Homeಕರ್ನಾಟಕದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕಾರ್ಮಿಕರಿಗೆ ಇರುವಂತೆಯೇ ನಮಗೂ ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನೇಕಾರರ ಒತ್ತಾಯ.

- Advertisement -
- Advertisement -

ರಾಜ್ಯದ ಬೆಳಗಾವಿ, ಹಾವೇರಿ, ಚಿತ್ರದುರ್ಗ ಸೇರಿದಂತೆ ಎಂಟು-ಹತ್ತು ಜಿಲ್ಲೆಗಳಲ್ಲಿ ಜವಳಿ ಉದ್ದಿಮೆಯು ಅತ್ಯಾಧುನಿಕಗೊಂಡು ಬೃಹದಾಕಾರವಾಗಿ ಬೆಳೆದು ನಿಂತಿದೆ. ಆದರೆ ಮಗ್ಗಗಳಲ್ಲಿ ದುಡಿಯುವ ಕೂಲಿ ನೇಕಾರ ಕಾರ್ಮಿಕರ ಪರಿಸ್ಥಿತಿ ಮಾತ್ರ ಶೋಚನೀಯವಾಗಿದೆ. ದಶಕಗಳಿಂದ ದುಡಿದರೂ ಯಾವುದೇ ಸಾಮಾಜಿಕ ಭದ್ರತೆ ಇಲ್ಲದ ಈ ಜನರಿಗಾಗಿ ಕೂಲಿ ನೇಕಾರ ಕಾರ್ಮಿಕರ ಬಳಗ ಸತತ ದನಿಯೆತ್ತುತ್ತಲೇ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಮಾಹಿತಿ ಪ್ರಕಾರ ಒಂದು ಲಕ್ಷದ ಐವತ್ತು ಸಾವಿರ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ. ಅಂದರೆ ಎರಡೂವರೆ ಲಕ್ಷ ಕೂಲಿ ನೇಕಾರ ಕಾರ್ಮಿಕಕರು ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಲ್ಲಿಯವರೆಗೂ ಒಂದು ಕಲ್ಯಾಣ ಮಂಡಳಿ ಇಲ್ಲ. ಸರ್ಕಾರ ಯಾವುದೇ ಕಾರ್ಮಿಕ ಯೋಜನೆಗಳು ಇವರಿಗೆ ತಲುಪುತ್ತಿಲ್ಲ. ಏಕೆಂದರೆ ಇವರನ್ನು ಕಾರ್ಮಿಕರು ಎಂದು ಪರಿಗಣಿಸಲು ಯಾವುದೇ ಆಧಾರವಿಲ್ಲ!

ಕೂಲಿ ನೇಕಾರ ಕಾರ್ಮಿಕರನ್ನು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ತಂದು, ಕಲ್ಯಾಣ ಮಂಡಳಿ ಸ್ಥಾಪಿಸಲು ಒತ್ತಾಯ

ಕೂಲಿ ನೇಕಾರ ಕಾರ್ಮಿಕ ಎಂದು ಗುರುತಿಸಲು ಬೇಕಾದ ಒಂದು ಗುರುತಿನ ಚೀಟಿ ಕೂಡ ಈ ಇವರಿಗೆ ದೊರೆತಿಲ್ಲ. ಕೆಲಸ ನಿರ್ವಹಿಸುವ ಮಗ್ಗಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ತೋರಿಸಲು ಹಾಜರಿ ಪುಸ್ತಕ ಕೂಡ ಇಲ್ಲ. ಇನ್ನೂ ಸರ್ಕಾರದ ಪಿಎಫ್‌ ಯೋಜನೆ ಇವರಿಗೆ ಸಿಗುವುದು ಕನಸಿನ ಮಾತು. ಇಂತಹ ಸಂಕಷ್ಟದಲ್ಲಿ ರಾಜ್ಯದ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಕಾರ್ಮಿಕರು ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲದೆ ಬದುಕುತ್ತಿರುವುದು ದುರಂತ.

ಲಾಕ್‌ಡೌನ್‌ ಸಮಯದಲ್ಲಿ ಈ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಹ ದನಿಯೆತ್ತಿದ್ದರು. “ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಬೆಳಗಾವಿ, ದೊಡ್ಡಬಳ್ಳಾಪುರ, ಧಾರವಾಡ ಮೊದಲಾದ ಜಿಲ್ಲೆಗಳ 6 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರೆ ಹೊಣೆ. ನೇಕಾರರ ಬದುಕು ಸಂಕಷ್ಟದಲ್ಲಿದೆ. ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರದ ಪ್ಯಾಕೇಜ್ ಇನ್ನೂ ಬಿಡುಗಡೆಯಾಗಿಲ್ಲ. ಆ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಬೇಕು” ಎಂದು ಅವರು ಆಗ್ರಹಿಸಿದ್ದರು.

