Homeಕರ್ನಾಟಕದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕಾರ್ಮಿಕರಿಗೆ ಇರುವಂತೆಯೇ ನಮಗೂ ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನೇಕಾರರ ಒತ್ತಾಯ.

- Advertisement -
- Advertisement -

ರಾಜ್ಯದ ಬೆಳಗಾವಿ, ಹಾವೇರಿ, ಚಿತ್ರದುರ್ಗ ಸೇರಿದಂತೆ ಎಂಟು-ಹತ್ತು ಜಿಲ್ಲೆಗಳಲ್ಲಿ ಜವಳಿ ಉದ್ದಿಮೆಯು ಅತ್ಯಾಧುನಿಕಗೊಂಡು ಬೃಹದಾಕಾರವಾಗಿ ಬೆಳೆದು ನಿಂತಿದೆ. ಆದರೆ ಮಗ್ಗಗಳಲ್ಲಿ ದುಡಿಯುವ ಕೂಲಿ ನೇಕಾರ ಕಾರ್ಮಿಕರ ಪರಿಸ್ಥಿತಿ ಮಾತ್ರ ಶೋಚನೀಯವಾಗಿದೆ. ದಶಕಗಳಿಂದ ದುಡಿದರೂ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಈ ಜನರಿಗಾಗಿ ಕೂಲಿ ನೇಕಾರ ಕಾರ್ಮಿಕರ ಬಳಗ ಸತತ ದನಿಯೆತ್ತುತ್ತಲೇ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಮಾಹಿತಿ ಪ್ರಕಾರ ಒಂದು ಲಕ್ಷದ ಐವತ್ತು ಸಾವಿರ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ. ಅಂದರೆ ಎರಡೂವರೆ ಲಕ್ಷ ಕೂಲಿ ನೇಕಾರ ಕಾರ್ಮಿಕಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಲ್ಲಿಯವರೆಗೂ ಒಂದು ಕಲ್ಯಾಣ ಮಂಡಳಿ ಇಲ್ಲ. ಸರ್ಕಾರ ಯಾವುದೇ ಕಾರ್ಮಿಕ ಯೋಜನೆಗಳು ಇವರಿಗೆ ತಲುಪುತ್ತಿಲ್ಲ. ಏಕೆಂದರೆ ಇವರನ್ನು ಕಾರ್ಮಿಕರು ಎಂದು ಪರಿಗಣಿಸಲು ಯಾವುದೇ ಆಧಾರವಿಲ್ಲ!

ಕೂಲಿ ನೇಕಾರ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು, ಕಲ್ಯಾಣ ಮಂಡಳಿ ಸ್ಥಾಪಿಸಲು ಒತ್ತಾಯ

ಕೂಲಿ ನೇಕಾರ ಕಾರ್ಮಿಕ ಎಂದು ಗುರುತಿಸಲು ಬೇಕಾದ ಒಂದು ಗುರುತಿನ ಚೀಟಿ ಕೂಡ ಈ ಇವರಿಗೆ ದೊರೆತಿಲ್ಲ. ಕೆಲಸ ನಿರ್ವಹಿಸುವ ಮಗ್ಗಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ತೋರಿಸಲು ಹಾಜರಿ ಪುಸ್ತಕ ಕೂಡ ಇಲ್ಲ. ಇನ್ನೂ ಸರ್ಕಾರದ ಪಿಎಫ್‌ ಯೋಜನೆ ಇವರಿಗೆ ಸಿಗುವುದು ಕನಸಿನ ಮಾತು. ಇಂತಹ ಸಂಕಷ್ಟದಲ್ಲಿ ರಾಜ್ಯದ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಕಾರ್ಮಿಕರು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ದುರಂತ.

