Homeಕರ್ನಾಟಕದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕಾರ್ಮಿಕರಿಗೆ ಇರುವಂತೆಯೇ ನಮಗೂ ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನೇಕಾರರ ಒತ್ತಾಯ.

- Advertisement -
- Advertisement -

ರಾಜ್ಯದ ಬೆಳಗಾವಿ, ಹಾವೇರಿ, ಚಿತ್ರದುರ್ಗ ಸೇರಿದಂತೆ ಎಂಟು-ಹತ್ತು ಜಿಲ್ಲೆಗಳಲ್ಲಿ ಜವಳಿ ಉದ್ದಿಮೆಯು ಅತ್ಯಾಧುನಿಕಗೊಂಡು ಬೃಹದಾಕಾರವಾಗಿ ಬೆಳೆದು ನಿಂತಿದೆ. ಆದರೆ ಮಗ್ಗಗಳಲ್ಲಿ ದುಡಿಯುವ ಕೂಲಿ ನೇಕಾರ ಕಾರ್ಮಿಕರ ಪರಿಸ್ಥಿತಿ ಮಾತ್ರ ಶೋಚನೀಯವಾಗಿದೆ. ದಶಕಗಳಿಂದ ದುಡಿದರೂ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಈ ಜನರಿಗಾಗಿ ಕೂಲಿ ನೇಕಾರ ಕಾರ್ಮಿಕರ ಬಳಗ ಸತತ ದನಿಯೆತ್ತುತ್ತಲೇ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಮಾಹಿತಿ ಪ್ರಕಾರ ಒಂದು ಲಕ್ಷದ ಐವತ್ತು ಸಾವಿರ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ. ಅಂದರೆ ಎರಡೂವರೆ ಲಕ್ಷ ಕೂಲಿ ನೇಕಾರ ಕಾರ್ಮಿಕಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಲ್ಲಿಯವರೆಗೂ ಒಂದು ಕಲ್ಯಾಣ ಮಂಡಳಿ ಇಲ್ಲ. ಸರ್ಕಾರ ಯಾವುದೇ ಕಾರ್ಮಿಕ ಯೋಜನೆಗಳು ಇವರಿಗೆ ತಲುಪುತ್ತಿಲ್ಲ. ಏಕೆಂದರೆ ಇವರನ್ನು ಕಾರ್ಮಿಕರು ಎಂದು ಪರಿಗಣಿಸಲು ಯಾವುದೇ ಆಧಾರವಿಲ್ಲ!

ಕೂಲಿ ನೇಕಾರ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು, ಕಲ್ಯಾಣ ಮಂಡಳಿ ಸ್ಥಾಪಿಸಲು ಒತ್ತಾಯ

ಕೂಲಿ ನೇಕಾರ ಕಾರ್ಮಿಕ ಎಂದು ಗುರುತಿಸಲು ಬೇಕಾದ ಒಂದು ಗುರುತಿನ ಚೀಟಿ ಕೂಡ ಈ ಇವರಿಗೆ ದೊರೆತಿಲ್ಲ. ಕೆಲಸ ನಿರ್ವಹಿಸುವ ಮಗ್ಗಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ತೋರಿಸಲು ಹಾಜರಿ ಪುಸ್ತಕ ಕೂಡ ಇಲ್ಲ. ಇನ್ನೂ ಸರ್ಕಾರದ ಪಿಎಫ್‌ ಯೋಜನೆ ಇವರಿಗೆ ಸಿಗುವುದು ಕನಸಿನ ಮಾತು. ಇಂತಹ ಸಂಕಷ್ಟದಲ್ಲಿ ರಾಜ್ಯದ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಕಾರ್ಮಿಕರು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ದುರಂತ.

