Homeಮುಖಪುಟನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

ನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

- Advertisement -
- Advertisement -

ನೀತಿ ಸಂಹಿತೆ ಜಾರಿಯಾಗಿ 48 ಗಂಟೆಗಳು ಕಳೆದರೂ ಪುಣೆ ರೈಲ್ವೇ ನಿಲ್ಧಾಣದಿಂದ ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟರ್‌ಗಳನ್ನು ತೆಗೆದುಹಾಕಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಾದರಿ ನೀತಿ ಸಂಹಿತೆಯ 48 ಗಂಟೆಗಳ ನಂತರವೂ ಪುಣೆ ರೈಲ್ವೆ ನಿಲ್ದಾಣವು ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟರ್‌ಗಳನ್ನು ತೆಗೆದುಹಾಕಿಲ್ಲ. ಪುಣೆ ನಿಲ್ದಾಣದಲ್ಲಿನ ಪೋಸ್ಟರ್‌ಗಳಲ್ಲಿ ಒಂದನ್ನು ಕಳೆದ ವರ್ಷ G20 ಕಾರ್ಯಕ್ರಮದ ವೇಳೆ ಹಾಕಲಾಗಿದ್ದು, ಇದು ಮೋದಿಯ ಫೋಟೋವನ್ನು ಒಳಗೊಂಡಿವೆ ಮತ್ತು ಇನ್ನೊಂದು ಮೋದಿಯ ಚಿತ್ರದೊಂದಿಗೆ “ಸಬ್ಕಾ ಸಾಥ್ ಸಬ್ಕಾ ವಿಕಾಸ್” ಎಂಬ ಘೋಷ ವಾಕ್ಯವನ್ನು ಒಳಗೊಂಡಿವೆ.

ಮೋದಿ ಅವರ ಫೋಟೋಗಳಿರುವ ಕೆಲವು ಪೋಸ್ಟರ್‌ಗಳು ಮತ್ತು ಸೆಲ್ಫಿ ಪಾಯಿಂಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಆ ಬಳಿಕ ತಿಳಿಸಿದ್ದಾರೆ. ಈ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೆಬ್‌ಸೈಟ್‌ನಲ್ಲಿ ಮಾ.19ರಂದು ಸಂಜೆ 4.12ಕ್ಕೆ ಪ್ರಕಟಿಸಿದೆ ಮತ್ತು ಮರುದಿನದ ಮುದ್ರಣ ಆವೃತ್ತಿಯಲ್ಲಿ ಕಾಣಿಸಿಕೊಂಡಿದೆ.

ನೀತಿ ಸಂಹಿತೆ ಏನು ಹೇಳುತ್ತದೆ?

ಚುನಾವಣೆ ದಿನಾಂಕ ಘೋಷಣೆ ಬಳಿಕ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತದೆ, ಮಾ.16ರಂದು ಚುನಾವಣೆ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿ ಬಳಿಕ  ಕೇಂದ್ರ, ರಾಜ್ಯ ಸರ್ಕಾರಗಳು ಹೊಸ ಯೋಜನೆಗಳನ್ನು, ಆರ್ಥಿಕ ಅನುದಾನಗಳನ್ನು ಅಥವಾ ಭರವಸೆಗಳನ್ನು ನೀಡುವಂತಿಲ್ಲ, ಯೋಜನೆಗಳ ಆರಂಭ ಅಥವಾ ಶಂಕುಸ್ಥಾಪನೆ ನೆರವೇರಿಸುವುದಕ್ಕೆ ಜನಪ್ರತಿನಿಧಿಗಳಿಗೆ ಅವಕಾಶವಿರುವುದಿಲ್ಲ. ರಸ್ತೆ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯಗಳು ಸೇರಿದಂತೆ  ಭರವಸೆಗಳನ್ನು ಅಭ್ಯರ್ಥಿಗಳಾಗಲಿ ಸರ್ಕಾರಗಳಾಗಲಿ ನೀಡುವಂತಿಲ್ಲ.

ಆಡಳಿತ ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಸರ್ಕಾರಿ ಅಥವಾ ಸಾರ್ವಜನಿಕ ಉದ್ಯಮಗಳಲ್ಲಿ ತಾತ್ಕಾಲಿಕ ನೇಮಕಾತಿಗಳನ್ನು ಮಾಡುವಂತಿಲ್ಲ, ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಮಂತ್ರಿಗಳು ವಿವೇಚನಾ ನಿಧಿಯಿಂದ ಅನುದಾನ ಅಥವಾ ಪಾವತಿಗಳನ್ನು ಮಂಜೂರು ಮಾಡುವಂತಿಲ್ಲ.

ಮಾದರಿ ನೀತಿ ಸಂಹಿತೆಯ ಜಾರಿಯ ನಂತರ, ಸರ್ಕಾರಿ ಅಧಿಕಾರಿಗಳು ಚುನಾವಣಾ ಕಾರ್ಯಗಳಿಗೆ ಸರ್ಕಾರಿ ಸಂಪನ್ಮೂಲಗಳನ್ನು ಬಳಸುವಂತಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸುವಂತಿಲ್ಲ, ಅಧಿಕೃತ ವಿಮಾನಗಳು, ವಾಹನಗಳು, ಯಂತ್ರೋಪಕರಣಗಳು ಮತ್ತು ಸಿಬ್ಬಂದಿ ಸೇರಿದಂತೆ ಸರ್ಕಾರಿ ಸಾರಿಗೆಯನ್ನು ಆಡಳಿತ ಪಕ್ಷದ ಹಿತಾಸಕ್ತಿಗೆ ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್‌, ಬ್ಯಾನರ್‌ಗಳ ಮೂಲಕ  ಸರ್ಕಾರಿ ಹಣದಲ್ಲಿ ಜಾಹೀರಾತು ನೀಡುವುದು, ಸಾಧನೆಗಳನ್ನು ಬಿಂಬಿಸುವಂತಹ ಲೇಖನಗಳನ್ನು ಪ್ರಕಟಿಸುವಂತಿಲ್ಲ ಎಂದು ಕೂಡ ಚುನಾವಣಾ ನೀತಿ ಸಂಹಿತೆ ಹೇಳುತ್ತದೆ.

ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ಪರಸ್ಪರ ದ್ವೇಷವನ್ನು ಉಂಟುಮಾಡುವ, ವಿವಿಧ ಜಾತಿ ಮತ್ತು ಸಮುದಾಯಗಳ ನಡುವೆ ಉದ್ವಿಗ್ನತೆ ಉಂಟುಮಾಡುವ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವಂತಿಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಯಾವುದೇ ವ್ಯಕ್ತಿಯ ಜಮೀನು, ಕಟ್ಟಡವನ್ನು ಅನುಮತಿಯಿಲ್ಲದೇ ಧ್ವಜ, ಬ್ಯಾನರ್‌, ಸೂಚನೆ ಮತ್ತು ಘೋಷಣೆಗಳನ್ನು ಬರೆಯಲು ಅನುಮತಿ ಇರುವುದಿಲ್ಲ.

ಇದನ್ನು ಓದಿ: ಮೋದಿ ರೋಡ್‌ ಶೋ: ಬಿಜೆಪಿಯ ಏಕೈಕ ಮುಸ್ಲಿಂ ಅಭ್ಯರ್ಥಿಯ ನಿರ್ಲಕ್ಷ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...