ಲಾಕ್‌ಡೌನ್‌ ಸಮಯದಲ್ಲಿ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದನಿಯೆತ್ತಿದ್ದರು. “ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೆ ಹೊಣೆ. ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: 6 ಜನ ನೇಕಾರರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೆ ಹೊಣೆ: ಸಿದ್ದರಾಮಯ್ಯ

“ನಮ್ಮನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕೂಲಿ ಕಾರ್ಮಿಕರಿಗೆ ಇರುವಂತೆಯೇ ನಮಗೂ ಒಂದು ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನಮ್ಮ 6-7 ದಶಕಗಳ ಒತ್ತಾಯ ಎನ್ನುತ್ತಾರೆ ಕೂಲಿ ನೇಕಾರ ಕಾರ್ಮಿಕರ ಬಳಗ ಸಂಚಾಲಕ ರವಿ ಪಾಟೀಲ್.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ’ಮಗ್ಗ ಎಂದರೇ ಮಾಲಿಕ ಒಬ್ಬನೇ ಅಲ್ಲ. ಅಲ್ಲಿ ಕಾರ್ಮಿಕರು ಮುಖ್ಯವಾಗಿರುತ್ತಾರೆ. ಒಂದು ಸೀರೆ ತಯಾರಿಸಲು ಸುಮಾರು 10 ಮಂದಿ ಕಾರ್ಮಿಕರ ಶ್ರಮ ಇರುತ್ತದೆ. ಸೀರೆಗಳ ವಿನ್ಯಾಸದ ಆಧಾರದ ಮೇಲೆ ಕೂಲಿ ನೀಡಲಾಗುತ್ತದೆ. ಆದರೆ ನೀಡುವ ಕೂಲಿ ಮಾತ್ರ ಯಾವುದಕ್ಕೂ ಸಾಲದು. ಕಾರ್ಮಿಕರ ಕಲ್ಯಾಣಕ್ಕೆ ಇರುವ ಸರ್ಕಾರಿ ಯೋಜನೆಗಳಾದರೂ ನಮಗೆ ಸಿಗಲಿ ಎನ್ನುವುದಕ್ಕಾಗಿ ನಮ್ಮ ಪ್ರತಿಭಟನೆ’ ಎನ್ನುತ್ತಾರೆ.

’ಈ ನೇಕಾರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಕಾನೂನು ಬದ್ಧ ಕಾರ್ಮಿಕ  ಹಕ್ಕುಗಳು ಸಿಗಬೇಕೆಂದು, 5-6 ದಶಕಗಳಿಂದ ರಾಜ್ಯದ ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಪರ ವ್ಯಕ್ತಿಗಳು, ಕೂಲಿ ನೇಕಾರ ಕಾರ್ಮಿಕರ ಬಳಗ ಒಳಗೊಂಡಂತೆ ಹಲವು ಸಂಘಟನೆಗಳು ಇಂದಿನವರೆಗೂ ಹೋರಾಡುತ್ತಿವೆ’ ಎಂದರು.

