Homeಮುಖಪುಟನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

ನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

- Advertisement -
- Advertisement -

ನೀತಿ ಸಂಹಿತೆ ಜಾರಿಯಾಗಿ 48 ಗಂಟೆಗಳು ಕಳೆದರೂ ಪುಣೆ ರೈಲ್ವೇ ನಿಲ್ಧಾಣದಿಂದ ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟರ್‌ಗಳನ್ನು ತೆಗೆದುಹಾಕಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಾದರಿ ನೀತಿ ಸಂಹಿತೆಯ 48 ಗಂಟೆಗಳ ನಂತರವೂ ಪುಣೆ ರೈಲ್ವೆ ನಿಲ್ದಾಣವು ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟರ್‌ಗಳನ್ನು ತೆಗೆದುಹಾಕಿಲ್ಲ. ಪುಣೆ ನಿಲ್ದಾಣದಲ್ಲಿನ ಪೋಸ್ಟರ್‌ಗಳಲ್ಲಿ ಒಂದನ್ನು ಕಳೆದ ವರ್ಷ G20 ಕಾರ್ಯಕ್ರಮದ ವೇಳೆ ಹಾಕಲಾಗಿದ್ದು, ಇದು ಮೋದಿಯ ಫೋಟೋವನ್ನು ಒಳಗೊಂಡಿವೆ ಮತ್ತು ಇನ್ನೊಂದು ಮೋದಿಯ ಚಿತ್ರದೊಂದಿಗೆ “ಸಬ್ಕಾ ಸಾಥ್ ಸಬ್ಕಾ ವಿಕಾಸ್” ಎಂಬ ಘೋಷ ವಾಕ್ಯವನ್ನು ಒಳಗೊಂಡಿವೆ.

ಮೋದಿ ಅವರ ಫೋಟೋಗಳಿರುವ ಕೆಲವು ಪೋಸ್ಟರ್‌ಗಳು ಮತ್ತು ಸೆಲ್ಫಿ ಪಾಯಿಂಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಆ ಬಳಿಕ ತಿಳಿಸಿದ್ದಾರೆ. ಈ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೆಬ್‌ಸೈಟ್‌ನಲ್ಲಿ ಮಾ.19ರಂದು ಸಂಜೆ 4.12ಕ್ಕೆ ಪ್ರಕಟಿಸಿದೆ ಮತ್ತು ಮರುದಿನದ ಮುದ್ರಣ ಆವೃತ್ತಿಯಲ್ಲಿ ಕಾಣಿಸಿಕೊಂಡಿದೆ.

ನೀತಿ ಸಂಹಿತೆ ಏನು ಹೇಳುತ್ತದೆ?

ಚುನಾವಣೆ ದಿನಾಂಕ ಘೋಷಣೆ ಬಳಿಕ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತದೆ, ಮಾ.16ರಂದು ಚುನಾವಣೆ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿ ಬಳಿಕ  ಕೇಂದ್ರ, ರಾಜ್ಯ ಸರ್ಕಾರಗಳು ಹೊಸ ಯೋಜನೆಗಳನ್ನು, ಆರ್ಥಿಕ ಅನುದಾನಗಳನ್ನು ಅಥವಾ ಭರವಸೆಗಳನ್ನು ನೀಡುವಂತಿಲ್ಲ, ಯೋಜನೆಗಳ ಆರಂಭ ಅಥವಾ ಶಂಕುಸ್ಥಾಪನೆ ನೆರವೇರಿಸುವುದಕ್ಕೆ ಜನಪ್ರತಿನಿಧಿಗಳಿಗೆ ಅವಕಾಶವಿರುವುದಿಲ್ಲ. ರಸ್ತೆ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯಗಳು ಸೇರಿದಂತೆ  ಭರವಸೆಗಳನ್ನು ಅಭ್ಯರ್ಥಿಗಳಾಗಲಿ ಸರ್ಕಾರಗಳಾಗಲಿ ನೀಡುವಂತಿಲ್ಲ.

ಆಡಳಿತ ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಸರ್ಕಾರಿ ಅಥವಾ ಸಾರ್ವಜನಿಕ ಉದ್ಯಮಗಳಲ್ಲಿ ತಾತ್ಕಾಲಿಕ ನೇಮಕಾತಿಗಳನ್ನು ಮಾಡುವಂತಿಲ್ಲ, ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಮಂತ್ರಿಗಳು ವಿವೇಚನಾ ನಿಧಿಯಿಂದ ಅನುದಾನ ಅಥವಾ ಪಾವತಿಗಳನ್ನು ಮಂಜೂರು ಮಾಡುವಂತಿಲ್ಲ.

ಮಾದರಿ ನೀತಿ ಸಂಹಿತೆಯ ಜಾರಿಯ ನಂತರ, ಸರ್ಕಾರಿ ಅಧಿಕಾರಿಗಳು ಚುನಾವಣಾ ಕಾರ್ಯಗಳಿಗೆ ಸರ್ಕಾರಿ ಸಂಪನ್ಮೂಲಗಳನ್ನು ಬಳಸುವಂತಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸುವಂತಿಲ್ಲ, ಅಧಿಕೃತ ವಿಮಾನಗಳು, ವಾಹನಗಳು, ಯಂತ್ರೋಪಕರಣಗಳು ಮತ್ತು ಸಿಬ್ಬಂದಿ ಸೇರಿದಂತೆ ಸರ್ಕಾರಿ ಸಾರಿಗೆಯನ್ನು ಆಡಳಿತ ಪಕ್ಷದ ಹಿತಾಸಕ್ತಿಗೆ ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್‌, ಬ್ಯಾನರ್‌ಗಳ ಮೂಲಕ  ಸರ್ಕಾರಿ ಹಣದಲ್ಲಿ ಜಾಹೀರಾತು ನೀಡುವುದು, ಸಾಧನೆಗಳನ್ನು ಬಿಂಬಿಸುವಂತಹ ಲೇಖನಗಳನ್ನು ಪ್ರಕಟಿಸುವಂತಿಲ್ಲ ಎಂದು ಕೂಡ ಚುನಾವಣಾ ನೀತಿ ಸಂಹಿತೆ ಹೇಳುತ್ತದೆ.

ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ಪರಸ್ಪರ ದ್ವೇಷವನ್ನು ಉಂಟುಮಾಡುವ, ವಿವಿಧ ಜಾತಿ ಮತ್ತು ಸಮುದಾಯಗಳ ನಡುವೆ ಉದ್ವಿಗ್ನತೆ ಉಂಟುಮಾಡುವ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವಂತಿಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಯಾವುದೇ ವ್ಯಕ್ತಿಯ ಜಮೀನು, ಕಟ್ಟಡವನ್ನು ಅನುಮತಿಯಿಲ್ಲದೇ ಧ್ವಜ, ಬ್ಯಾನರ್‌, ಸೂಚನೆ ಮತ್ತು ಘೋಷಣೆಗಳನ್ನು ಬರೆಯಲು ಅನುಮತಿ ಇರುವುದಿಲ್ಲ.

ಇದನ್ನು ಓದಿ: ಮೋದಿ ರೋಡ್‌ ಶೋ: ಬಿಜೆಪಿಯ ಏಕೈಕ ಮುಸ್ಲಿಂ ಅಭ್ಯರ್ಥಿಯ ನಿರ್ಲಕ್ಷ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...