ಲಾಕ್‌ಡೌನ್‌ ಸಮಯದಲ್ಲಿ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದನಿಯೆತ್ತಿದ್ದರು. “ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೆ ಹೊಣೆ. ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: 6 ಜನ ನೇಕಾರರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೆ ಹೊಣೆ: ಸಿದ್ದರಾಮಯ್ಯ

“ನಮ್ಮನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕೂಲಿ ಕಾರ್ಮಿಕರಿಗೆ ಇರುವಂತೆಯೇ ನಮಗೂ ಒಂದು ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನಮ್ಮ 6-7 ದಶಕಗಳ ಒತ್ತಾಯ ಎನ್ನುತ್ತಾರೆ ಕೂಲಿ ನೇಕಾರ ಕಾರ್ಮಿಕರ ಬಳಗ ಸಂಚಾಲಕ ರವಿ ಪಾಟೀಲ್.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ’ಮಗ್ಗ ಎಂದರೇ ಮಾಲಿಕ ಒಬ್ಬನೇ ಅಲ್ಲ. ಅಲ್ಲಿ ಕಾರ್ಮಿಕರು ಮುಖ್ಯವಾಗಿರುತ್ತಾರೆ. ಒಂದು ಸೀರೆ ತಯಾರಿಸಲು ಸುಮಾರು 10 ಮಂದಿ ಕಾರ್ಮಿಕರ ಶ್ರಮ ಇರುತ್ತದೆ. ಸೀರೆಗಳ ವಿನ್ಯಾಸದ ಆಧಾರದ ಮೇಲೆ ಕೂಲಿ ನೀಡಲಾಗುತ್ತದೆ. ಆದರೆ ನೀಡುವ ಕೂಲಿ ಮಾತ್ರ ಯಾವುದಕ್ಕೂ ಸಾಲದು. ಕಾರ್ಮಿಕರ ಕಲ್ಯಾಣಕ್ಕೆ ಇರುವ ಸರ್ಕಾರಿ ಯೋಜನೆಗಳಾದರೂ ನಮಗೆ ಸಿಗಲಿ ಎನ್ನುವುದಕ್ಕಾಗಿ ನಮ್ಮ ಪ್ರತಿಭಟನೆ’ ಎನ್ನುತ್ತಾರೆ.

’ಈ ನೇಕಾರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಕಾನೂನು ಬದ್ಧ ಕಾರ್ಮಿಕ  ಹಕ್ಕುಗಳು ಸಿಗಬೇಕೆಂದು, 5-6 ದಶಕಗಳಿಂದ ರಾಜ್ಯದ ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಪರ ವ್ಯಕ್ತಿಗಳು, ಕೂಲಿ ನೇಕಾರ ಕಾರ್ಮಿಕರ ಬಳಗ ಒಳಗೊಂಡಂತೆ ಹಲವು ಸಂಘಟನೆಗಳು ಇಂದಿನವರೆಗೂ ಹೋರಾಡುತ್ತಿವೆ’ ಎಂದರು.