’ನೇಕಾರ ಸಮ್ಮಾನ್ ಯೋಜನೆಯನ್ನು ವಿದ್ಯುತ್ ಚಾಲಿತ ಮಗ್ಗಗಳಲ್ಲೂ ಕೆಲಸ ಮಾಡುವ ಕಾರ್ಮಿಕರಿಗೆ ವಿಸ್ತರಿಸಬೇಕು. ತಿಂಗಳಿಗೆ 5,000 ರೂಪಾಯಿ ನೀಡುವ ಈ ಯೋಜನೆಯನ್ನು ಇವರಿಗೂ ವಿಸ್ತರಿಸಬೇಕು. ಲಾಕ್‌ಡೌನ್ ವೇಳೆ 2,000 ರೂಪಾಯಿ ನೀಡಲಾಯಿತು. ಆದರೆ ಎಷ್ಟೋ ಕಾರ್ಮಿಕರಿಗೆ ಅದು ಸಿಗಲಿಲ್ಲ. ಕಾರ್ಮಿಕರ ಹೆಸರಿನಲ್ಲಿ ಮಾಲೀಕರು ಅದನ್ನು ಪಡೆದುಕೊಂಡರು. ಏಕೆಂದರೆ ನಾನು ಕೂಲಿ ನೇಕಾರ ಕಾರ್ಮಿಕ ಎಂದು ಹೇಳಲು ಕಾರ್ಮಿಕರ ಬಳಿ ಗುರುತಿನ ಚೀಟಿ ಕೂಡ ಇಲ್ಲ’ ಎಂದು ರವಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ನೇಕಾರರು ಎಂದರೆ ಎರಡು ವರ್ಗಳಿವೆ. ಒಂದು ಮಾಲೀಕ ವರ್ಗ ಮತ್ತೊಂದು ಕಾರ್ಮಿಕ ವರ್ಗ. ಆದರೆ ಸರ್ಕಾರ ನೀಡುವ ಯೋಜನೆಗಳ ಪಾಲು ಹೋಗುತ್ತಿರುವುದು ಮಾಲೀಕ ವರ್ಗಕ್ಕೆ. ಸಾಲ ಮನ್ನಾ, ಸಬ್ಸಿಡಿ, ಯಂತ್ರಗಳ ಖರೀದಿಗೆ ಧನಸಹಾಯ ಎಲ್ಲವೂ ಮಾಲೀಕರ ಪರವಾಗಿವೆ. ಕಾರ್ಮಿಕ ವರ್ಗ ಎಂಬ ಒಂದು ವರ್ಗವಿದೆ. ಅವರಿಗೂ ಸರ್ಕಾರಿ ಸೌಲಭ್ಯಗಳು ಬೇಕು ಎಂದು ತಿಳಿಸುವ ಪ್ರಯತ್ನ ನಾವು ಮಾಡುತ್ತಿದ್ದೆವೆ ಎಂದು ಹೇಳುತ್ತಾರೆ ರವಿ ಪಾಟೀಲ್.

’ಕಾರ್ಮಿಕರಿಗೆ ದಿನೇ ದಿನೇ ಕೂಲಿ ಹೆಚ್ಚು ಮಾಡುವ ಬದಲು ಕಡಿಮೆ ಮಾಡುತ್ತಿದ್ದಾರೆ. ಉದ್ಯಮ ಚೆನ್ನಾಗಿ ನಡೆಯುತ್ತಿದ್ದರೂ, ಸೀರೆ ವ್ಯಾಪಾರವಾಗುತ್ತಿಲ್ಲ ಎಂದು ನೆಪ ಹೇಳುತ್ತಾ ಕೂಲಿ ಕಡಿಮೆ ನೀಡುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮತ್ತ ತಿರುಗಿ ನೋಡುತ್ತಿಲ್ಲ, ನಾವು ಹೇಗೆ ಬದುಕಬೇಕು? ಎಂಬುದು ಕಾರ್ಮಿಕರ ಅಳಲು.

ಕೂಲಿ ನೇಕಾರರ ಕಾರ್ಮಿಕ ಬಳಗದ ಬೇಡಿಕೆಗಳ ಮನವಿ ಪತ್ರ ಇಲ್ಲಿದೆ.

’ಈ ಬೇಡಿಕೆಗಳ ಮೇಲೆ ಪ್ರತಿಭಟನೆ ಮಾಡಿ, ಸದನದಲ್ಲಿ ಈ ಬಗ್ಗೆ ಮಾತನಾಡಲು ಮನವಿ ಪತ್ರಗಳನ್ನು ಜಿಲ್ಲಾಡಳಿತ, ಜವಳಿ ಸಚಿವರು, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಎಲ್ಲರಿಗೂ ಮನವಿ ಕೊಟ್ಟಿದ್ದೇವು. ಬೆಳಗಾವಿ ದಕ್ಷಿಣದ ಶಾಸಕ ಅಭಯ ಪಾಟೀಲರು ಮಾತ್ರ ಮಾತನಾಡಿದರು. ಆದರೂ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ’ ಎನ್ನುತ್ತಾರೆ ರವಿ ಪಾಟೀಲ್.

ದಶಕಗಳಿಂದ ದುಡಿಯುತ್ತಾ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಿ, ಕಷ್ಟದಲ್ಲಿರುವ ನೇಕಾರರ ಕಲ್ಯಾಣಕ್ಕಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಮಾನವೀಯತೆ ಮೆರೆಯಬೇಕಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...