ಇದನ್ನೂ ಓದಿ: 6 ಜನ ನೇಕಾರರ ಆತ್ಮಹತ್ಯೆಗೆ ಮುಖ್ಯಮಂತ್ರಿಗಳೆ ಹೊಣೆ: ಸಿದ್ದರಾಮಯ್ಯ

“ನಮ್ಮನ್ನು ಅಸಂಘಟಿತ ವಲಯದ ಕಾರ್ಮಿಕರು ಎಂದು ಪರಿಗಣಿಸಿ, ಕಾರ್ಮಿಕ ಇಲಾಖೆ ಅಡಿಯಲ್ಲಿ ತಂದು, ಕಟ್ಟಡ ಕೂಲಿ ಕಾರ್ಮಿಕರಿಗೆ ಇರುವಂತೆಯೇ ನಮಗೂ ಒಂದು ಕಲ್ಯಾಣ ಮಂಡಳಿ ಸ್ಥಾಪಿಸಿ ಎಂಬುದು ನಮ್ಮ 6-7 ದಶಕಗಳ ಒತ್ತಾಯ ಎನ್ನುತ್ತಾರೆ ಕೂಲಿ ನೇಕಾರ ಕಾರ್ಮಿಕರ ಬಳಗ ಸಂಚಾಲಕ ರವಿ ಪಾಟೀಲ್.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, ’ಮಗ್ಗ ಎಂದರೇ ಮಾಲಿಕ ಒಬ್ಬನೇ ಅಲ್ಲ. ಅಲ್ಲಿ ಕಾರ್ಮಿಕರು ಮುಖ್ಯವಾಗಿರುತ್ತಾರೆ. ಒಂದು ಸೀರೆ ತಯಾರಿಸಲು ಸುಮಾರು 10 ಮಂದಿ ಕಾರ್ಮಿಕರ ಶ್ರಮ ಇರುತ್ತದೆ. ಸೀರೆಗಳ ವಿನ್ಯಾಸದ ಆಧಾರದ ಮೇಲೆ ಕೂಲಿ ನೀಡಲಾಗುತ್ತದೆ. ಆದರೆ ನೀಡುವ ಕೂಲಿ ಮಾತ್ರ ಯಾವುದಕ್ಕೂ ಸಾಲದು. ಕಾರ್ಮಿಕರ ಕಲ್ಯಾಣಕ್ಕೆ ಇರುವ ಸರ್ಕಾರಿ ಯೋಜನೆಗಳಾದರೂ ನಮಗೆ ಸಿಗಲಿ ಎನ್ನುವುದಕ್ಕಾಗಿ ನಮ್ಮ ಪ್ರತಿಭಟನೆ’ ಎನ್ನುತ್ತಾರೆ.

’ಈ ನೇಕಾರ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಕಾನೂನು ಬದ್ಧ ಕಾರ್ಮಿಕ  ಹಕ್ಕುಗಳು ಸಿಗಬೇಕೆಂದು, 5-6 ದಶಕಗಳಿಂದ ರಾಜ್ಯದ ಕಾರ್ಮಿಕ ಸಂಘಟನೆಗಳು, ಕಾರ್ಮಿಕ ಪರ ವ್ಯಕ್ತಿಗಳು, ಕೂಲಿ ನೇಕಾರ ಕಾರ್ಮಿಕರ ಬಳಗ ಒಳಗೊಂಡಂತೆ ಹಲವು ಸಂಘಟನೆಗಳು ಇಂದಿನವರೆಗೂ ಹೋರಾಡುತ್ತಿವೆ’ ಎಂದರು.

’ನೇಕಾರ ಸಮ್ಮಾನ್ ಯೋಜನೆಯನ್ನು ವಿದ್ಯುತ್ ಚಾಲಿತ ಮಗ್ಗಗಳಲ್ಲೂ ಕೆಲಸ ಮಾಡುವ ಕಾರ್ಮಿಕರಿಗೆ ವಿಸ್ತರಿಸಬೇಕು. ತಿಂಗಳಿಗೆ 5,000 ರೂಪಾಯಿ ನೀಡುವ ಈ ಯೋಜನೆಯನ್ನು ಇವರಿಗೂ ವಿಸ್ತರಿಸಬೇಕು. ಲಾಕ್‌ಡೌನ್ ವೇಳೆ 2,000 ರೂಪಾಯಿ ನೀಡಲಾಯಿತು. ಆದರೆ ಎಷ್ಟೋ ಕಾರ್ಮಿಕರಿಗೆ ಅದು ಸಿಗಲಿಲ್ಲ. ಕಾರ್ಮಿಕರ ಹೆಸರಿನಲ್ಲಿ ಮಾಲೀಕರು ಅದನ್ನು ಪಡೆದುಕೊಂಡರು. ಏಕೆಂದರೆ ನಾನು ಕೂಲಿ ನೇಕಾರ ಕಾರ್ಮಿಕ ಎಂದು ಹೇಳಲು ಕಾರ್ಮಿಕರ ಬಳಿ ಗುರುತಿನ ಚೀಟಿ ಕೂಡ ಇಲ್ಲ’ ಎಂದು ರವಿ ಪಾಟೀಲ್ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುವೆಲ್ ಸ್ಕ್ಯಾವೆಂಜಿಂಗ್ ಜಾರಿಯಲ್ಲಿರುವುದು ನಾಚಿಕೆಗೇಡಿನ ವಿಷಯ: ಜಯಾಬಚ್ಚನ್