’ನೇಕಾರ ಸಮ್ಮಾನ್ ಯೋಜನೆಯನ್ನು ವಿದ್ಯುತ್ ಚಾಲಿತ ಮಗ್ಗಗಳಲ್ಲೂ ಕೆಲಸ ಮಾಡುವ ಕಾರ್ಮಿಕರಿಗೆ ವಿಸ್ತರಿಸಬೇಕು. ತಿಂಗಳಿಗೆ 5,000 ರೂಪಾಯಿ ನೀಡುವ ಈ ಯೋಜನೆಯನ್ನು ಇವರಿಗೂ ವಿಸ್ತರಿಸಬೇಕು. ಲಾಕ್‌ಡೌನ್ ವೇಳೆ 2,000 ರೂಪಾಯಿ ನೀಡಲಾಯಿತು. ಆದರೆ ಎಷ್ಟೋ ಕಾರ್ಮಿಕರಿಗೆ ಅದು ಸಿಗಲಿಲ್ಲ. ಕಾರ್ಮಿಕರ ಹೆಸರಿನಲ್ಲಿ ಮಾಲೀಕರು ಅದನ್ನು ಪಡೆದುಕೊಂಡರು. ಏಕೆಂದರೆ ನಾನು ಕೂಲಿ ನೇಕಾರ ಕಾರ್ಮಿಕ ಎಂದು ಹೇಳಲು ಕಾರ್ಮಿಕರ ಬಳಿ ಗುರುತಿನ ಚೀಟಿ ಕೂಡ ಇಲ್ಲ’ ಎಂದು ರವಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ನೇಕಾರರು ಎಂದರೆ ಎರಡು ವರ್ಗಳಿವೆ. ಒಂದು ಮಾಲೀಕ ವರ್ಗ ಮತ್ತೊಂದು ಕಾರ್ಮಿಕ ವರ್ಗ. ಆದರೆ ಸರ್ಕಾರ ನೀಡುವ ಯೋಜನೆಗಳ ಪಾಲು ಹೋಗುತ್ತಿರುವುದು ಮಾಲೀಕ ವರ್ಗಕ್ಕೆ. ಸಾಲ ಮನ್ನಾ, ಸಬ್ಸಿಡಿ, ಯಂತ್ರಗಳ ಖರೀದಿಗೆ ಧನಸಹಾಯ ಎಲ್ಲವೂ ಮಾಲೀಕರ ಪರವಾಗಿವೆ. ಕಾರ್ಮಿಕ ವರ್ಗ ಎಂಬ ಒಂದು ವರ್ಗವಿದೆ. ಅವರಿಗೂ ಸರ್ಕಾರಿ ಸೌಲಭ್ಯಗಳು ಬೇಕು ಎಂದು ತಿಳಿಸುವ ಪ್ರಯತ್ನ ನಾವು ಮಾಡುತ್ತಿದ್ದೆವೆ ಎಂದು ಹೇಳುತ್ತಾರೆ ರವಿ ಪಾಟೀಲ್.

’ಕಾರ್ಮಿಕರಿಗೆ ದಿನೇ ದಿನೇ ಕೂಲಿ ಹೆಚ್ಚು ಮಾಡುವ ಬದಲು ಕಡಿಮೆ ಮಾಡುತ್ತಿದ್ದಾರೆ. ಉದ್ಯಮ ಚೆನ್ನಾಗಿ ನಡೆಯುತ್ತಿದ್ದರೂ, ಸೀರೆ ವ್ಯಾಪಾರವಾಗುತ್ತಿಲ್ಲ ಎಂದು ನೆಪ ಹೇಳುತ್ತಾ ಕೂಲಿ ಕಡಿಮೆ ನೀಡುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮತ್ತ ತಿರುಗಿ ನೋಡುತ್ತಿಲ್ಲ, ನಾವು ಹೇಗೆ ಬದುಕಬೇಕು? ಎಂಬುದು ಕಾರ್ಮಿಕರ ಅಳಲು.

ಕೂಲಿ ನೇಕಾರರ ಕಾರ್ಮಿಕ ಬಳಗದ ಬೇಡಿಕೆಗಳ ಮನವಿ ಪತ್ರ ಇಲ್ಲಿದೆ.

’ಈ ಬೇಡಿಕೆಗಳ ಮೇಲೆ ಪ್ರತಿಭಟನೆ ಮಾಡಿ, ಸದನದಲ್ಲಿ ಈ ಬಗ್ಗೆ ಮಾತನಾಡಲು ಮನವಿ ಪತ್ರಗಳನ್ನು ಜಿಲ್ಲಾಡಳಿತ, ಜವಳಿ ಸಚಿವರು, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಎಲ್ಲರಿಗೂ ಮನವಿ ಕೊಟ್ಟಿದ್ದೇವು. ಬೆಳಗಾವಿ ದಕ್ಷಿಣದ ಶಾಸಕ ಅಭಯ ಪಾಟೀಲರು ಮಾತ್ರ ಮಾತನಾಡಿದರು. ಆದರೂ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ’ ಎನ್ನುತ್ತಾರೆ ರವಿ ಪಾಟೀಲ್.

ದಶಕಗಳಿಂದ ದುಡಿಯುತ್ತಾ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಿ, ಕಷ್ಟದಲ್ಲಿರುವ ನೇಕಾರರ ಕಲ್ಯಾಣಕ್ಕಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಮಾನವೀಯತೆ ಮೆರೆಯಬೇಕಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...