Homeಮುಖಪುಟನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

ನೀತಿ ಸಂಹಿತೆ ಜಾರಿಯಾಗಿದ್ದರೂ ರೈಲ್ವೇ ನಿಲ್ಧಾಣದಲ್ಲಿ ರಾರಾಜಿಸುತ್ತಿರುವ ಮೋದಿ ಪೋಸ್ಟರ್‌

- Advertisement -
- Advertisement -

ನೀತಿ ಸಂಹಿತೆ ಜಾರಿಯಾಗಿ 48 ಗಂಟೆಗಳು ಕಳೆದರೂ ಪುಣೆ ರೈಲ್ವೇ ನಿಲ್ಧಾಣದಿಂದ ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟರ್‌ಗಳನ್ನು ತೆಗೆದುಹಾಕಿಲ್ಲ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಾದರಿ ನೀತಿ ಸಂಹಿತೆಯ 48 ಗಂಟೆಗಳ ನಂತರವೂ ಪುಣೆ ರೈಲ್ವೆ ನಿಲ್ದಾಣವು ಪ್ರಧಾನಿ ನರೇಂದ್ರ ಮೋದಿಯವರ ಪೋಸ್ಟರ್‌ಗಳನ್ನು ತೆಗೆದುಹಾಕಿಲ್ಲ. ಪುಣೆ ನಿಲ್ದಾಣದಲ್ಲಿನ ಪೋಸ್ಟರ್‌ಗಳಲ್ಲಿ ಒಂದನ್ನು ಕಳೆದ ವರ್ಷ G20 ಕಾರ್ಯಕ್ರಮದ ವೇಳೆ ಹಾಕಲಾಗಿದ್ದು, ಇದು ಮೋದಿಯ ಫೋಟೋವನ್ನು ಒಳಗೊಂಡಿವೆ ಮತ್ತು ಇನ್ನೊಂದು ಮೋದಿಯ ಚಿತ್ರದೊಂದಿಗೆ “ಸಬ್ಕಾ ಸಾಥ್ ಸಬ್ಕಾ ವಿಕಾಸ್” ಎಂಬ ಘೋಷ ವಾಕ್ಯವನ್ನು ಒಳಗೊಂಡಿವೆ.

ಮೋದಿ ಅವರ ಫೋಟೋಗಳಿರುವ ಕೆಲವು ಪೋಸ್ಟರ್‌ಗಳು ಮತ್ತು ಸೆಲ್ಫಿ ಪಾಯಿಂಟ್‌ಗಳನ್ನು ತೆಗೆದುಹಾಕಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಆ ಬಳಿಕ ತಿಳಿಸಿದ್ದಾರೆ. ಈ ವರದಿಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೆಬ್‌ಸೈಟ್‌ನಲ್ಲಿ ಮಾ.19ರಂದು ಸಂಜೆ 4.12ಕ್ಕೆ ಪ್ರಕಟಿಸಿದೆ ಮತ್ತು ಮರುದಿನದ ಮುದ್ರಣ ಆವೃತ್ತಿಯಲ್ಲಿ ಕಾಣಿಸಿಕೊಂಡಿದೆ.

ನೀತಿ ಸಂಹಿತೆ ಏನು ಹೇಳುತ್ತದೆ?

ಚುನಾವಣೆ ದಿನಾಂಕ ಘೋಷಣೆ ಬಳಿಕ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತದೆ, ಮಾ.16ರಂದು ಚುನಾವಣೆ ಘೋಷಿಸಲಾಗಿದ್ದು, ನೀತಿ ಸಂಹಿತೆ ಜಾರಿ ಬಳಿಕ  ಕೇಂದ್ರ, ರಾಜ್ಯ ಸರ್ಕಾರಗಳು ಹೊಸ ಯೋಜನೆಗಳನ್ನು, ಆರ್ಥಿಕ ಅನುದಾನಗಳನ್ನು ಅಥವಾ ಭರವಸೆಗಳನ್ನು ನೀಡುವಂತಿಲ್ಲ, ಯೋಜನೆಗಳ ಆರಂಭ ಅಥವಾ ಶಂಕುಸ್ಥಾಪನೆ ನೆರವೇರಿಸುವುದಕ್ಕೆ ಜನಪ್ರತಿನಿಧಿಗಳಿಗೆ ಅವಕಾಶವಿರುವುದಿಲ್ಲ. ರಸ್ತೆ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯಗಳು ಸೇರಿದಂತೆ  ಭರವಸೆಗಳನ್ನು ಅಭ್ಯರ್ಥಿಗಳಾಗಲಿ ಸರ್ಕಾರಗಳಾಗಲಿ ನೀಡುವಂತಿಲ್ಲ.

