Homeಮುಖಪುಟನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

ನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

- Advertisement -
- Advertisement -

ನೀತಿ ಸಂಹಿತೆ ಜಾರಿಯಾಗಿ 48 ಗಂಟೆಗಳು ಕಳೆದರೂ ಪುಣೆ ರೈಲ್ವೇ ನಿಲ್ಧಾಣದಿಂದ ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟರ್‌ಗಳನ್ನು ತೆಗೆದುಹಾಕಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಾದರಿ ನೀತಿ ಸಂಹಿತೆಯ 48 ಗಂಟೆಗಳ ನಂತರವೂ ಪುಣೆ ರೈಲ್ವೆ ನಿಲ್ದಾಣವು ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟರ್‌ಗಳನ್ನು ತೆಗೆದುಹಾಕಿಲ್ಲ. ಪುಣೆ ನಿಲ್ದಾಣದಲ್ಲಿನ ಪೋಸ್ಟರ್‌ಗಳಲ್ಲಿ ಒಂದನ್ನು ಕಳೆದ ವರ್ಷ G20 ಕಾರ್ಯಕ್ರಮದ ವೇಳೆ ಹಾಕಲಾಗಿದ್ದು, ಇದು ಮೋದಿಯ ಫೋಟೋವನ್ನು ಒಳಗೊಂಡಿವೆ ಮತ್ತು ಇನ್ನೊಂದು ಮೋದಿಯ ಚಿತ್ರದೊಂದಿಗೆ “ಸಬ್ಕಾ ಸಾಥ್ ಸಬ್ಕಾ ವಿಕಾಸ್” ಎಂಬ ಘೋಷ ವಾಕ್ಯವನ್ನು ಒಳಗೊಂಡಿವೆ.

ಮೋದಿ ಅವರ ಫೋಟೋಗಳಿರುವ ಕೆಲವು ಪೋಸ್ಟರ್‌ಗಳು ಮತ್ತು ಸೆಲ್ಫಿ ಪಾಯಿಂಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಆ ಬಳಿಕ ತಿಳಿಸಿದ್ದಾರೆ. ಈ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೆಬ್‌ಸೈಟ್‌ನಲ್ಲಿ ಮಾ.19ರಂದು ಸಂಜೆ 4.12ಕ್ಕೆ ಪ್ರಕಟಿಸಿದೆ ಮತ್ತು ಮರುದಿನದ ಮುದ್ರಣ ಆವೃತ್ತಿಯಲ್ಲಿ ಕಾಣಿಸಿಕೊಂಡಿದೆ.

ನೀತಿ ಸಂಹಿತೆ ಏನು ಹೇಳುತ್ತದೆ?

ಚುನಾವಣೆ ದಿನಾಂಕ ಘೋಷಣೆ ಬಳಿಕ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತದೆ, ಮಾ.16ರಂದು ಚುನಾವಣೆ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿ ಬಳಿಕ  ಕೇಂದ್ರ, ರಾಜ್ಯ ಸರ್ಕಾರಗಳು ಹೊಸ ಯೋಜನೆಗಳನ್ನು, ಆರ್ಥಿಕ ಅನುದಾನಗಳನ್ನು ಅಥವಾ ಭರವಸೆಗಳನ್ನು ನೀಡುವಂತಿಲ್ಲ, ಯೋಜನೆಗಳ ಆರಂಭ ಅಥವಾ ಶಂಕುಸ್ಥಾಪನೆ ನೆರವೇರಿಸುವುದಕ್ಕೆ ಜನಪ್ರತಿನಿಧಿಗಳಿಗೆ ಅವಕಾಶವಿರುವುದಿಲ್ಲ. ರಸ್ತೆ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯಗಳು ಸೇರಿದಂತೆ  ಭರವಸೆಗಳನ್ನು ಅಭ್ಯರ್ಥಿಗಳಾಗಲಿ ಸರ್ಕಾರಗಳಾಗಲಿ ನೀಡುವಂತಿಲ್ಲ.

ಆಡಳಿತ ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಸರ್ಕಾರಿ ಅಥವಾ ಸಾರ್ವಜನಿಕ ಉದ್ಯಮಗಳಲ್ಲಿ ತಾತ್ಕಾಲಿಕ ನೇಮಕಾತಿಗಳನ್ನು ಮಾಡುವಂತಿಲ್ಲ, ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಮಂತ್ರಿಗಳು ವಿವೇಚನಾ ನಿಧಿಯಿಂದ ಅನುದಾನ ಅಥವಾ ಪಾವತಿಗಳನ್ನು ಮಂಜೂರು ಮಾಡುವಂತಿಲ್ಲ.

ಮಾದರಿ ನೀತಿ ಸಂಹಿತೆಯ ಜಾರಿಯ ನಂತರ, ಸರ್ಕಾರಿ ಅಧಿಕಾರಿಗಳು ಚುನಾವಣಾ ಕಾರ್ಯಗಳಿಗೆ ಸರ್ಕಾರಿ ಸಂಪನ್ಮೂಲಗಳನ್ನು ಬಳಸುವಂತಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸುವಂತಿಲ್ಲ, ಅಧಿಕೃತ ವಿಮಾನಗಳು, ವಾಹನಗಳು, ಯಂತ್ರೋಪಕರಣಗಳು ಮತ್ತು ಸಿಬ್ಬಂದಿ ಸೇರಿದಂತೆ ಸರ್ಕಾರಿ ಸಾರಿಗೆಯನ್ನು ಆಡಳಿತ ಪಕ್ಷದ ಹಿತಾಸಕ್ತಿಗೆ ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್‌, ಬ್ಯಾನರ್‌ಗಳ ಮೂಲಕ  ಸರ್ಕಾರಿ ಹಣದಲ್ಲಿ ಜಾಹೀರಾತು ನೀಡುವುದು, ಸಾಧನೆಗಳನ್ನು ಬಿಂಬಿಸುವಂತಹ ಲೇಖನಗಳನ್ನು ಪ್ರಕಟಿಸುವಂತಿಲ್ಲ ಎಂದು ಕೂಡ ಚುನಾವಣಾ ನೀತಿ ಸಂಹಿತೆ ಹೇಳುತ್ತದೆ.

ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ಪರಸ್ಪರ ದ್ವೇಷವನ್ನು ಉಂಟುಮಾಡುವ, ವಿವಿಧ ಜಾತಿ ಮತ್ತು ಸಮುದಾಯಗಳ ನಡುವೆ ಉದ್ವಿಗ್ನತೆ ಉಂಟುಮಾಡುವ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವಂತಿಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಯಾವುದೇ ವ್ಯಕ್ತಿಯ ಜಮೀನು, ಕಟ್ಟಡವನ್ನು ಅನುಮತಿಯಿಲ್ಲದೇ ಧ್ವಜ, ಬ್ಯಾನರ್‌, ಸೂಚನೆ ಮತ್ತು ಘೋಷಣೆಗಳನ್ನು ಬರೆಯಲು ಅನುಮತಿ ಇರುವುದಿಲ್ಲ.

ಇದನ್ನು ಓದಿ: ಮೋದಿ ರೋಡ್‌ ಶೋ: ಬಿಜೆಪಿಯ ಏಕೈಕ ಮುಸ್ಲಿಂ ಅಭ್ಯರ್ಥಿಯ ನಿರ್ಲಕ್ಷ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...