Homeಅಂತರಾಷ್ಟ್ರೀಯಭಾರತವನ್ನು ಅಸ್ಥಿರಗೊಳಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಮೆರಿಕ

ಭಾರತವನ್ನು ಅಸ್ಥಿರಗೊಳಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಮೆರಿಕ

- Advertisement -
- Advertisement -

ಅಮೆರಿಕದ ಸ್ಟೇಟ್ ಡಿಪಾರ್ಟ್ಮೆಂಟ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಧ್ಯಮ ವರದಿಗಳನ್ನು ದುರ್ಬಳಕೆ ಮಾಡಿದೆ ಎಂಬ ಬಿಜೆಪಿ ಪ್ರತಿಪಾದನೆಯನ್ನು ಅಮೆರಿಕದ ರಾಯಭಾರ ಕಚೇರಿಯು  ಶನಿವಾರ ಹೇಳಿದೆ. ಬಿಜೆಪಿ ಆರೋಪವನ್ನು “ನಿರಾಶಾದಾಯಕ” ಎಂದು ತಳ್ಳಿಹಾಕಿರುವ ಅಮೆರಿಕ, ಪತ್ರಕರ್ತರಿಗೆ ಸಾಮರ್ಥ್ಯ-ವರ್ಧನೆಯ ತರಬೇತಿಯ ಮೂಲಕ ಸ್ವತಂತ್ರ ಮಾಧ್ಯಮವನ್ನು ಬೆಂಬಲಿಸುತ್ತದೆ ಮತ್ತು ಸ್ವತಂತ್ರ ಮಾಧ್ಯಮ ಸಂಸ್ಥೆಗಳ ಸಂಪಾದಕೀಯ ನಿರ್ಧಾರಗಳ ಮೇಲೆ ತಾವು ಪ್ರಭಾವ ಬೀರುವುದಿಲ್ಲ ಎಂದು ಪ್ರತಿಪಾದಿಸಿದೆ. ಭಾರತವನ್ನು ಅಸ್ಥಿರಗೊಳಿಸುತ್ತಿದೆ

ಡಿಸೆಂಬರ್ 5 ರಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತನ್ನ ಅಧಿಕೃತ ಖಾತೆಯಿಂದ ಸರಣಿ ಪೋಸ್ಟ್‌ಗಳ ಮೂಲಕ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಆಡಳಿತ ಪಕ್ಷದ ಮೇಲೆ ಉದ್ದೇಶಿತ ದಾಳಿಗಳನ್ನು ಅಮೆರಿಕ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. “ಭಾರತವನ್ನು ಅಸ್ಥಿರಗೊಳಿಸುವ” ಪ್ರಯತ್ನಗಳ ಹಿಂದೆ ಅಮೆರಿಕದ ರಾಜ್ಯ ಇಲಾಖೆ ಇದೆ ಎಂದು ಬಿಜೆಪಿ ಅಂದು ಆರೋಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ವರದಿ ಯೋಜನೆ(OCCRP)ಯು ಅಮೆರಿಕದ ಸ್ಟೇಟ್ ಡಿಪಾರ್ಟ್‌ಮೆಂಟ್‌ನ ಯುಎಸ್‌ ಎಡ್(USAID) ನಿಂದ ಗಣನೀಯ ಪ್ರಮಾಣದ ಹಣವನ್ನು ಪಡೆದಿದೆ ಎಂದು ಹೇಳಿಕೊಂಡ ಫ್ರೆಂಚ್ ತನಿಖಾ ಮಾಧ್ಯಮ ಔಟ್‌ಲೆಟ್‌ನ ಮೀಡಿಯಾಪಾರ್ಟ್‌ನ ವರದಿಯನ್ನು ಬಿಜೆಪಿ ಉಲ್ಲೇಖಿಸಿತ್ತು. ಭಾರತವನ್ನು ಅಸ್ಥಿರಗೊಳಿಸುತ್ತಿದೆ

ಇದಕ್ಕೂ ಮುನ್ನ ಗುರುವಾರ (ಡಿಸೆಂಬರ್ 5) ಸಂಸತ್ತಿನ ಬಿಜೆಪಿ ಸದಸ್ಯರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಲು ಮೀಡಿಯಾಪಾರ್ಟ್ ವರದಿಯನ್ನು ಬಳಸಿದ್ದರು. ರಾಹುಲ್ ಗಾಂಧಿ ಅವರು ಒಸಿಸಿಆರ್‌ಪಿ ಮತ್ತು ಅಮೆರಿಕದ ಬಿಲಿಯನೇರ್ ಜಾರ್ಜ್ ಸೊರೊಸ್ ಅವರೊಂದಿಗೆ ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು.

