Homeಮುಖಪುಟಚುನಾವಣಾ ಬಾಂಡ್‌ಗಳ ಸಾರ್ವಜನಿಕ ಲಭ್ಯತೆಯ ಹೊರತಾಗಿಯೂ ಮಾಹಿತಿ ಬಹಿರಂಗಪಡಿಸಲು ನಿರಾಕರಿಸಿದ ಎಸ್‌ಬಿಐ!

ಚುನಾವಣಾ ಬಾಂಡ್‌ಗಳ ಸಾರ್ವಜನಿಕ ಲಭ್ಯತೆಯ ಹೊರತಾಗಿಯೂ ಮಾಹಿತಿ ಬಹಿರಂಗಪಡಿಸಲು ನಿರಾಕರಿಸಿದ ಎಸ್‌ಬಿಐ!

- Advertisement -
- Advertisement -

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ಡೇಟಾ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದರೂ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ‘ಇದು ವಿಶ್ವಾಸಾರ್ಹ ಸಾಮರ್ಥ್ಯದಲ್ಲಿರುವ ವೈಯಕ್ತಿಕ ಮಾಹಿತಿ’ ಎಂದು ಹೇಳಿಕೊಂಡಿದೆ.

ಆರ್‌ಟಿಐ ಕಾರ್ಯಕರ್ತ ಕಮಾಂಡರ್ (ನಿವೃತ್ತ) ಲೋಕೇಶ್ ಬಾತ್ರಾ ಅವರು ಮಾರ್ಚ್ 13 ರಂದು ಎಸ್‌ಬಿಐ ಅನ್ನು ಸಂಪರ್ಕಿಸಿ, ಸುಪ್ರೀಂ ಕೋರ್ಟ್‌ನ ಆದೇಶದ ನಂತರ ಇಸಿಗೆ ಒದಗಿಸಿದಂತೆ ಡಿಜಿಟಲ್ ರೂಪದಲ್ಲಿ ಚುನಾವಣಾ ಬಾಂಡ್‌ಗಳ ಸಂಪೂರ್ಣ ಡೇಟಾವನ್ನು ಕೋರಿದರು.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಈಗಾಗಲೇ ಸಾರ್ವಜನಿಕರಿಗೆ ಮಾಹಿತಿ ಲಭ್ಯವಿದ್ದರೂ, ಮಾಹಿತಿ ಹಕ್ಕು (ಆರ್‌ಟಿಐ) ಕಾಯಿದೆಯ ಅಡಿಯಲ್ಲಿ ನೀಡಲಾದ ಎರಡು ವಿನಾಯಿತಿ ಷರತ್ತುಗಳನ್ನು ಉಲ್ಲೇಖಿಸಿ ಚುನಾವಣಾ ಬಾಂಡ್‌ಗಳ ಯೋಜನೆಯ ವಿವರಗಳನ್ನು ನೀಡಲು ಬ್ಯಾಂಕ್ ನಿರಾಕರಿಸಿದೆ. ಸೆಕ್ಷನ್ 8(1)(ಇ) ಇದು ವಿಶ್ವಾಸಾರ್ಹ ಸಾಮರ್ಥ್ಯದಲ್ಲಿರುವ ದಾಖಲೆಗಳಿಗೆ ಸಂಬಂಧಿಸಿದೆ ಮತ್ತು ವೈಯಕ್ತಿಕ ಮಾಹಿತಿಯನ್ನು ತಡೆಹಿಡಿಯಲು ಅನುಮತಿಸುವ ವಿಭಾಗ 8(1)(ಜೆ) ಎಂದು ಬ್ಯಾಂಕ್ ಹೇಳಿದೆ.

ಆರ್‌ಟಿಐ ಕಾರ್ಯಕರ್ತನ ಪ್ರಶ್ನೆಗೆ ಎಸ್‌ಬಿಐನ ಪ್ರತಿಕ್ರಿಯಿಸಿ, “ನೀವು ಕೋರಿದ ಮಾಹಿತಿಯು ಖರೀದಿದಾರರು ಮತ್ತು ರಾಜಕೀಯ ಪಕ್ಷಗಳ ವಿವರಗಳನ್ನು ಒಳಗೊಂಡಿರುತ್ತದೆ. ಆದ್ದರಿಂದ, ಅದನ್ನು ಬಹಿರಂಗಪಡಿಸಲಾಗುವುದಿಲ್ಲ. ಏಕೆಂದರೆ, ಇದು ಸೆಕ್ಷನ್ 8(1) (ಇ) ಅಡಿಯಲ್ಲಿ ಆರ್‌ಟಿಐ ಕಾಯಿಯಿಂದ ವಿನಾಯಿತಿ ಪಡೆದ ವಿಶ್ವಾಸಾರ್ಹ ಸಾಮರ್ಥ್ಯದ ಬಹಿರಂಗಪಡಿಸುವಿಕೆಯಲ್ಲಿದೆ” ಎಂದು ಹೇಳಿದೆ.

