Homeಮುಖಪುಟಹರ್ಯಾಣ: ಹಿಂದುತ್ವ ಸಂಘಟನೆಯ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ

ಹರ್ಯಾಣ: ಹಿಂದುತ್ವ ಸಂಘಟನೆಯ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ

- Advertisement -
- Advertisement -

ದ್ವೇಷ ಭಾಷಣ ಮಾಡದಂತೆ ಷರತ್ತು ವಿಧಿಸಿದರೂ ಹರ್ಯಾಣದಲ್ಲಿ ಹಿಂದುತ್ವ ಸಂಘಟನೆಯೊಂದರ  ಬೃಹತ್ ಸಮಾವೇಶದಲ್ಲಿ ಮತ್ತೆ ಪ್ರಚೋದನಾತ್ಮಕ ಹೇಳಿಕೆಗಳನ್ನು ಕೊಡಲಾಗಿದೆ.

ಇಂದು ಪಲ್ವಾಲ್ ಜಿಲ್ಲೆಯಲ್ಲಿ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ ಹಾಕಿದ್ದಾರೆ. ದ್ವೇಷದ ಭಾಷಣ ಮಾಡಬಾರದೆಂದು ಸಂಘಟಕರು ಭಾಷಣಗಾರರಿಗೆ ಹೇಳಿದ್ದರು ಎನ್ನಲಾಗಿದೆ. ಆದರೆ ಕೆಲವು ಭಾಷಣಕಾರರು ಅದನ್ನು ನಿರ್ಲಕ್ಷಿಸಿದ್ದಾರೆ.

ಒಬ್ಬ ಭಾಷಣಕಾರ, “ನೀವು ಬೆರಳು ಎತ್ತಿದರೆ, ನಾವು ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ” ಎಂದು ಹೇಳಿದ್ದಾನೆ. ಇನ್ನೊಬ್ಬ ರೈಫಲ್‌ಗಳಿಗೆ ಪರವಾನಗಿ ನೀಡಬೇಕೆಂದು ಒತ್ತಾಯಿಸಿದ್ದಾನೆ.

ಹರ್ಯಾಣದ  ನುಹ್ ನಲ್ಲಿ ಎರಡು ವಾರಗಳ ಮೊದಲು ನಡೆದ ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದರು.

ಎರಡು ವಾರಗಳ ಹಿಂದೆ ಹರಿಯಾಣದ ನುಹ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಆರು ಜನರು ಸಾವನ್ನಪ್ಪಿದ ನಂತರ ಮತ್ತೆ ಹಿಂದುತ್ವ ಸಂಘಟನ ಸಭೆ ನಡೆಸಿದೆ. ಕಳೆದ ತಿಂಗಳು ನುಹ್‌ನಲ್ಲಿ ಆರಂಭವಾದ ವಿಶ್ವ ಹಿಂದೂ ಪರಿಷತ್‌ನ ಧಾರ್ಮಿಕ ಮೆರವಣಿಗೆಯನ್ನು ಪೂರ್ಣಗೊಳಿಸಲು   ಹಿಂದುತ್ವ ಗುಂಪು ನುಹ್ ನಲ್ಲೇ ಮಹಾಪಂಚಾಯತ್ ನ್ನು ಆಯೋಜಿಸಲು ಮುಂದಾಗಿತ್ತು.ಆದರೆ, ಪೊಲೀಸರಿಂದ ಅನುಮತಿ ನಿರಾಕರಿಸಿದ ನಂತರ ಅದನ್ನು 35 ಕಿಮೀ ದೂರದ ಪಲ್ವಾಲ್‌ಗೆ ಸ್ಥಳಾಂತರಿಸಲಾಗಿದೆ.

ಮಹಾಪಂಚಾಯತ್ ಪಲ್ವಾಲ್-ನುಹ್ ಗಡಿಯಲ್ಲಿರುವ ಪೊಂಡ್ರಿ ಗ್ರಾಮದಲ್ಲಿ ನಡೆದಿದೆ. ಹಲವು ಷರತ್ತುಗಳ ಮೇಲೆ ಅನುಮತಿ ನೀಡಲಾಗಿದೆ ಎಂದು ಪಲ್ವಾಲ್ ಪೊಲೀಸ್ ವರಿಷ್ಠಾಧಿಕಾರಿ ಲೋಕೇಂದ್ರ ಸಿಂಗ್ ಹೇಳಿದ್ದಾರೆ.

ಯಾರು ಕೂಡ ದ್ವೇಷ ಅಥವಾ ಪ್ರಚೋದನಾಕಾರಿ ಭಾಷಣ ಮಾಡಬಾರದು. ಪ್ರಚೋದನಕಾರಿ ಭಾಷಣ ಮಾಡಿದರೆ ತಕ್ಷಣ ಎಫ್ ಐಆರ್ ದಾಖಲಿಸುತ್ತೇವೆ.ಯಾರು ಕೂಡ  ಸಮಾವೇಶಕ್ಕೆ ಬರುವಾಗ ಆಯುಧಗಳು, ದೊಣ್ಣೆಗಳು, ಲಾಠಿಗಳನ್ನು ಅಥವಾ ಯಾವುದೇ ದಹಿಸುವ ವಸ್ತುವನ್ನು ತರದಂತೆ ಷರತ್ತು ವಿಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಕೇವಲ 500 ಜನರಿಗೆ ಮಾತ್ರ ಅವಕಾಶ ಮತ್ತು ಸಮಾವೇಶ ಮಧ್ಯಾಹ್ನ 2 ಗಂಟೆಗೆ  ಕೊನೆಗಳ್ಳಬೇಕು ಎಂದು ಕೂಡ ಪೊಲೀಸರು ಷರತ್ತು ವಿಧಿಸಿದ್ದರು ಎನ್ನಲಾಗಿದೆ.

ಇದನ್ನು ಓದಿ: ದಲಿತ ಸಮುದಾಯಕ್ಕೆ ಅವಮಾನ – ತೀವ್ರ ಟೀಕೆಯ ನಂತರ ಕ್ಷಮೆಯಾಚಿಸಿದ ನಟ ಉಪೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...