ಅದಾಗ್ಯೂ, ಮೀಡಿಯಾಪಾರ್ಟ್ ಲೇಖನವು ಅಮೆರಿಕ ಸರ್ಕಾರವು “ರಷ್ಯಾ ಮತ್ತು ವೆನೆಜುವೆಲಾವನ್ನು ಕೇಂದ್ರೀಕರಿಸುವ ತನಿಖೆಗಳಿಗೆ ಹಣ ನೀಡುತ್ತದೆ” ಎಂದು ಮಾತ್ರ ಆರೋಪಿಸಿದೆ.

‘‘ಭಾರತದಲ್ಲಿ ಆಡಳಿತಾರೂಢ ಪಕ್ಷ ಇಂತಹ ಆರೋಪಗಳನ್ನು ಮಾಡಿರುವುದು ನಿರಾಶೆ ಮೂಡಿಸಿದೆ. ಯುಎಸ್ ಸರ್ಕಾರವು ವೃತ್ತಿಪರ ಅಭಿವೃದ್ಧಿ ಮತ್ತು ಪತ್ರಕರ್ತರಿಗೆ ಸಾಮರ್ಥ್ಯ ವೃದ್ಧಿ ತರಬೇತಿಯನ್ನು ಬೆಂಬಲಿಸುವ ಪ್ರೋಗ್ರಾಮಿಂಗ್‌ನಲ್ಲಿ ಸ್ವತಂತ್ರ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತದೆ. ಈ ಪ್ರೋಗ್ರಾಮಿಂಗ್ ಮಾಧ್ಯಮ ಸಂಸ್ಥೆಗಳ ಸಂಪಾದಕೀಯ ನಿರ್ಧಾರಗಳು ಅಥವಾ ನಿರ್ದೇಶನದ ಮೇಲೆ ಪ್ರಭಾವ ಬೀರುವುದಿಲ್ಲ’’ ಎಂದು ಅಮೆರಿಕದ ರಾಯಭಾರ ಕಚೇರಿಯ ವಕ್ತಾರರು ಶನಿವಾರ (ಡಿಸೆಂಬರ್ 7) ಹೇಳಿದ್ದಾರೆ.

ಅಮೆರಿಕವು ವಿಶ್ವದಾದ್ಯಂತ ಮಾಧ್ಯಮ ಸ್ವಾತಂತ್ರ್ಯದ ಚಾಂಪಿಯನ್ ಆಗಿದೆ ಎಂದು ರಾಯಭಾರ ಕಚೇರಿ ಪ್ರತಿಪಾದಿಸಿದೆ. ‘‘ಮುಕ್ತ ಮತ್ತು ಸ್ವತಂತ್ರ ಮಾಧ್ಯಮವು ಯಾವುದೇ ಪ್ರಜಾಪ್ರಭುತ್ವದ ಅತ್ಯಗತ್ಯ ಅಂಶವಾಗಿದೆ. ಇದು ತಿಳುವಳಿಕೆಯುಳ್ಳ ಮತ್ತು ರಚನಾತ್ಮಕ ಚರ್ಚೆಯನ್ನು ಸಕ್ರಿಯಗೊಳಿಸುತ್ತದೆ ಮತ್ತು ಅಧಿಕಾರದಲ್ಲಿರುವವರನ್ನು ಹೊಣೆಗಾರರನ್ನಾಗಿ ಮಾಡುತ್ತದೆ’’ ಎಂದು ರಾಯಬಾರ ಕಚೇರಿ ಹೇಳಿದೆ.

“OCCRP ಯ 50% ನಿಧಿಯು US ಸ್ಟೇಟ್ ಡಿಪಾರ್ಟ್‌ಮೆಂಟ್‌ನಿಂದ ನೇರವಾಗಿ ಬರುತ್ತದೆ” ಎಂದು ಬಿಜೆಪಿ X ನಲ್ಲಿ ಪೋಸ್ಟ್ ಮಾಡಿತ್ತು. “ಒಸಿಆರ್‌ಪಿ ಡೀಪ್ ಸ್ಟೇಟ್ ಕಾರ್ಯಸೂಚಿಯನ್ನು ಕೈಗೊಳ್ಳಲು ಮಾಧ್ಯಮ ಸಾಧನವಾಗಿ ಕಾರ್ಯನಿರ್ವಹಿಸಿದೆ. ಪ್ರಧಾನಿ ಮೋದಿಯನ್ನು ಗುರಿಯಾಗಿಸುವ ಮೂಲಕ ಭಾರತವನ್ನು ಅಸ್ಥಿರಗೊಳಿಸುವ ಸ್ಪಷ್ಟ ಉದ್ದೇಶವನ್ನು ಡೀಪ್ ಸ್ಟೇಟ್ ಹೊಂದಿದೆ” ಎಂದು ಬಿಜೆಪಿ ಹೇಳಿತ್ತು. ಅದಾಗ್ಯೂ, ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ಡಿಸೆಂಬರ್ 12ರಂದು ಪೂಜಾ ಸ್ಥಳಗಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...