ಸಾರ್ವಜನಿಕ ವೇದಿಕೆಯಲ್ಲಿ ಈಗಾಗಲೇ ಲಭ್ಯವಿರುವ ಮಾಹಿತಿಯನ್ನು ಬಹಿರಂಗಪಡಿಸಲು ಎಸ್‌ಬಿಐ ನಿರಾಕರಿಸಿರುವುದು “ವಿಚಿತ್ರ” ಎಂದು ಬಾತ್ರಾ ಮಾಧ್ಯಮಗಳಿಗೆ ತಿಳಿಸಿದರು.

ಚುನಾವಣಾ ಬಾಂಡ್‌ಗಳ ದತ್ತಾಂಶವನ್ನು ಬಹಿರಂಗಪಡಿಸುವುದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ ಅವರ ಕಾನೂನು ಶುಲ್ಕದ ವಿವರಗಳನ್ನು ಅವರು ಕೇಳಿದರು. ಸಾಳ್ವೆ ಅವರ ಶುಲ್ಕದ ಪ್ರಶ್ನೆಗೆ, ತೆರಿಗೆದಾರರ ಹಣವನ್ನು ಒಳಗೊಂಡಿರುವ ಮಾಹಿತಿಯನ್ನು ಬ್ಯಾಂಕ್ ನಿರಾಕರಿಸಿದೆ ಎಂದು ಹೇಳಿದರು.

ಚುನಾವಣಾ ಆಯೋಗವು ಮಾರ್ಚ್ 14 ರಂದು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಎಸ್‌ಬಿಐ ಒದಗಿಸಿದ ಚುನಾವಣಾ ಬಾಂಡ್‌ಗಳ ಡೇಟಾವನ್ನು ಪ್ರಕಟಿಸಿತು. ದಾನಿಗಳು, ಮೊತ್ತಗಳು ಮತ್ತು ಬಾಂಡ್‌ಗಳನ್ನು ನಗದೀಕರಿಸಿದ ರಾಜಕೀಯ ಪಕ್ಷಗಳ ವಿವರಗಳನ್ನು ಬಿಡುಗಡೆ ಮಾಡಿತು.

ದೇಣಿಗೆ ಸ್ವೀಕರಿಸುವ ರಾಜಕೀಯ ಪಕ್ಷಗಳೊಂದಿಗೆ ದಾನಿಗಳನ್ನು ಹೊಂದಿಸಲು ಸಹಾಯ ಮಾಡುವ ಪ್ರತಿ ಚುನಾವಣಾ ಬಾಂಡ್‌ಗೆ ವಿಶಿಷ್ಟವಾದ ಸಂಖ್ಯೆಯನ್ನು ತಡೆಹಿಡಿಯುವ ಮೂಲಕ ಸಂಪೂರ್ಣ ಮಾಹಿತಿಯನ್ನು ಒದಗಿಸದಿದ್ದಕ್ಕಾಗಿ ಮಾರ್ಚ್ 15ರಂದು ಎಸ್‌ಬಿಐ ಅನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.

ಏಪ್ರಿಲ್ 1, 2019 ಮತ್ತು ಫೆಬ್ರವರಿ 15ರ ನಡುವೆ ದಾನಿಗಳು ವಿವಿಧ ಮುಖಬೆಲೆಯ ಒಟ್ಟು 22,217 ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದ್ದಾರೆ. ಅದರಲ್ಲಿ 22,030 ಅನ್ನು ರಾಜಕೀಯ ಪಕ್ಷಗಳು ನಗದೀಕರಿಸಿವೆ ಎಂದು ಎಸ್‌ಬಿಐ ಹೇಳಿದೆ.

ಇದನ್ನೂ ಓದಿ; ‘ಏಕರೂಪ ನಾಗರಿಕ ಸಂಹಿತೆಯನ್ನು ಒಪ್ಪಿಕೊಳ್ಳುವುದಿಲ್ಲ..’; ಈದ್ ಪ್ರಾರ್ಥನೆಯಲ್ಲಿ ಮಮತಾ ಬ್ಯಾನರ್ಜಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...