳು ಬೇಕು ಎಂದು ತಿಳಿಸುವ ಪ್ರಯತ್ನ ನಾವು ಮಾಡುತ್ತಿದ್ದೆವೆ ಎಂದು ಹೇಳುತ್ತಾರೆ ರವಿ ಪಾಟೀಲ್.

’ಕಾರ್ಮಿಕರಿಗೆ ದಿನೇ ದಿನೇ ಕೂಲಿ ಹೆಚ್ಚು ಮಾಡುವ ಬದಲು ಕಡಿಮೆ ಮಾಡುತ್ತಿದ್ದಾರೆ. ಉದ್ಯಮ ಚೆನ್ನಾಗಿ ನಡೆಯುತ್ತಿದ್ದರೂ, ಸೀರೆ ವ್ಯಾಪಾರವಾಗುತ್ತಿಲ್ಲ ಎಂದು ನೆಪ ಹೇಳುತ್ತಾ ಕೂಲಿ ಕಡಿಮೆ ನೀಡುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮತ್ತ ತಿರುಗಿ ನೋಡುತ್ತಿಲ್ಲ, ನಾವು ಹೇಗೆ ಬದುಕಬೇಕು? ಎಂಬುದು ಕಾರ್ಮಿಕರ ಅಳಲು.

ಕೂಲಿ ನೇಕಾರರ ಕಾರ್ಮಿಕ ಬಳಗದ ಬೇಡಿಕೆಗಳ ಮನವಿ ಪತ್ರ ಇಲ್ಲಿದೆ.

’ಈ ಬೇಡಿಕೆಗಳ ಮೇಲೆ ಪ್ರತಿಭಟನೆ ಮಾಡಿ, ಸದನದಲ್ಲಿ ಈ ಬಗ್ಗೆ ಮಾತನಾಡಲು ಮನವಿ ಪತ್ರಗಳನ್ನು ಜಿಲ್ಲಾಡಳಿತ, ಜವಳಿ ಸಚಿವರು, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಎಲ್ಲರಿಗೂ ಮನವಿ ಕೊಟ್ಟಿದ್ದೇವು. ಬೆಳಗಾವಿ ದಕ್ಷಿಣದ ಶಾಸಕ ಅಭಯ ಪಾಟೀಲರು ಮಾತ್ರ ಮಾತನಾಡಿದರು. ಆದರೂ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ’ ಎನ್ನುತ್ತಾರೆ ರವಿ ಪಾಟೀಲ್.

ದಶಕಗಳಿಂದ ದುಡಿಯುತ್ತಾ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಿ, ಕಷ್ಟದಲ್ಲಿರುವ ನೇಕಾರರ ಕಲ್ಯಾಣಕ್ಕಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಮಾನವೀಯತೆ ಮೆರೆಯಬೇಕಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....