ನೇಕಾರರು ಎಂದರೆ ಎರಡು ವರ್ಗಳಿವೆ. ಒಂದು ಮಾಲೀಕ ವರ್ಗ ಮತ್ತೊಂದು ಕಾರ್ಮಿಕ ವರ್ಗ. ಆದರೆ ಸರ್ಕಾರ ನೀಡುವ ಯೋಜನೆಗಳ ಪಾಲು ಹೋಗುತ್ತಿರುವುದು ಮಾಲೀಕ ವರ್ಗಕ್ಕೆ. ಸಾಲ ಮನ್ನಾ, ಸಬ್ಸಿಡಿ, ಯಂತ್ರಗಳ ಖರೀದಿಗೆ ಧನಸಹಾಯ ಎಲ್ಲವೂ ಮಾಲೀಕರ ಪರವಾಗಿವೆ. ಕಾರ್ಮಿಕ ವರ್ಗ ಎಂಬ ಒಂದು ವರ್ಗವಿದೆ. ಅವರಿಗೂ ಸರ್ಕಾರಿ ಸೌಲಭ್ಯಗಳು ಬೇಕು ಎಂದು ತಿಳಿಸುವ ಪ್ರಯತ್ನ ನಾವು ಮಾಡುತ್ತಿದ್ದೆವೆ ಎಂದು ಹೇಳುತ್ತಾರೆ ರವಿ ಪಾಟೀಲ್.

’ಕಾರ್ಮಿಕರಿಗೆ ದಿನೇ ದಿನೇ ಕೂಲಿ ಹೆಚ್ಚು ಮಾಡುವ ಬದಲು ಕಡಿಮೆ ಮಾಡುತ್ತಿದ್ದಾರೆ. ಉದ್ಯಮ ಚೆನ್ನಾಗಿ ನಡೆಯುತ್ತಿದ್ದರೂ, ಸೀರೆ ವ್ಯಾಪಾರವಾಗುತ್ತಿಲ್ಲ ಎಂದು ನೆಪ ಹೇಳುತ್ತಾ ಕೂಲಿ ಕಡಿಮೆ ನೀಡುತ್ತಾರೆ. ಲಾಕ್‌ಡೌನ್‌ ಸಮಯದಲ್ಲಿ ಹಲವಾರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸರ್ಕಾರ ಮಾತ್ರ ನಮ್ಮತ್ತ ತಿರುಗಿ ನೋಡುತ್ತಿಲ್ಲ, ನಾವು ಹೇಗೆ ಬದುಕಬೇಕು? ಎಂಬುದು ಕಾರ್ಮಿಕರ ಅಳಲು.

ಕೂಲಿ ನೇಕಾರರ ಕಾರ್ಮಿಕ ಬಳಗದ ಬೇಡಿಕೆಗಳ ಮನವಿ ಪತ್ರ ಇಲ್ಲಿದೆ.

’ಈ ಬೇಡಿಕೆಗಳ ಮೇಲೆ ಪ್ರತಿಭಟನೆ ಮಾಡಿ, ಸದನದಲ್ಲಿ ಈ ಬಗ್ಗೆ ಮಾತನಾಡಲು ಮನವಿ ಪತ್ರಗಳನ್ನು ಜಿಲ್ಲಾಡಳಿತ, ಜವಳಿ ಸಚಿವರು, ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಎಲ್ಲರಿಗೂ ಮನವಿ ಕೊಟ್ಟಿದ್ದೇವು. ಬೆಳಗಾವಿ ದಕ್ಷಿಣದ ಶಾಸಕ ಅಭಯ ಪಾಟೀಲರು ಮಾತ್ರ ಮಾತನಾಡಿದರು. ಆದರೂ ನಾವು ನಮ್ಮ ಹೋರಾಟವನ್ನು ಮುಂದುವರೆಸುತ್ತೇವೆ’ ಎನ್ನುತ್ತಾರೆ ರವಿ ಪಾಟೀಲ್.

ದಶಕಗಳಿಂದ ದುಡಿಯುತ್ತಾ ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಿ, ಕಷ್ಟದಲ್ಲಿರುವ ನೇಕಾರರ ಕಲ್ಯಾಣಕ್ಕಾಗಿ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸುವ ಮೂಲಕ ಮಾನವೀಯತೆ ಮೆರೆಯಬೇಕಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...