ಆಡಳಿತ ಪಕ್ಷದ ಪರವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಸರ್ಕಾರಿ ಅಥವಾ ಸಾರ್ವಜನಿಕ ಉದ್ಯಮಗಳಲ್ಲಿ ತಾತ್ಕಾಲಿಕ ನೇಮಕಾತಿಗಳನ್ನು ಮಾಡುವಂತಿಲ್ಲ, ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ ಜಾರಿಯಾದರೆ, ಮಂತ್ರಿಗಳು ವಿವೇಚನಾ ನಿಧಿಯಿಂದ ಅನುದಾನ ಅಥವಾ ಪಾವತಿಗಳನ್ನು ಮಂಜೂರು ಮಾಡುವಂತಿಲ್ಲ.

ಮಾದರಿ ನೀತಿ ಸಂಹಿತೆಯ ಜಾರಿಯ ನಂತರ, ಸರ್ಕಾರಿ ಅಧಿಕಾರಿಗಳು ಚುನಾವಣಾ ಕಾರ್ಯಗಳಿಗೆ ಸರ್ಕಾರಿ ಸಂಪನ್ಮೂಲಗಳನ್ನು ಬಳಸುವಂತಿಲ್ಲ ಮತ್ತು ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳು ಅಥವಾ ಸಿಬ್ಬಂದಿಯನ್ನು ಬಳಸುವಂತಿಲ್ಲ, ಅಧಿಕೃತ ವಿಮಾನಗಳು, ವಾಹನಗಳು, ಯಂತ್ರೋಪಕರಣಗಳು ಮತ್ತು ಸಿಬ್ಬಂದಿ ಸೇರಿದಂತೆ ಸರ್ಕಾರಿ ಸಾರಿಗೆಯನ್ನು ಆಡಳಿತ ಪಕ್ಷದ ಹಿತಾಸಕ್ತಿಗೆ ಬಳಸುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್‌, ಬ್ಯಾನರ್‌ಗಳ ಮೂಲಕ  ಸರ್ಕಾರಿ ಹಣದಲ್ಲಿ ಜಾಹೀರಾತು ನೀಡುವುದು, ಸಾಧನೆಗಳನ್ನು ಬಿಂಬಿಸುವಂತಹ ಲೇಖನಗಳನ್ನು ಪ್ರಕಟಿಸುವಂತಿಲ್ಲ ಎಂದು ಕೂಡ ಚುನಾವಣಾ ನೀತಿ ಸಂಹಿತೆ ಹೇಳುತ್ತದೆ.

ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ಪರಸ್ಪರ ದ್ವೇಷವನ್ನು ಉಂಟುಮಾಡುವ, ವಿವಿಧ ಜಾತಿ ಮತ್ತು ಸಮುದಾಯಗಳ ನಡುವೆ ಉದ್ವಿಗ್ನತೆ ಉಂಟುಮಾಡುವ ಯಾವುದೇ ಚಟುವಟಿಕೆಯನ್ನು ಕೈಗೊಳ್ಳುವಂತಿಲ್ಲ. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಯಾವುದೇ ವ್ಯಕ್ತಿಯ ಜಮೀನು, ಕಟ್ಟಡವನ್ನು ಅನುಮತಿಯಿಲ್ಲದೇ ಧ್ವಜ, ಬ್ಯಾನರ್‌, ಸೂಚನೆ ಮತ್ತು ಘೋಷಣೆಗಳನ್ನು ಬರೆಯಲು ಅನುಮತಿ ಇರುವುದಿಲ್ಲ.

ಇದನ್ನು ಓದಿ: ಮೋದಿ ರೋಡ್‌ ಶೋ: ಬಿಜೆಪಿಯ ಏಕೈಕ ಮುಸ್ಲಿಂ ಅಭ್ಯರ್ಥಿಯ ನಿರ್ಲಕ್ಷ್ಯ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...